Homeಮುಖಪುಟಪಹಲ್ಗಾಮ್‌ ದಾಳಿ ಖಂಡಿಸಿ ಇಂದು 'ಕಾಶ್ಮೀರ ಬಂದ್‌': ಆಡಳಿತ, ಪ್ರತಿಪಕ್ಷಗಳ ಬೆಂಬಲ

ಪಹಲ್ಗಾಮ್‌ ದಾಳಿ ಖಂಡಿಸಿ ಇಂದು ‘ಕಾಶ್ಮೀರ ಬಂದ್‌’: ಆಡಳಿತ, ಪ್ರತಿಪಕ್ಷಗಳ ಬೆಂಬಲ

- Advertisement -
- Advertisement -

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ 28 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆ, ಭಯೋತ್ಪಾದನೆ ವಿರುದ್ಧ ಬಲವಾದ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಜಮ್ಮು ಕಾಶ್ಮೀರದ ಹಲವಾರು ರಾಜಕೀಯ ಪಕ್ಷಗಳು ಬುಧವಾರ (ಏ.23) ‘ಕಾಶ್ಮೀರ ಬಂದ್‌’ಗೆ ಕರೆ ನೀಡಿವೆ.

ಆಡಳಿತರೂಢ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಪಕ್ಷವು ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರು ಮತ್ತು ಅವರ ದುಖಃತಪ್ತ ಕುಟುಂಬಗಳಿಗೆ ಬೆಂಬಲ ಸೂಚಿಸುವ ಸಂಕೇತವಾಗಿ ಬಂದ್ ಘೋಷಣೆ ಮಾಡಲಾಗಿದೆ. ಅದನ್ನು ಸಂಪೂರ್ಣ ಯಶಸ್ವಿಗೊಳಿಸುವಂತೆ ಜನರಿಗೆ ಮನವಿ ಮಾಡಿದೆ.

“ಈ ಬಂದ್ ಕೇವಲ ಒಂದು ಪ್ರತಿಭಟನೆಯಲ್ಲ, ಬದಲಾಗಿ ಅರ್ಥಹೀನ ಹಿಂಸಾಚಾರದ ವಿರುದ್ಧ ನೋವು ಮತ್ತು ಆಕ್ರೋಶದ ಸಾಮೂಹಿಕ ಅಭಿವ್ಯಕ್ತಿಯಾಗಿದೆ” ಎಂದು ಜೆಕೆಎನ್‌ಸಿ ಒತ್ತಿ ಹೇಳಿದೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಪಕ್ಷವು ತೀವ್ರವಾಗಿ ಖಂಡಿಸುತ್ತದೆ. ಅಧ್ಯಕ್ಷರ ಸೂಚನೆಯ ಮೇರೆಗೆ, ಪಕ್ಷವು ಕಾಶ್ಮೀರ ಬಂದ್‌ ಅನ್ನು ಬೆಂಬಲಿಸುತ್ತದೆ. ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಕರೆ ನೀಡಿರುವ ಈ ಬಂದ್ ಸಂಪೂರ್ಣ ಯಶಸ್ವಿಯಾಗುವಂತೆ ಸಹಕರಿಸಲು ನಾವು ಜಮ್ಮು ಕಾಶ್ಮೀರದ ಜನರಿಗೆ ಮನವಿ ಮಾಡುತ್ತೇವೆ” ಎಂದು ಜೆಕೆಎನ್‌ಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ

ಜಮ್ಮು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರ ಕುಟುಂಬಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ ಮತ್ತು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

“ಇದು ನಮ್ಮೆಲ್ಲರ ಮೇಲಿನ ದಾಳಿ” ಎಂದು ಕರೆದಿರುವ ಮೆಹಬೂಬಾ ಮುಫ್ತಿ “ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಪಹಲ್ಗಾಮ್‌ನಲ್ಲಿ ​​ಪ್ರವಾಸಿಗರ ಮೇಲಿನ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಾಳೆ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ. ಕ್ರೂರ ದಾಳಿಯಲ್ಲಿ ಸಾವನ್ನಪ್ಪಿದ ಮುಗ್ಧ ಜೀವಗಳಿಗೆ ಗೌರವ ಸಲ್ಲಿಸುವ ಸಂಕೇತವಾಗಿ ಈ ಬಂದ್‌ಗೆ ಬೆಂಬಲ ನೀಡಲು ಎಲ್ಲಾ ಕಾಶ್ಮೀರಿಗಳಿಗೆ ನಾನು ಮನವಿ ಮಾಡುತ್ತೇನೆ. ಇದು ಕೇವಲ ಕೆಲವು ಆಯ್ದ ಜನರ ಮೇಲಿನ ದಾಳಿಯಲ್ಲ, ಇದು ನಮ್ಮೆಲ್ಲರ ಮೇಲಿನ ದಾಳಿ. ಜನರ ದುಃಖ ಮತ್ತು ಆಕ್ರೋಶದ ಜೊತೆ ನಾವೂ ಇದ್ದೇವೆ. ಅಮಾಯಕರ ಹತ್ಯಾಕಾಂಡವನ್ನು ಖಂಡಿಸಿ ಈ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುತ್ತೇವೆ” ಎಂದು ಮುಫ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂದ್‌ಗೆ ಜೆಕೆಎಸ್‌ಎ ಬೆಂಬಲ

ಜಮ್ಮು ಕಾಶ್ಮೀರ ವಿದ್ಯಾರ್ಥಿ ಸಂಘ (ಜೆಕೆಎಸ್ಎ) ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ‘ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿ’ ಎಂದು ಕರೆದಿದ್ದು, ಬಂದ್‌ಗೆ ತನ್ನ ಬೆಂಬಲ ವ್ಯಕ್ತಪಡಿಸಿದೆ.

“ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಜಮ್ಮು ನಾಳೆ ಕರೆ ನೀಡಿರುವ ಬಂದ್‌ಗೆ ಜೆಕೆಎಸ್ಎ ಸಂಪೂರ್ಣ ಬೆಂಬಲ ನೀಡುತ್ತದೆ. ಈ ದುರಂತ ದಾಳಿ ಕೇವಲ ಕೆಲವು ವ್ಯಕ್ತಿಗಳ ಮೇಲಿನ ದಾಳಿಯಲ್ಲ; ಇದು ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿಯಾಗಿದೆ” ಎಂದು ಜೆಕೆಎಸ್ಎ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಬಂದ್‌ ಬೆಂಬಲಿಸಿದ ಹುರಿಯತ್ ಕಾನ್ಫರೆನ್ಸ್

ಆಲ್ ಪಾರ್ಟೀಸ್ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್, ಜಮ್ಮು ಕಾಶ್ಮೀರದ ಜನರು ಬಂದ್ ಬೆಂಬಲಿಸಬೇಕು ಮತ್ತು ಘೋರ ಕೃತ್ಯದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಬೇಕು ಎಂದು ಮನವಿ ಮಾಡಿದ್ದಾರೆ.

“ಯಾರು ಮುಗ್ದರನ್ನು ಕೊಂದಿದ್ದಾರೋ.. ಅವರು ಇಡೀ ಮಾನವಕುಲವನ್ನುಕೊಂದಂತೆ. ಪ್ರವಾಸಿಗರನ್ನು ಅತ್ಯಂತ ಭೀಕರ ರೀತಿಯಲ್ಲಿ ನಿರ್ದಯವಾಗಿ ಕೊಂದಿರುವುದು ಕಾಶ್ಮೀರದ ರಕ್ತಸಿಕ್ತ ಇತಿಹಾಸದಲ್ಲಿ ಮತ್ತೊಂದು ಹತ್ಯಾಕಾಂಡದ ದಿನ. ಕಾಶ್ಮೀರದ ಜನರಿಗೆ ಇಂತಹ ದುರಂತಗಳ ನೋವು ಮತ್ತು ದುಃಖ ತಿಳಿದಿದೆ. ಶಾಂತಿ, ಸದ್ಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಹೊಂದಿರುವ ಇಸ್ಲಾಂ ಧರ್ಮ ಇಂತಹ ಭೀಕರತೆಯನ್ನು ಒಪ್ಪುವುದಿಲ್ಲ. ಜಮ್ಮು ಕಾಶ್ಮೀರದ ಇಸ್ಲಾಮಿಕ್ ಸಮೂಹವು ಮುತಾಹಿದಾ ಮಜ್ಲಿಸ್ ಉಲೇಮಾ (ಎಂಎಂಯು) ಮೂಲಕ ಸಾವಿಗೀಡಾದವರ ಕುಟುಂಬಗಳ ಜೊತೆಗೆ ನಿಲ್ಲಲಿದೆ. ಜಮ್ಮು ಕಾಶ್ಮೀರದ ಜನರು ನಾಳೆ ಬಂದ್ ಮೂಲಕ ಈ ಘೋರ ಅಪರಾಧವನ್ನು ಶಾಂತಿಯುತವಾಗಿ ಪ್ರತಿಭಟಿಸುವಂತೆ ಮನವಿ ಮಾಡುತ್ತೇವೆ” ಎಂದು ಮಿರ್ವೈಜ್ ಫಾರೂಕ್ ಮಂಗಳವಾರ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಹಲವಾರು ಸ್ಥಳಗಳಲ್ಲಿ ಮಂಗಳವಾರ ರಾತ್ರಿ ಮೇಣದ ಬತ್ತಿ ಮೆರವಣಿಗೆ ನಡೆದಿದೆ. ಬಾರಾಮುಲ್ಲಾ, ಶ್ರೀನಗರ, ಪೂಂಚ್, ಕುಪ್ವಾರಾದ ಮತ್ತು ಅಖೂರ್ ಪ್ರದೇಶದ ಖೋಡ್ ಗ್ರಾಮದಲ್ಲಿ ಸ್ಥಳೀಯರು ಮೇಣದ ಬತ್ತಿ ಮೆರವಣಿಗೆ ನಡೆಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...