Homeಕರ್ನಾಟಕ26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

- Advertisement -
- Advertisement -

ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ3 ವರ್ಷಗಳಲ್ಲಿ 1 ಲಕ್ಷ  ‘ಸಂವಿಧಾನ ಸಂರಕ್ಷಣಾ ಪಡೆ’ ಕಟ್ಟುವ ಮಹಾಯಾನ

ಬೆಂಗಳೂರು: ಎದ್ದೇಳು ಕರ್ನಾಟಕದ ವತಿಯಿಂದ ದಾವಣಗೇರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವು ಇದೇ ಏಪ್ರಿಲ್ 26ರಂದು ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ ಅಂದಿನ ಕಾರ್ಯಕ್ರಮದ ವೇಳಾಪಟ್ಟಿಯನ್ನು ಎದ್ದೇಳು ಕರ್ನಾಟಕದ ಅಧ್ಯಕ್ಷೀಯ ಮಂಡಳಿ ಬಿಡುಗಡೆ ಮಾಡಿದೆ.

ಬೆಳಗ್ಗೆ 10.30ರಿಂದ 11.30ರವರೆಗೆ ಸಾಂಸ್ಕೃತಿಕ ಕಲರವ ನಡೆಯಲಿದ್ದು, 11.30ರಿಂದ 1ರವರೆಗೆ ನಗರದಾದ್ಯಂತ 10 ಸಾವಿರಕ್ಕೂ ಹೆಚ್ಚು ಸೇರುವ ಸಂವಿಧಾನ ಸಂರಕ್ಷಕರ ಪಡೆಯಿಂದ ಸಂವಿಧಾನ ಪೆರೇಡ್ ನಡೆಯಲಿದೆ.  1ರಿಂದ 2 ಗಂಟೆಯವರೆಗೆ ಸಾಂಸ್ಕೃತಿಕ ಸಜ್ಜಿಕೆ, 2ರಿಂದ ಸಂಜೆ 6ರವರೆಗೆ ಬಹಿರಂಗ ಸಮಾವೇಶ ನಡೆಯಲಿದೆ ಎಂದು ತಂಡವು ಹೇಳಿದೆ.

ಬೆಳಗ್ಗೆ 11.30ರಿಂದ ಪ್ರಾರಂಭವಾಗುವ ಸಂವಿಧಾನ ಪೆರೇಡ್ ನಿನ ಉದ್ಘಾಟನೆಯನ್ನು ಹಿರಿಯ ದಸಂಸ ನೇತಾರರಾದ  ಚಿಂತಾಮಣಿಯ ಎನ್, ವೆಂಕಟೇಶ್,   ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರು ಮತ್ತು ಎದ್ದೇಳು ಕರ್ನಾಟಕದ ಶ್ರೀಮತಿ ತಾರಾ ರಾವ್,  ರಾಜ್ಯ ಜಮಾತ್-ಎ-ಇಸ್ಲಾಮಿ-ಹಿಂದ್ ನ ಕಾರ್ಯದರ್ಶಿಗಳಾದ ಮೊಹಮ್ಮದ್ ಯೂಸುಫ್ ಕನ್ನಿ, ನಿರ್ದೇಶಕರು, ಬೆಂಗಳೂರಿನ ಸೇಂಟ್ ಜೋಸೆಫ್ ಕಾನೂನು ಮಹಾವಿದ್ಯಾಲಯದ ನಿರ್ದೇಶಕರಾದ  ಫಾದರ್ ಜರಾಲ್ಡ್ ಡಿಸೋಜಾ ನೆರವೇರಿಸಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮದ ವಿಶೇಷ ಉಪಸ್ಥಿತಿಯಾಗಿ ಕರ್ನಾಟಕದ ಬದ್ಧತೆಯ ದಿಟ್ಟ ಹೋರಾಟಗಾರರಾದ ಎಸ್. ಆರ್. ಹಿರೇಮಠ, ಹಿರಿಯ ಪತ್ರಕರ್ತೆ, ಸ್ತ್ರೀವಾದಿ ಚಿಂತಕರು ಹಾಗೂ ಬರಹಗಾರರಾದ ಡಾ. ವಿಜಯ, ಜನಪರ ಸಾಹಿತಿಗಳು ಮತ್ತು ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರು,  ಕರ್ನಾಟಕದ ರೈತ ಚಳವಳಿಯ ಹಿರಿಯ ಹೋರಾಟಗಾರರಾದ ಚಾಮರಸ ಮಾಲಿ ಪಾಟೀಲ್ ಹಾಜರಿರಲಿದ್ದಾರೆ ಎಂದು ಅದು ತಿಳಿಸಿದೆ.

ಬಹಿರಂಗ ಸಭೆಯ ಉದ್ಘಾಟನಾ ಮಾತುಗಳನ್ನು  ಹಿರಿಯ ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ ನುಡಿಯಲಿದ್ದಾರೆ. ಮಹಾಯಾನದ ಪರಿಕಲ್ಪನೆಯನ್ನು ಎದ್ದೇಳು ಕರ್ನಾಟಕದ ಸೆಂಟ್ರಲ್ ವರ್ಕಿಂಗ್ ಗ್ರೂಪ್ ಪರವಾಗಿ ನೂರ್ ಶ್ರೀಧರ್ ಮಂಡಿಸಲಿದ್ದಾರೆ.

ಸಮಾರೋಪ ಮಾತುಗಳನ್ನು ಸಮಾವೇಶ ಸಂಘಟನಾ ಸಮಿತಿಯ ಸಂಚಾಲಕರಾದ  ಕೆ.ಎಲ್. ಅಶೋಕ್ ನುಡಿಯಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಿಂದ ಸಂದೇಶವಿರುತ್ತದೆ. ಅವರು ಈ ಕೆಳಗಿನಂತೆ ಇದೆ.

ಪ್ರಕಾಶ್ ರಾಜ್, ಪ್ರಸಿದ್ಧ ನಟರು ಹಾಗೂ ಪ್ರಖರ ಚಿಂತಕರು

ಮೇಧಾ ಪಾಟ್ಕರ್, ಆದಿವಾಸಿ ಮತ್ತು ಪರಿಸರ ಹೋರಾಟಗಾರರು [ಆನ್ ಲೈನ್ ಮೂಲಕ]

ಜಿಗ್ನೇಶ್ ಮೇವಾನಿ, ಹೋರಾಟಗಾರರು ಮತ್ತು ಶಾಸಕರು, ಗುಜರಾತ್

ಪರಕಾಲ ಪ್ರಭಾಕರ್, ಪ್ರಸಿದ್ಧ ಆರ್ಥಿಕ ವಿಶ್ಲೇಷಕಾರರು.

ದರ್ಶನ್ ಪಾಲ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು [ಆನ್ ಲೈನ್ ಮೂಲಕ]

ಡಾ. ಸುನೀಲಮ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು, ಮಧ್ಯಪ್ರದೇಶ

ಕೆ ಎಂ ರಾಮಚಂದ್ರಪ್ಪ, ಪ್ರಧಾನ ಸಂಚಾಲಕರು, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

ಪುರುಷೊತ್ತಮ ಬಿಳಿಮಲೆ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು

ಮೊಹಮ್ಮದ್ ಸಲೀಂ, ಪ್ರಧಾನ ಕಾರ್ಯದರ್ಶಿಗಳು, ಡೆಮೊಕ್ರೆಟಿಕ್ ಅಂಡ್ ಕಮ್ಯುನಲ್ ಅಮಿಟಿ, ನವದೆಹಲಿ

ಕವಿತಾ ಲಂಕೇಶ್, ಸಿನೆಮಾ ನಿರ್ದೇಶಕರು ಮತ್ತು ಹೋರಾಟದ ಒಡನಾಡಿಗಳು

ಬಿ. ಆರ್. ಪಾಟೀಲ್, ಹಿರಿಯ ಸಮಾಜವಾದಿಗಳು.

ಮಾವಳ್ಳಿ ಶಂಕರ್, ರಾಜ್ಯ ಸಂಚಾಲಕರು, ದಸಂಸ (ಅಂಬೇಡ್ಕರ್ ವಾದ)

ಫಾ. ವೀರೇಶ್ ಮೋರಸ್, ಕ್ರೈಸ್ತ ಸಮುದಾಯದ ಪಾದ್ರಿಗಳು

ವಿ. ನಾಗರಾಜ್, ರಾಜ್ಯ ಮುಖಂಡರು, ದಸಂಸ.

ಡಾ. ಸಿದ್ದನಗೌಡ ಪಾಟೀಲ್, ಚಿಂತಕರು ಹಾಗೂ ಹೋರಾಟಗಾರರು

ಪ್ರೊ. ಜಾಫೆಟ್, ನಿವೃತ್ತ ಉಪಕುಲಾಪತಿಗಳು, ಬೆಂಗಳೂರು ವಿವಿ

ಡಾ. ಫಾ. ರೆವೆರೆಂಡ್ ಮನೋಹರ್ ಚಂದ್ರಪ್ರಸಾದ್, ಬರಹಗಾರರು ಮತ್ತು ಮುಖಂಡರು ದಲಿತ-ಕ್ರೆöÊಸ್ತ ಒಕ್ಕೂಟ

ಅಂಬಣ್ಣ ಆರೋಲಿಕರ್, ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟ ಸಮಿತಿ

ಯಶವಂತ್ ಟಿ, ಮುಖಂಡರು, ಕರ್ನಾಟಕ ಪ್ರಾಂತ ರೈತ ಸಂಘ

ಬಸವರಾಜ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ

ಅಬ್ದುಲ್ ಖಾದರ್ ಮಸೂದ್, ಸಮನ್ವಯಕರು, ಕರ್ನಾಟಕ ಮುಸ್ಲಿಂ ಮುತ್ತಹದೇ ಮಹಾಜ್

ರವಿ ನಾಯ್ಕರ್, ಮಾನವ ಬಂಧುತ್ವ ವೇದಿಕೆ

ಜನಾರ್ಧನ್ ಕೇಸರಗದ್ದೆ, ಜನಪರ ಸಾಹಿತ್ಯ ರಚನೆಕಾರರು

ಕೆ.ವಿ. ಭಟ್, ಸಮನ್ವಯಕರು, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಎಅಖಿU)

ಪ್ರೊ.ಜೆ.ಎಸ್.ಪಾಟೀಲ್, ಬಸವ ತತ್ವ ಪ್ರಚಾರಕರು.

ಮೌಲಾನ ಸಮೀಉಲ್ಲಾ ಕಾಸ್ಮಿ, ಜಾಮಿಯತ್ ಉಲ್ಮಾ ಕರ್ನಾಟಕ.

ರಮೇಶ್ ಹೆಗ್ಗಡೆ, ಒಕ್ಕಲಿಗ ಸಮುದಾಯದ ಮುಖಂಡರು, ಶಿವಮೊಗ್ಗ

ಮಲ್ಲು ಕುಂಬಾರ್, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಸಾಮಾಜಿಕ ಹೋರಾಟಗಾರರು.

ಡಿ.ಹೆಚ್. ಪೂಜಾರ್, ರಾಜ್ಯ ಮುಖಂಡರು, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬಿ ಸಿ ಬಸವರಾಜ್, ಜಾಗೃತ ಕರ್ನಾಟಕ  ಮುಂತಾದವರು ತಮ್ಮ ಸಂದೇಶವನ್ನು ಕಾರ್ಯಕ್ರಮದಲ್ಲಿ ರವಾನಿಸಲಿದ್ದಾರೆ ಎಂದು ಅದು ಮಾಹಿತಿ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಕೇಂದ್ರ ಕಛೇರಿ – 8056035809, 8884872595, ದಾವಣಗೆರೆಯ ಸಮಾವೇಶ ಸಂಘಟನಾ ಸಮಿತಿ 9844188128, 9742171342, 9916274999, 9148319357  ಸಂಪರ್ಕಿಸಲು ಸಮಾವೇಶದ ಕೇಂದ್ರ ತಂಡವು ಕೋರಿದೆ.

ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...