Homeಕರ್ನಾಟಕ26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

- Advertisement -
- Advertisement -

ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ3 ವರ್ಷಗಳಲ್ಲಿ 1 ಲಕ್ಷ  ‘ಸಂವಿಧಾನ ಸಂರಕ್ಷಣಾ ಪಡೆ’ ಕಟ್ಟುವ ಮಹಾಯಾನ

ಬೆಂಗಳೂರು: ಎದ್ದೇಳು ಕರ್ನಾಟಕದ ವತಿಯಿಂದ ದಾವಣಗೇರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವು ಇದೇ ಏಪ್ರಿಲ್ 26ರಂದು ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ ಅಂದಿನ ಕಾರ್ಯಕ್ರಮದ ವೇಳಾಪಟ್ಟಿಯನ್ನು ಎದ್ದೇಳು ಕರ್ನಾಟಕದ ಅಧ್ಯಕ್ಷೀಯ ಮಂಡಳಿ ಬಿಡುಗಡೆ ಮಾಡಿದೆ.

ಬೆಳಗ್ಗೆ 10.30ರಿಂದ 11.30ರವರೆಗೆ ಸಾಂಸ್ಕೃತಿಕ ಕಲರವ ನಡೆಯಲಿದ್ದು, 11.30ರಿಂದ 1ರವರೆಗೆ ನಗರದಾದ್ಯಂತ 10 ಸಾವಿರಕ್ಕೂ ಹೆಚ್ಚು ಸೇರುವ ಸಂವಿಧಾನ ಸಂರಕ್ಷಕರ ಪಡೆಯಿಂದ ಸಂವಿಧಾನ ಪೆರೇಡ್ ನಡೆಯಲಿದೆ.  1ರಿಂದ 2 ಗಂಟೆಯವರೆಗೆ ಸಾಂಸ್ಕೃತಿಕ ಸಜ್ಜಿಕೆ, 2ರಿಂದ ಸಂಜೆ 6ರವರೆಗೆ ಬಹಿರಂಗ ಸಮಾವೇಶ ನಡೆಯಲಿದೆ ಎಂದು ತಂಡವು ಹೇಳಿದೆ.

ಬೆಳಗ್ಗೆ 11.30ರಿಂದ ಪ್ರಾರಂಭವಾಗುವ ಸಂವಿಧಾನ ಪೆರೇಡ್ ನಿನ ಉದ್ಘಾಟನೆಯನ್ನು ಹಿರಿಯ ದಸಂಸ ನೇತಾರರಾದ  ಚಿಂತಾಮಣಿಯ ಎನ್, ವೆಂಕಟೇಶ್,   ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರು ಮತ್ತು ಎದ್ದೇಳು ಕರ್ನಾಟಕದ ಶ್ರೀಮತಿ ತಾರಾ ರಾವ್,  ರಾಜ್ಯ ಜಮಾತ್-ಎ-ಇಸ್ಲಾಮಿ-ಹಿಂದ್ ನ ಕಾರ್ಯದರ್ಶಿಗಳಾದ ಮೊಹಮ್ಮದ್ ಯೂಸುಫ್ ಕನ್ನಿ, ನಿರ್ದೇಶಕರು, ಬೆಂಗಳೂರಿನ ಸೇಂಟ್ ಜೋಸೆಫ್ ಕಾನೂನು ಮಹಾವಿದ್ಯಾಲಯದ ನಿರ್ದೇಶಕರಾದ  ಫಾದರ್ ಜರಾಲ್ಡ್ ಡಿಸೋಜಾ ನೆರವೇರಿಸಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮದ ವಿಶೇಷ ಉಪಸ್ಥಿತಿಯಾಗಿ ಕರ್ನಾಟಕದ ಬದ್ಧತೆಯ ದಿಟ್ಟ ಹೋರಾಟಗಾರರಾದ ಎಸ್. ಆರ್. ಹಿರೇಮಠ, ಹಿರಿಯ ಪತ್ರಕರ್ತೆ, ಸ್ತ್ರೀವಾದಿ ಚಿಂತಕರು ಹಾಗೂ ಬರಹಗಾರರಾದ ಡಾ. ವಿಜಯ, ಜನಪರ ಸಾಹಿತಿಗಳು ಮತ್ತು ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರು,  ಕರ್ನಾಟಕದ ರೈತ ಚಳವಳಿಯ ಹಿರಿಯ ಹೋರಾಟಗಾರರಾದ ಚಾಮರಸ ಮಾಲಿ ಪಾಟೀಲ್ ಹಾಜರಿರಲಿದ್ದಾರೆ ಎಂದು ಅದು ತಿಳಿಸಿದೆ.

ಬಹಿರಂಗ ಸಭೆಯ ಉದ್ಘಾಟನಾ ಮಾತುಗಳನ್ನು  ಹಿರಿಯ ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ ನುಡಿಯಲಿದ್ದಾರೆ. ಮಹಾಯಾನದ ಪರಿಕಲ್ಪನೆಯನ್ನು ಎದ್ದೇಳು ಕರ್ನಾಟಕದ ಸೆಂಟ್ರಲ್ ವರ್ಕಿಂಗ್ ಗ್ರೂಪ್ ಪರವಾಗಿ ನೂರ್ ಶ್ರೀಧರ್ ಮಂಡಿಸಲಿದ್ದಾರೆ.

ಸಮಾರೋಪ ಮಾತುಗಳನ್ನು ಸಮಾವೇಶ ಸಂಘಟನಾ ಸಮಿತಿಯ ಸಂಚಾಲಕರಾದ  ಕೆ.ಎಲ್. ಅಶೋಕ್ ನುಡಿಯಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಿಂದ ಸಂದೇಶವಿರುತ್ತದೆ. ಅವರು ಈ ಕೆಳಗಿನಂತೆ ಇದೆ.

ಪ್ರಕಾಶ್ ರಾಜ್, ಪ್ರಸಿದ್ಧ ನಟರು ಹಾಗೂ ಪ್ರಖರ ಚಿಂತಕರು

ಮೇಧಾ ಪಾಟ್ಕರ್, ಆದಿವಾಸಿ ಮತ್ತು ಪರಿಸರ ಹೋರಾಟಗಾರರು [ಆನ್ ಲೈನ್ ಮೂಲಕ]

ಜಿಗ್ನೇಶ್ ಮೇವಾನಿ, ಹೋರಾಟಗಾರರು ಮತ್ತು ಶಾಸಕರು, ಗುಜರಾತ್

ಪರಕಾಲ ಪ್ರಭಾಕರ್, ಪ್ರಸಿದ್ಧ ಆರ್ಥಿಕ ವಿಶ್ಲೇಷಕಾರರು.

ದರ್ಶನ್ ಪಾಲ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು [ಆನ್ ಲೈನ್ ಮೂಲಕ]

ಡಾ. ಸುನೀಲಮ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು, ಮಧ್ಯಪ್ರದೇಶ

ಕೆ ಎಂ ರಾಮಚಂದ್ರಪ್ಪ, ಪ್ರಧಾನ ಸಂಚಾಲಕರು, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

ಪುರುಷೊತ್ತಮ ಬಿಳಿಮಲೆ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು

ಮೊಹಮ್ಮದ್ ಸಲೀಂ, ಪ್ರಧಾನ ಕಾರ್ಯದರ್ಶಿಗಳು, ಡೆಮೊಕ್ರೆಟಿಕ್ ಅಂಡ್ ಕಮ್ಯುನಲ್ ಅಮಿಟಿ, ನವದೆಹಲಿ

ಕವಿತಾ ಲಂಕೇಶ್, ಸಿನೆಮಾ ನಿರ್ದೇಶಕರು ಮತ್ತು ಹೋರಾಟದ ಒಡನಾಡಿಗಳು

ಬಿ. ಆರ್. ಪಾಟೀಲ್, ಹಿರಿಯ ಸಮಾಜವಾದಿಗಳು.

ಮಾವಳ್ಳಿ ಶಂಕರ್, ರಾಜ್ಯ ಸಂಚಾಲಕರು, ದಸಂಸ (ಅಂಬೇಡ್ಕರ್ ವಾದ)

ಫಾ. ವೀರೇಶ್ ಮೋರಸ್, ಕ್ರೈಸ್ತ ಸಮುದಾಯದ ಪಾದ್ರಿಗಳು

ವಿ. ನಾಗರಾಜ್, ರಾಜ್ಯ ಮುಖಂಡರು, ದಸಂಸ.

ಡಾ. ಸಿದ್ದನಗೌಡ ಪಾಟೀಲ್, ಚಿಂತಕರು ಹಾಗೂ ಹೋರಾಟಗಾರರು

ಪ್ರೊ. ಜಾಫೆಟ್, ನಿವೃತ್ತ ಉಪಕುಲಾಪತಿಗಳು, ಬೆಂಗಳೂರು ವಿವಿ

ಡಾ. ಫಾ. ರೆವೆರೆಂಡ್ ಮನೋಹರ್ ಚಂದ್ರಪ್ರಸಾದ್, ಬರಹಗಾರರು ಮತ್ತು ಮುಖಂಡರು ದಲಿತ-ಕ್ರೆöÊಸ್ತ ಒಕ್ಕೂಟ

ಅಂಬಣ್ಣ ಆರೋಲಿಕರ್, ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟ ಸಮಿತಿ

ಯಶವಂತ್ ಟಿ, ಮುಖಂಡರು, ಕರ್ನಾಟಕ ಪ್ರಾಂತ ರೈತ ಸಂಘ

ಬಸವರಾಜ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ

ಅಬ್ದುಲ್ ಖಾದರ್ ಮಸೂದ್, ಸಮನ್ವಯಕರು, ಕರ್ನಾಟಕ ಮುಸ್ಲಿಂ ಮುತ್ತಹದೇ ಮಹಾಜ್

ರವಿ ನಾಯ್ಕರ್, ಮಾನವ ಬಂಧುತ್ವ ವೇದಿಕೆ

ಜನಾರ್ಧನ್ ಕೇಸರಗದ್ದೆ, ಜನಪರ ಸಾಹಿತ್ಯ ರಚನೆಕಾರರು

ಕೆ.ವಿ. ಭಟ್, ಸಮನ್ವಯಕರು, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಎಅಖಿU)

ಪ್ರೊ.ಜೆ.ಎಸ್.ಪಾಟೀಲ್, ಬಸವ ತತ್ವ ಪ್ರಚಾರಕರು.

ಮೌಲಾನ ಸಮೀಉಲ್ಲಾ ಕಾಸ್ಮಿ, ಜಾಮಿಯತ್ ಉಲ್ಮಾ ಕರ್ನಾಟಕ.

ರಮೇಶ್ ಹೆಗ್ಗಡೆ, ಒಕ್ಕಲಿಗ ಸಮುದಾಯದ ಮುಖಂಡರು, ಶಿವಮೊಗ್ಗ

ಮಲ್ಲು ಕುಂಬಾರ್, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಸಾಮಾಜಿಕ ಹೋರಾಟಗಾರರು.

ಡಿ.ಹೆಚ್. ಪೂಜಾರ್, ರಾಜ್ಯ ಮುಖಂಡರು, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬಿ ಸಿ ಬಸವರಾಜ್, ಜಾಗೃತ ಕರ್ನಾಟಕ  ಮುಂತಾದವರು ತಮ್ಮ ಸಂದೇಶವನ್ನು ಕಾರ್ಯಕ್ರಮದಲ್ಲಿ ರವಾನಿಸಲಿದ್ದಾರೆ ಎಂದು ಅದು ಮಾಹಿತಿ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಕೇಂದ್ರ ಕಛೇರಿ – 8056035809, 8884872595, ದಾವಣಗೆರೆಯ ಸಮಾವೇಶ ಸಂಘಟನಾ ಸಮಿತಿ 9844188128, 9742171342, 9916274999, 9148319357  ಸಂಪರ್ಕಿಸಲು ಸಮಾವೇಶದ ಕೇಂದ್ರ ತಂಡವು ಕೋರಿದೆ.

ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...