Homeಕರ್ನಾಟಕ26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

- Advertisement -
- Advertisement -

ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ3 ವರ್ಷಗಳಲ್ಲಿ 1 ಲಕ್ಷ  ‘ಸಂವಿಧಾನ ಸಂರಕ್ಷಣಾ ಪಡೆ’ ಕಟ್ಟುವ ಮಹಾಯಾನ

ಬೆಂಗಳೂರು: ಎದ್ದೇಳು ಕರ್ನಾಟಕದ ವತಿಯಿಂದ ದಾವಣಗೇರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವು ಇದೇ ಏಪ್ರಿಲ್ 26ರಂದು ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ ಅಂದಿನ ಕಾರ್ಯಕ್ರಮದ ವೇಳಾಪಟ್ಟಿಯನ್ನು ಎದ್ದೇಳು ಕರ್ನಾಟಕದ ಅಧ್ಯಕ್ಷೀಯ ಮಂಡಳಿ ಬಿಡುಗಡೆ ಮಾಡಿದೆ.

ಬೆಳಗ್ಗೆ 10.30ರಿಂದ 11.30ರವರೆಗೆ ಸಾಂಸ್ಕೃತಿಕ ಕಲರವ ನಡೆಯಲಿದ್ದು, 11.30ರಿಂದ 1ರವರೆಗೆ ನಗರದಾದ್ಯಂತ 10 ಸಾವಿರಕ್ಕೂ ಹೆಚ್ಚು ಸೇರುವ ಸಂವಿಧಾನ ಸಂರಕ್ಷಕರ ಪಡೆಯಿಂದ ಸಂವಿಧಾನ ಪೆರೇಡ್ ನಡೆಯಲಿದೆ.  1ರಿಂದ 2 ಗಂಟೆಯವರೆಗೆ ಸಾಂಸ್ಕೃತಿಕ ಸಜ್ಜಿಕೆ, 2ರಿಂದ ಸಂಜೆ 6ರವರೆಗೆ ಬಹಿರಂಗ ಸಮಾವೇಶ ನಡೆಯಲಿದೆ ಎಂದು ತಂಡವು ಹೇಳಿದೆ.

ಬೆಳಗ್ಗೆ 11.30ರಿಂದ ಪ್ರಾರಂಭವಾಗುವ ಸಂವಿಧಾನ ಪೆರೇಡ್ ನಿನ ಉದ್ಘಾಟನೆಯನ್ನು ಹಿರಿಯ ದಸಂಸ ನೇತಾರರಾದ  ಚಿಂತಾಮಣಿಯ ಎನ್, ವೆಂಕಟೇಶ್,   ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರು ಮತ್ತು ಎದ್ದೇಳು ಕರ್ನಾಟಕದ ಶ್ರೀಮತಿ ತಾರಾ ರಾವ್,  ರಾಜ್ಯ ಜಮಾತ್-ಎ-ಇಸ್ಲಾಮಿ-ಹಿಂದ್ ನ ಕಾರ್ಯದರ್ಶಿಗಳಾದ ಮೊಹಮ್ಮದ್ ಯೂಸುಫ್ ಕನ್ನಿ, ನಿರ್ದೇಶಕರು, ಬೆಂಗಳೂರಿನ ಸೇಂಟ್ ಜೋಸೆಫ್ ಕಾನೂನು ಮಹಾವಿದ್ಯಾಲಯದ ನಿರ್ದೇಶಕರಾದ  ಫಾದರ್ ಜರಾಲ್ಡ್ ಡಿಸೋಜಾ ನೆರವೇರಿಸಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮದ ವಿಶೇಷ ಉಪಸ್ಥಿತಿಯಾಗಿ ಕರ್ನಾಟಕದ ಬದ್ಧತೆಯ ದಿಟ್ಟ ಹೋರಾಟಗಾರರಾದ ಎಸ್. ಆರ್. ಹಿರೇಮಠ, ಹಿರಿಯ ಪತ್ರಕರ್ತೆ, ಸ್ತ್ರೀವಾದಿ ಚಿಂತಕರು ಹಾಗೂ ಬರಹಗಾರರಾದ ಡಾ. ವಿಜಯ, ಜನಪರ ಸಾಹಿತಿಗಳು ಮತ್ತು ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರು,  ಕರ್ನಾಟಕದ ರೈತ ಚಳವಳಿಯ ಹಿರಿಯ ಹೋರಾಟಗಾರರಾದ ಚಾಮರಸ ಮಾಲಿ ಪಾಟೀಲ್ ಹಾಜರಿರಲಿದ್ದಾರೆ ಎಂದು ಅದು ತಿಳಿಸಿದೆ.

ಬಹಿರಂಗ ಸಭೆಯ ಉದ್ಘಾಟನಾ ಮಾತುಗಳನ್ನು  ಹಿರಿಯ ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ ನುಡಿಯಲಿದ್ದಾರೆ. ಮಹಾಯಾನದ ಪರಿಕಲ್ಪನೆಯನ್ನು ಎದ್ದೇಳು ಕರ್ನಾಟಕದ ಸೆಂಟ್ರಲ್ ವರ್ಕಿಂಗ್ ಗ್ರೂಪ್ ಪರವಾಗಿ ನೂರ್ ಶ್ರೀಧರ್ ಮಂಡಿಸಲಿದ್ದಾರೆ.

ಸಮಾರೋಪ ಮಾತುಗಳನ್ನು ಸಮಾವೇಶ ಸಂಘಟನಾ ಸಮಿತಿಯ ಸಂಚಾಲಕರಾದ  ಕೆ.ಎಲ್. ಅಶೋಕ್ ನುಡಿಯಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಿಂದ ಸಂದೇಶವಿರುತ್ತದೆ. ಅವರು ಈ ಕೆಳಗಿನಂತೆ ಇದೆ.

ಪ್ರಕಾಶ್ ರಾಜ್, ಪ್ರಸಿದ್ಧ ನಟರು ಹಾಗೂ ಪ್ರಖರ ಚಿಂತಕರು

ಮೇಧಾ ಪಾಟ್ಕರ್, ಆದಿವಾಸಿ ಮತ್ತು ಪರಿಸರ ಹೋರಾಟಗಾರರು [ಆನ್ ಲೈನ್ ಮೂಲಕ]

ಜಿಗ್ನೇಶ್ ಮೇವಾನಿ, ಹೋರಾಟಗಾರರು ಮತ್ತು ಶಾಸಕರು, ಗುಜರಾತ್

ಪರಕಾಲ ಪ್ರಭಾಕರ್, ಪ್ರಸಿದ್ಧ ಆರ್ಥಿಕ ವಿಶ್ಲೇಷಕಾರರು.

ದರ್ಶನ್ ಪಾಲ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು [ಆನ್ ಲೈನ್ ಮೂಲಕ]

ಡಾ. ಸುನೀಲಮ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು, ಮಧ್ಯಪ್ರದೇಶ

ಕೆ ಎಂ ರಾಮಚಂದ್ರಪ್ಪ, ಪ್ರಧಾನ ಸಂಚಾಲಕರು, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

ಪುರುಷೊತ್ತಮ ಬಿಳಿಮಲೆ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು

ಮೊಹಮ್ಮದ್ ಸಲೀಂ, ಪ್ರಧಾನ ಕಾರ್ಯದರ್ಶಿಗಳು, ಡೆಮೊಕ್ರೆಟಿಕ್ ಅಂಡ್ ಕಮ್ಯುನಲ್ ಅಮಿಟಿ, ನವದೆಹಲಿ

ಕವಿತಾ ಲಂಕೇಶ್, ಸಿನೆಮಾ ನಿರ್ದೇಶಕರು ಮತ್ತು ಹೋರಾಟದ ಒಡನಾಡಿಗಳು

ಬಿ. ಆರ್. ಪಾಟೀಲ್, ಹಿರಿಯ ಸಮಾಜವಾದಿಗಳು.

ಮಾವಳ್ಳಿ ಶಂಕರ್, ರಾಜ್ಯ ಸಂಚಾಲಕರು, ದಸಂಸ (ಅಂಬೇಡ್ಕರ್ ವಾದ)

ಫಾ. ವೀರೇಶ್ ಮೋರಸ್, ಕ್ರೈಸ್ತ ಸಮುದಾಯದ ಪಾದ್ರಿಗಳು

ವಿ. ನಾಗರಾಜ್, ರಾಜ್ಯ ಮುಖಂಡರು, ದಸಂಸ.

ಡಾ. ಸಿದ್ದನಗೌಡ ಪಾಟೀಲ್, ಚಿಂತಕರು ಹಾಗೂ ಹೋರಾಟಗಾರರು

ಪ್ರೊ. ಜಾಫೆಟ್, ನಿವೃತ್ತ ಉಪಕುಲಾಪತಿಗಳು, ಬೆಂಗಳೂರು ವಿವಿ

ಡಾ. ಫಾ. ರೆವೆರೆಂಡ್ ಮನೋಹರ್ ಚಂದ್ರಪ್ರಸಾದ್, ಬರಹಗಾರರು ಮತ್ತು ಮುಖಂಡರು ದಲಿತ-ಕ್ರೆöÊಸ್ತ ಒಕ್ಕೂಟ

ಅಂಬಣ್ಣ ಆರೋಲಿಕರ್, ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟ ಸಮಿತಿ

ಯಶವಂತ್ ಟಿ, ಮುಖಂಡರು, ಕರ್ನಾಟಕ ಪ್ರಾಂತ ರೈತ ಸಂಘ

ಬಸವರಾಜ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ

ಅಬ್ದುಲ್ ಖಾದರ್ ಮಸೂದ್, ಸಮನ್ವಯಕರು, ಕರ್ನಾಟಕ ಮುಸ್ಲಿಂ ಮುತ್ತಹದೇ ಮಹಾಜ್

ರವಿ ನಾಯ್ಕರ್, ಮಾನವ ಬಂಧುತ್ವ ವೇದಿಕೆ

ಜನಾರ್ಧನ್ ಕೇಸರಗದ್ದೆ, ಜನಪರ ಸಾಹಿತ್ಯ ರಚನೆಕಾರರು

ಕೆ.ವಿ. ಭಟ್, ಸಮನ್ವಯಕರು, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಎಅಖಿU)

ಪ್ರೊ.ಜೆ.ಎಸ್.ಪಾಟೀಲ್, ಬಸವ ತತ್ವ ಪ್ರಚಾರಕರು.

ಮೌಲಾನ ಸಮೀಉಲ್ಲಾ ಕಾಸ್ಮಿ, ಜಾಮಿಯತ್ ಉಲ್ಮಾ ಕರ್ನಾಟಕ.

ರಮೇಶ್ ಹೆಗ್ಗಡೆ, ಒಕ್ಕಲಿಗ ಸಮುದಾಯದ ಮುಖಂಡರು, ಶಿವಮೊಗ್ಗ

ಮಲ್ಲು ಕುಂಬಾರ್, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಸಾಮಾಜಿಕ ಹೋರಾಟಗಾರರು.

ಡಿ.ಹೆಚ್. ಪೂಜಾರ್, ರಾಜ್ಯ ಮುಖಂಡರು, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬಿ ಸಿ ಬಸವರಾಜ್, ಜಾಗೃತ ಕರ್ನಾಟಕ  ಮುಂತಾದವರು ತಮ್ಮ ಸಂದೇಶವನ್ನು ಕಾರ್ಯಕ್ರಮದಲ್ಲಿ ರವಾನಿಸಲಿದ್ದಾರೆ ಎಂದು ಅದು ಮಾಹಿತಿ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಕೇಂದ್ರ ಕಛೇರಿ – 8056035809, 8884872595, ದಾವಣಗೆರೆಯ ಸಮಾವೇಶ ಸಂಘಟನಾ ಸಮಿತಿ 9844188128, 9742171342, 9916274999, 9148319357  ಸಂಪರ್ಕಿಸಲು ಸಮಾವೇಶದ ಕೇಂದ್ರ ತಂಡವು ಕೋರಿದೆ.

ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...