Homeಮುಖಪುಟಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

ಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ಸ್ಥಳೀಯ ನಿವಾಸಿ, ಕುದುರೆ ಸವಾರ ಸೈಯದ್ ಆದಿಲ್ ಹುಸೇನ್ ಶಾ ಅವರು ದಾಳಿಕೋರನಿಂದ ರೈಫಲ್ ಕಸಿದುಕೊಳ್ಳಲು ಪ್ರಯತ್ನಿಸಿ, ಭಯೋತ್ಪಾದನ ವಿರುದ್ಧ ಹೋರಾಡಿ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಪಹಲ್ಗಾಮ್

ಭಯೋತ್ಪಾದಕರು ಹಾರಿಸಿದ ಗುಂಡುಗಳಿಂದ ತಪ್ಪಿಸಿಕೊಳ್ಳಲು ಪ್ರವಾಸಿಗರು ಪರದಾಡುತ್ತಿದ್ದಾಗ, ಆದಿಲ್ ಅವರು ಭಯೋತ್ಪಾದಕನಿಂದ ರೈಫಲ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಾ, ಅವರ ವಿರುದ್ಧ ಹೋರಾಟ ಮಾಡುವ ಅಸಾಧಾರಣ ಧೈರ್ಯವನ್ನು ಪ್ರದರ್ಶಿಸಿದರು ಎಂದು ವರದಿ ಉಲ್ಲೇಖಿಸಿದೆ.

ಆದಿಲ್ ಅವರು ಪ್ರವಾಸಿಗರನ್ನು ಕಾರು ಪಾರ್ಕಿಂಗ್ ಸ್ಥಳದಿಂದ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿಗೆ ಕಾಲ್ನಡಿಗೆಯಲ್ಲಿ ಮಾತ್ರ ತೆರಳಬಹುದಾದ ಸ್ಥಳಕ್ಕೆ ತನ್ನ ಕುದುರೆಯ ಮೇಲೆ ಕರೆದೊಯ್ಯುವ ಕೆಲಸ ಮಾಡುವವರಾಗಿದ್ದಾರೆ. ಅವರು ಭಯೋತ್ಪಾದಕರಲ್ಲಿ ಒಬ್ಬನ ವಿರುದ್ಧ ಹೋರಾಡಲು ಪ್ರಯತ್ನಿಸುತ್ತಿದ್ದಾಗ ಗುಂಡು ಹಾರಿಸಿ ಕೊಲ್ಲಲ್ಪಟ್ಟಿದ್ದಾರೆ. ಈ ವೇಳೆ ಅವರು ಸ್ಥಳಕ್ಕೆ ಕರೆತಂದಿದ್ದ ಪ್ರವಾಸಿಗರನ್ನು ರಕ್ಷಿಸಲು ಪ್ರಯತ್ನಿಸಿದ್ದರು.

ಭಯೋತ್ಪಾದಕರು 28 ಜನರನ್ನು ಹತ್ಯೆ ಮಾಡಿದ್ದು, ದಾಳಿಯಲ್ಲಿ ಕೊಲ್ಲಲ್ಪಟ್ಟ ಏಕೈಕ ಸ್ಥಳೀಯ ವ್ಯಕ್ತಿ ಆದಿಲ್ ಆಗಿದ್ದಾರೆ. ಮೃತ ಆದಿಲ್ ಅವರು ತನ್ನ ವೃದ್ಧ ತಂದೆ-ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಒಳಗೊಂಡ ಕುಟುಂಬದ ಏಕೈಕ ಜೀವನಾಧಾರವಾಗಿದ್ದಾರೆ. ತನ್ನ ಮಗನನ್ನು ಕಳೆದುಕೊಂಡು ದುಃಖಿತರಾದ ಅವರ ತಾಯಿ ಕಣ್ಣೀರಿಡುತ್ತಾ, ಕುಟುಂಬದ ಭವಿಷ್ಯದ ಬಗ್ಗೆಯೂ ಚಿಂತಿತರಾಗಿದ್ದಾರೆ. ಕುಟುಂಬವು ನ್ಯಾಯಕ್ಕಾಗಿ ಮನವಿ ಮಾಡಿದೆ.

“ನನ್ನ ಮಗ ನಿನ್ನೆ ಕೆಲಸಕ್ಕೆಂದು ಪಹಲ್ಗಾಮ್‌ಗೆ ಹೋಗಿದ್ದ. ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿಯ ಬಗ್ಗೆ ನಮಗೆ ತಿಳಿಯಿತು. ನಾವು ಅವನಿಗೆ ಕರೆ ಮಾಡಿದೆವು, ಆದರೆ ಅವನ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ, ಸಂಜೆ 4.40 ಕ್ಕೆ, ಅವನ ಫೋನ್ ಆನ್ ಆಯಿತು, ಆದರೆ ಯಾರೂ ಉತ್ತರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಂತರ ನಾವು ಪೊಲೀಸ್ ಠಾಣೆಗೆ ಧಾವಿಸಿದೆವು. ದಾಳಿಯಲ್ಲಿ ಅವನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಆಗ ನಮಗೆ ತಿಳಿದುಬಂತು. ಇದಕ್ಕೆ ಕಾರಣಕರ್ತರು ಯಾರೇ ಆಗಿರಲಿ ಅದರ ಪರಿಣಾಮಗಳನ್ನು ಎದುರಿಸಲೇಬೇಕು” ಎಂದು ಅವರ ತಂದೆ ಸೈಯದ್ ಹೈದರ್ ಶಾ ಹೇಳಿದ್ದಾರೆ.

ಈ ನಡುವೆ, ದಾಳಿಯನ್ನು ಖಂಡಿಸಿ ಜಮ್ಮು ಕಾಶ್ಮೀರದ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಬಂದ್ ಯಶಸ್ವಿಯಾಗಿದೆ. ರಾಜ್ಯ ರಾಜಧಾನಿ ಶ್ರೀನಗರ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಅಂಗಡಿಗಳು, ವ್ಯಾಪಾರ ಸಂಸ್ಥೆಗಳು ಮತ್ತು ಇಂಧನ ಕೇಂದ್ರಗಳು ಮುಚ್ಚಲ್ಪಟ್ಟವು. ರಸ್ತೆಗಳಲ್ಲಿ ಖಾಸಗಿ ವಾಹನಗಳು ಕಂಡುಬಂದರೂ ಸಾರ್ವಜನಿಕ ಸಾರಿಗೆ ವಿರಳವಾಗಿತ್ತು. ಖಾಸಗಿ ಶಾಲೆಗಳು ಮುಚ್ಚಲ್ಪಟ್ಟಿದ್ದರೂ, ಸರ್ಕಾರಿ ಶಾಲೆಗಳು ತೆರೆದಿದ್ದವು.

ಕಾಶ್ಮೀರ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (ಕೆಸಿಸಿಐ), ಕಾಶ್ಮೀರ ವ್ಯಾಪಾರಿಗಳು ಮತ್ತು ತಯಾರಕರ ಒಕ್ಕೂಟ (ಕೆಟಿಎಂಎಫ್), ಮುಸ್ಲಿಂ ಧಾರ್ಮಿಕ ಗುಂಪು ಮುತ್ತಹಿದಾ ಮಜ್ಲಿಸ್ ಉಲೇಮಾ (ಎಂಎಂಯು) ಮತ್ತು ಜಮ್ಮು ಕಾಶ್ಮೀರದ ಗ್ರ್ಯಾಂಡ್ ಮುಫ್ತಿ ನಾಸಿರ್-ಉಲ್-ಇಸ್ಲಾಂ ಸೇರಿದಂತೆ ಹಲವಾರು ಗುಂಪುಗಳು ಜಂಟಿಯಾಗಿ ಈ ಬಂದ್‌ಗೆ ಕರೆ ನೀಡಿವೆ.

“ಇಂತಹ ಭಯೋತ್ಪಾದಕ ಮತ್ತು ಹಿಂಸಾಚಾರದ ಕೃತ್ಯಗಳು ಸ್ವೀಕಾರಾರ್ಹವಲ್ಲ. ಇದಕ್ಕೆ ನಮ್ಮ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಭಯೋತ್ಪಾದನೆಯ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ನಿಂತು ಶಾಂತಿಯುತ ಮತ್ತು ಸಾಮರಸ್ಯದ ಸಮುದಾಯವನ್ನು ಸೃಷ್ಟಿಸಲು ಶ್ರಮಿಸಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಕಾಶ್ಮೀರದ ಗ್ರಾಂಡ್ ಮುಫ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಮ್ಮುವಿನಲ್ಲಿಯೂ ಸಹ, ಬಂದ್‌ಗೆ ಬಲವಾದ ಬೆಂಬಲ ದೊರೆಯಿತು. ಜಮ್ಮು ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಅರುಣ್ ಗುಪ್ತಾ, ಜಮ್ಮು ಬಾರ್ ಅಸೋಸಿಯೇಷನ್ ​​ಜೊತೆಗೆ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದಾರೆ. ಬಂದ್‌ನಲ್ಲಿ ಜಮ್ಮು ನಗರ ಮತ್ತು ಇತರ ಪ್ರಮುಖ ಪ್ರದೇಶಗಳಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದವು.

ಹಲವಾರು ರಾಜಕೀಯ ನಾಯಕರು ಮತ್ತು ಪಕ್ಷಗಳು ಸಹ ಬಂದ್‌ಗೆ ತಮ್ಮ ಬೆಂಬಲವನ್ನು ನೀಡಿವೆ. ಅವರಲ್ಲಿ ಪೀಪಲ್ಸ್ ಕಾನ್ಫರೆನ್ಸ್ (ಪಿಸಿ) ಅಧ್ಯಕ್ಷ ಮತ್ತು ಶಾಸಕ ಹಂದ್ವಾರ, ಸಜಾದ್ ಗನಿ ಲೋನ್ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಸೇರಿದ್ದಾರೆ. ಅವರು ಸಂತ್ರಸ್ತರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಈ ಘೋರ ಕೃತ್ಯವನ್ನು ಖಂಡಿಸಿದ್ದಾರೆ.

ಕಣಿವೆಯಾದ್ಯಂತ, ವಿಶೇಷವಾಗಿ ಪ್ರಮುಖ ಪ್ರವಾಸಿ ತಾಣಗಳ ಸುತ್ತಲೂ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆದಿಡಲು ಅನುಮತಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅದಾಗ್ಯೂ, ಬಂದ್‌ನ ಪರಿಣಾಮ ಕಣಿವೆಯ ಬಹುತೇಕ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ ಎಂದು ವರದಿಯಾಗಿದೆ.

ಜನರು, ರಾಜಕೀಯ ಪಕ್ಷಗಳು, ಧಾರ್ಮಿಕ ಸಂಸ್ಥೆಗಳು ಮತ್ತು ನಾಗರಿಕ ಸಮಾಜ ಗುಂಪುಗಳ ಸಾಮೂಹಿಕ ಧ್ವನಿಯು ಭಯೋತ್ಪಾದನೆಯ ವಿರುದ್ಧ ಬಲವಾದ ಸಂದೇಶವನ್ನು ರವಾನಿಸಿದೆ ಎಂದು ವರದಿಗಳು ಉಲ್ಲೇಖಿಸಿವೆ. ಪಹಲ್ಗಾಮ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...