Homeಕರ್ನಾಟಕಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

ಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

- Advertisement -
- Advertisement -

ರಸ್ತೆಯಲ್ಲಿ ಲಾರಿಗಳ ಓಡಾಟದ ವಿಚಾರವಾಗಿ ನಡೆದ ವಾಗ್ವಾದದ ವೇಳೆ ಗಣಿ ಮಾಲಿಕ ಹಾಡಹಗಲೆ ಕ್ಯಾಮೆರಾ ಮುಂದೆಯೆ ರೈತರೊಬ್ಬರನ್ನು ಗುಂಡಿಕ್ಕಿದ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಬುಧವಾರ ನಡೆದಿದೆ. ಘಟನೆಯ ವಿಡಿಯೊ ಇದೀಗ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ಹುಟ್ಟುಹಾಕಿದೆ. ಮಾಜಿ MLC ಒಬ್ಬರ ಸಂಬಂಧಿಕರ ಮಾಲೀಕತ್ವದ ಕ್ರಷರ್ ಕಂಪನಿಗಾಗಿ ಇದನ್ನು ಮಾಡಲಾಗಿದೆ ಎಂದು ಅರೋಪಿಸಲಾಗಿದೆ. ಚಿಕ್ಕಬಳ್ಳಾಪುರ

ಗಣಿಗಾರಿಕೆ ಲಾರಿಗಳ ಓಡಾಟ ಮತ್ತು ರಸ್ತೆ ನಿರ್ಮಾಣ ವಿರೋಧಿಸಿ ಫೆಬ್ರುವರಿಯಲ್ಲಿ ಮಂಚೇನಹಳ್ಳಿಯಲ್ಲಿ ರೈತ ಸಂಘ, ಮಂಚೇನಹಳ್ಳಿ ತಾಲ್ಲೂಕು ಪರಿಸರ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟಿಸಿದ್ದರು. ಈ ವೇಳೆ ಬೆಟ್ಟದ ತಪ್ಪಲಿನಲ್ಲಿ ಮುನೇಶ್ವರ ಗುಡಿ, ತಿಮ್ಮರಾಯನಗುಡಿ ಇದೆ. ಸ್ವಚ್ಛಗಾಳಿ, ನೀರು, ಮೇವು ನೀಡುತ್ತಿರುವ ನಮ್ಮ ಊರಿನ ಬೆಟ್ಟ ಗುಡ್ಡಗಳಲ್ಲಿ ಗಣಿಗಾರಿಕೆ ಮಾಡಲು ಬಿಡುವುದಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ದಾರಿ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ಸಭೆಗಳು ಸಹ ನಡೆದಿದ್ದವು ಎಂದು ಪ್ರಜಾವಾಣಿ ವರದಿ ಮಾಡಿದೆ.

ಅದಾಗ್ಯೂ, ಬುಧವಾರ ಗಣಿ ಮಾಲಿಕ ಸಕಲೇಶ್ ಮತ್ತು ಆತನ ಕಡೆಯವರು ಜೆಸಿಬಿಗಳ ಮೂಲಕ ರಸ್ತೆ ನಿರ್ಮಿಸಲು ಮುಂದಾಗಿದ್ದರು. ಈ ವೇಳೆ ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಆರೋಪಿ ಸಕಲೇಶ್, ರಿವಾಲ್ವರ್ ಹಿಡಿದು ‘ಯಾರು ಬರುತ್ತಿರೊ ಬರ್ರೊ’ ಎನ್ನುತ್ತ ರೈತ ರವಿ ಮೇಲೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಮಂಚೇನಹಳ್ಳಿ ತಾಲ್ಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲುಗಣಿಗಾರಿಕೆ ಹಾಗೂ ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಮಾಡುವ ವಿಚಾರವಾಗಿ ಈ ಗಲಾಟೆ ನಡೆದಿತ್ತು ಎಂದು ವರದಿಯಾಗಿದೆ. ಗುಂಡಿನ ದಾಳಿಯಿಂದಾಗಿ ರೈತ ರವಿ ಅವರ ತೊಡೆಗೆ ಗಾಯಗಾಳಾಗಿವೆ ಎಂದು ವರದಿಯಾಗಿದೆ.

ಗಾಯಾಳುವನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಚೇನಹಳ್ಳಿ ಮತ್ತು ಗೌರಿಬಿದನೂರು ಪೊಲೀಸರು ಭೇಟಿ ನೀಡಿದ್ದು ಬಿಗುವಿನ ವಾತಾವರಣವಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇಡೀ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಶ್ರೀನಿವಾಸ್ ಸಿ.ವಿ., ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾನೂನು ಸು ವ್ಯವಸ್ಥೆ ಇದೆಯೋ ಸತ್ತು ಹೋಗಿದೆಯೆ? ಎಂದು ಪ್ರಶ್ನಿಸಿದ್ದಾರೆ.

“ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನಲ್ಲಿ ಮಟ ಮಟ ಮಧ್ಯಾಹ್ನ ಹಾಡು ಆಗಲೇ ಅನ್ನದಾತನ ಮೇಲೆ ಗುಂಡಿನ ಸುರಿಮಳೆ ನಡೆಯುತ್ತಿದೆ. ಪೊಲೀಸ್ ಇಲಾಖೆಯ ಮೇಲೆ ಇದ್ದಂತಹ ನಂಬಿಕೆ ರೈತಾಪಿ ವರ್ಗಕ್ಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಇದಕ್ಕೆ ಕಾರಣ ಕಳೆದ ಐದಾರು ವರ್ಷಗಳಿಂದ ಇದೇ ಗ್ರಾಮದ ರೈತಾಪಿ ವರ್ಗ ಮತ್ತು ಕ್ರೇಶರ್ ಮಾಲೀಕರ ನಡುವೆ ನಡೆಯುತ್ತಿದ್ದಂತಹ ಗಲಾಟೆ ವಾಕ್ಸಮರಗಳು. ಇಂದು ಬಂದೂಕಿನ ಗುಂಡಿನ ಸದ್ದಿನವರಿಗೂ ಕಾಲಿಟ್ಟಿದೆ ಎಂದರೆ ಬೇಸರವಾಗುತ್ತದೆ ಮತ್ತು ಅಸಹ್ಯವಾಗುತ್ತದೆ” ಎಂದು ಹೇಳಿದ್ದಾರೆ.

“ಮಾಜಿ MLC ಒಬ್ಬರ ಸಂಬಂಧಿಕರ ಮಾಲೀಕತ್ವದ ಕ್ರಷರ್ ಕಂಪನಿಗೆ ಇಲ್ಲಿನ ಎಲ್ಲಾ ಇಲಾಖೆಯ ಆಡಳಿತ ವ್ಯವಸ್ಥೆಗಳು ಒಂದಾಗಿ ನೇರವಾಗಿ ಮತ್ತು ಪರೋಕ್ಷವಾಗಿ ಸಹಾಯ ಮಾಡಿದ್ದಾರೆಯೆ ಹೊರತು ಇಲ್ಲಿನ ರೈತರ ಪರ ಎಂದು ಕೆಲಸ ಮಾಡಿಲ್ಲದಿರುವುದು ಎದ್ದು ಕಾಣಿಸುತ್ತದೆ. ಏಕೆಂದರೆ ಈ ಸಮಸ್ಯೆ ಉದ್ಭವಿಸಿದ ದಿನವೇ ಇಲ್ಲಿನ ಪೊಲೀಸ್ ಇಲಾಖೆಯಾಗಲಿ ಕಂದಾಯ ಇಲಾಖೆಯಾಗಲಿ ಕ್ರಮ ಕೈಗೊಂಡಿದ್ದರೆ ಇವತ್ತಿನ ಘಟನೆ ನಡೆಯುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

“ದುಷ್ಟ ವ್ಯವಸ್ತೆಯ ಕೈಗೆ ಅಧಿಕಾರ ಕೊಟ್ಟು ಪೊಲೀಸ್ ವ್ಯವಸ್ಥೆ ಮತ್ತು ಕಂದಾಯ ಇಲಾಖೆಯನ್ನು ತಮ್ಮ ಕೈ ಗೊಂಬೆಗಳಂತೆ ಮಾಡಿಕೊಂಡಿದ್ದಾರೆ. ಹೊಲಸು ರಾಜಕೀಯ ಪಕ್ಷಗಳು ಅಕ್ರಮ ಕ್ರಷರ್ ಮಾಲೀಕರ ಎಂಜಲು ಕಾಸಿಗೆ ಅವರು ಒಡ್ಡುವಂತಹ ಆಸೆ ಆಮೀಷಗಳಿಗೆ ಜಿಲ್ಲೆಯ ಅಮಾಯಕ ರೈತಪಿ ವರ್ಗದ ಮತ್ತು ಸಾರ್ವಜನಿಕರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಜಿಲ್ಲೆಯ ವ್ಯವಸ್ಥೆಯ ಮೇಲೆ ಅಸಹ್ಯವಾಗುತ್ತದೆ” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...