Homeಮುಖಪುಟಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ

ಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯು ಗಂಭೀರ ಗುಪ್ತಚರ ಮತ್ತು ಭದ್ರತಾ ವೈಫಲ್ಯ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಘಟನೆಗೆ ಕೆಲವು ದಿನಗಳ ಮೊದಲೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ನೆಲೆಸಿರುವ ಭಯೋತ್ಪಾದಕನೊಬ್ಬ ದಾಳಿಯ ಬಗ್ಗೆ ಸುಳಿವು ನೀಡಿದ್ದನು ಎಂದು ಮೂಲಗಳು ಹೇಳಿದ್ದು, ಆದರೆ ಗುಪ್ತಚರ ಸಂಸ್ಥೆಗಳು ಮತ್ತು ಭದ್ರತಾ ಪಡೆಗಳು ಅದರ ಮೇಲೆ ಕ್ರಮ ಕೈಗೊಳ್ಳಲು ವಿಫಲವಾಗಿದ್ದು, ಇದು ಭೀಕರ ದುರಂತಕ್ಕೆ ಕಾರಣವಾಯಿತು ಎಂದು ವರದಿಯಾಗಿದೆ. ಪಹಲ್ಗಾಮ್ ದಾಳಿ

ಪಿಒಕೆ ಮತ್ತು ಪಾಕಿಸ್ತಾನದಲ್ಲಿ ನೆಲೆಗೊಂಡಿದ್ದ ಅಂತರರಾಷ್ಟ್ರೀಯ ನಿರ್ವಾಹಕರು ಕಾಲ ಕಾಲಕ್ಕೆ ಉಗ್ರರಿಗೆ ನಿರ್ದೇಶನಗಳನ್ನು ನೀಡುತ್ತಿದ್ದರು ಎಂದು ವರದಿಯಾಗಿದೆ. ದಾಳಿಯಲ್ಲಿ ಭಾಗಿಯಾಗಿರುವ ಉಗ್ರರು ಶಸ್ತ್ರಾಸ್ತ್ರಗಳನ್ನು ಬಳಸುವಲ್ಲಿ ಉತ್ತಮ ತರಬೇತಿ ಪಡೆದಿದ್ದರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಜನಪ್ರಿಯ ಪ್ರವಾಸಿ ತಾಣಗಳಾಗಿದ್ದರೂ ಭದ್ರತಾ ಪಡೆಗಳ ನಿಯೋಜನೆ ಕಡಿಮೆ ಇರುವ ಪ್ರದೇಶಗಳ ವಿವರವಾದ ವರದಿಗಳನ್ನು ಒದಗಿಸಿದ್ದರು ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ದಾಳಿಕೋರರು ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಹೊಂದಿದ್ದರು ಎಂದು ವರದಿಯು ಉಲ್ಲೇಖಸಿದ್ದು, ಇದು ಪ್ರವಾಸಿಗರ ಹತ್ಯಾಕಾಂಡವನ್ನು ರೆಕಾರ್ಡ್ ಮಾಡಲು ಮತ್ತು ದೃಶ್ಯಗಳನ್ನು ಅವರ ಭಯೋತ್ಪಾದಕ ಅಂಗಸಂಸ್ಥೆಗಳಿಗೆ ರವಾನಿಸಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಬುಧವಾರ ಭದ್ರತಾ ಸಂಸ್ಥೆಗಳು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವ ಮೂವರು ವ್ಯಕ್ತಿಗಳ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದೆ. ಆರೋಪಿಗಳನ್ನು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂದು ಗುರುತಿಸಲಾಗಿದ್ದು ಅವರು ಮೂಸಾ, ಯೂನಸ್ ಮತ್ತು ಆಸಿಫ್ ಎಂಬ ಸಂಕೇತನಾಮಗಳನ್ನು ಹೊಂದಿದ್ದಾರೆ ಎನ್ನಲಾಗಿದೆ. ಅವರು ಪೂಂಚ್‌ನಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಘಟನೆಗಳಲ್ಲಿಯೂ ಭಾಗಿಯಾಗಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ ಭಯೋತ್ಪಾದಕ ಗುಂಪಿನ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಮಂಗಳವಾರ ಮಧ್ಯಾಹ್ನ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಹಿರಿಯ ಕಮಾಂಡರ್ ಅಲಿಯಾಸ್ ಖಾಲಿದ್ ಎಂದೂ ಕರೆಯಲ್ಪಡುವ ಸೈಫುಲ್ಲಾ ಕಸೂರಿಯನ್ನು ಹತ್ಯಾಕಾಂಡದ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುಪ್ತಚರ ಸಂಸ್ಥೆಗಳು ಗುರುತಿಸಿವೆ.

ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಗುಜ್ರಾನ್‌ವಾಲಾ ನಗರದಿಂದ ಕಾರ್ಯನಿರ್ವಹಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ನಡೆದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಇದರಲ್ಲಿ ಲೆಫ್ಟಿನೆಂಟ್ ಗವರ್ನರ್ ಕೂಡ ಭಾಗವಹಿಸಿದ್ದರು. ದೇಶವು ಭಯೋತ್ಪಾದನೆಗೆ ಮಣಿಯುವುದಿಲ್ಲ ಮತ್ತು ಪ್ರವಾಸಿಗರ ಹತ್ಯೆಗೆ ಕಾರಣರಾದವರನ್ನು ಬಿಡಲಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಮೂಲಗಳ ಪ್ರಕಾರ, ಕೇಂದ್ರವು ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಮತ್ತು ಸರ್ವಪಕ್ಷ ಸಭೆಯನ್ನು ಕರೆದಿದ್ದು, ಈ ಸಂದರ್ಭದಲ್ಲಿ ಸರ್ಕಾರವು ಅಂತರರಾಷ್ಟ್ರೀಯ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಗುರಿಯನ್ನು ಹೊಂದಿದೆ. ಪಹಲ್ಗಾಮ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...