Homeಅಂತರಾಷ್ಟ್ರೀಯಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕ್‌ ಜೊತೆಗಿನ ಸಂಬಂಧ ಕಡಿದುಕೊಂಡ ಭಾರತ

ಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕ್‌ ಜೊತೆಗಿನ ಸಂಬಂಧ ಕಡಿದುಕೊಂಡ ಭಾರತ

- Advertisement -
- Advertisement -

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆಗೈದಿರುವುದಕ್ಕೆ ಪ್ರತ್ಯುತ್ತರವಾಗಿ ಭಾರತ ಪಾಕಿಸ್ತಾನ ಜೊತೆಗಿನ ಸಂಬಂಧವನ್ನು ಕಡಿದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಏ.23) ನಡೆದ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ಎರಡೂವರೆ ಗಂಟೆಗಳ ಸಭೆಯ ನಂತರ, ಪಾಕಿಸ್ತಾನದೊಂದಿಗಿನ ಸಂಬಂಧ ಕಡಿತಗೊಳಿಸುವ ನಿರ್ಧಾರ ಹೊರಬಿದ್ದಿದೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸಿಸಿಎಸ್ ಸಭೆಯ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ 1960ರಲ್ಲಿ ಭಾರತ-ಪಾಕಿಸ್ತಾನ ಸಹಿ ಹಾಕಿರುವ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಭಾರತ-ಪಾಕಿಸ್ತಾನ ನಡುವಿನ ಅಟ್ಟಾರಿ ಗಡಿಯನ್ನು ಬಂದ್ ಮಾಡಲಾಗುವುದು. ಪಾಕಿಸ್ತಾನದ ಪ್ರಜೆಗಳಿಗೆ ನೀಡಲಾಗುವ ಸಾರ್ಕ್‌ ವೀಸಾ ಸೌಲಭ್ಯ ರದ್ದುಗೊಳಿಸಲಾಗಿದೆ. ಪಾಕಿಸ್ತಾನದ ಭಾರತೀಯ ರಾಯಭಾರ ಕಚೇರಿಯಿಂದ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲಾಗುವುದು. ಪಾಕಿಸ್ತಾನದ ಮಿಲಿಟರಿ ರಾಜತಾಂತ್ರಿಕರಿಗೆ ಭಾರತದಿಂದ ಹೊರ ನಡೆಯಲು ಸೂಚನೆ ನೀಡಲಾಗುವುದು. ಸಾರ್ಕ್ ವೀಸಾ ವಿನಾಯಿತಿ ಸೌಲಭ್ಯದ ಮೇಲೆ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಗಡುವು ನೀಡಲಾಗಿದೆ” ಎಂದು ವಿಕ್ರಮ್ ಮಿಸ್ರಿ ವಿವರಿಸಿದ್ದಾರೆ.

ಸಿಂಧೂ ಜಲ ಒಪ್ಪಂದ ರದ್ದು

1960ರ ಸೆಪ್ಟೆಂಬರ್ 19ರಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನದ ಅಧ್ಯಕ್ಷ ಫೀಲ್ಡ್ ಮಾರ್ಷಲ್ ಅಯೂಬ್ ಖಾನ್ ನಡುವೆ ಸಹಿ ಹಾಕಲಾದ ಸಿಂಧೂ ಜಲ ಒಪ್ಪಂದವು, ಪಶ್ಚಿಮದ ನದಿಗಳಾದ ಸಿಂಧೂ, ಝೀಲಂ ಮತ್ತು ಚೆನಾಬ್‌ಗಳನ್ನು ಪಾಕಿಸ್ತಾನಕ್ಕೆ ಮತ್ತು ಪೂರ್ವದ ನದಿಗಳಾದ ರಾವಿ, ಬಿಯಾಸ್ ಮತ್ತು ಸಟ್ಲೆಜ್‌ಗಳನ್ನು ಭಾರತಕ್ಕೆ ಹಂಚಿಕೆ ಮಾಡಿತ್ತು. ಈ ಒಪ್ಪಂದವನ್ನು ರದ್ದುಗೊಳಿಸಲು ಭಾರತ ತೀರ್ಮಾನಿಸಿದೆ.

ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯಲು ಗಡುವು

ರಾಜತಾಂತ್ರಿಕ ಮತ್ತು ಭದ್ರತಾ ಕ್ರಮಗಳ ಭಾಗವಾಗಿ, ಭಾರತವು ಪಾಕಿಸ್ತಾನಿ ರಾಜತಾಂತ್ರಿಕರು ದೇಶ ತೊರೆಯಲು ಆದೇಶಿಸಿದೆ. ನವದೆಹಲಿಯ ಪಾಕಿಸ್ತಾನಿ ಹೈಕಮಿಷನ್‌ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಲಾಗಿದೆ. ಅವರು ಭಾರತ ತೊರೆಯಲು ಒಂದು ವಾರದ ಕಾಲವಕಾಶವಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ.

ಭಾರತವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಿಂದ ತನ್ನ ಮಿಲಿಟರಿ ಸಲಹೆಗಾರರನ್ನು ವಾಪಸ್ ಕರೆಸಿಕೊಳ್ಳಲಿದೆ. ಸಾರ್ಕ್ ವೀಸಾ ಹೊಂದಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳ ಭಾರತ ತೊರೆಯಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಪ್ರಯಾಣಿಸಲು ಇನ್ನು ಮುಂದೆ ಅವಕಾಶವಿರುವುದಿಲ್ಲ. ಈಗಾಗಲೇ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ SVES ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ಮಿಸ್ರಿ ಘೋಷಿಸಿದ್ದಾರೆ.

ಏಕೈಕ ಭೂ ಮಾರ್ಗ ಬಂದ್

ಭಾರತ ಮತ್ತು ಪಾಕಿಸ್ತಾನ ನಡುವಿನ ಏಕೈಕ ಭೂ ಮಾರ್ಗ ವಾಘಾ-ಅಟ್ಟಾರಿ ಗಡಿಯನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ. “ಅಟ್ಟಾರಿ ಸಮಗ್ರ ಚೆಕ್‌ಪೋಸ್ಟ್’ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುವುದು. ಅನುಮತಿ ಪಡೆದು ಗಡಿ ದಾಟಿದವರು ಮೇ 1, 2025ರ ಮೊದಲು ವಾಘಾ-ಅಟ್ಟಾರಿ ಮಾರ್ಗದ ಮೂಲಕ ಹಿಂತಿರುಗಬಹುದು ಎಂದು ಮಿಸ್ರಿ ತಿಳಿಸಿದ್ದಾರೆ.

ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣದ ಬಳಿಯ ಪ್ರವಾಸಿತಾಣ ಬೈಸರನ್‌ ಹುಲ್ಲುಗಾವಲಿನಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ.

2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ (LeT) ಜೊತೆ ನಂಟು ಹೊಂದಿರುವ ರೆಸಿಸ್ಟೆನ್ಸ್ ಫ್ರಂಟ್ (TRF)ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...