Homeಕರ್ನಾಟಕಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ 'ಗೌರವಯುತ' ಖುಲಾಸೆ

ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ

- Advertisement -
- Advertisement -

ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂಬ ಸುಳ್ಳು ಆರೋಪದ ಮೇಲೆ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಸುರೇಶ್‌ ಅವರನ್ನು ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ‘ನಿರಪರಾಧಿ’ ಎಂದು ಘೋಷಿಸಿ ಬುಧವಾರ (ಏ.23) ‘ಗೌರವಯುತವಾಗಿ’ ಖುಸಲಾಸೆಗೊಳಿಸಿದೆ.

ಸುರೇಶ್ ಅವರ ಪತ್ನಿ ಮಲ್ಲಿಗೆ 2021ರಲ್ಲಿ ನಾಪತ್ತೆಯಾಗಿದ್ದರು. ಅವರನ್ನು ಸುರೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಪೊಲೀಸರು, ಸುರೇಶ್ ಮೇಲೆ ಎಫ್‌ಐಆರ್ ದಾಖಲಿಸಿ ಬಂಧಿಸಿದ್ದರು. ಸುರೇಶ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಮೈಸೂರು ಜಿಲ್ಲಾ ನ್ಯಾಯಾಲಯ ಸುರೇಶ್ ಅವರಿಗೆ ಜೈಲು ಶಿಕ್ಷೆ ವಿಧಿಸಿತ್ತು. ಎರಡು ವರ್ಷ ಜೈಲಿನಲ್ಲಿದ್ದ ಸುರೇಶ್ 2023ರಲ್ಲಿ ಜಾಮೀನಿನ ಮೂಲಕ ಬಿಡುಗಡೆಗೊಂಡಿದ್ದರು.

ತಪ್ಪು ಮಾಡದೆ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್, ನಾಪತ್ತೆಯಾದ ತನ್ನ ಪತ್ನಿಯ ಕುರಿತು ಮಾಹಿತಿ ಕಲೆ ಹಾಕಲು ಮುಂದಾಗಿದ್ದರು. ಆಕೆಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ನಡುವೆ 2025ರ ಏಪ್ರಿಲ್ 1ರಂದು ಸುರೇಶ್ ಅವರ ಪತ್ನಿ ಮಲ್ಲಿಗೆ ಮಡಿಕೇರಿಯ ಹೋಟೆಲ್ ಒಂದರಲ್ಲಿ ಪ್ರಿಯಕರ ಗಣೇಶ್ ಜೊತೆ ಪತ್ತೆಯಾಗಿದ್ದಾರೆ. ಈ ವಿಚಾರವನ್ನು ವಕೀಲರ ಮೂಲಕ ಸುರೇಶ್ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ನ್ಯಾಯಾಲಯದ ಆದೇಶದಂತೆ ಗಣೇಶ್‌ ಜೊತೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಕ್ಕೆ ತೆರಳುತ್ತಿದ್ದಾಗ ಮಡಿಕೇರಿ ಪೊಲೀಸರು ಮಲ್ಲಿಗೆಯನ್ನು ವಶಕ್ಕೆ ಪಡೆದು, ಕುಶಾಲನಗರ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಮೈಸೂರು ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು 15 ದಿನಗಳೊಳಗೆ ವಿವರಣೆ ನೀಡುವಂತೆ ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಿತ್ತು. ಪೊಲೀಸ್ ವರಿಷ್ಠಾಧಿಕಾರಿಯ ವಿಚಾರಣಾ ವರದಿಯನ್ನು ಬೈಲುಕುಪ್ಪೆ ವೃತ್ತ ನಿರೀಕ್ಷಕ ದೀಪಕ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಿ.ಜಿ.ಪ್ರಕಾಶ್, ಮಹೇಶ್ ಕುಮಾರ್, ಪ್ರಕಾಶ್ ಎತ್ತಿಮನಿ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, ದೋಷಾರೋಪ ಪಟ್ಟಿಗೆ ಏನು ಆಧಾರವಿದೆ? ಎಂದು ಪ್ರಶ್ನಿಸಿದ್ದರು.

ಸುರೇಶ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಪಾಂಡು ಪೂಜಾರಿ ಅವರು, ‘ಪೊಲೀಸರು ಉದ್ದೇಶ ಪೂರ್ವಕವಾಗಿ ಬುಡಕಟ್ಟು ಸಮುದಾಯವನ್ನು ಗುರಿಯಾಗಿಸಿ ಸುಳ್ಳು ಕಥೆ ಸೃಷ್ಟಿಸಿದ್ದಾರೆ. ತನಿಖಾಧಿಕಾರಿಗಳ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಲು ನಿರ್ದೇಶನ ನೀಡಬೇಕು’ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿ, ವಿಚಾರಣೆ ಮುಂದೂಡಿದ್ದರು. ಕಾಯ್ದಿರಿಸಿದ ತೀರ್ಪನ್ನು ಬುಧವಾರ ಪ್ರಕಟಸಲಾಗಿದೆ.

ನ್ಯಾಯಾಲಯದ ತೀರ್ಪು ಏನು?

ಪ್ರಕರಣ ಸಂಬಂಧ, ಪೊಲೀಸ್‌ ದಾಖಲೆಗಳಲ್ಲಿ ಸುರೇಶ್ ಅವರ ಹೆಸರನ್ನು ತೆಗೆದು ಹಾಕುವಂತೆ ಮೈಸೂರಿನ ಬೆಟ್ಟದಪುರ ಪೊಲೀಸರಿಗೆ ನ್ಯಾಯಾಧೀಶ ಗುರುರಾಜ್‌ ಸೋಮಕ್ಕಳವರ್‌ ಸೂಚನೆ ನೀಡಿದ್ದಾರೆ. ಸುರೇಶ್ ಅವರ ಜಾಮೀನು ಬಾಂಡ್‌ ಮತ್ತು ಅವರ ಶ್ಯೂರಿಟಿ ಬಾಂಡ್‌ ಅನ್ನು ರದ್ದುಗೊಳಿಸಲಾಗಿದೆ. ಅವರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರದ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಬೈಲಕುಪ್ಪೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಬಿ.ಜಿ.ಪ್ರಕಾಶ್ ವಿರುದ್ಧ ಐಪಿಸಿ ಸೆಕ್ಷನ್‌ 193, 195 ರ ಅಡಿ (ಸುಳ್ಳು ಪ್ರಕರಣ ಸೃಷ್ಟಿ, ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಕೆ) ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ತನಿಖಾ ತಂಡದಲ್ಲಿದ್ದ ಅಂದಿನ ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ಜಿತೇಂದ್ರ ಕುಮಾರ್‌, ಬೆಟ್ಟದಪುರ ಪಿಎಸ್‌ಐ ಮಹೇಶ್ ಕುಮಾರ್, ಎಸ್‌ಐ ಪ್ರಕಾಶ್ ಯತ್ತಿಮನಿ ವಿರುದ್ಧ ಇಲಾಖಾ ತನಿಖೆ ನಡೆಸಬೇಕು ಎಂದು ಮೈಸೂರು ಐಜಿಪಿಗೆ, ಪ್ರಸ್ತುತ ಪ್ರಕರಣದಲ್ಲಿ ದಾಖಲಾದ ಯುಡಿಆರ್‌ ಕುರಿತು ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ನ್ಯಾಯಾಲಯ ಆದೇಶಿಸಿದೆ.

ಕುಶಾಲನಗರದ ಮಹಿಳೆ ನಾಪತ್ತೆ…ಮೈಸೂರಿನಲ್ಲಿ ಏಕೆ ಪ್ರಕರಣ?

2021ರ ಜುಲೈನಲ್ಲಿ ಕೊಡಗು ಜಿಲ್ಲೆ ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ನಿವಾಸಿ ಮಲ್ಲಿಗೆ ಕಾಣೆಯಾಗಿದ್ದಾರೆಂದು ಪ್ರಕರಣ ದಾಖಲಾಗಿತ್ತು. ಅದೇ ತಿಂಗಳ 18ರಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಠಾಣಾ ವ್ಯಾಪ್ತಿಯ ಶಾನುಭೋಗನಹಳ್ಳಿಯ ಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಅದು ಮಗಳದ್ದೇ ಎಂದು ಮಲ್ಲಿಗೆಯ ತಾಯಿ ಗುರುತಿಸಿದ್ದರು. ಪತಿ ಸುರೇಶ್‌ ಅವರನ್ನು ವಿಚಾರಣೆ ನಡೆಸಿದ ಪೊಲೀಸರು, ಆತ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿರುವುದಾಗಿ ತಿಳಿಸಿ, ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ತನ್ನ ಪತ್ನಿ ಕಾಣೆಯಾಗಿದ್ದಾರೆ ಎಂದು ಸುರೇಶ್ ಕುಶಾಲನಗರದಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಯಾರದ್ದೋ ಶವವನ್ನು ಸುರೇಶ್ ಅವರ ಪತ್ನಿಯದ್ದೇ ಎಂದು ಬಿಂಬಿಸಿದ್ದ ಮೈಸೂರಿನ ಬೆಟ್ಟದಪುರ ಪೊಲೀಸರು, ಸುರೇಶ್ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

 ಸುರೇಶ್‌ಗೆ ನ್ಯಾಯ ದೊರಕಿಸಿಕೊಟ್ಟ ವಕೀಲ ಪಾಂಡು ಪೂಜಾರಿ 

ಸುರೇಶ್‌ ಜೈಲಿನಲ್ಲಿದ್ದ ಸಮಯದಲ್ಲಿ ಅವರ ತಂದೆ ಗಾಂಧಿ ವಕೀಲ ಪಾಂಡು ಪೂಜಾರಿ ಅವರನ್ನು ಭೇಟಿಯಾಗಿ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ ಮಗನನ್ನು ಜೈಲಿಗೆ ಹಾಕಿರುವ ಬಗ್ಗೆ ತಿಳಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಪಾಂಡು ಪೂಜಾರಿ ಇಲ್ಲಿಯವರೆಗೆ ಸುರೇಶ್‌ ಕುಟುಂಬದಿಂದ ಯಾವುದೇ ಶುಲ್ಕ ಪಡೆಯದೆ ವಾದ ಮಂಡಿಸಿ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...