ನಿದ್ದೆಯಲ್ಲಿದ್ದ ಯುವತಿಯ ಮೇಲೆ ಕೆಎಸ್ಆರ್ಟಿಸಿ ಕಂಡಕ್ಟರೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಚಲಿಸುತ್ತಿದ್ದ ಬಸ್ನಲ್ಲಿ ಹಾಡ ಹಗಲೆ ಈ ಘಟನೆ ನಡೆದಿದೆ. ಆರೋಪಿಯನ್ನು ಕೆಸ್ಆರ್ಟಿಸಿ ಕಂಡಕ್ಟರ್ ಬಾಗಲೆಕೋಟೆ ಮೂಲದ ಪ್ರದೀಪ್ ಎಂದು ಗುರುತಿಸಲಾಗಿದ್ದು, ಘಟನೆಯ ವಿಡಿಯೊ ಬಂದ ತಕ್ಷಣವೆ ಅವರನ್ನು ಅಮಾನತು ಮಾಡಲಾಗಿದೆ ಎಂದು ನಾನುಗೌರಿ.ಕಾಂಗೆ ಕೆಎಸ್ಆರ್ಟಿಸಿ ತಿಳಿಸಿದೆ. ಮಂಗಳೂರು
ಮಂಗಳೂರಿನಿಂದ ಮುಡಿಪು ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ನಗರ ಸಾರಿಗೆಯಲ್ಲಿ ಬುಧವಾರ ಈ ಕೃತ್ಯ ನಡೆದಿದೆ ಎಂದು ವರದಿಯಾಗಿದೆ. ಸಹ ಪ್ರಯಾಣಿಕರೊಬ್ಬರು ಘಟನೆಯ ವಿಡಿಯೊ ಮಾಡಿದ್ದು, ಅದರಲ್ಲಿ ದುಷ್ಕರ್ಮಿ ಕಂಡಕ್ಟರ್ ಪ್ರದೀಪ್ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದು ದಾಖಲಾಗಿದೆ. ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಕೊಣಾಜೆ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, “ಆರೋಪಿ ಕಂಡಕ್ಟರ್ ಹೆಸರು ಪ್ರದೀಪ್ ಎಂದಾಗಿದೆ. ಮಂಗಳೂರಿನಿಂದ ಮುಡಿಪುವಿಗೆ ತೆರಳುವ ಸರ್ಕಾರಿ ಬಸ್ನ ವಿಡಿಯೊ ಇದಾಗಿದೆ. ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಈ ವಿಡಿಯೊದ ವರದಿ ನಮಗೆ 10 ಗಂಟೆಗೆ ಬಂದಿದ್ದು, ನಾವು ಅವರನ್ನು 10.15ಕ್ಕೆ ಅಮಾನತು ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.
“ಇಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ, ಹಾಗಾಗಿಯೆ ತಕ್ಷಣವೆ ಅವರನ್ನು ಅಮಾನತು ಮಾಡಿದ್ದೇವೆ. ಮುಂದೆ ಅವನ ಮೇಲೆ ವಿಚಾರಣೆ ನಡೆಯಲಿದ್ದು, ವಿಚಾರಣೆಯಲ್ಲಿ ಕಂಡಕ್ಟರ್ ತಪ್ಪಿತಸ್ಥ ಎಂದು ಕಂಡು ಬಂದರೆ ಆತ ನೌಕರಿ ಕೂಡಾ ಕಳೆದುಕೊಳ್ಳಲಿದ್ದಾರೆ” ಎಂದು ಅವರು ಹೇಳಿದ್ದಾರೆ.
ಹಾಗೆ ನೋಡಿದರೆ, ಆತ ಲೈಂಗಿಕ ದೌರ್ಜನ್ಯ ಎಸಗುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕಾಣುತ್ತಿದ್ದು, ಉದ್ದೇಶಪೂರ್ವಕವಾಗಿ ಯುವತಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದಾನೆ. ಹಾಗಾಗಿ ಇದು ಗಂಭೀರ ವಿಚಾರವಾಗಿದ್ದು, ಆತನಿಗೆ ತನ್ನನ್ನು ಸಮರ್ಥಿಸಿಕೊಳ್ಳಲು ಕಾರಣಗಳೆ ಇಲ್ಲ ಎಂದು ರಾಜೇಶ್ ಹೇಳಿದ್ದಾರೆ.
“ಪ್ರಯಾಣಿಕರೊಂದಿಗೆ ಹೇಗೆ ವರ್ತಿಸಬೇಕು ಎಂಬ ಬಗ್ಗೆ ನಮ್ಮ ಸಿಬ್ಬಂದಿಗೆ ಪ್ರತಿದಿನ ನಿರ್ದೇಶನ ನೀಡುತ್ತೇವೆ. ಅದನ್ನು ಡಿಪೋಗಳಲ್ಲಿ ಪುನರಾವರ್ತಿತವಾಗಿ ನೀಡುತ್ತಲೆ ಇರುತ್ತೇವೆ. ಆದರೆ ಎಲ್ಲಾ ಕಡೆಯೂ ಒಬ್ಬರಿಬ್ಬರು ಇಂತವರು ಇದ್ದೇ ಇರುತ್ತಾರೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಈ ಘಟನೆಯು ವಿಡಿಯೊ ಮಾಡದೆ ಇದ್ದರೆ ನಮಗೆ ತಿಳಿದು ಬರುತ್ತಲೆ ಇರಲಿಲ್ಲ. ಆದ್ದರಿಂದ ಈ ವಿಡಿಯೊ ಮಾಡಿದವರಿಗೆ ಸೆಲ್ಯೂಟ್. ವಿಡಿಯೊ ಸ್ಪಷ್ಟವಾಗಿದ್ದು, ಕಂಡಕ್ಟರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.” ಎಂದು ರಾಜೇಶ್ ಹೇಳಿದ್ದಾರೆ.
ಮಂಗಳೂರು
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ
ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ

