Homeಕರ್ನಾಟಕನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) ಬೃಹತ್ ಬೈಕ್ ರ್ಯಾಲಿ ನಡೆಸಲಿದ್ದು 26ರಂದು ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶದ ಕುರಿತು ಪ್ರಚಾರ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ  ಬೈಕ್ ಯಾನವು  ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ ಎಂದಿದ್ದಾರೆ.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದು, ಇವರೆಲ್ಲರಿಗೂ ಎದ್ದೇಳು ಕರ್ನಾಟಕವು ಹೃದಯತುಂಬಿ ವಂದಿಸುತ್ತದೆ ಮತ್ತು ನಾಳಿನ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ನಾವು ಹಲವರು ಭಾಗಿಯಾಗಿ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗುತ್ತೇವೆ ಎಂದು ಅವರು ತಿಳಿಸಿದರು.

ಜಾಥಾವು ದಾರಿಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ಮಾತ್ರ ಜನರಲ್ಲಿ ಜಾಗೃತಿ ಮೂಡಿಸಲಿಲ್ಲ, ಬದಲಾಗಿ ಇಂದಿನ ಯುವಕರು–ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿತು ಮತ್ತು ಅದರ ಪರಿಹಾರಕ್ಕೆ ಹೋರಾಟವೊಂದೇ ದಾರಿ ಎಂದು ಜನರಿಗೆ ತಿಳಿಸಿತು. ಇಂದಿನ ಶಿಕ್ಷಣವು ಅನುಕೂಲಸ್ಥರಿಗೆ ಸಿಗುವ ಐಶಾರಿಮಿ ವಸ್ತುವಲ್ಲ, ಬದಲಿಗೆ ದೇಶದ ಎಲ್ಲರಿಗೂ ಸಿಗಬೇಕಾದ ಮೂಲಭೂತ ಹಕ್ಕು. ಆದರೆ ಈಗ ಶಿಕ್ಷಣದ ಕನಸು ಕಮರುತ್ತಿದೆ. ಸರಕಾರಿ ಶಾಲಾ ಕಾಲೇಜುಗಳು ಮುಚ್ಚುತ್ತಿವೆ. ಫೀಸು ಡೊನೇಷನ್ ಎಂಬ ಭೂತವು ಅಡ್ಡಾದಿಡ್ಡಿಯಾಗಿ ಕುಣಿಯುತ್ತಿದೆ. ಅದರ ಕಾಲ ಕೆಳಗೆ ಸಿಕ್ಕು ದಮನಿತರು ಬಡವರು ನರಳುತ್ತಿದ್ದಾರೆ ಎಂಬುದನ್ನು ಜಾಥಾವು ಜನರಿಗೆ ತಿಳಿಸಿತು ಎಂದು ತಾರಾ ರಾವ್ ಹೇಳಿದರು.

ಹಾಗೆಯೇ  ಶಿಕ್ಷಣದ ವ್ಯಾಪಾರದ ಚಕ್ರವ್ಯೂಹವನ್ನು ಬೇಧಿಸಿ, ವಿದ್ಯಾರ್ಥಿಗಳು ಉದ್ಯೋಗ ಸಿಗುತ್ತದೆಂಬ ಬಹುನಿರೀಕ್ಷೆಯಿಂದ ತಮ್ಮ ಪದವಿಯನ್ನು ಮುಗಿಸುತ್ತಿದ್ದಾರೆ. ಆದರೆ ಭಾರತದಲ್ಲಿ 45 ವರ್ಷದಲ್ಲೇ ಐತಿಹಾಸಿಕ ನಿರುದ್ಯೋಗ ಏರಿಕೆ ಕಂಡಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ 60 ಸಾವಿರ ಉದ್ಯೋಗ ನೇಮಕಾತಿಯ ಕರೆಗೆ 48 ಲಕ್ಷಕ್ಕೂ  ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಪಂಚದ ಅತ್ಯಂತ ಹೆಚ್ಚು ಯುವಜನರನ್ನು ಹೊಂದಿರುವ ಭಾರತದ ಯುವಜನರ ಕೌಶಲ್ಯ, ಶ್ರಮ ಮತ್ತು ಪ್ರತಿಭೆಗಳು ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಸಮಾಜದಲ್ಲಿ ದ್ವೇಷಕ್ಕೆ ಬದಲಾಗಿ ಪ್ರೀತಿ ಹಂಚೋಣ ಎಂದು ಕರೆ ನೀಡಿತು. ನಾವು ಬರೀ ಮಾತನಾಡುತ್ತಿಲ್ಲ. ಉಚಿತ ಗುಣಮಟ್ಟದ ಶಿಕ್ಷಣಕ್ಕಾಗಿ, ಸುಭದ್ರ ಉದ್ಯೋಗ, ಸುಸ್ಥಿರ ಪರಿಸರಕ್ಕಾಗಿ ಪ್ರೀತಿ ಮತ್ತು ನೆಮ್ಮದಿ ತುಂಬಿದ ನಾಡಿಗಾಗಿ ರಚನಾತ್ಮಕ ಕೆಲಸವನ್ನು ಮಾಡುತ್ತಿದ್ದೇವೆ. ಇದು ಒಂದು ದಿನದ ಹೋರಾಟವಲ್ಲ, ಯುವಜನರ ಭವಿಷ್ಯಕ್ಕಾಗಿನ ಬದ್ಧತೆ ಇದಾಗಿದೆ. ನೀವು ನಮ್ಮೊಡನೆ ಸೇರಿದಾಗ ನಮ್ಮ ದನಿ ದೊಡ್ಡದಾಗುತ್ತದೆ. ನಾವು ಒಟ್ಟಿಗೆ ಕೂಗಿದಾಗ ದೇಶದ ಉದ್ದಗಲಕ್ಕೂ ದನಿ ಪ್ರತಿಧ್ವನಿಯಾಗುತ್ತದೆ ಎಂದು ಜನತೆಗೆ ಜಾಥಾವು ಕರೆ ಕೊಟ್ಟಿತು ಎಂದು ಅವರು ಹೇಳಿದರು.

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...