Homeಮುಖಪುಟಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ 'ಹೆಚ್ಚುವರಿ ಕಾಳಜಿ' ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ...

ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಮ್ಮು ಕಾಶ್ಮೀರದ ಹೊರಗಿರುವ ಕಾಶ್ಮೀರಿ ವಿದ್ಯಾರ್ಥಿಗಳನ್ನು ಗುರಿಯಾಗಿಸದಂತೆ “ಹೆಚ್ಚುವರಿ ಜಾಗರೂಕತೆ ವಹಿಸಿ” ಎಂದು ಕೇಂದ್ರಾಡಳಿತದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗುರುವಾರ ದೇಶದ ಇತರ ರಾಜ್ಯದಗಳ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಕಾಶ್ಮೀರಿ ವಿದ್ಯಾರ್ಥಿಗಳ

ನ್ಯಾಷನಲ್ ಕಾನ್ಫರೆನ್ಸ್ ವಕ್ತಾರ ಇಮ್ರಾನ್ ನಬಿ ದಾರ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸಿಎಂ ಒಮರ್ ಅವರು, ದೇಶದ ಇತರ ಭಾಗಗಳಲ್ಲಿ ಕಾಶ್ಮೀರಿಗಳ ಮೇಲೆ ಕಿರುಕುಳ ನಡೆಯುತ್ತಿದೆ ಎಂದು ಹೇಳಲಾಗಿರುವ ಸಾಮಾಜಿಕ ಮಾಧ್ಯಮದಲ್ಲಿನ ವೀಡಿಯೊಗಳನ್ನು ಗಮನಿಸುವಂತೆ ಇತರ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಮಂಗಳವಾರ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದು, 17 ಜನರು ಗಾಯಗೊಂಡಿದ್ದಾರೆ. 2019 ರಲ್ಲಿ ಕೇಂದ್ರ ಸರ್ಕಾರವು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆದ ಮೊದಲ ಪ್ರಮುಖ ದಾಳಿ ಇದಾಗಿದೆ.

ದಾಳಿಯ ನಂತರ, ಹಿಂದೂ ರಕ್ಷಾ ದಳ ಎಂಬ ದುಷ್ಕರ್ಮಿಗಳ ಗುಂಪು ಮಂಗಳವಾರ ಕಾಶ್ಮೀರಿ ಮುಸ್ಲಿಮರು ಬುಧವಾರದೊಳಗೆ ಉತ್ತರಾಖಂಡವನ್ನು ತೊರೆಯುವಂತೆ ಅಂತಿಮ ಎಚ್ಚರಿಕೆ ನೀಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪಹಲ್ಗಾಮ್‌ನಲ್ಲಿ ನಡೆದ ಘಟನೆ ನಮಗೆ ನೋವುಂಟು ಮಾಡಿದೆ… ನಾಳೆ ಬೆಳಿಗ್ಗೆ 10 ಗಂಟೆಯ ನಂತರ ರಾಜ್ಯದಲ್ಲಿ ಯಾವುದೇ ಕಾಶ್ಮೀರಿ ಮುಸ್ಲಿಮರನ್ನು ಕಂಡರೆ, ನಾವು ಅವರಿಗೆ ಸರಿಯಾದ ಚಿಕಿತ್ಸೆ ನೀಡುತ್ತೇವೆ” ಎಂದು ಗುಂಪಿನ ನಾಯಕ ಲಲಿತ್ ಶರ್ಮಾ ಹೇಳಿದ್ದಾರೆ. ಬುಧವಾರ ಬೆಳಿಗ್ಗೆ 10 ಗಂಟೆಯೊಳಗೆ ಕಾಶ್ಮೀರಿ ಮುಸ್ಲಿಮರು ರಾಜ್ಯವನ್ನು ತೊರೆಯುವಂತೆ , ಇಲ್ಲದಿದ್ದರೆ ಅವರು “ಊಹಿಸಲಾಗದ ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಡೆಹ್ರಾಡೂನ್‌ನ ಡೂನ್ ಪಿಜಿ ಕಾಲೇಜಿನ ಅಪರಿಚಿತ ವಿದ್ಯಾರ್ಥಿಯೊಬ್ಬರು ಕನಿಷ್ಠ ಐದು ಕಾಶ್ಮೀರಿ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ. ಈ ಬೆದರಿಕೆಗಳ ನಂತರ, ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆಂದು ಹೇಳಲಾದ 25 ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಡೆಹ್ರಾಡೂನ್ ಪೊಲೀಸರು ತೆಗೆದುಹಾಕಿದ್ದಾರೆ.

ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ಪ್ರತಿಕ್ರಿಯಿಸಿ, ಪೊಲೀಸರು ಕಾಶ್ಮೀರಿ ವಿದ್ಯಾರ್ಥಿಗಳು ದಾಖಲಾಗಿರುವ ಸಂಸ್ಥೆಗಳ ಡೀನ್‌ಗಳು ಮತ್ತು ವಾರ್ಡನ್‌ಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. “ಎಲ್ಲರಿಗೂ ಸುರಕ್ಷತೆ ಮತ್ತು ಭದ್ರತೆಯ ಭರವಸೆ ನೀಡಲಾಗಿದೆ. ಯಾರಾದರೂ ಕಾನೂನಿಗೆ ವಿರುದ್ಧವಾಗಿ ನಡೆದರೆ, ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದಾಗ್ಯೂ, ಅವರು ಹಿಂದೂ ರಕ್ಷಾ ದಳದ ದುಷ್ಕರ್ಮಿಗಳ ವೀಡಿಯೊದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜಮ್ಮು ಕಾಶ್ಮೀರ ಸರ್ಕಾರವು ದೇಶದ ಇತರ ಭಾಗಗಳಲ್ಲಿ ವಾಸಿಸುವ ತಮ್ಮ ವಿದ್ಯಾರ್ಥಿಗಳಿಗಾಗಿ ಎಂಟು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

ಫೆಬ್ರವರಿ 2019 ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ, ದೇಶದ ಹಲವಾರು ಕಾಶ್ಮೀರಿ ವಿದ್ಯಾರ್ಥಿಗಳು ಹಿಂದುತ್ವ ದುಷ್ಕರ್ಮಿಗಳಿಂದ ದೈಹಿಕ ಬೆದರಿಕೆಗಳನ್ನು ಎದುರಿಸಿದ್ದರು. ಆ ಸಮಯದಲ್ಲಿ, ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಾಶ್ಮೀರಿ ವಿದ್ಯಾರ್ಥಿಗಳು ಮತ್ತು ನಿವಾಸಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆಯನ್ನು ನೀಡಿತ್ತು. ಕಾಶ್ಮೀರಿ ವಿದ್ಯಾರ್ಥಿಗಳ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿ: ಪಂಜಾಬ್, ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಪಹಲ್ಗಾಮ್ ದಾಳಿ: ಪಂಜಾಬ್, ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...