Homeಮುಖಪುಟ'ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ': ಬಾಂಬೆ ಹೈಕೋರ್ಟ್

‘ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ’: ಬಾಂಬೆ ಹೈಕೋರ್ಟ್

- Advertisement -
- Advertisement -

ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ-2019 ‘ತಲಾಖ್-ಇ-ಬಿದತ್’ ಹೆಸರಿನ ದಿಢೀರ್‌ ಮತ್ತು ಬದಲಿಸಲಾಗದ ವಿಚ್ಛೇದನ ನೀಡುವ ಪದ್ದತಿಗೆ ಮಾತ್ರ ಅನ್ವಯಿಸುತ್ತದೆ, ಅಲ್ಲದೆ ಇಸ್ಲಾಂನಲ್ಲಿ ‘ತಲಾಖ್-ಇ-ಅಹ್ಸಾನ್’ ಎಂದು ಕರೆಯಲಾಗುವ ಸಾಂಪ್ರಾದಯಿಕ ವಿಚ್ಛೇದನಕ್ಕೆ ಅಲ್ಲ ಎಂದು ಬಾಂಬೆ ಹೈಕೋರ್ಟ್‌ ಬುಧವಾರ (ಏ.23) ಸ್ಪಷ್ಟಪಡಿಸಿರುವುದಾಗಿ barandbench.com ವರದಿ ಮಾಡಿದೆ.

ದಿಢೀರ್ ತ್ರಿವಳಿ ತಲಾಖ್ ನಿಷೇಧಿಸುವ ಕಾಯ್ದೆಯಡಿ ಮುಸ್ಲಿಂ ವ್ಯಕ್ತಿ ಮತ್ತು ಅವರ ಪೋಷಕರ ವಿರುದ್ಧ ದಾಖಲಾಗಿದ್ದ ಪೊಲೀಸ್ ಪ್ರಕರಣವನ್ನು ರದ್ದುಗೊಳಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿದೆ.

ತಲಾಖ್-ಎ-ಅಹ್ಸಾನ್ ವಿಧಾನವನ್ನು ಅನುಸರಿಸಿ ಗಂಡ ತನ್ನ ಹೆಂಡತಿಗೆ ವಿಚ್ಛೇದನ ನೀಡಿದ್ದರು. ಈ ವಿಧಾನದಡಿಯಲ್ಲಿ ತಲಾಖ್ ಅನ್ನು ಒಮ್ಮೆ ಉಚ್ಚರಿಸಲಾಗುತ್ತದೆ ಮತ್ತು ವಿಚ್ಛೇದನ ಜಾರಿಗೆ ಬರಲು 90 ದಿನಗಳ ಕಾಯುವ ಅವಧಿ ಇರುತ್ತದೆ. ಇಸ್ಲಾಮಿಕ್ ಕಾನೂನಿನಡಿಯ ಈ ವಿಚ್ಛೇದನ ಮಾರ್ಗವು ಇನ್ನೂ ಕಾನೂನು ಬದ್ದವಾಗಿ ಇದೆ.

ತಲಾಖ್-ಎ-ಅಹ್ಸಾನ್ ವಿಧಾನದಲ್ಲಿ ವಿಚ್ಛೇದ ನೀಡಿದ್ದ ವ್ಯಕ್ತಿ ಮತ್ತು ಅವರ ಪೋಷಕರ ಮೇಲೆ 2019ರ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದರು.

ನ್ಯಾಯಮೂರ್ತಿ ವಿಭಾ ಕಂಕಣವಾಡಿ ಮತ್ತು ನ್ಯಾಯಮೂರ್ತಿ ಸಂಜಯ್ ದೇಶಮುಖ್ ಅವರಿದ್ದ ಪೀಠವು, ಈ ಪ್ರಕರಣದ ವಿಚ್ಛೇದನದ ರೂಪವು ನಿಷೇಧಿತ ವರ್ಗದ ಅಡಿಯಲ್ಲಿ ಬರುವುದಿಲ್ಲ ಎಂದು ಹೇಳಿದೆ.

ಪ್ರಕರಣದಲ್ಲಿ, ದಂಪತಿ 2022ರಲ್ಲಿ ವಿವಾಹವಾಗಿದ್ದರು. ಬಳಿಕ ಕೆಲ ತಿಂಗಳುಗಳ ಕಾಲ ಭಾರತದ ವಿವಿಧ ನಗರಗಳಲ್ಲಿ ಒಟ್ಟಿಗೆ ವಾಸವಿದ್ದರು. ವೈವಾಹಿಕ ಭಿನ್ನಾಭಿಪ್ರಾಯಗಳನ್ನು ಉಂಟಾದ ನಂತರ, ಪತಿ ಡಿಸೆಂಬರ್ 2023ರಲ್ಲಿ ಸಾಕ್ಷಿಗಳ ಸಮ್ಮುಖದಲ್ಲಿ ಒಂದು ಬಾರಿ ತಲಾಖ್ ಎಂದು ಉಚ್ಚರಿಸಿದ್ದರು. ಅದನ್ನು ಅನುಸರಿಸಿ ಔಪಚಾರಿಕ ನೋಟಿಸ್ ನೀಡಿದ್ದರು.

90 ದಿನಗಳ ಕಾಯುವ ಅವಧಿಯಲ್ಲಿ ದಂಪತಿ ಮತ್ತೆ ಒಂದಾಗಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ವಿಚ್ಛೇದನವು ಊರ್ಜಿತವಾಗಿತ್ತು.

ಆದರೆ, ವಿಚ್ಛೇದಿತ ಮಹಿಳೆ ಜಲಗಾಂವ್‌ನ ಭೂಸಾವಲ್ ಬಜಾರ್ ಪೇಠ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. 2019ರ ಕಾಯ್ದೆಯಡಿಯಲ್ಲಿ ವಿಚ್ಛೇದನವು ಕಾನೂನುಬಾಹಿರವಾಗಿದೆ. ತನ್ನ ಅತ್ತೆ ಮಾವ ಕೂಡ ನನಗೆ ತಲಾಖ್ ನೀಡಿರುವುದನ್ನು ಬೆಂಬಲಿಸಿದ್ದಾರೆ. ಅವರನ್ನೂ ಕೂಡ ತಪ್ಪಿತಸ್ಥರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು.

ತಲಾಖ್-ಎ-ಅಹ್ಸಾನ್ ವಿಧಾನವನ್ನು ತಾನು ಅನುಸರಿಸಿದ್ದೇನೆ ಎಂದು ಮಹಿಳೆಯ ವಿಚ್ಛೇದಿತ ಪತಿ ನ್ಯಾಯಾಲಯದಲ್ಲಿ ವಾದಿಸಿದ್ದರು. ಇದು ತಲಾಖ್-ಎ-ಬಿದತ್ (ದಿಢೀರ್ ತ್ರಿವಳಿ ತಲಾಖ್) ನಂತೆ ಅಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ತಲಾಖ್-ಎ-ಅಹ್ಸಾನ್ ಅನ್ನು ಮಾನ್ಯ ಮತ್ತು ಅಂಗೀಕೃತ ವಿಚ್ಛೇದನದ ರೂಪವೆಂದು ಗುರುತಿಸಿದ ಹಿಂದಿನ ನ್ಯಾಯಾಲಯದ ತೀರ್ಪುಗಳನ್ನು ಅವರ ವಕೀಲರು ಉಲ್ಲೇಖಿಸಿದ್ದರು. ಈ ನಿರ್ಧಾರದಲ್ಲಿ ನಮ್ಮದು ಯಾವುದೇ ಪಾತ್ರವಿಲ್ಲ ಎಂದು ಅತ್ತೆ-ಮಾವ ಹೇಳಿದ್ದರು.

ತಲಾಖ್-ಎ-ಅಹ್ಸಾನ್ ಮೂಲಕ ವಿಚ್ಛೇಧನ ನೀಡಿದ್ದರೂ, ಅದನ್ನು ವಾಪಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ಇದು 2019ರ ಕಾನೂನಿನ ಉಲ್ಲಂಘಣೆಯಾಗಿದೆ ಎಂದು ಮಹಿಳೆ ವಾದಿಸಿದ್ದರು.

ಆದರೆ, ಹೈಕೋರ್ಟ್ ಮಹಿಳೆಯ ವಾದವನ್ನು ಒಪ್ಪಿಲ್ಲ. ಯಾವುದೇ ಮಾತುಕತೆಗಳು ಇಲ್ಲದೆ, ತಕ್ಷಣ ತಲಾಖ್ ನೀಡುವುದನ್ನು ಮಾತ್ರ ನಿಷೇಧಿಸಲಾಗಿದೆ. ಅರ್ಜಿದಾರರು ವಿಚಾರಣೆ ಎದುರಿಸಬೇಕು ಎಂದು ಸೂಚಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ. ಆದ್ದರಿಂದ ವಿಚಾರಣೆ ಮತ್ತು ಎಫ್‌ಐಆರ್‌ ರದ್ದುಗೊಳಿಸಲಾಗುತ್ತಿದೆ ಎಂದಿದೆ.

ಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...