Homeನೂರರ ನೋಟಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ... : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

ಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ… : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

- Advertisement -
- Advertisement -

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕೇಳಿದ ಅಡ್ವಾಣಿಯವರು, ನ್ಯಾಯಾಲಯ ತಮ್ಮ ತೀರ್ಮಾನವನ್ನು ಸಮರ್ಥಿಸಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಡ್ವಾಣಿಯವರ ಪ್ರಚೋದನೆಯ ಕೆಲಸವನ್ನು ಸಮರ್ಥಿಸಿಲ್ಲ. ಬಾಬ್ರಿ ಮಸೀದಿ ಒಡೆದದ್ದು ಅಪರಾಧ ಎಂದು ಸ್ಪಷ್ಟವಾಗಿ ಹೇಳಿದೆ; ಈ ಅಪರಾಧದ ಗಂಭೀರತೆಯನ್ನು ಯಾರೂ ಮರೆಯುವಂತಿಲ್ಲ.

ಭಾರತದಲ್ಲಿ ಎಲ್ಲವೂ ಜಾತಿ, ಧರ್ಮಗಳ ಮಯವಾಗಿದೆ. self-appointed ದೇಶಭಕ್ತರ ಹಾವಳಿ ಜಾಸ್ತಿಯಾಗಿದೆ. ಅವರ ಮನಸ್ಸೆಲ್ಲಾ ವಿಷಪೂರಿತವಾಗಿದೆ. ಇವರ ಅಭಿಪ್ರಾಯದಲ್ಲಿ ಭಾರತದಲ್ಲಿರುವ ಮುಸ್ಲಿಮರು ಕ್ರಿಶ್ಚಿಯನ್ನರು, ಪಾರ್ಸಿಗಳು, ನೀಗ್ರೋಗಳು ಎಲ್ಲರೂ ತಾವು ಹಿಂದುಗಳೆಂದು ಘೋಷಣೆ ಮಾಡಬೇಕು. ಈ ಸ್ವಯಂನೇಮಿತ ದೇಶಭಕ್ತರ ಹಿಂದುತ್ವವನ್ನು ಯಾವ ಕಾರಣಕ್ಕೂ ಪ್ರಶ್ನಿಸುವಂತಿಲ್ಲ. ಈ ಅಹಂಕಾರದಿಂದಲೇ ಅವರು ಬಾಬ್ರಿ ಮಸೀದಿ ಒಡೆದು ರಾಮಮಂದಿರವನ್ನು ನಿರ್ಮಿಸಲು ಹೊರಟಿದ್ದು.

ಮುಖ್ಯನ್ಯಾಯಾಧೀಶರಾದ ರಂಜನ್ ಗೊಗೊಯ್ ಅವರನ್ನು ಒಬ್ಬ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಪ್ರಶ್ನಿಸುತ್ತಾರೆ: ಬಾಬ್ರಿ ಮಸೀದಿ ಕಟ್ಟಡ ಇಂದಿಗೂ ಅಸ್ತಿತ್ವದಲ್ಲಿ ಇದ್ದಿದ್ದರೆ, ನೀವು ರಾಮಮಂದಿರವನ್ನು ಕಟ್ಟಲು ಅಲ್ಲಿ ಅವಕಾಶ ಕೊಡುವ ತೀರ್ಪನ್ನು ಕೊಡುತ್ತಿದ್ದಿರಾ? ಎಂದು. ಕಾನೂನು ವಿಚಾರಕ್ಕಿಂತ ಹೆಚ್ಚಿನ ಮಹತ್ವವನ್ನು ತೀರ್ಪಿನಲ್ಲಿ ಜನರ ನಂಬಿಕೆ ಭಕ್ತಿ ಶ್ರದ್ಧೆಗೆ ನೀಡಿ, ಹೆಚ್ಚಿನ ಮನ್ನಣೆ ನೀಡಲಾಗಿದೆ ಎಂದು ಅನೇಕರು ಹೇಳಿದ್ದಾರೆ.

ಮಸೀದಿಯನ್ನು ಕಟ್ಟಿದ ದಿನದಿಂದ ಇಂದಿನವರೆಗೂ ಅದು ವಿವಾದಾಸ್ಪದ ವಿಚಾರವೇ ಆಗಿತ್ತು. ಈಗ ನ್ಯಾಯಾಲಯ ಒಂದು ತೀರ್ಪಿತ್ತು ವಿವಾದವನ್ನು ಇತ್ಯರ್ಥಗೊಳಿಸಿದೆ. ಈ ತೀರ್ಮಾನವನ್ನು ಹಿಂದುತ್ವಕ್ಕೆ ದೊರೆತ ಜಯ ಎಂದು ಭಾವಿಸಿ ಹಿಂದು ಮತಾಂಧರು ಒಂದು ಯುದ್ಧ ಗೆದ್ದವರಂತೆ ರಂಪ ಮಾಡಿಲ್ಲ. ಸುನ್ನಿ ವಕ್ಫ್ ಬೋರ್ಡಿನ ಸದಸ್ಯರು ನ್ಯಾಯಾಲಯದ ತೀರ್ಪು ಸಮಾಧಾನ ತಂದಿಲ್ಲವಾದರೂ, ವಿರೋಧಿಸುವುದಿಲ್ಲ ಎಂದರು. ಆನಂತರ ಸಭೆ ಸೇರಿ ನಮಗೆ ನಿಮ್ಮ ಐದು ಎಕರೆ ಜಮೀನು ಬೇಡ ಎಂದು ತೀರ್ಮಾನ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ಈ ಚಾರಿತ್ರಿಕ ತೀರ್ಪು ಸಮರ್ಪಕವಿಲ್ಲವೆಂದು ಹೇಳುವ ಜನ ಎರಡೂ ಕಡೆ ಇದ್ದಾರೆ. ಆದರೆ ಅವರು ಪ್ರತಿಭಟನೆ ಮಾಡುವ ಮಟ್ಟಕ್ಕೆ ಇಳಿದಿಲ್ಲ. ಇದು ಒಂದು ಸಂತಸದ ಸಂಗತಿ.

ಅಯೋಧ್ಯೆಯಲ್ಲಿ ರಾಮಮಂದಿರ ಇದ್ದ ವಿವಾದವನ್ನು ನ್ಯಾಯಾಲಯ ಒಪ್ಪಿಕೊಂಡಿಲ್ಲ. ಮಸೀದಿ ಕಟ್ಟುವುದಕ್ಕೆ ಮೊದಲು ಅದರ ಅಡಿಯಲ್ಲಿ ಒಂದು ಕಟ್ಟಡ ಇತ್ತು. ಆದರೆ ಅದು ರಾಮರ ದೇವಾಲಯ ಎನ್ನುವುದಕ್ಕೆ ಪುರಾವೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ತೀರ್ಪಿನಲ್ಲಿ ನ್ಯಾಯಾಲಯ ಬಾಬ್ರಿ ಮಸೀದಿ ಕೆಡವಿದ್ದು ತಪ್ಪು ಎಂದು ಹೇಳಿದೆ. ಕಾನೂನನ್ನು ಯಾರೇ ಆಗಲಿ ತಮ್ಮ ಕೈಗೆ ತೆಗೆದುಕೊಳ್ಳುವುದು ಅಪರಾಧ ಎಂಬುದನ್ನು ಸ್ಪಷ್ಟಪಡಿಸಿದೆ. ಈ ಅಪರಾಧ ಮಾಡಿದವರಲ್ಲಿ ಎಲ್.ಕೆ.ಅಡ್ವಾನಿಯವರು ಒಬ್ಬರು. ಅವರು ಕಾನೂನನ್ನು ಉದ್ದೇಶಪೂರ್ವಕವಾಗಿ ಗಾಳಿಗೆ ತೂರಿದ್ದಾರೆ. ಅಡ್ವಾನಿಯವರ ರಥಯಾತ್ರೆ ಕರಸೇವಕರಿಗೆ ಪ್ರೇರಕಶಕ್ತಿಯಾಗಿತ್ತು. ಆ ಯಾತ್ರೆಯ ಮೂಲಕ ಅವರು ಕೋಮು ಉನ್ಮಾದಕ್ಕೆ ನಾಂದಿ ಹಾಡಿದರು. ಲಿಬರ್ಹಾನ್ ಕಮಿಷನ್ ಕೂಡ ಅಡ್ವಾನಿಯವರು ಹಾಗೂ ಆಗಿನ ಉತ್ತರಪ್ರದೇಶದ ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ಮತ್ತು ಇತರರು ಕೋಮುದ್ವೇಷ ಬೆಳೆಸಲು ಪ್ರೇರಕರು ಎಂದು ತಮ್ಮ ವಿಚಾರಣಾ ವರದಿಯಲ್ಲಿ ನಮೂದಿಸಿದ್ದಾರೆ.

ಎಲ್.ಕೆ.ಅಡ್ವಾಣಿ ಮುಂತಾದ ಬಿಜೆಪಿ ಮತ್ತು ಆರ್‍ಎಸ್‍ಎಸ್ ಮುಖಂಡರು, ಬಾಬ್ರಿ ಮಸೀದಿ ಆವರಣದಲ್ಲಿದ್ದುಕೊಂಡು ಕರಸೇವಕರನ್ನು ಮಸೀದಿ ಒಡೆಯುವ ಸಂದರ್ಭದಲ್ಲಿ ಹುರಿದುಂಬಿಸಿದ್ದಾರೆ. ಆಗಿನ ಪ್ರಧಾನಿಯಾಗಿದ್ದ ಪಿ.ವಿ ನರಸಿಂಹರಾಯರು ಅಯೋಧೈಗೆ ಸೈನಿಕರನ್ನು ಕಳಿಸಿ ತಾವೇ ನಿಂತು ಬಾಬ್ರಿ ಮಸೀದಿಯನ್ನು ಧ್ವಂಸಮಾಡುವುದನ್ನು ತಡೆಗಟ್ಟಬೇಕಾಗಿತ್ತು. ಅವರು ಆ ಕೆಲಸವನ್ನು ಮಾಡದೆ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್‍ಸಿಂಗ್‍ಗೆ ಈ ಜವಾಬ್ದಾರಿಯನ್ನು ವಹಿಸಿ ಸೈನ್ಯವನ್ನು ಅವರ ವಶಕ್ಕೆ ವಹಿಸಿದರು. ಇದು ಪ್ರಧಾನಿಯ ಕರ್ತವ್ಯಲೋಪದ ಪರಮಾವಧಿ. ಬಿಜೆಪಿಯ ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ಸೈನ್ಯವನ್ನು ಬಳಸಿಕೊಂಡು ಮಸೀದಿ ಒಡೆಯುವನೇ ಎಂದು ಪಿ.ವಿ ನರಸಿಂಹರಾಯರು ಯೋಜಿಸದೆ ಇರಲಿಲ್ಲ. ಈ ಬಿಕ್ಕಟ್ಟಿನ ಸಮಸ್ಯೆಯಿಂದ ತಪ್ಪಿಸಿಕೊಳ್ಳುವ ದುರುದ್ದೇಶದಿಂದ ಅವರು ಈ ತಂತ್ರ ಮಾಡಿದರು. ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ತಟಸ್ಥರಾಗಿದ್ದುಕೊಂಡು ಕರಸೇವಕರಿಗೆ ಕುಮ್ಮಕ್ಕು ಕೊಟ್ಟರು. ತಮ್ಮ ಸಾಂವಿಧಾನಿಕ ಜವಾಬ್ದಾರಿಯ ಕೆಲಸ ಮಾಡುವವರಲ್ಲ ಎಂದು ತಿಳಿಸಿದ್ದರೂ ಪಿ.ವಿ.ನರಸಿಂಹರಾಯರು ಆ ಕೆಲಸವನ್ನು ಕಲ್ಯಾಣ್‍ಸಿಂಗ್‍ಗೆ ವಹಿಸಿದ್ದು ಅಕ್ಷಮ್ಯ ಅಪರಾಧ.

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕೇಳಿದ ಅಡ್ವಾಣಿಯವರು, ನ್ಯಾಯಾಲಯ ತಮ್ಮ ತೀರ್ಮಾನವನ್ನು ಸಮರ್ಥಿಸಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಡ್ವಾಣಿಯವರ ಪ್ರಚೋದನೆಯ ಕೆಲಸವನ್ನು ಸಮರ್ಥಿಸಿಲ್ಲ. ಬಾಬ್ರಿ ಮಸೀದಿ ಒಡೆದದ್ದು ಅಪರಾಧ ಎಂದು ಸ್ಪಷ್ಟವಾಗಿ ಹೇಳಿದೆ; ಈ ಅಪರಾಧದ ಗಂಭೀರತೆಯನ್ನು ಯಾರೂ ಮರೆಯುವಂತಿಲ್ಲ. ಬಾಬ್ರಿ ಮಸೀದಿಯನ್ನು ಅಕ್ರಮವಾಗಿ ಒಡೆದ ಕಾರಣದಿಂದ ಭಾರತದ ಅನೇಕ ಕಡೆ ದಾಂಧಲೆಗಳಾದವು. ಅದರ ಪ್ರತಿಧ್ವನಿಯಾಗಿ ನೂರಾರು ಮಂದಿ ಕೊಲ್ಲಲ್ಪಟ್ಟರು.

ಈ ಎಲ್ಲ ಪ್ರಸಂಗಗಳೂ ಭಾರತದ ಜಾತ್ಯತೀತ ನಿಲುವಿಗೆ ಭಾರೀ ಪೆಟ್ಟು ಕೊಟ್ಟವು, ಅಡ್ವಾನಿಯವರ ಜೊತೆಗೆ ರಥಯಾತ್ರೆಯಲ್ಲಿ ಸಾಥ್ ಕೊಟ್ಟವರು ಇಂದಿನ ಪ್ರಧಾನಿಯಾಗಿರುವ ಮೋದಿಯವರು ಎಂಬುದನ್ನು ಮರೆಯದಿರೋಣ. ಅಡ್ವಾಣಿ ರಥಯಾತ್ರೆ ಮಾಡಿ ಕೋಮುಭಾವನೆ ಬೆಳೆಸಿದ್ದು ತಪ್ಪಾದರೆ ಅವರಿಗೆ ಸಾಥ್ ಕೊಟ್ಟವರೂ ತಪ್ಪಿತಸ್ಥರೇ!

ಹಿಂದೂ ರಾಷ್ಟ್ರದ ಕನಸು ಕಾಣುವ ಈ ರಾಜಕೀಯ ಹಿತಾಸಕ್ತಿಗಳಿಗೆ ಧರ್ಮ ಒಂದು ರಾಜಕೀಯ ಅಸ್ತ್ರ. ರಾಮನನ್ನು ಇವರು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳುತ್ತಾರೆ. ಅಸಹಿಷ್ಣುತೆ ಮತ್ತು ಹಿಂಸೆಯನ್ನು ರಾಮನ ಹೆಸರಿನಲ್ಲಿ ಬಿತ್ತುವ ಈ ಧೂರ್ತರು ಹಿಂದುತ್ವದ ಮಾರಾಟಗಾರರು. ರಾಮನ ಹೆಸರಿನಲ್ಲಿ ಮತ ಕೇಳುವುದು ರಾಮನಿಗೆ ಕಳಂಕ ತರುವ ಗೆಯ್ಮೆ. ಆದರೆ ಅವರಿಗೆ ಹಾಗೆನಿಸುವುದಿಲ್ಲ. ಏಕೆಂದರೆ ಅವರಿಗೆ ರಾಮನ ಹೆಸರು ಬಳಸಿಕೊಂಡು ಮತ ಗಳಿಸುವುದೇ ಮುಖ್ಯ.

ಭಾರತ ಈಗ ಒಂದು ಮತೀಯ ರಾಷ್ಟ್ರವಾಗಿ ಪರಿವರ್ತನೆಗೊಳ್ಳುತ್ತಿದೆ. ಹಿಂದುತ್ವ ಪ್ರತಿಪಾದನೆಯ ಸನ್ನಿ ಹಿಡಿದವರಿಗೆ ಇದು ಒಂದು retrograde step ಎಂದು ಅನಿಸುತ್ತಿಲ್ಲದಿರುವುದು ಒಂದು ದುರ್ದೈವದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...