Homeಮುಖಪುಟದೇಶದ ರಕ್ಷಣೆಗೆ ಸಂವಿಧಾನ ಸಂರಕ್ಷಕರು ಹೇಗೆ ಸಂಕಲ್ಪ ತೊಡುತ್ತಾರೆಂದು ತಿಳಿಯಲು ಕಾರ್ಯಕ್ರಮಕ್ಕೆ ಬನ್ನಿ: ಮಲ್ಲಿಗೆ ಸಿರಿಮನೆ

ದೇಶದ ರಕ್ಷಣೆಗೆ ಸಂವಿಧಾನ ಸಂರಕ್ಷಕರು ಹೇಗೆ ಸಂಕಲ್ಪ ತೊಡುತ್ತಾರೆಂದು ತಿಳಿಯಲು ಕಾರ್ಯಕ್ರಮಕ್ಕೆ ಬನ್ನಿ: ಮಲ್ಲಿಗೆ ಸಿರಿಮನೆ

- Advertisement -
- Advertisement -

ಬಿಜಾಪುರ: ಇದೇ ಏ.26ರಂದು ದಾವಣಗೆರೆಯಲ್ಲಿ ಎದ್ದೇಳು ಕರ್ನಾಟಕದ ವತಿಯಿಂದ ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶಕ್ಕೆ ಜಿಲ್ಲೆಯ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಕಾರಣೀಭೂತರಾಗಬೇಕೆಂದು ಎದ್ದೇಳು ಕರ್ನಾಟಕದ ರಾಜ್ಯ ಮುಖ್ಯಸ್ಥರಾದ ಮಲ್ಲಿಗೆ ಸಿರಿಮನೆ ಕರೆ ನೀಡಿದ್ದಾರೆ.

ಬಿಜಾಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಸಂವಿಧಾನವು ಇಂದು ನಮ್ಮ ದೇಶ ಏನಾಗಿದೆಯೋ ಅದಕ್ಕೆ ಪ್ರಬಲವಾದ ಬುನಾದಿಯನ್ನು ನಿರ್ಮಿಸಿಕೊಟ್ಟಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಭಾರತದ ಸಂವಿಧಾನ ಎಲ್ಲಾ ಜಾತಿ, ವರ್ಗಗಳ, ಧರ್ಮಗಳ, ಜನಾಂಗಗಳನ್ನು ಸಮಾನರನ್ನಾಗಿ ಘೋಷಣೆ ಮಾಡಿದೆ. ನಮ್ಮೆಲ್ಲರಿಗೂ ಸಮಾನವಾದಂತಹ ಹಕ್ಕುಗಳನ್ನು ಒದಗಿಸಿಕೊಟ್ಟಿದೆ. ಅಷ್ಟು ಮಾತ್ರವಲ್ಲ ಎಲ್ಲರಿಗೂ ಸಮಾನವಾದಂತಹ ಅಭಿವ್ಯಕ್ತಿಯ ಸ್ವತಂತ್ರವನ್ನು ಒದಗಿಸಿಕೊಟ್ಟಿದೆ ಮತ್ತು ಸರಕಾರದಿಂದ ರಕ್ಷಣೆ ಪಡೆಯುವಂತಹ ಎಲ್ಲಾ ಅವಕಾಶಗಳನ್ನು ಭಾರತದ ಸಂವಿಧಾನ ನಮಗೆ ಒದಗಿಸಿಕೊಟ್ಟಿದೆ. ಇಂದು ನಮ್ಮ ದೇಶ ಇಷ್ಟೊಂದು ಅಭಿವೃದ್ಧಿ ಸಾಧಿಸುವುದಕ್ಕೆ ಮತ್ತು ಪ್ರಪಂಚದಲ್ಲಿ ವಿಶೇಷವಾದ ಸ್ಥಾನಮಾನವನ್ನು ಗಳಿಸುವುದಕ್ಕೆ ಕಾರಣವಾಗಿರುವುದು ನಮ್ಮ ದೇಶದ ಸಂವಿಧಾನ. ಈ ಪ್ರಜಾತಂತ್ರ, ಈ ಸಂವಿಧಾನ ನಮಗೆ ಉಚಿತವಾಗಿ ಬರಲಿಲ್ಲ. ಬದಲಿಗೆ ಇದರ ರಚನೆಗಾಗಿ, ಪ್ರಜಾತಂತ್ರವನ್ನು  ರೂಪಿಸುವುದಕ್ಕಾಗಿ ಸಾವಿರಾರು ಜನರು ಸ್ವತಂತ್ರ ಚಳವಳಿಯಲ್ಲಿ ಮತ್ತು ಅನಂತರ ಕೂಡ ತ್ಯಾಗ ಬಲಿದಾನವನ್ನು ಗೈದಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ಸಂವಿಧಾನದ ಕನಸನ್ನು ಕಟ್ಟಿ ಮುಂದೆ ಈ ದೇಶ ಏನಾಗಬೇಕೆಂಬುದಕ್ಕೆ ಗಟ್ಟಿಯಾದ ಅಡಿಪಾಯವನ್ನು ನಿರ್ಮಿಸಿಕೊಟ್ಟಿದ್ದಾರೆ. ಅವರಂತೆ ಅನೇಕ ಮಂದಿ ಸಂವಿಧಾನ ರಚನಾ ಸಮಿತಿಯಲ್ಲಿದಂತಹ ಅನೇಕ ಮಹಿಳೆಯರು ಮತ್ತು ಮಹನೀಯರು ಇದಕ್ಕಾಗಿ ಶ್ರಮಿಸಿದ್ದಾರೆ ಎಂದರು.

ಸಂವಿಧಾನ ಈ ದೇಶದ ಎಲ್ಲ ನಾಗರೀಕರ ಮೇಲೆ ಒಂದು ಬಾಧ್ಯತೆಯನ್ನು ಹೊರಿಸಿದೆ. ಪರ್ಯಾಯ ಜವಾಬ್ದಾರಿ ಎಂದು ಇದನ್ನು ಕರೆಯುತ್ತಾರೆ. ನಾವೆಲ್ಲರೂ ಕೂಡ ಸಂವಿಧಾನವನ್ನು ರಕ್ಷಿಸಿಕೊಳ್ಳುವಂತಹ ಬಾಧ್ಯತೆಯನ್ನು ಹೊಂದಿದ್ದೇವೆ ಮತ್ತು ನಮ್ಮ ಕರ್ತವ್ಯವಾಗಿದೆ. ಇವತ್ತಿನ ಸಂದರ್ಭದಲ್ಲಿ ನಮ್ಮ ದೇಶದಲ್ಲಿ ಜಾತಿ, ಜಾತಿಗಳ ನಡುವೆ, ಧರ್ಮಗಳ ನಡುವೆ, ಸಮುದಾಯಗಳ ನಡುವೆ ಬಿಕ್ಕಟ್ಟುಗಳು ಏರ್ಪಡುತ್ತಿವೆ. ಅಂದರೆ ವಿವಿಧತೆಯಲ್ಲಿರಬೇಕಾದ ಏಕತೆಯಲ್ಲಿ ಬಿರುಕುಗಳು ಕಾಣಿಸಿಕೊಂಡರೆ ಅದನ್ನು ಸರಿಪಡಿಸಬೇಕಾದುದು ನಮ್ಮ ದೇಶದ ಬಹುತ್ವವನ್ನು, ಸಮಗ್ರತೆಯನ್ನು ರಕ್ಷಣೆ ಮಾಡಬೇಕಾದುದು ಈ ದೇಶದ ನಾಗರೀಕರಾದ ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಈ ಪರಿಕಲ್ಪನೆಯನ್ನಿಟ್ಟುಕೊಂಡು ಸಂವಿಧಾನ ಸಂರಕ್ಷಕರಾಗಿ ಎಲ್ಲ ಪ್ರಜ್ಞಾವಂತರು ಕೆಲಸ ಮಾಡಬೇಕೆಂಬ ಗುರಿಯನ್ನಿಟ್ಟುಕೊಂಡು ದೃಢನಿಶ್ಚಯದ ಜೊತೆಗೆ ಸಂವಿಧಾನ ಸಂರಕ್ಷಕರ ಪಡೆಯನ್ನು ಎದ್ದೇಳು ಕರ್ನಾಟಕ ನಿರ್ಮಾಣ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಎದ್ದೇಳು ಕರ್ನಾಟಕ ನಮ್ಮ ರಾಜ್ಯದ 120ಕ್ಕೂ ಹೆಚ್ಚುಸಾಮಾಜಿಕ ಚಳವಳಿಗಳು, ವಿವಿಧ ಜಾತಿ, ಸಮುದಾಯಗಳ ಸಂಘಟನೆಗಳು, ಪ್ರಗತಿಪರ, ಎಲ್ಲ ಚಿಂತನಾಶೀಲ, ಎಲ್ಲ ನಾಗರೀಕರ ಒಂದು ಜಂಟಿ ವೇದಿಕೆಯಾಗಿದೆ. ಎದ್ದೇಳು ಕರ್ನಾಟಕ ಇದೇ ಏಪ್ರಿಲ್ 26ಕ್ಕೆ ದಾವಣಗೆರೆಯಲ್ಲಿ ನಡೆಸುತ್ತಿರುವ ಸಂವಿಧಾನ ಸಂರಕ್ಷಕರ ಮಹಾಸಮಾವೇಶವನ್ನು ಖ್ಯಾತ ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಉದ್ಘಾಟಿಸಲಿದ್ದಾರೆ. ಅದೇ ರೀತಿಯಲ್ಲಿ ಕರ್ನಾಟಕದ ಹೆಮ್ಮೆಯ ಚಿಂತಕರಾದ ಪುರುಷೋತ್ತಮ ಬಿಳಿಮಲೆ, ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ, ಚಿತ್ರನಟ ಪ್ರಕಾಶ್ ರಾಜ್ ಅಲ್ಲದೆ ವಿವಿಧ ಸಂಘಟನೆಗಳ ಪ್ರಮುಖ ಅಂದು ವೇದಿಕೆಯಲ್ಲಿರುತ್ತಾರೆ. ಅಷ್ಟು ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಿಂದ ಈ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲು ಅನೇಕ ಗಣ್ಯರು ಬರುತ್ತಿದ್ದಾರೆ. ಎಲ್ಲ ಚಳವಳಿಗಳ ಮೇರು ವ್ಯಕ್ತಿತ್ವವಾದ ಮೇದಪಾಟ್ಕರ್, ಖ್ಯಾತ ಚಿಂತಕರಾದ ಪರಕಾಲ ಪ್ರಭಾಕರ್ ಆಗಮಿಸುತ್ತಿದ್ದಾರೆ. ಸರಕಾರದ ಯೋಜನಾ ಆಯೋಗದ ಮುಖ್ಯಸ್ಥರಾದ ಬಿ.ಆರ್.ಪಾಟೀಲ್, ದೇಶದ ಮತ್ತು ರಾಜ್ಯದ ವಿವಿಧ ಭಾಗಗಳಿಂದ ಅನೇಕ ಗಣ್ಯ ಮಹನೀಯರು ಆಗಮಿಸಿ ಅಂದು ಈ ಕಾರ್ಯಕ್ರಮದಲ್ಲಿ ಸಂವಿಧಾನ ಸಂರಕ್ಷಕರು ಹೇಗೆ ಈ ರಾಜ್ಯವನ್ನು, ದೇಶವನ್ನು ಕಟ್ಟುವ ಸಂಕಲ್ಪ ಮಾಡುತ್ತಾರೆ ಎಂಬುದನ್ನು ಗಮನಿಸುವುದಕ್ಕಾಗಿ ಆಗಮಿಸುತ್ತಾರೆ. ರಾಜ್ಯದ ವಿವಿಧ ಭಾಗಗಳಿಂದ ಹೊರಡುವುದಕ್ಕೆ ಈಗಾಗಲೇ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಹಾಗೆ ಬಿಜಾಪುರದ ಪ್ರಜ್ಞಾವಂತರು, ಈ ಸಮಾಜದ ಕುರಿತು ಕಳಕಳಿಯುಳ್ಳಂತವರು, ಯುವಜನರು, ಮಹಿಳೆಯರು ಪಾಲ್ಗೋಳ್ಳಬೇಕೆಂದು ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇವೆ ಎಂದರು.

ಎಲ್ಲರಿಗೂ ಸಂವಿಧಾನ ಸಂರಕ್ಷಕರ ಸಮಾವೇಶಕ್ಕೆ ಹಾರ್ದಿಕ ಸ್ವಾಗತವನ್ನು ಕೊರುತ್ತೇವೆ. ದಾವಣಗೆರೆಯ ಕಾರ್ಯಕ್ರಮಕ್ಕೆ ಜಾತಿ, ಧರ್ಮಗಳ ಬೇಧವಿಲ್ಲದೆ ರಾಜ್ಯ ಮತ್ತು ದೇಶದ ಬೇರೆ ಬೇರೆ ಕಡೆಗಳಿಂದ ಆಗಮಿಸುತ್ತಿದ್ದಾರೆ. ವಿಶೇಷವಾಗಿ ಸಂವಿಧಾನದ ಕುರಿತು ಚಿಂತನೆಯನ್ನು ಮಾಡಲಿಕ್ಕಿದ್ದಾರೆ. ಸಂವಿಧಾನದ ಕುರಿತು ಅರಿವನ್ನು ಮೂಡಿಸಲಿಕ್ಕಿದ್ದಾರೆ. ಸಂವಿಧಾನ ರಕ್ಷಿಸುವ ಕುರಿತು ವಿಚಾರ ವಿನಿಮಯ ಅಲ್ಲಿ ನಡೆಯುತ್ತದೆ. ಅನೇಕ ಬಾರೀ ನಮಗೆ ಅನಿಸುತ್ತದೆ ನಾವು ಸಮಸ್ಯೆಯ ಸುಳಿಯಲ್ಲಿ ಸಿಕ್ಕಿಕೊಂಡಿದ್ದೇವೆ ಎಂದು. ಸಂವಿಧಾನವನ್ನು ದುರ್ಬಲಗೊಳಿಸುವತ್ತ ಕೆಲವೊಂದು ವಿಚ್ಛಿಧ್ರಕಾರಿ ಶಕ್ತಿಗಳು ನಿರಂತರವಾಗಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಸಂವಿಧಾನವನ್ನು ರಕ್ಷಿಸುವಂತಹ ಹೊಣೆ ಜನಸಾಮಾನ್ಯರಾಗಿರುವಂತಹ ನಮ್ಮ ನಿಮ್ಮೆಲ್ಲರ ಮೇಲಿದೆ. ಹಾಗಾಗಿ ವಿಶೇಷವಾದ ನಿರ್ಣಯವನ್ನು ಕೈಗೊಳ್ಳುವುದಕ್ಕೆ ನಾವೆಲ್ಲರೂ ಮುಂದೆ ಬರಬೇಕಾಗಿದೆ. ಸಂವಿಧಾನವನ್ನು ರಕ್ಷಿಸುವತ್ತ ನಾವೆಲ್ಲರೂ ದಾಪುಗಾಲು ಹಾಕಬೇಕಾಗಿದೆ. ಹಾಗಾಗಿ ಈ ಸಮಾವೇಶ ಎಲ್ಲ ಜನರಿಗೆ ನೇರ ಉತ್ತರವನ್ನು ನೀಡುತ್ತಿದೆ. ಸಂವಿಧಾನವನ್ನು ದುರ್ಬಲಗೊಳಿಸುವುದಕ್ಕೆ ಬಿಡುವುದಿಲ್ಲ, ಸಂವಿಧಾನವನ್ನು ಎತ್ತಿಹಿಡಿಯುತ್ತೇವೆ ಎಂಬ ಸಂದೇಶವನ್ನು ಸಮಾಜಕ್ಕೆ ನಾವು ನೀಡಬೇಕಾಗಿದೆ. ಜನರಿಗೂ ಕೂಡ ಸಂವಿಧಾನ ಸಂರಕ್ಷಕರಾಗುವಂತಹ ಅರಿವನ್ನು ಮೂಡಿಸಬೇಕಾಗಿದೆ ಎಂದು ಫಾದರ್ ಟಿಯೋಲಾ ಮಾಚಾಡೋ ಹೇಳಿದರು.

ಇಂತಹ ಸಮಾವೇಶದ ಪ್ರಾಮುಖ್ಯತೆ ಬಹಳಷ್ಟಿದೆ. ಇಂದಿನ ದಿನಮಾನದಲ್ಲಿ ಸಂವಿಧಾನದ ಮೌಲ್ಯಗಳಿಗೆ ಏನೋ ಒಂದು ಪೆಟ್ಟು ಬೀಳುತ್ತಿದೆ ಎನ್ನುವಂತಹದ್ದು ಋಜುವಾತಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜನರಲ್ಲಿ ಅರಿವು ಮೂಡಿಸಬೇಕಾಗಿದೆ. ಸಂವಿಧಾನವನ್ನು ರಕ್ಷಣೆ ಮಾಡಿದರೆ ಮಾತ್ರ ದೇಶದಲ್ಲಿರುವಂತಹ ಬಹುತ್ವದ ಮೌಲ್ಯಗಳು ಉಳಿಯುತ್ತವೆ. ಆ ಬಹುತ್ವ ಮೌಲ್ಯ ಉಳಿದರೆ ದೇಶ ಉಳಿಯುತ್ತದೆ ಎಂಬ ಅರಿವು, ಪ್ರಜ್ಞೆಯನ್ನು ಜನರಲ್ಲಿ ಮೂಡಿಸುವಂತಹದ್ದು ಬಹಳ ಅವಶ್ಯಕವಾಗಿದೆ. ದಾವಣಗೆರೆಯಲ್ಲಿ ನಡೆಯುವಂತಹ ಸಮಾವೇಶ ಭಾರತಕ್ಕೆ ಮಾದರಿಯಾಗುವಂತಹ ಸಮಾವೇಶವಾಗುತ್ತದೆ. ಬಸವನಾಡಿನ ಜನ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಇದು 12 ಶತಮಾನದಿಂದ ಇಂದಿನವರೆಗೂ ಜಾರಿಯಲ್ಲಿದೆ. ಈ ಜಿಲ್ಲೆಯ ಜನ ಹೆಚ್ಚಿನ ಸ್ಫೂರ್ತಿಯನ್ನು ಪಡೆದು ಈ ಸಮಾವೇಶದಲ್ಲಿ ಭಾಗವಹಿಸಬೇಕೆಂದು  ಜಮಾತೆ ಇಸ್ಲಾಂ ನ ಎಂ.ಡಿ. ಬಳಗನೂರ್ ಅವರು ಕರೆ ನೀಡಿದರು.

ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ, ತಿದ್ದುಪಡಿ ಮಾಡುತ್ತೇವೆ ಎಂಬ ವಿಚಾರವು ಎಲ್ಲಾ ಕಡೆ ಕೇಳಿಬರುತ್ತಿದೆ. ಈ ಸಮಾವೇಶದಲ್ಲಿ ಯುವಜನರು, ಮಹಿಳೆಯರನ್ನು ಗಟ್ಟಿಗೊಳಿಸುವಂತಹ ಕೆಲಸವನ್ನು ಇಟ್ಟುಕೊಂಡಿದ್ದೇವೆ. ಯಾಕೆ ಇದು ಯುವಜನರಿಗೆ, ಮಹಿಳೆಯರಿಗೆ ಮುಖ್ಯವಾಗುತ್ತದೆ ಎಂದರೆ ಎಲ್ಲ ಧರ್ಮಗಳ ಬಹುತ್ವದ ನೆಲೆಯಾಗಿರುವ ಈ ದೇಶದಲ್ಲಿ ಎಲ್ಲ ಧರ್ಮಿಯರು ಅಂದರೆ ಬುದ್ದನ ಅಹಿಂಸೆ ನಿಯಮವನ್ನು ಇಟ್ಟುಕೊಂಡು ಈ ಸಂವಿಧಾನವನ್ನು ಮಾಡಲಾಗಿದೆ. ಅಂಬೇಡ್ಕರ್ ಅವರು ಹೇಳುವಂತೆ ಸಾಮಾಜಿಕ, ಆರ್ಥಿಕ, ರಾಜಕೀಯ ಸ್ಥಾನಮಾನದಲ್ಲಿ ಯಾವುದದಾರೂ ಒಂದು ತಪ್ಪಿ ಹೋದರೆ ಅಲ್ಲೋಲ್ಲಕಲ್ಲೋಲವಾಗುತ್ತದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಈ ರೀತಿಯ ಸ್ಥಿತಿ ಈಗ ನಡೆಯುತ್ತಿದೆ. ಹೀಗಾಗಿ ಎಲ್ಲರೂ ಧ್ವನಿ ಎತ್ತುವ ಅವಶ್ಯಕತೆ ಇದೆ. ನಮಗಾಗಿ ಸಂವಿಧಾನ ಇದ್ದರೆ, ಸಂವಿಧಾನಕ್ಕಾಗಿ ನಾವೆಲ್ಲರೂ ಇರಬೇಕಾಗಿದೆ. ಹಾಗಾಗಿ 26ರ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಬೇಕೆಂದು ಜಿಲ್ಲಾ ಎದ್ದೇಳು ಕರ್ನಾಟಕದ ಮಹಿಳಾ ಜಿಲ್ಲಾ ಮುಖ್ಯಸ್ಥೆ ಡಾ.ಭುವನೇಶ್ವರಿ ಕಾಂಬ್ಳೆ ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ  ಶ್ರೀನಾಥ್ ಪೂಜಾರಿ, ಫಾ.ಕೆವೀನ್, ಅಬ್ದುಲ್ ಕದೀರ್, ಅಕ್ರಮ್ ಮಾಶಾಳ್ ಕರ್ ಇನ್ನು ಮುಂತಾದವರು ಹಾಜರಿದ್ದರು.

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...