Homeಕರ್ನಾಟಕಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

ಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯಲಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿವೆ. ಅಂದು ದಾವಣಗೆರೆಯಲ್ಲಿ ನಾಡಿನ ಎಲ್ಲಾ ಹೋರಾಟಗಾರರ ದಂಡು ಅಣಿನೆರೆಯಲಿದ್ದು, ನಗರವು  ದೇಶದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯುವಂತಹ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಲಿದೆ. ಅಂದಿನ ಸಂವಿಧಾನ ಸಂರಕ್ಷಕರ ಸಮಾವೇಶದ ಬಹಿರಂಗ ಸಭೆಯನ್ನು ನಾಡೋಜ ಬರಗೂರು ರಾಮಚಂದ್ರಪ್ಪನವರು ಉದ್ಘಾಟಿಸಲಿದ್ದಾರೆ ಎಂದು ಸಮಾವೇಶದ ಕೇಂದ್ರ ಸಂಚಾಲಕ ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಪ್ರಸಿದ್ಧ ಚಿತ್ರ ನಟ ಪ್ರಕಾಶ್ ರಾಜ್, ಗುಜರಾತಿನ ಶಾಸಕ ಹಾಗೂಹೋರಾಟಗಾರ ಜಿಗ್ನೇಶ್ ಮೇವಾನಿ, ಪ್ರಖರ ಚಿಂತಕರಾದ ಪರಕಾಲ ಪ್ರಭಾಕರ್, ಮುಸ್ಲಿಂ ಸಮುದಾಯದ ರಾಷ್ಟ್ರೀಯ ನಾಯಕರಾದ ಮೊಹಮ್ಮದ್ ಸಲೀಂ, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ಸುನೀಲಮ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕರಾದ  ಕೆ.ಎಂ.ರಾಮಚಂದ್ರಪ್ಪ, ರೈತ ಚಳವಳಿಯ ಮುಂದಾಳುಗಳಾದ ಹೆಚ್.ಆರ್.ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ದಲಿತ ಚಳವಳಿಯ ಹಿರಿಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಕ್ರೈಸ್ತ ಸಮುದಾಯದ ಮುಖಂಡರಾದ ಫಾ.ವೀರೇಸ್ ಮೋರೆಸ್, ಫಾ.ಜೆರಾಲ್ಡ್, ಮಾನವ ಬಂಧುತ್ವ ವೇದಿಕೆಯ ಎ.ಬಿ.ರಾಮಚಂದ್ರಪ್ಪ, ರವಿ ನಾಯ್ಕರ್, ಜನಪರ ಚಿಂತಕ-ಹೋರಾಟಗಾರ ಪಾಟೀಲ್ ಇನ್ನು ಮುಂತಾದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಯುವಕ ಯುವತಿಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಮಾವೇಶದ ಮತ್ತೊಂದು ಮುಖ್ಯ ವಿಚಾರವಾಗಿದೆ. ವಾಡಿಯಿಂದ ದಾವಣಗೆರೆ ತನಕ 20 ಜಿಲ್ಲೆಗಳ ಮೂಲಕ ಹಾಗೂ 2000 ಕಿ.ಮೀ. ಉದ್ದದ ದಾರಿಯನ್ನು ಕ್ರಮಿಸುತ್ತಾ ಬೈಕುಗಳಲ್ಲಿ ಯುವಯಾನ ನಡೆಯುತ್ತಿದೆ. ಅದು ನಾಳೆ (ಏ.25) ಸಂಜೆ ದಾವಣಗೆರೆ ತಲುಪಲಿದ್ದು, ಅಲ್ಲಿಯೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಭಾರತವು ಅಪಾಯಕಾರಿ ಹಂತಕ್ಕೆ ತಲುಪಿದೆ. ಸಂವಿಧಾನದ ಆಶಯ ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕನಸಿನ ಭಾರತವನ್ನು ರಕ್ಷಿಸಿಕೊಳ್ಳುವ ತುರ್ತು ಎದುರಾಗಿದೆ. ಹೀಗಾಗಿ, ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಪ್ರಯತ್ನ ಜ.26ರಿಂದ ಶುರುವಾಗಿದೆ. 3 ತಿಂಗಳ ಅವಧಿಯಲ್ಲಿ 10 ಸಾವಿರ ಜನರನ್ನು ತಲುಪಿದ್ದು, ಈ ಎಲ್ಲರೂ ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.

ಕರ್ನಾಟಕದ ಸಮಾನ ಮನಸ್ಕ ಸಂಘಟನೆಗಳು ಒಗ್ಗೂಡಿ ಈ ಪ್ರಯತ್ನ ಮಾಡುತ್ತಿದ್ದೇವೆ. ರೈತ, ದಲಿತ, ಕನ್ನಡ ಪರ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯಗಳು ಇದಕ್ಕೆ ಕೈಜೋಡಿಸಿವೆ. ಯಾವ ರಾಜಕೀಯ ಪಕ್ಷವೂ ಸಂವಿಧಾನ ಉಳಿಸಿಕೊಳ್ಳುವ ಆಸಕ್ತಿ ತೋರಿಲ್ಲ. ಸಂವಿಧಾನ ರಕ್ಷಣೆ ಮಾಡಿಕೊಳ್ಳುವ ಹೊಣೆಗಾರಿಕೆ ದೇಶದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನ ಮೇಲಿದೆ. ಸಂವಿಧಾನ ಉಳಿದರೆ ದೇಶ ಹಾಗೂ ಜನರು ಉಳಿಯುತ್ತಾರೆ ಎಂದು ಅಶೋಕ್ ತಿಳಿಸಿದರು.

ಹೊಸ ಸಂದರ್ಭವು ಹೊಸದಿಟ್ಟ ಹೆಜ್ಜೆಯನ್ನು ನಾಗರೀಕರಾದ ನಮ್ಮೆಲ್ಲರಿಂದ ಅಪೇಕ್ಷಿಸುತ್ತಿದೆ. ಈ ದೇಶವನ್ನು ಈ ಬಲಾಢ್ಯ ಪಕ್ಷಗಳು ರಕ್ಷಿಸುತ್ತವೆ ಎಂದು ಕಾಯುತ್ತಾ ಕೂರಲು ಸಾಧ್ಯವಿಲ್ಲ. ನಾಗರೀಕರಾದ ನಾವೇ ಒಂದು ಪ್ರಬಲ ಸಾಮಾಜಿಕ ಶಕ್ತಿಯಾಗಿ ರೂಪಗೊಳ್ಳಬೇಕಿದೆ. ಸಾಮಾಜಿಕ ಸ್ವಾಸ್ಥವನ್ನು ಕಾಪಾಡಿಕೊಳ್ಳಬಲ್ಲ, ಆಳುವವರನ್ನು ಪ್ರಶ್ನಿಸಬಲ್ಲ, ಆಳ್ವಿಕೆಯನ್ನು ಬದಲಿಸಬಲ್ಲ ನಾಗರೀಕ ಶಕ್ತಿಯಾಗಿ ತಳಮಟ್ಟದಿಂದ ದೇಶಮಟ್ಟದ ತನಕ ನಮ್ಮನ್ನು ನಾವು ಕಟ್ಟಿಕೊಳ್ಳಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದ ನಾಗರೀಕ ಸಮಾಜ ಮತ್ತೊಂದು ದೊಡ್ಡ ಹೆಜ್ಜೆ ಇಡಲು ಸಜ್ಜಾಗುತ್ತಿದೆ. ನೀತಿಬದ್ದ ನಾಗರೀಕ ಶಕ್ತಿಯನ್ನು ತಳಮಟ್ಟದ ತನಕ ಕಟ್ಟುವ, ಕೇಂದ್ರ ಸರಕಾರದ ನೀತಿಗಳ ವಿರುದ್ಧ ಜನಾಂದೋಲನವನ್ನು ರೂಪಿಸುವ, ರಾಜ್ಯ ಸರಕಾರ ಕೊಟ್ಟ ಮಾತು ಈಡೇರಿಸುವಂತೆ ಪಟ್ಟು ಹಿಡಿದು ಹೋರಾಡುವ ಧೃಡ ಸಂಕಲ್ಪವನ್ನು ಈ ಸಮಾವೇಶದಲ್ಲಿ ತೊಡಲಿದೆ. ನಾಡಿನ ಎಲ್ಲಾ ದೇಶಪ್ರೇಮಿ ಬಂಧುಗಳನ್ನು ಈ ಸಮಾವೇಶಕ್ಕೆ ಆದರಭಿಮಾನಗಳ  ಜೊತೆ ದಾವಣಗೆರೆಗೆ ಆಹ್ವಾನಿಸುತ್ತಿದ್ದೇವೆ. ಒಂದು ರೀತಿಯಲ್ಲಿ ಹೇಳಬೇಕೆಂದರೆ ಇದೊಂದು ರೀತಿಯಲ್ಲಿ “ಸಂವಿಧಾನ ಹಬ್ಬ’’. ತಪ್ಪದೇ ಹಬ್ಬಕ್ಕೆ ಬನ್ನಿ ಎಂದು ಅವರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಅನೀಶ್ ಪಾಷ, ಜಬೀನಾ ಖಾನಂ, ಪವಿತ್ರಾ ಮುಂತಾದವರು ಹಾಜರಿದ್ದರು.

ದೇಶದ ರಕ್ಷಣೆಗೆ ಸಂವಿಧಾನ ಸಂರಕ್ಷಕರು ಹೇಗೆ ಸಂಕಲ್ಪ ತೊಡುತ್ತಾರೆಂದು ತಿಳಿಯಲು ಕಾರ್ಯಕ್ರಮಕ್ಕೆ ಬನ್ನಿ: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...