Homeಮುಖಪುಟಚಲಿಸುತ್ತಿದ್ದ ರೈಲಿನಲ್ಲಿ ಕಾರ್ಮಿಕನನ್ನು ಹೊಡೆದು ಕೊಂದ ಪೊಲೀಸರು

ಚಲಿಸುತ್ತಿದ್ದ ರೈಲಿನಲ್ಲಿ ಕಾರ್ಮಿಕನನ್ನು ಹೊಡೆದು ಕೊಂದ ಪೊಲೀಸರು

- Advertisement -
- Advertisement -

ಗೊಂಡ್ವಾನ ಎಕ್ಸ್‌ಪ್ರೆಸ್‌ ರೈಲಿನ ಜನರಲ್ ಕೋಚ್‌ನಲ್ಲಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಕಾನ್‌ಸ್ಟೆಬಲ್‌ಗಳು ಥಳಿಸಿದ್ದರಿಂದ 50 ವರ್ಷದ ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಪಲೇರಾ ನಿವಾಸಿ ರಾಮದಯಾಳ್ ಅಹಿರ್ವಾರ್ ಸಾವಿಗೀಡಾದ ವ್ಯಕ್ತಿ. ಇವರು ತನ್ನ ಮಗನೊಂದಿಗೆ ಕೆಲಸದ ನಿಮಿತ್ತ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಆಗ್ರಾ ಮತ್ತು ಮಥುರಾ ನಡುವೆ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಮೃತ ವ್ಯಕ್ತಿಯ ಮಗ ವಿಶಾಲ್ ಅಹಿರ್ವಾರ್ ಹೇಳಿದ ಪ್ರಕಾರ, ಅಪ್ಪ ಮಗ ಇಬ್ಬರು ಸೋಮವಾರ (ಏ.21) ಗೀತಾ ಜಯಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಲಲಿತ್‌ಪುರ ತಲುಪಿ, ಅಲ್ಲಿಂದ ಗೊಂಡ್ವಾನ ಎಕ್ಸ್‌ಪ್ರೆಸ್‌ ರೈಲಿನ ಜನರಲ್ ಕೋಚ್ ಹತ್ತಿದರು. ಅವರು ತಲುಪಬೇಕಾದ ಸ್ಥಳ ದೆಹಲಿಯ ಹಝ್ರತ್ ನಿಝಾಮುದ್ದೀನ್ ರೈಲು ನಿಲ್ದಾಣವಾಗಿತ್ತು. ಅಲ್ಲಿಂದ ಅವರು ವಿಶಾಲ್ ಕೆಲಸ ಮಾಡುವ ಪಾಲಂ ಗ್ರಾಮಕ್ಕೆ ಹೋಗಬೇಕಿತ್ತು.

ಗೊಂಡ್ವಾನ ಎಕ್ಸ್‌ಪ್ರೆಸ್‌ ಆಗ್ರಾ ನಿಲ್ದಾಣ ದಾಟಿ ಸಂಚರಿಸುತ್ತಿದ್ದಾಗ ರಾಮದಯಾಳ್ ಅಹಿರ್ವಾರ್ ಬೀಡಿ ಹಚ್ಚಿದ್ದರು. ರೈಲಿನಲ್ಲಿದ್ದ ಜಿಆರ್‌ಪಿ ಕಾನ್‌ಸ್ಟೆಬಲ್‌ಗಳು ಇದನ್ನು ವಿರೋಧಿಸಿ ರಾಮದಯಾಳ್ ಅವರಿಗೆ ಹೊಡೆಯಲು ಪ್ರಾರಂಭಿಸಿದರು ಎಂದು ಮಗ ವಿಶಾಲ್ ವಿವರಿಸಿದ್ದಾರೆ.

“ನಾನು ರೈಲಿನಲ್ಲಿ ನಿದ್ರೆಗೆ ಜಾರಿದ್ದೆ. ಗದ್ದಲದಿಂದ ಎಚ್ಚರಗೊಂಡಾಗ ನನ್ನ ತಂದೆಗೆ ಥಳಿಸುತ್ತಿದ್ದಾರೆ ಎಂದು ಸಹ ಪ್ರಯಾಣಿಕರು ಹೇಳಿದರು. ಅಪ್ಪನಿಗೆ ಹೊಡೆಯಬೇಡಿ ಎಂದು ನಾನು ಪೊಲೀಸರಲ್ಲಿ ಎಷ್ಟೇ ಮನವಿ ಮಾಡಿದರೂ ಅವರು ಕೇಳಲಿಲ್ಲ. ಅವರು ಹೊಡೆಯುತ್ತಲೇ ಇದ್ದರು” ಎಂದು ವಿಶಾಲ್ ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ರಾಮದಯಾಳ್ ಅವರನ್ನು ಜನರಲ್ ಕೋಚ್‌ನಿಂದ ಸ್ಲೀಪರ್ ಕೋಚ್‌ಗೆ ಎಳೆದುಕೊಂಡು ಹೋಗಿ, ಅಲ್ಲಿಯೂ ಹೊಡೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. ತೀವ್ರ ಹಲ್ಲೆಗೊಳಗಾದ ರಾಮದಯಾಳ್ ಅವರ ಆರೋಗ್ಯ ಹದಗೆಟ್ಟಾಗ, ಮಥುರಾ ರೈಲ್ವೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಲಾಗಿತ್ತು.

ರೈಲು ಮಥುರಾ ಜಂಕ್ಷನ್ ತಲುಪಿದಾಗ, ಕಾನ್‌ಸ್ಟೆಬಲ್‌ಗಳು ರಾಮದಯಾಳ್ ಅವರ ಮೃತದೇಹದೊಂದಿಗೆ ರೈಲಿನಿಂದ ಇಳಿದು, ನಂತರ ತಮ್ಮ ಪ್ರಯಾಣವನ್ನು ಮುಂದುವರೆಸಿದರು. ಬಳಿಕ ಸ್ಥಳಕ್ಕೆ ವೈದ್ಯಕೀಯ ತಂಡ ಕರೆಸಲಾಯಿತು. ವೈದ್ಯರು ಪರೀಕ್ಷಿಸಿ ರಾಮದಯಾಳ್ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಎಂದು ಘೋಷಿಸಿದರು ಎಂದು ವರದಿಗಳು ಹೇಳಿವೆ.

ಮಥುರಾದ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಶವವನ್ನು ವಶಕ್ಕೆ ತೆಗೆದುಕೊಂಡು ಪಂಚನಾಮ ನಡೆಸಿದ ನಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಬಲಿಪಶುವಿನ ಮಗ ಗಂಭೀರ ಆರೋಪಗಳನ್ನು ಮಾಡಿದ ಬಳಿಕ ಅಧಿಕೃತ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ವರದಿಯಾಗಿದೆ.

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ’: ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ ಮುಸ್ಲಿಮರಿಗೆ ಪ್ರಾರ್ಥಿಸಿದ ಸಂತ್ರಸ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...