Homeಮುಖಪುಟಮಾನನಷ್ಟ ಪ್ರಕರಣ: ಹೋರಾಟಗಾರ್ತಿ ಮೇಧಾ ಪಾಟ್ಕರ್ ಬಂಧನ

ಮಾನನಷ್ಟ ಪ್ರಕರಣ: ಹೋರಾಟಗಾರ್ತಿ ಮೇಧಾ ಪಾಟ್ಕರ್ ಬಂಧನ

- Advertisement -
- Advertisement -

ದೆಹಲಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ (ಎಲ್‌-ಜಿ) ವಿ.ಕೆ ಸಕ್ಸೇನಾ ಅವರು 24 ವರ್ಷಗಳ ಹಿಂದೆ ಹೂಡಿರುವ ಮಾನನಷ್ಟ ಮೊಕದ್ದಮೆ ಸಂಬಂಧ ‘ನರ್ಮದಾ ಬಚಾವೋ ಆಂದೋಲನ’ದ ನಾಯಕಿ, ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಪೊಲೀಸರು ಶುಕ್ರವಾರ (ಏ.25) ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಪ್ರೊಬೇಷನ್ ಬಾಂಡ್‌ಗಳನ್ನು ಸಲ್ಲಿಸದ ಕಾರಣ ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ (ಏ.23) ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು.

2001ರಲ್ಲಿ ಪಾಟ್ಕರ್ ವಿರುದ್ಧ ಸಕ್ಸೇನಾ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ನವೆಂಬರ್ 25, 2000ದಲ್ಲಿ “ದೇಶಭಕ್ತನ ನಿಜವಾದ ಮುಖ”ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟಣೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.

“ಹವಾಲಾ ವಹಿವಾಟಿನಲ್ಲಿ ಮುಳುಗಿರುವ ವಿ.ಕೆ ಸಕ್ಸೇನಾ, ಸ್ವತಃ ಮಾಲೆಗಾಂವ್‌ಗೆ ಬಂದು ಎನ್‌ಬಿಎಯನ್ನು ಹೊಗಳಿ ರೂ. 40,000ರ ಚೆಕ್‌ ಅನ್ನು ನೀಡಿದ್ದಾರೆ. ಲೋಕ ಸಮಿತಿಯು ತ್ವರಿತವಾಗಿ ರಸೀದಿ ಮತ್ತು ಪತ್ರವನ್ನು ಕಳುಹಿಸಿದೆ. ಅದು ಪ್ರಾಮಾಣಿಕತೆ ಮತ್ತು ಉತ್ತಮ ದಾಖಲೆ ಇಟ್ಟುಕೊಳ್ಳುವುದನ್ನು ತೋರಿಸುತ್ತದೆ. ಆದರೆ, ಚೆಕ್ ನಗದೀಕರಿಸಿಲ್ಲ, ಬೌನ್ಸ್ ಆಗಿದೆ. ವಿಚಾರಣೆಯಲ್ಲಿ, ಖಾತೆಯು ಅಸ್ತಿತ್ವದಲ್ಲಿಲ್ಲ ಎಂದು ಬ್ಯಾಂಕ್ ವರದಿ ಮಾಡಿದೆ” ಎಂದು ಪಾಟ್ಕರ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದರು.

ಪಾಟ್ಕರ್ ಅವರ ಪ್ರಕಟಣೆ ದುರುದ್ದೇಶಪೂರಿತವಾಗಿದ್ದು, ಸಕ್ಸೇನಾ ಅವರ ಒಳ್ಳೆಯ ಹೆಸರನ್ನು ಹಾಳುಮಾಡುವ ಗುರಿಯನ್ನು ಹೊಂದಿತ್ತು. ಇದರಿಂದ ಅವರ ಸ್ಥಾನಮಾನ ಮತ್ತು ಕ್ರೆಡಿಟ್‌ಗೆ ಗಣನೀಯ ಹಾನಿಯುಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದರು.

“ಆರೋಪಿಯ ಹೇಳಿಕೆಗಳು ದೂರುದಾರರನ್ನು ಹೇಡಿ, ದೇಶಪ್ರೇಮಿ ಅಲ್ಲ ಮತ್ತು ಹವಾಲಾ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದಿದೆ. ಇದು ಮಾನಹಾನಿಕರ ಮಾತ್ರವಲ್ಲದೆ, ದೂರದಾರರ ಬಗ್ಗೆ ನಕಾರಾತ್ಮಕ ಭಾವನೆ ಹುಟ್ಟಿಸುತ್ತದೆ”ಎಂದಿದ್ದರು.

ಮೇ 24, 2023ರಂದು, ದೆಹಲಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪಾಟ್ಕರ್ ಅವರ ಹೇಳಿಕೆಗಳನ್ನು ಮಾನನಷ್ಟಕರವೆಂದು ಪರಿಗಣಿಸಿ ಜುಲೈ 1ರಂದು ಅವರಿಗೆ ಐದು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಆದಾಗ್ಯೂ, ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ವಿಶಾಲ್ ಸಿಂಗ್ ಅವರು ಕಳೆದ ವರ್ಷ ಜುಲೈ 29ರಂದು ಶಿಕ್ಷೆಯನ್ನು ಅಮಾನತುಗೊಳಿಸಿ ಮೇಧಾ ಪಾಟ್ಕರ್ ಅವರಿಗೆ ಜಾಮೀನು ನೀಡಿದ್ದರು.

ನಂತರ, 1 ಲಕ್ಷ ರೂ. ದಂಡವನ್ನು ಪಾವತಿಸುವ ಷರತ್ತಿನೊಂದಿಗೆ ಮೇಧಾ ಪಾಟ್ಕರ್ ಉತ್ತಮ ನಡವಳಿಕೆಯ ಪ್ರೊಬೇಷನ್ ಅನ್ನು ಪಡೆದರು. ಸಾಕೇತ್ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಸಿಂಗ್ ಅವರ ನೇತೃತ್ವದ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 8, 2025 ರಂದು ಈ ಸಡಿಲಿಕೆಯನ್ನು ನೀಡಿತ್ತು.

ಈ ರಿಯಾಯಿತಿಯ ಹೊರತಾಗಿಯೂ, ಏಪ್ರಿಲ್ 23 ರಂದು ಪ್ರೊಬೇಷನ್ ಬಾಂಡ್‌ಗಳನ್ನು ಔಪಚಾರಿಕವಾಗಿ ಸಲ್ಲಿಸಲು ಮತ್ತು ದಂಡವನ್ನು ಪಾವತಿಸುವ ಸಲುವಾಗಿ ನ್ಯಾಯಾಲಯಕ್ಕೆ ಹಾಜರಾಗಲು ಪಾಟ್ಕರ್ ವಿಫಲರಾಗಿದ್ದರು. ಅವರ ಗೈರುಹಾಜರಿ ಮತ್ತು ನಿಯಮ ಪಾಲಿಸದ ಕಾರಣ ನ್ಯಾಯಾಲಯವು ದೆಹಲಿ ಪೊಲೀಸ್ ಆಯುಕ್ತರ ಮೂಲಕ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಪ್ರೊಬೇಷನ್ ಬಾಂಡ್ ಜಾರಿಗೊಳಿಸುವ ಪ್ರಕ್ರಿಯೆಗೆ ಎರಡು ವಾರಗಳ ತಡೆ ನೀಡಬೇಕೆಂಬ ಪಾಟ್ಕರ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏ.22) ತಿರಸ್ಕರಿಸಿತ್ತು.

“ಪ್ರೊಬೇಷನ್ ಬಾಂಡ್ ಜಾರಿ ತಡೆಯುವಂತೆ ಕೋರಿರುವ ಮೇಧಾ ಪಾಟ್ಕರ್ ಅರ್ಜಿಯು ನ್ಯಾಯಾಲಯವನ್ನು ಮೋಸಗೊಳಿಸುವ ಉದ್ದೇಶದಿಂದ ಕೂಡಿದೆ” ಎಂದು ಎಎಸ್‌ಜೆ ವಿಶಾಲ್ ಸಿಂಗ್ ಹೇಳಿದ್ದರು.

“ಮುಂದಿನ ದಿನಾಂಕದಂದು, ಅಪರಾಧಿಯು 08/04/2025ರ ಶಿಕ್ಷೆಯ ಆದೇಶದ ನಿಯಮಗಳನ್ನು ಪಾಲಿಸಲು ವಿಫಲವಾದರೆ, ನ್ಯಾಯಾಲಯವು ದಯಾಪರ ಶಿಕ್ಷೆಯನ್ನು ಮರುಪರಿಶೀಲಿಸಬೇಕಾಗುತ್ತದೆ ಮತ್ತು ಶಿಕ್ಷೆಯ ಮೇಲಿನ ಆದೇಶವನ್ನು ಬದಲಾಯಿಸಬೇಕಾಗುತ್ತದೆ” ಎಂದು ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ವಿಶಾಲ್ ಸಿಂಗ್ ಏಪ್ರಿಲ್ 23ರ ತಮ್ಮ ಆದೇಶದಲ್ಲಿ ಹೇಳಿದ್ದರು.

“ಬಲವಂತದ ಆದೇಶದ ಮೂಲಕ ಅಪರಾಧಿ ಮೇಧಾ ಪಾಟ್ಕರ್ ಅವರನ್ನು ಹಾಜರುಪಡಿಸುವುದನ್ನು ಜಾರಿಗೊಳಿಸುವುದನ್ನು ಬಿಟ್ಟು ನ್ಯಾಯಾಲಯಕ್ಕೆ ಬೇರೆ ದಾರಿಯಿಲ್ಲ” ಎಂದು ನ್ಯಾಯಾಧೀಶ ಸಿಂಗ್ ಹೇಳಿದ್ದರು. ಮುಂದಿನ ದಿನಾಂಕಕ್ಕೆ ದೆಹಲಿ ಪೊಲೀಸ್ ಆಯುಕ್ತರ ಕಚೇರಿಯ ಮೂಲಕ ಅಪರಾಧಿ ಮೇಧಾ ಪಾಟ್ಕರ್ ವಿರುದ್ಧ ಜಾಮೀನುರಹಿತ ಆದೇಶ ಹೊರಡಿಸಿ” ಎಂದಿದ್ದರು.

ನ್ಯಾಯಾಲಯದ ಆದೇಶದಂತೆ ಮೇಧಾ ಪಾಟ್ಕರ್ ವಿರುದ್ಧ ಪೊಲೀಸರು ಬುಧವಾರ (ಏ.23) ಜಾಮೀನು ರಹಿತ ವಾರೆಂಟ್‌ ಹೊರಡಿಸಿದ್ದರು. ಇಂದು ಅವರ ಬಂಧನವಾಗಿದೆ.

ಮಣಿಪುರ | ಕಸ್ಟಡಿ ಸಾವು ಖಂಡಿಸಿ ರಾಜ್ಯ ಬಂದ್‌ಗೆ ಕರೆಕೊಟ್ಟ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...