Homeಮುಖಪುಟಬಂಗಾಳದಲ್ಲಿ ಕಾಶ್ಮೀರಿಗಳು ಅನುಮಾನಾಸ್ಪದ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಸುಳ್ಳು ಹರಡಿದ ಬಿಜೆಪಿಯ ಸುವೇಂದು ಅಧಿಕಾರಿ

ಬಂಗಾಳದಲ್ಲಿ ಕಾಶ್ಮೀರಿಗಳು ಅನುಮಾನಾಸ್ಪದ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಸುಳ್ಳು ಹರಡಿದ ಬಿಜೆಪಿಯ ಸುವೇಂದು ಅಧಿಕಾರಿ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದಲ್ಲಿ ಕಾಶ್ಮೀರಿಗಳು ವೈರ್‌ಲೆಸ್ ನೆಟ್‌ವರ್ಕ್ ಸ್ಥಾಪಿಸಿದ್ದಾರೆ ಎಂದು ರಾಜ್ಯದ ಬಿಜೆಪಿ ವಿಪಕ್ಷ ನಾಯಕ ಸುವೆಂಧು ಅಧಿಕಾರಿ ಸುಳ್ಳು ಹೇಳುವ ಮೂಲಕ ರಾಜ್ಯದಲ್ಲಿ ಹಿಂಸಾಚಾರಕ್ಕೆ ಪ್ರಯತ್ನ ಮಾಡಿರುವ ಘಟನೆ ನಡೆದಿದೆ. ಅದಾಗ್ಯೂ, ಪೊಲೀಸರು ಅವರ ಹೇಳಿಕೆಯ ಬಗ್ಗೆಗಿನ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಿದ್ದಾರೆ. ಬಂಗಾಳದಲ್ಲಿ ಕಾಶ್ಮೀರಿಗಳು

ಕೋಲ್ಕತ್ತಾದ ದಕ್ಷಿಣ ಹೊರವಲಯದಲ್ಲಿರುವ ಬರುಯಿಪುರದಲ್ಲಿ ವಾಸಿಸುವ ಇಬ್ಬರು ಕಾಶ್ಮೀರಿ ವ್ಯಕ್ತಿಗಳು ತಮ್ಮ ಮನೆಯ ಛಾವಣಿಯ ಮೇಲೆ “ನ್ಯಾನೋಬೀಮ್ 2AC ಕಾಂಪ್ಯಾಕ್ಟ್ ಮತ್ತು ಹೈ-ಪರ್ಫಾರ್ಮೆನ್ಸ್ ವೈರ್‌ಲೆಸ್ ನೆಟ್‌ವರ್ಕ್ ಬ್ರಿಡ್ಜ್” ಅನ್ನು ಸ್ಥಾಪಿಸಿದ್ದಾರೆ ಎಂದು ಬಿಜೆಪಿ ಶಾಸಕ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಗುರುವಾರ ಆರೋಪಿಸಿದ್ದಾರೆ.

ಅದಾಗ್ಯೂ, ಬರುಯಿಪುರದ ಪೊಲೀಸರು ಈ ಹೇಳಿಕೆಯನ್ನು ನಿರಾಕರಿಸಿದ್ದು, ಆರೋಪಿತ ಇಬ್ಬರು ವ್ಯಕ್ತಿಗಳು ಮಧ್ಯಪ್ರದೇಶದ ಎಂಜಿನಿಯರ್‌ಗಳಾಗಿದ್ದು, ಅವರ ಛಾವಣಿಯ ಮೇಲೆ ಇರುವ ಸಾಧನವು ಇಂಟರ್ನೆಟ್ ಸಂಪರ್ಕಕ್ಕಾಗಿ ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸುವೆಂಧು ಅಧಿಕಾರಿ, “ಇಬ್ಬರು ಕಾಶ್ಮೀರಿ ವ್ಯಕ್ತಿಗಳು… ಮೇಲ್ಛಾವಣಿಯಲ್ಲಿ ನ್ಯಾನೋಬೀಮ್ 2AC ಕಾಂಪ್ಯಾಕ್ಟ್ ಮತ್ತು ಹೈ-ಪರ್ಫಾರ್ಮೆನ್ಸ್ ವೈರ್‌ಲೆಸ್ ನೆಟ್‌ವರ್ಕ್ ಬ್ರಿಡ್ಜ್ ಅನ್ನು ಸ್ಥಾಪಿಸಿದ್ದಾರೆ ಎಂಬ ಮಾಹಿತಿಯನ್ನು ಸ್ಥಳೀಯರು ನನ್ನೊಂದಿಗೆ ಹಂಚಿಕೊಂಡಿದ್ದಾರೆ. ಅದನ್ನು ಹೆಚ್ಚಿನ ವೇಗದ, ದೂರದ ವೈರ್‌ಲೆಸ್ ಸಂಪರ್ಕಕ್ಕಾಗಿ ವಿನ್ಯಾಸಗೊಳಿಸಲಾಗಿದೆ.” ಎಂದು ಅವರು ಹೇಳಿದ್ದಾರೆ.

ಇಂತಹ ಅನುಮಾನಾಸ್ಪದ ಚಟುವಟಿಕೆಯ ಬಗ್ಗೆ ಪರಿಶೀಲಿಸುವಂತೆ ಅವರು ರಾಜ್ಯದ ಪೊಲೀಸ್ ಉಪ ಜನರಲ್ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು ಒತ್ತಾಯಿಸಿದ್ದಾರೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದಾರೆ.

ಸುವೆಂಧು ಅಧಿಕಾರಿಯ ಹೇಳಿಕೆಯನ್ನು ರಾಜ್ಯದ ಸ್ಪೀಕರ್ ಬಿಮನ್ ಬ್ಯಾನರ್ಜಿ ಟೀಕಿಸಿದ್ದು, ಅವರು “ಹಿಂಸಾಚಾರವನ್ನು ಪ್ರಚೋದಿಸಲು” ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. “ಕಾಶ್ಮೀರದಲ್ಲಿ ನಡೆದ ಘಟನೆಯ ನಂತರ ನಾವು ತುಂಬಾ ದುಃಖಿತರಾಗಿದ್ದೇವೆ. ಈ ಸಮಯದಲ್ಲಿ, ನಾವು ನಮ್ಮ ಶಾಂತತೆ ಮತ್ತು ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು.” ಎಂದು ಅವರು ಹೇಳಿದ್ದಾರೆ.

“ಸುವೆಂಧು ಅಧಿಕಾರಿ ಪಾಕಿಸ್ತಾನ ಧ್ವಜವನ್ನು ಸುಟ್ಟು ಹಿಂದೂ ಧರ್ಮದ ಬಗ್ಗೆ ಘೋಷಣೆಗಳನ್ನು ಕೂಗಿದ್ದಾರೆ. ಬಾಂಗ್ಲಾದೇಶ ಅಥವಾ ಪಾಕಿಸ್ತಾನದಲ್ಲಿ ಕೂಡಾ ಹಿಂದೂಗಳು ವಾಸಿಸುತ್ತಿದ್ದಾರೆಂದು ಅವರಿಗೆ ತಿಳಿದಿಲ್ಲ. ಅವರ ಮೇಲೆ ದಾಳಿ ಮಾಡಬಹುದೆ, ಇದು ತುಂಬಾ ದುರದೃಷ್ಟಕರ.” ಎಂದು ಬ್ಯಾನರ್ಜಿ ಹೇಳಿದ್ದಾರೆ.

ಮಧ್ಯಪ್ರದೇಶದ ಇಂಜಿನಿಯರ್‌ಗಳು ಸ್ಥಾಪಿಸಿದ ಸಾಧನವನ್ನು ಪರಿಶೀಲಿಸಲಾಗಿದೆ ಎಂದು ಬರುಯಿಪುರ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಎಂಜಿನಿಯರ್‌ಗಳು ಪಶ್ಚಿಮ ಬಂಗಾಳದಲ್ಲಿ ಮೀನು ಕೃಷಿಯ ವ್ಯಾಪಾರದಲ್ಲಿ ಅವಕಾಶಗಳನ್ನು ಅನ್ವೇಷಿಸುತ್ತಿದ್ದಾರೆ ಎಂದು ಕಂಡುಬಂದಿದೆ. ಅವರ ಫ್ಲಾಟ್‌ನಲ್ಲಿ ಹಲವಾರು ನಾಗರಿಕರು ಬಳಸುತ್ತಿರುವ ಸರಳ ಜಿಯೋಫೈಬರ್ ನೆಟ್‌ವರ್ಕ್ ಇದೆ, ಅದರ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ಕೆಲವು ಜನರು ರಾಜ್ಯ ಅಥವಾ ಕೇಂದ್ರದ ತನಿಖಾ ಸಂಸ್ಥೆಗೆ ತಿಳಿಸುವ ಬದಲು ಸಾಮಾಜಿಕ ಮಾಧ್ಯಮದ ಮೂಲಕ ಇಂತಹ ತಪ್ಪಾದ ಮತ್ತು ಸಂಭಾವ್ಯವಾಗಿ ಪ್ರಚೋದನಕಾರಿ ಮಾಹಿತಿಯನ್ನು ಪ್ರಸಾರ ಮಾಡುತ್ತಿರುವುದು ದುರದೃಷ್ಟಕರ.” ಎಂದು ಪೊಲೀಸರು ಹೇಳಿದ್ದಾರೆ. ಬಂಗಾಳದಲ್ಲಿ ಕಾಶ್ಮೀರಿಗಳು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ

ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...