Homeಮುಖಪುಟಬಂಗಾಳದಲ್ಲಿ ಕಾಶ್ಮೀರಿಗಳು ಅನುಮಾನಾಸ್ಪದ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಸುಳ್ಳು ಹರಡಿದ ಬಿಜೆಪಿಯ ಸುವೇಂದು ಅಧಿಕಾರಿ

ಬಂಗಾಳದಲ್ಲಿ ಕಾಶ್ಮೀರಿಗಳು ಅನುಮಾನಾಸ್ಪದ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಸುಳ್ಳು ಹರಡಿದ ಬಿಜೆಪಿಯ ಸುವೇಂದು ಅಧಿಕಾರಿ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದಲ್ಲಿ ಕಾಶ್ಮೀರಿಗಳು ವೈರ್‌ಲೆಸ್ ನೆಟ್‌ವರ್ಕ್ ಸ್ಥಾಪಿಸಿದ್ದಾರೆ ಎಂದು ರಾಜ್ಯದ ಬಿಜೆಪಿ ವಿಪಕ್ಷ ನಾಯಕ ಸುವೆಂಧು ಅಧಿಕಾರಿ ಸುಳ್ಳು ಹೇಳುವ ಮೂಲಕ ರಾಜ್ಯದಲ್ಲಿ ಹಿಂಸಾಚಾರಕ್ಕೆ ಪ್ರಯತ್ನ ಮಾಡಿರುವ ಘಟನೆ ನಡೆದಿದೆ. ಅದಾಗ್ಯೂ, ಪೊಲೀಸರು ಅವರ ಹೇಳಿಕೆಯ ಬಗ್ಗೆಗಿನ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಿದ್ದಾರೆ. ಬಂಗಾಳದಲ್ಲಿ ಕಾಶ್ಮೀರಿಗಳು

ಕೋಲ್ಕತ್ತಾದ ದಕ್ಷಿಣ ಹೊರವಲಯದಲ್ಲಿರುವ ಬರುಯಿಪುರದಲ್ಲಿ ವಾಸಿಸುವ ಇಬ್ಬರು ಕಾಶ್ಮೀರಿ ವ್ಯಕ್ತಿಗಳು ತಮ್ಮ ಮನೆಯ ಛಾವಣಿಯ ಮೇಲೆ “ನ್ಯಾನೋಬೀಮ್ 2AC ಕಾಂಪ್ಯಾಕ್ಟ್ ಮತ್ತು ಹೈ-ಪರ್ಫಾರ್ಮೆನ್ಸ್ ವೈರ್‌ಲೆಸ್ ನೆಟ್‌ವರ್ಕ್ ಬ್ರಿಡ್ಜ್” ಅನ್ನು ಸ್ಥಾಪಿಸಿದ್ದಾರೆ ಎಂದು ಬಿಜೆಪಿ ಶಾಸಕ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಗುರುವಾರ ಆರೋಪಿಸಿದ್ದಾರೆ.

ಅದಾಗ್ಯೂ, ಬರುಯಿಪುರದ ಪೊಲೀಸರು ಈ ಹೇಳಿಕೆಯನ್ನು ನಿರಾಕರಿಸಿದ್ದು, ಆರೋಪಿತ ಇಬ್ಬರು ವ್ಯಕ್ತಿಗಳು ಮಧ್ಯಪ್ರದೇಶದ ಎಂಜಿನಿಯರ್‌ಗಳಾಗಿದ್ದು, ಅವರ ಛಾವಣಿಯ ಮೇಲೆ ಇರುವ ಸಾಧನವು ಇಂಟರ್ನೆಟ್ ಸಂಪರ್ಕಕ್ಕಾಗಿ ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸುವೆಂಧು ಅಧಿಕಾರಿ, “ಇಬ್ಬರು ಕಾಶ್ಮೀರಿ ವ್ಯಕ್ತಿಗಳು… ಮೇಲ್ಛಾವಣಿಯಲ್ಲಿ ನ್ಯಾನೋಬೀಮ್ 2AC ಕಾಂಪ್ಯಾಕ್ಟ್ ಮತ್ತು ಹೈ-ಪರ್ಫಾರ್ಮೆನ್ಸ್ ವೈರ್‌ಲೆಸ್ ನೆಟ್‌ವರ್ಕ್ ಬ್ರಿಡ್ಜ್ ಅನ್ನು ಸ್ಥಾಪಿಸಿದ್ದಾರೆ ಎಂಬ ಮಾಹಿತಿಯನ್ನು ಸ್ಥಳೀಯರು ನನ್ನೊಂದಿಗೆ ಹಂಚಿಕೊಂಡಿದ್ದಾರೆ. ಅದನ್ನು ಹೆಚ್ಚಿನ ವೇಗದ, ದೂರದ ವೈರ್‌ಲೆಸ್ ಸಂಪರ್ಕಕ್ಕಾಗಿ ವಿನ್ಯಾಸಗೊಳಿಸಲಾಗಿದೆ.” ಎಂದು ಅವರು ಹೇಳಿದ್ದಾರೆ.

ಇಂತಹ ಅನುಮಾನಾಸ್ಪದ ಚಟುವಟಿಕೆಯ ಬಗ್ಗೆ ಪರಿಶೀಲಿಸುವಂತೆ ಅವರು ರಾಜ್ಯದ ಪೊಲೀಸ್ ಉಪ ಜನರಲ್ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು ಒತ್ತಾಯಿಸಿದ್ದಾರೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದಾರೆ.

ಸುವೆಂಧು ಅಧಿಕಾರಿಯ ಹೇಳಿಕೆಯನ್ನು ರಾಜ್ಯದ ಸ್ಪೀಕರ್ ಬಿಮನ್ ಬ್ಯಾನರ್ಜಿ ಟೀಕಿಸಿದ್ದು, ಅವರು “ಹಿಂಸಾಚಾರವನ್ನು ಪ್ರಚೋದಿಸಲು” ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. “ಕಾಶ್ಮೀರದಲ್ಲಿ ನಡೆದ ಘಟನೆಯ ನಂತರ ನಾವು ತುಂಬಾ ದುಃಖಿತರಾಗಿದ್ದೇವೆ. ಈ ಸಮಯದಲ್ಲಿ, ನಾವು ನಮ್ಮ ಶಾಂತತೆ ಮತ್ತು ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು.” ಎಂದು ಅವರು ಹೇಳಿದ್ದಾರೆ.

“ಸುವೆಂಧು ಅಧಿಕಾರಿ ಪಾಕಿಸ್ತಾನ ಧ್ವಜವನ್ನು ಸುಟ್ಟು ಹಿಂದೂ ಧರ್ಮದ ಬಗ್ಗೆ ಘೋಷಣೆಗಳನ್ನು ಕೂಗಿದ್ದಾರೆ. ಬಾಂಗ್ಲಾದೇಶ ಅಥವಾ ಪಾಕಿಸ್ತಾನದಲ್ಲಿ ಕೂಡಾ ಹಿಂದೂಗಳು ವಾಸಿಸುತ್ತಿದ್ದಾರೆಂದು ಅವರಿಗೆ ತಿಳಿದಿಲ್ಲ. ಅವರ ಮೇಲೆ ದಾಳಿ ಮಾಡಬಹುದೆ, ಇದು ತುಂಬಾ ದುರದೃಷ್ಟಕರ.” ಎಂದು ಬ್ಯಾನರ್ಜಿ ಹೇಳಿದ್ದಾರೆ.

ಮಧ್ಯಪ್ರದೇಶದ ಇಂಜಿನಿಯರ್‌ಗಳು ಸ್ಥಾಪಿಸಿದ ಸಾಧನವನ್ನು ಪರಿಶೀಲಿಸಲಾಗಿದೆ ಎಂದು ಬರುಯಿಪುರ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಎಂಜಿನಿಯರ್‌ಗಳು ಪಶ್ಚಿಮ ಬಂಗಾಳದಲ್ಲಿ ಮೀನು ಕೃಷಿಯ ವ್ಯಾಪಾರದಲ್ಲಿ ಅವಕಾಶಗಳನ್ನು ಅನ್ವೇಷಿಸುತ್ತಿದ್ದಾರೆ ಎಂದು ಕಂಡುಬಂದಿದೆ. ಅವರ ಫ್ಲಾಟ್‌ನಲ್ಲಿ ಹಲವಾರು ನಾಗರಿಕರು ಬಳಸುತ್ತಿರುವ ಸರಳ ಜಿಯೋಫೈಬರ್ ನೆಟ್‌ವರ್ಕ್ ಇದೆ, ಅದರ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ಕೆಲವು ಜನರು ರಾಜ್ಯ ಅಥವಾ ಕೇಂದ್ರದ ತನಿಖಾ ಸಂಸ್ಥೆಗೆ ತಿಳಿಸುವ ಬದಲು ಸಾಮಾಜಿಕ ಮಾಧ್ಯಮದ ಮೂಲಕ ಇಂತಹ ತಪ್ಪಾದ ಮತ್ತು ಸಂಭಾವ್ಯವಾಗಿ ಪ್ರಚೋದನಕಾರಿ ಮಾಹಿತಿಯನ್ನು ಪ್ರಸಾರ ಮಾಡುತ್ತಿರುವುದು ದುರದೃಷ್ಟಕರ.” ಎಂದು ಪೊಲೀಸರು ಹೇಳಿದ್ದಾರೆ. ಬಂಗಾಳದಲ್ಲಿ ಕಾಶ್ಮೀರಿಗಳು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ

ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...