Homeಕರ್ನಾಟಕರಾಜ್ಯದಾದ್ಯಂತ 4600 ಕೆರೆಗಳ ಒತ್ತುವರಿ ತೆರವು, 8697 ಎಕರೆ ಭೂಮಿ ವಶಕ್ಕೆ: ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದಾದ್ಯಂತ 4600 ಕೆರೆಗಳ ಒತ್ತುವರಿ ತೆರವು, 8697 ಎಕರೆ ಭೂಮಿ ವಶಕ್ಕೆ: ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಕೆರೆಗಳ ಸಮೀಕ್ಷೆ ಕಾರ್ಯ ನಡೆಯಲಿದ್ದು, 4618 ಕೆರೆಗಳ ಒತ್ತುವರಿ ತೆರವು ಮಾಡಲಿದ್ದೇವೆ ಮತ್ತು 8697 ಎಕರೆ ಭೂಮಿ ವಶಕ್ಕೆ ಪಡೆಯಲಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಾದ್ಯಂತ ಜಿಲ್ಲಾ ಪಂಚಾಯತಿಗಳ ಅಧೀನದಲ್ಲಿನ ಕೆರೆಗಳನ್ನು ಗುರುತಿಸುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ ಎಂದು ತಿಳಿಸಿದ್ದಾರೆ. ರಾಜ್ಯದಾದ್ಯಂತ 4600

ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಬರುವ ಕೆರೆಗಳ ಸಮೀಕ್ಷೆ ಕಾರ್ಯವನ್ನು ಎಲ್ಲಾ ಜಿಲ್ಲೆಗಳಲ್ಲಿ ಕೈಗೊಂಡಿದ್ದು ಒತ್ತುವರಿಯಾಗಿದ್ದ 9140 ಕೆರೆಗಳನ್ನು ಈಗಾಗಲೆ ಗುರುತಿಸಲಾಗಿದೆ. ಈ ಪೈಕಿ 4618 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿಯನ್ನು ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ.

ರಾಜ್ಯದ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲಿ 32648 ಕೆರೆಗಳಿದ್ದು, ಇಲಾಖೆ ಕೈಗೊಂಡಿರುವ ಸಮೀಕ್ಷೆಯಲ್ಲಿ 24497 ಕೆರೆಗಳನ್ನು ಗುರುತಿಸಲಾಗಿದೆ, ಇವುಗಳಲ್ಲಿ 9140 ಕೆರೆಗಳು ಒತ್ತುವರಿಗೊಂಡಿದ್ದವು ಎಂದು ಹೇಳಿದ ಪ್ರಿಯಾಂಕ್, ಒತ್ತುವರಿಗೊಂಡ ಕೆರೆಗಳಲ್ಲಿ 4618 ಕೆರೆಗಳ ಒತ್ತುವರಿಯನ್ನು ತೆರೆವುಗೊಳಿಸಲಾಗಿದ್ದು, 8697 ಎಕರೆ ಭೂಮಿಯನ್ನು ಜಿಲ್ಲಾ ಪಂಚಾಯತಿಗಳ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಒತ್ತುವರಿ ಗುರುತಿಸಲ್ಪಟ್ಟಿರುವ ಉಳಿದ 4522 ಕೆರೆಗಳನ್ನು ತೆರವುಗೊಳಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಅವರು ವಿವರಗಳನ್ನು ನೀಡಿದ್ದಾರೆ.

ಒಟ್ಟಾರೆ 32648 ಕೆರೆಗಳಲ್ಲಿ ಸಮೀಕ್ಷೆ ಬಾಕಿ ಇರುವ 8151 ಕೆರೆಗಳ ಸಮೀಕ್ಷೆಯನ್ನು ಮುಂದಿನ 30 ದಿನಗಳ ಒಳಗೆ ಮುಗಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ್ದು, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಸಮೀಕ್ಷೆ ಕಾರ್ಯವನ್ನು ಮುಗಿಸಲು ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಬರುವ 32648 ಕೆರೆಗಳು 3,08,213 ಎಕರೆ ಪ್ರದೇಶವನ್ನು ಹೊಂದಿದೆ, ಇವುಗಳಲ್ಲಿ 2,15,594 ಎಕರೆಗೆ ಸಂಬಂಧಿಸಿದಂತೆ 24497 ಕೆರೆಗಳ ಸರ್ವೆ ಕಾರ್ಯ ಸಂಪನ್ನಗೊಂಡಿದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ.

ರಾಜ್ಯದಲ್ಲಿ ಹಾಸನ ಜಿಲ್ಲೆ ಅತಿ ಹೆಚ್ಚು 6367 ಕೆರೆಗಳನ್ನು ಹೊಂದಿದ್ದು, ಬಳ್ಳಾರಿ ಜಿಲ್ಲೆ ಅತಿ ಕಡಿನೆ 21 ಕೆರೆಗಳನ್ನು ಹೊಂದಿದೆ. ಹೆಚ್ಚು ಕೆರೆಗಳನ್ನು ಹೊಂದಿದ ಜಿಲ್ಲೆಗಳಲ್ಲಿ ಶಿವಮೊಗ್ಗ (4354) ಹಾಗೂ ಮೈಸೂರು (2805) ಎರಡು ಹಾಗೂ ಮೂರನೆ ಸ್ಥಾನಗಳಲ್ಲಿವೆ. ಹಾಗೆಯೇ ಅತಿ ಕಡಿಮೆ ಕೆರೆಗಳ ಮುಂದಿನ ಸ್ಥಾನಗಳು ಕಲಬುರಗಿ (33) ಮತ್ತು ಕೊಪ್ಪಳ (39) ಜಿಲ್ಲೆಗಳದು ಎಂಬ ಸಂಗತಿ ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ರಾಜ್ಯದಾದ್ಯಂತ 4600

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಾಯಿಗಳು ಮತ್ತು ಮುಸ್ಲಿಮರಿಗೆ ಅವಕಾಶವಿಲ್ಲ: ಬಿಧಾನ್ ಚಂದ್ರ ಕೃಷಿ ವಿಶ್ವವಿದ್ಯಾಲಯದಲ್ಲಿ ದ್ವೇಷದ ಪೋಸ್ಟರ್

ನಾಯಿಗಳು ಮತ್ತು ಮುಸ್ಲಿಮರಿಗೆ ಅವಕಾಶವಿಲ್ಲ: ಬಿಧಾನ್ ಚಂದ್ರ ಕೃಷಿ ವಿಶ್ವವಿದ್ಯಾಲಯದಲ್ಲಿ ದ್ವೇಷದ ಪೋಸ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...