Homeಕರ್ನಾಟಕಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಯಾರು ಸಂವಿಧಾನವನ್ನು ಗೌರವಿಸುತ್ತಾರೊ, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು ಸೌರ್ಹಾರ್ದತೆಯನ್ನು ಬಯಸುತ್ತಾರೊ ಅವರೇ ನಿಜವಾದ ದೇಶಪ್ರೇಮಿಗಳು’ ಎಂದು ಪ್ರೊ. ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಉದ್ಘಾಟನಾ ಮಾತುಗಳನ್ನಾಡಿದ ಅವರು, “ಜನ ಒಂದುಗೂಡಿದರೆ ಯಾವೂದೂ ಅಸಾಧ್ಯವಲ್ಲ. ಆದ್ದರಿಂದ, ಜನಶಕ್ತಿಯೆ ಅಂತಿಮವಾಗಿದ್ದು. ಅಂತಹ ಜನಶಕ್ತಿಯನ್ನು ಸಂಘಟಿಸಿದರೆ ಸಂವಿಧಾನವನ್ನು ರಕ್ಷಣೆ ಮಾಡಲು ಸಾಧ್ಯ” ಎಂದರು.

“ಪ್ರಶ್ನೆ ಮಾಡುವುದು ಮತ್ತು ಪ್ರಶ್ನಿಸಿಕೊಳ್ಳುವುದು ಬಹಳ ಮುಖ್ಯ; ಪ್ರಪಂಚದ ಎಲ್ಲ ಕ್ರಾಂತಿಕಾರಿಗಳು ಇದನ್ನು ಮಾಡುತ್ತಾರೆ. ಸಂವಿಧಾನವನ್ನು ಕೈನಲ್ಲಿ ಹಿಡಿಕೊಂಡಿರುವ ಪಡೆ ಒಂದು ಕಡೆ, ಸಂವಿಧಾನವನ್ನು ಪಾಲಿಸದ ಪಡೆ ಮತ್ತೊಂದು ಕಡೆ. ಆದರೆ, ಸಂವಿಧಾನ ಹಿಡಿದಿರುವ ಈ ಪಡೆ ‘ಪರ್ಯಾಯ’ವನ್ನು ಸಾಧ್ಯವನ್ನಾಗಿಸುವ ಪಡೆಯಾಗಿದೆ” ಎಂದು ಅವರು ಹೇಳಿದರು.

“ಸಂವಿಧಾನ ಇದೆ ಎನ್ನುವುದು ಅಷ್ಟು ಮುಖ್ಯವಲ್ಲ; ಅದನ್ನು ಯಾರು ಬಳಸುತ್ತಾರೆ ಎನ್ನುವುದು ಮುಖ್ಯವಾಗಿದೆ. ಏಕೆಂದರೆ, ಪ್ರಾಮಾಣಿಕತೆ ಪತನಗೊಂಡ ಕಾಲವಿದು. ಭ್ರಷ್ಟಗೊಂಡ ಬೌದ್ಧಿಕ ವಲಯದ ಕಾಲವಿದೆ. ಅದು ಈಗ ಜಾತಿ, ಧರ್ಮ, ಪೂರ್ವಗ್ರಹ ಪೀಡಿತವಾಗಿ ಭ್ರಷ್ಟಗೊಂಡಿದೆ. ಜಾತಿ-ಧರ್ಮ ಮೂಲಭೂತವಾಗಬಾರದು. ಸಮಾದಲ್ಲಿ ಜಾತಿ-ಧರ್ಮಗಳಿವೆ; ಆದರೆ, ಅದು ಮೂಲಭೂತವಾಗಿರಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತವಾಗಿರುವ ಕಾಲವಿದು. ಯಾರು ಪ್ರಗತಿಪರ, ಯಾರು ದೇಶಪ್ರೇಮಿ ಅಲ್ಲ ಎನ್ನುವುದು ನಾವು ಹಿಂದೂ-ಮುಸ್ಲಿಂ ಎಂಬ ಆಧಾರದಲ್ಲಿ ನೋಡುತ್ತಿದ್ದೇವೆ” ಎಂದರು.

“ನಮ್ಮ ಪರಂಪರೆ ಬಹಳ ಮುಖ್ಯವಗಿದೆ; ಜನಸಾಮಾನ್ಯರನ್ನು ನಮ್ಮ ಪರಂಪರೆಯ ಮೂಲಕ ತಲುಪಬೇಕಾಗಿದೆ. ಹಿಂದೂ ಧರ್ಮ ಒಪ್ಪದ ಅಂಬೇಡ್ಕರ್‌ ಮತ್ತು ಹಿಂದೂ ಧರ್ಮವನ್ನು ಒಪ್ಪುವ ರಾಧಾಕೃಷ್ಣ ಅವರು ದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇರಬೇಕು ಎಂದು ಪ್ರತಿಪಾದಿಸುತ್ತಾರೆ. ರಾಮ್‌ ಪ್ರಸಾದ್ ಮತ್ತು ಅಸ್ಪಾಕುಲ್ಲಾ ಅವರು ಒಂದೇ ಸಮಯದಲ್ಲಿ ಸ್ವಾತಂತ್ಯ್ರಕ್ಕೋಸ್ಕರ ಹೋರಾಟ ಮಾಡಿ, ಒಂದೇ ದಿನ ಹುತಾತ್ಮರಾಗುತ್ತಾರೆ; ಇದು ನಮ್ಮ ಭಾರತ” ಎಂದು ವಿವರಿಸಿದರು.

“ಪೆಹಲ್ಗಾಮ್ ಅಮಾನವೀಯ ಘಟನೆನ್ನು ನಾವು ಉಗ್ರವಾಗಿ ಖಂಡಿಸಬೇಕಾಗಿದೆ. ಈ ದೇಶದಲ್ಲಿ ಭಯೋತ್ಪಾನೆ, ದ್ವೇಷೋತ್ಪಾದನೆ ಇದೆ. ಜೊತೆಗೆ ಪ್ರಪಂಚದಲ್ಲಿ ಯುದ್ದೋತ್ಪಾದನೆ ಇವೆ. ಆದರೆ, ನಮಗೆ ಇದು ಯಾವುದೂ ಬೇಡ. ಅಮಾನವೀಯ ಘಟನೆ ನಡೆದ ಸಂಧರ್ಭದಲ್ಲಿ ಮಾನವೀಯವಾಗಿ ಸ್ಪಂಧಿಸುವ ಮನಸ್ಸುಗಳು ಭಾರತದಲ್ಲಿ ಇವೆ ಎನ್ನುವುದು ಪೆಹಲ್ಗಾಮ್ ಘಟನೆ ನಮಗೆ ಉದಾಹರಣೆಯಾಗಿದೆ. ಒಂದು ಕಡೆ ಮೃತ ವ್ಯಕ್ತಿಯ ಮುಂದೆ ರೋಧಿಸುತ್ತಿರುವ ಮಹಿಳೆಯ ಚಿತ್ರವಿದೆ. ಮತ್ತೊಂದು ಕಡೆ, ಒಬ್ಬ ವ್ಯಕ್ತಿ ತನ್ನ ಬೆನ್ನಮೇಲೆ ಹೊತ್ತುಕೊಂಡು ಹೋಗಿ ಯುವಕನ ಜೀವ ರಕ್ಷಿಸುತ್ತಾನೆ. ಇವೆರೆಡೂ ನಮ್ಮ ಮುಂದೆ ಸಂಕೇತವಾಗಿದೆ” ಎಂದರು.

“ಸಂವಿಧಾನವನ್ನು ಪೂಜೆ ಮಾಡುವವರಿಗೆ, ಅದರ ಬಗ್ಗೆ ಗೌರವ ಇದೆಯೇ ಎಂಬುವುದನ್ನು ನಾವು ಪ್ರಶ್ನೆ ಮಾಡಬೇಕಾಗಿದೆ. ಆರಂಭದಲ್ಲಿ ‘ಸಮಾಜವಾದ’ ಎನ್ನುವ ಪದ ಪೀಠಿಕೆಯಲ್ಲಿ ಇರಲಿಲ್ಲ. ಆದರೆ, ಅಂಬೇಡ್ಕರ್ ಅವರು ತಮ್ಮ ಕೊನೆಯ ಸಂವಿಧಾನ ಸಭೆಯಲ್ಲಿ ಮಾತನಾಡುತ್ತಾ, ಸಂವಿಧಾನದ ಒಳಗೆ ಸಮಾಜವಾದದ ಆಶಯ ಅಡಗಿದೆ ಎಂದು ಹೇಳಿದ್ದರು” ಎಂದು ಹೇಳಿದರು.

“ಪಕ್ಷದಲ್ಲಿ ಇದ್ದೂ ಪಕ್ಷವನ್ನು ಮೀರಿ ನೋಡುವ ರಾಜಕೀಯ ನಾಯಕತ್ವ ಬೇಕು. ಧರ್ಮದಲ್ಲಿ ಇದ್ದೂ ಧಾರ್ಮಿಕತೆಯನ್ನು ಮೀರಿ ಧಾರ್ಮಿಕ ನಾಯಕತ್ವ ಈ ದೇಶಕ್ಕೆ ಬರಬೇಕು. ಸಂವಿಧಾನ ಅಸ್ಪೃಶ್ಯತೆ ನಿಷೇಧ ಮಾಡಿದೆ. ಆದರೆ, ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿದೆ. 1.87 ಲಕ್ಷ ಜನರು ಇನ್ನೂ ಕೈನಿಂದ ಮಲ ಎತ್ತುತ್ತಿದ್ದಾರೆ. ಇದು ಹೋಗಲಾಡಿಸಲು ನಮ್ಮ ಮನಸ್ಸಿನ ಮಲಿನತೆ ಹೋಗಬೇಕು. ಸಂಘಟಿತ ವಲಯದ ಜೊತೆಗೆ ಅಸಂಘಟಿತ ವಲಯದ ಬಗ್ಗೆ ಮಾತನಾಡುವ ತುರ್ತು ಇದೆ. ನಮ್ಮ ಸೈದ್ಧಾಂತಿಕ ಬದ್ಧತೆಯನ್ನು ಬಿಟ್ಟುಕೊಡದೆ, ಸೈದ್ಧಾಂತಿಕ ಸಂಕುಚಿತತೆಯನ್ನು ಮೀರಬೇಕು. ದೇಶದಲ್ಲಿ ಬದಲಾವಣೆ ಬರಬೇಕಿದ್ದರೆ, ಕೆಂಪು, ನೀಲಿ, ಹಸಿರು ಒಂದೇ ವೇದಿಕೆಯ ಮೇಲೆ ಬರಬೇಕು” ಎಂದು ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು.

ದಲಿತರಿಗೆ ಅಂಬೇಡ್ಕರ್, ಲಿಂಗಾಯತರಿಗೆ ಬಸವಣ್ಣ ಅರ್ಥವಾಗಿದ್ದರೆ ಕೋಮುವಾದಿಗಳು ಅಧಿಕಾರಕ್ಕೆ ಬರುತ್ತಿರಲಿಲ್ಲ: ಪ್ರೊ. ಎ.ಬಿ ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...