Homeಕರ್ನಾಟಕಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ...

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

- Advertisement -
- Advertisement -

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ ಎಂದು ಸಿಎಂ ವ್ಯಂಗ್ಯವಾಡಿದರು.‌

ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದವರು ನೆಹರು. ಬಹುತ್ವದ ಭಾರತದ ನೆಲದಲ್ಲಿ ಏಕತೆ ತಂದು ಸಹಿಷ್ಣುತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ ಎಂದರು.

ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಬಿರುಕು ಮೂಡಿಸಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದು ಸಿಎಂ ಹೇಳಿದರು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರ್ ಎಸ್‌ಎಸ್‌ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್‌ನಲ್ಲಿ ಉಳಿಯುತಾರೆ ಎನ್ನುವುದು ಅನುಮಾನ ಎಂದರು.

ಸ್ವಾತಂತ್ರ, ಸಮಾನತೆ, ಬ್ರಾತೃತ್ವ ಹಾಗೂ ಸಹಿಷ್ಣತೆ, ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ. ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ಹೀಗಾಗಿ ಬಿಜೆಪಿ ಸಂವಿಧಾನವನ್ನೇ ವಿರೋಧಿಸುತ್ತದೆ ಎಂದು ಹೇಳಿದರು.

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಸ್ವಾತಂತ್ರ್ಯ ಸಾರ್ಥಕತೆ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದರು.

ಮೌಢ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರ ವಿರಲಿ ಎಂದು ಹೇಳಿದರು.

ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ ಎಂದರು.

ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ. ನಿಮಗೆ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ ಎಂದು ತಿಳಿಸಿದರು.

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ, ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಸಂವಿಧಾನ ಬದ್ದ ಎಂದು ಎತ್ತಿ ಹಿಡಿಯಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು. ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ಕರೆ ನೀಡಿದರು.

ಸಂವಿಧಾನ ಸಂರಕ್ಷಕರ ಸಮಾವೇಶ-ದಾವಣಗೆರೆ | ನಗರದ ಪ್ರಮುಖ ರಸ್ತೆಗಳಲ್ಲಿ ಪರೇಡ್ ಮೂಲಕ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...