Homeಕರ್ನಾಟಕಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

- Advertisement -
- Advertisement -

‘ಸಂವಿಧಾನವನ್ನು ಸಹಿಸಲಾಗದ ಮನುವಾದಿಗಳು ಸಂವಿಧಾನ ಬದಲಿಸುವುದೇ ತಮ್ಮ ಕರ್ತವ್ಯ ಎಂದರು; ಸಂವಿಧಾನ ಸುಟ್ಟರು. ಇಂತಹ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವುದು ಅತ್ಯಗತ್ಯ’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಭಾಗವಹಿಸಿ ಮಾತನಾಡಿ, “ದೇಶದಲ್ಲಿ ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ;  ಬಾಬಾಸಾಹೇಬರು ಈ ಸಂವಿಧಾನ ನೀಡಿದ್ದರಿಂದ ನಾವೆಲ್ಲರೂ ಇಂದು ಒಳ್ಳೆ ಬಟ್ಟೆ ಹಾಕಿದ್ದೇವೆ, ಒಂದಷ್ಟು ಓದಿಕೊಂಡು ಒಳ್ಳೆ ಬದುಕು ಮಾಡುತ್ತಿದ್ದೇವೆ. ನಮ್ಮ ತಾತ ಮುತ್ತಾತರ ಕಾಲಕ್ಕೆ ಹೋಲಿಸಿದರೆ ಇಂದು ನಾವು ಬಹಳಷ್ಟು ಬದಲಾಗಿದ್ದೇವೆ. ಎಲ್ಲ ಜಾತಿಗಳ ಬಡವರು ಹಿಂದೆ ಹೇಗಿದ್ದರು? ಈಗ ಹೇಗಿದ್ದೇವೆ ಎಂದು ನೋಡಿದರೆ, ಸಂವಿಧಾನದ ಕಾರಣಕ್ಕೆ ಸಾಕಷ್ಟು ಬದಲಾವಣೆ ಆಗಿದೆ. ಸಂವಿಧಾನದಲ್ಲಿರುವ ಎಲ್ಲ ಆಶಯಗಳೂ ಈಡೇರಿದರೆ ಇನ್ನೂ ಎಷ್ಟೆಲ್ಲ ಬದಲಾಗಬಹುದು ಯೋಚಿಸಿ” ಎಂದರು.

“ಸಂವಿಧಾನವನ್ನು ಸಹಿಸಲಾಗದ ಮನುವಾದಿಗಳು ಸಂವಿಧಾನ ಬದಲಿಸುವುದೇ ತಮ್ಮ ಕರ್ತವ್ಯ ಎಂದು ಸಂವಿಧಾನ ಸುಟ್ಟರು, ಇಂತಹ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವುದು ಅತ್ಯಗತ್ಯ ಎಂದು ಹೇಳುತ್ತೇನೆ” ಎಂದು ಪ್ರತಿಪಾದಿಸಿದರು.

“ಇಲ್ಲಿ ಎಲ್ಲ ಸಂಘಟನೆಗಳೂ ಇದ್ದೇವೆ. ಆದರೆ, ಬಿಡಿಬಿಡಿ ಹೋರಾಟಮಾಡುತ್ತಿದ್ದೇವೆ. ತ್ಯಾಗಿಯವರು (ದಲಿತ ಸಂಘರ್ಷ ಸಮಿತಿ ಸಂಸ್ಥಾಪಕರಲ್ಲಿ ಒಬ್ಬರು) ಒಂದು ಮಾತು ಹೇಳುತ್ತಿದ್ದರು, ‘ನಾವು ಆ ಕಾಲದಲ್ಲಿ ಜನ ಎದ್ದೇಳಿ ಎನ್ನುತ್ತಿದ್ದೆವು, ಈಗ ಜನ ಎದ್ದು ದಿಕ್ಕಾಪಾಲಾಗಿ ಹೋಗುತ್ತಿದ್ದಾರೆ’ ಎನ್ನುತ್ತಿದ್ದರು. ಈಗ ಬಹುಶಃ ನಮ್ಮ ಸಂಘಟನೆಗಳ ಪರಿಸ್ಥಿತಿಯೂ ಅದೇ ಆಗಿದೆ, ನಾವೆಲ್ಲ ಒಂದೇ ದಿಕ್ಕಿನಲ್ಲಿ ಸಾಗುವುದಾದರೆ ಬಹುಶಃ ನಮ್ಮ ಆಶಯ ಈಡೇರಬಹುದು. ಆ ನಿಟ್ಟಿನಲ್ಲಿ, ಸಂವಿಧಾನ ಸಂರಕ್ಷಣಾ ಪಡೆಯನ್ನು ಕಟ್ಟುವ ಕೆಲಸವನ್ನು ದಸಂಸ ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದು ಹೇಳಿದರು.

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...