Homeಕರ್ನಾಟಕಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

ಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

- Advertisement -
- Advertisement -

ನಾವು ಪ್ರಚಂಡ ಚಳವಳಿಯನ್ನು ಕಟ್ಟುವ ಅಗತ್ಯವಿದೆ, ಆದರೆ ಅಗುತ್ತಿಲ್ಲ. ಯುವ ಜನರನ್ನು ಸಜ್ಜುಗೊಳಿಸಬೇಕಿದೆ, ಸಾಧ್ಯವಾಗುತ್ತಿಲ್ಲ. ಬೃಹತ್ ಜನಾಂದೋಲನ ಕಟ್ಟಬೇಕಿದೆ, ಅದೂ ಆಗುತ್ತಿಲ್ಲ. ಇದಕ್ಕೆಲ್ಲ ಮುಖ್ಯ ಕಾರಣ ನಮ್ಮಲ್ಲೆ ಇರುವ ಲೋಪವಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಮಾತನಾಡಿದ ಅವರು, “ನಾವು ಅನೇಕ ಹೋರಾಟಗಳನ್ನು ಮಾಡುತ್ತಿದ್ದೇವೆ. ಆದರೆ, ಆಳುವವರನ್ನು ಅಲುಗಾಡಿಸಲು ಅಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಲೋಪ ನಮ್ಮಲ್ಲೇ ಇದೆ. ಅದನ್ನೆಲ್ಲ ಮೀರುವುದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಲಾಗಿದೆ” ಎಂದರು.

ನಾಡೋಜ ಬರಗೂರು ರಾಮಚಂದ್ರಪ್ಪನವರು ಮಾತನಾಡುತ್ತಾ ನಾವು ಆಳುವವರನ್ನು ಪ್ರಶ್ನಿಸಬೇಕು, ಅದಕ್ಕೂ ಮುನ್ನ ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕು ಎಂದು ಹೇಳಿದರು. ಅದನ್ನು ನಾನು ಒಪ್ಪುತ್ತೇನೆ. ನಮ್ಮಲ್ಲಿ ಒಂದು ರೀತಿಯ ತೊಳಲಾಟವಿದೆ. ಅದನ್ನು ಮೀರಬೇಕು ಎಂದು ಹೇಳಿದರು.

ಕಳೆದ ಎರಡು ಚುನಾವಣೆಗಳಲ್ಲಿ ಕೆಲಸ ಮಾಡಿದ ಎದ್ದೇಳು ಕರ್ನಾಟಕದ ಮುಂದಿನ ಕಾರ್ಯಚಟುವಟಿಕೆಯೇನು ಎಂಬ ಪ್ರಶ್ನೆ ಮುಂದೆ ಬಂದಾಗ 24 ರಾಜ್ಯಗಳ ಹಲವರು ಸೇರಿ ಜು.27,28ರಂದು ಎರಡು ದಿನದ ಕಾರ್ಯಗಾರವನ್ನು ನಡೆಸಲಾಯಿತು. ಅಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಅದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ತೀರ್ಮಾನ ಮಾಡಲಾಯಿತು. ಕಳೆದ 4 ತಿಂಗಳಿನಿಂದ ಈ ಪಡೆ ಕಟ್ಟಿ, ಸಮಾವೇಶ ನಡೆಸುವ ತಯಾರಿ ನಡೆದಿದೆ. ಇದರಲ್ಲಿ ಏನೊ ಸತ್ವವಿದೆ ಎಂದು ನಮಗೆ ಅನಿಸಿದೆ ಎಂದು ತಿಳಿಸಿದರು.

ಈ ಸಂವಿಧಾನ ಸಂರಕ್ಷಕರ ಪಡೆಯನ್ನು ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಕಟ್ಟಬೇಕಿದೆ. ನಾವು ಹೇಳುವ ವಿಚಾರಗಳು ಜನರಿಗೆ ತಲುಪಬೇಕಾದರೆ ಕಾರ್ಯಕರ್ತರ ಗಣ ಕಟ್ಟಲೇಬೇಕು. ನಾವು ಉದ್ದೇಶಿಸಿರುವ 1 ಲಕ್ಷ ಸಂರಕ್ಷಕರ ಪಡೆ ಕಟ್ಟುವ ಉದ್ದೇಶ ಯಶಸ್ಸು ಆಗಬೇಕಾದರೆ ಇಲ್ಲಿನ ವೇದಿಕೆಯ ಮೇಲಿರುವ ಗಣ್ಯರು ಮತ್ತು ಸಭೆಯ ಮುಂದಿರುವ ನಿಮ್ಮೆಲ್ಲರ ಜವಾಬ್ದಾರಿ ಇದೆ. ಅದನ್ನು ಒಟ್ಟಿಗೆ ಸೇರಿ ನಿರ್ವಹಿಸಬೇಕಿದೆ. ಎಲ್ಲರೂ ಸೇರಿ ದೃಢ ನಿರ್ಧಾರ ಮಾಡಬೇಕಿದೆ. ಪ್ರತಿಯೊಬ್ಬರು ಯೋಧರಂತೆ ಕೆಲಸ ಮಾಡಬೇಕು. ಪ್ರತಿಯೊಬ್ಬರು ತಮ್ಮ ಜೊತೆ 5 ಜನ ಸಂವಿಧಾನ ಸಂರಕ್ಷಕರನ್ನು ತಯಾರು ಮಾಡುವ ತೀರ್ಮಾನ ಮಾಡಿದರೆ ಎಲ್ಲವೂ ಸಾಧ್ಯವಾಗುತ್ತದೆ. ಇದು ಆದರೆ ಮುಂದಿನ 3 ವರ್ಷದಲ್ಲಿ 1 ಲಕ್ಷ ಪಡೆ ಕಟ್ಟುವ ನಮ್ಮ ಗುರಿಯನ್ನು ಮುಟ್ಟಬಹುದು ಎಂದು ನೂರ್ ಆಶಯ ವ್ಯಕ್ತಪಡಿಸಿದರು.

ರಾಜ್ಯ ಮಟ್ಟದಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಇಂದು ಎಲ್ಲ ಸಂಘಟನೆಗಳ ನಾಯಕರ ಮಟ್ಟದಲ್ಲಿ ಒಳ್ಳೆಯ ವಾತಾವರಣವಿದೆ. ಆದರೆ, ಕೆಳಮಟ್ಟದಲ್ಲಿ  ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ.  ತಳಮಟ್ಟದಲ್ಲಿ ಅಂದರೆ, ಜನಸಾಮಾನ್ಯರ ಮಧ್ಯೆ ಕೆಲಸ ಮಾಡಬೇಕಿದೆ. ಇದಕ್ಕಾಗಿ 100 ಜನ ಶಿಕ್ಷಕರನ್ನು ಸಿದ್ದಗೊಳಿಸಲಾಗಿದೆ. ಬರುವ ಜುಲೈನಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಶಿಬಿರ ನಡೆಸಲು ಸಿದ್ಧತೆಗಾಗಿ ಪಠ್ಯ ಪುಸ್ತಕಗಳು ರೂಪಿಸಲಾಗಿದೆ. ಈ ಮೂಲಕ ಒಂದು ಗಟ್ಟಿ ತಂಡವನ್ನು ಕಟ್ಟಲು ಸಾಧ್ಯವಾಗುತ್ತದೆ. ಮತ್ತೊಂದು ಕಡೆ ಜನಸಾಮಾನ್ಯರನ್ನು ತಲುಪಲು ಎರಡು ಕೆಲಸ ಮಾಡಬೇಕಿದೆ. ಒಂದು ಜನ ಸಾಂಸ್ಕೃತಿಕ ತಂಡ ಇನ್ನೊಂದು ಜನ ಮಾಧ್ಯಮಗಳನ್ನು ಬಲಪಡಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾರ್ಯ ಮುಂದುವರಿಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಮಾವೇಶದಲ್ಲಿ ನಾಲ್ಕು ಮುಖ್ಯ ಚಟುವಟಿಕೆಗಳ ಕುರಿತು ನಿಮ್ಮ ಮುಂದಿಡುತ್ತಿದ್ದೇವೆ. ಸಮಾಜದ ಎಲ್ಲ ಕಡೆ ವಿಷ ಹರಡಿದೆ. ಒಂದು ಕಡೆ ಕೇಂದ್ರದ ಜೊತೆ ಗುದ್ದಾಟ ನಡೆಸಬೇಕಿದೆ. ಅದರ ಜೊತೆಗೆ ನಮ್ಮ ರಾಜ್ಯದ ಸರಕಾರದ ವಿರುದ್ದ ಗುದ್ದಾಟ ನಡೆಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ನಮ್ಮೆಲ್ಲರ ಆಸೆಯನ್ನು ನಿರಾಶೆಗೊಳಿಸಿದೆ. ತಮ್ಮ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಈಡೇರಿಸುತ್ತಿಲ್ಲ. ತಮ್ಮ ಪಕ್ಷದ ಜನಪ್ರತಿನಿಧಿಗಳು ಸ್ವಜನಪಕ್ಷಪಾತಿಗಳಾಗಿದ್ದಾರೆ. ಭ್ರಷ್ಟರಾಗಿದ್ದಾರೆ. ಇದಕ್ಕಾಗಿ ನಾವೆಲ್ಲ ಈ ರಾಜ್ಯ ಸರಕಾರವನ್ನು ಚುಚ್ಚಬೇಕಾಗಿದೆ ಎಂದರು.

ಇದೇ ಮೇ 20ರಂದು ಕಾರ್ಮಿಕ, ರೈತ ಸಂಘಟನೆಗಳು ರಾಷ್ಟ್ರೀಯ ಮುಷ್ಕರಕ್ಕೆ ಕರೆಕೊಟ್ಟಿವೆ. ಅದರಲ್ಲಿ ನಾವೆಲ್ಲ ಸಕ್ರಿಯವಾಗಿ ಮತ್ತು ಅಷ್ಟೇ ಪರಿಣಾಮಕಾರಿಯಾಗಿ ಭಾಗವಹಿಸಬೇಕಿದೆ. ಅದಕ್ಕಾಗಿ ಸಂಯುಕ್ತ ಹೋರಾಟ ವತಿಯಿಂದ ರಾಜ್ಯದ ಆಯ್ದ 100 ಅಯಕಟ್ಟಿನ ಪ್ರದೇಶಗಳಲ್ಲಿ ಸರಕಾರವನ್ನು ನಡುಗಿಸುವ ಹೋರಾಟವನ್ನು ಕಟ್ಟಬೇಕಿದೆ. ಅದರಲ್ಲಿ ಎದ್ದೇಳು ಕರ್ನಾಟಕ ಸಕ್ರಿಯ ಭಾಗವಹಿಸಬೇಕು ಎಂದು ಕರೆ ಕೊಡುತ್ತಿದ್ದೇವೆ. ಜನ ಪ್ರತಿನಿಧಿಗಳ ಕೆಲಸ ಕಾರ್ಯಗಳ ಕುರಿತು ರಿಪೋರ್ಟ್ ಕಾರ್ಡ್ ಅನ್ನು ತಯಾರಿಸಿ ಸರ್ಕಾರದ ಮುಂದಿಡಬೇಕಿದೆ. ಧರ್ಮಾಂಧ ಶಕ್ತಿಗಳನ್ನು ಸೋಲಿಸದೆ ಜನಸಾಮಾನ್ಯರ ಸಂಕಷ್ಟಗಳಿಗೆ ಮುಕ್ತಿಯಿಲ್ಲವಾಗಿದೆ. ಅದಕ್ಕಾಗಿ ಕೆಲವು ತಿಂಗಳೊಳಗೆ ಇಲ್ಲವೆ ವರ್ಷದೊಳಗೆ ರಾಷ್ಟ್ರೀಯ ಜನಾಂದೋಲನ ಕಟ್ಟಲು ಒಂದು ರಾಷ್ಟ್ರೀಯ ಸಮಾವೇಶ ನಡೆಸಲು ಸಿದ್ದತೆ ಮಾಡಿಕೊಳ್ಳಲು ಸಿದ್ಧತೆಯನ್ನು ಅದಷ್ಟು ತೀವ್ರಗೊಳಿಸಬೇಕು ಎಂದು ನೂರ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...