Homeಕರ್ನಾಟಕಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

ಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

- Advertisement -
- Advertisement -

ನಾವು ಪ್ರಚಂಡ ಚಳವಳಿಯನ್ನು ಕಟ್ಟುವ ಅಗತ್ಯವಿದೆ, ಆದರೆ ಅಗುತ್ತಿಲ್ಲ. ಯುವ ಜನರನ್ನು ಸಜ್ಜುಗೊಳಿಸಬೇಕಿದೆ, ಸಾಧ್ಯವಾಗುತ್ತಿಲ್ಲ. ಬೃಹತ್ ಜನಾಂದೋಲನ ಕಟ್ಟಬೇಕಿದೆ, ಅದೂ ಆಗುತ್ತಿಲ್ಲ. ಇದಕ್ಕೆಲ್ಲ ಮುಖ್ಯ ಕಾರಣ ನಮ್ಮಲ್ಲೆ ಇರುವ ಲೋಪವಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಮಾತನಾಡಿದ ಅವರು, “ನಾವು ಅನೇಕ ಹೋರಾಟಗಳನ್ನು ಮಾಡುತ್ತಿದ್ದೇವೆ. ಆದರೆ, ಆಳುವವರನ್ನು ಅಲುಗಾಡಿಸಲು ಅಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಲೋಪ ನಮ್ಮಲ್ಲೇ ಇದೆ. ಅದನ್ನೆಲ್ಲ ಮೀರುವುದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಲಾಗಿದೆ” ಎಂದರು.

ನಾಡೋಜ ಬರಗೂರು ರಾಮಚಂದ್ರಪ್ಪನವರು ಮಾತನಾಡುತ್ತಾ ನಾವು ಆಳುವವರನ್ನು ಪ್ರಶ್ನಿಸಬೇಕು, ಅದಕ್ಕೂ ಮುನ್ನ ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕು ಎಂದು ಹೇಳಿದರು. ಅದನ್ನು ನಾನು ಒಪ್ಪುತ್ತೇನೆ. ನಮ್ಮಲ್ಲಿ ಒಂದು ರೀತಿಯ ತೊಳಲಾಟವಿದೆ. ಅದನ್ನು ಮೀರಬೇಕು ಎಂದು ಹೇಳಿದರು.

ಕಳೆದ ಎರಡು ಚುನಾವಣೆಗಳಲ್ಲಿ ಕೆಲಸ ಮಾಡಿದ ಎದ್ದೇಳು ಕರ್ನಾಟಕದ ಮುಂದಿನ ಕಾರ್ಯಚಟುವಟಿಕೆಯೇನು ಎಂಬ ಪ್ರಶ್ನೆ ಮುಂದೆ ಬಂದಾಗ 24 ರಾಜ್ಯಗಳ ಹಲವರು ಸೇರಿ ಜು.27,28ರಂದು ಎರಡು ದಿನದ ಕಾರ್ಯಗಾರವನ್ನು ನಡೆಸಲಾಯಿತು. ಅಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಅದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ತೀರ್ಮಾನ ಮಾಡಲಾಯಿತು. ಕಳೆದ 4 ತಿಂಗಳಿನಿಂದ ಈ ಪಡೆ ಕಟ್ಟಿ, ಸಮಾವೇಶ ನಡೆಸುವ ತಯಾರಿ ನಡೆದಿದೆ. ಇದರಲ್ಲಿ ಏನೊ ಸತ್ವವಿದೆ ಎಂದು ನಮಗೆ ಅನಿಸಿದೆ ಎಂದು ತಿಳಿಸಿದರು.

ಈ ಸಂವಿಧಾನ ಸಂರಕ್ಷಕರ ಪಡೆಯನ್ನು ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಕಟ್ಟಬೇಕಿದೆ. ನಾವು ಹೇಳುವ ವಿಚಾರಗಳು ಜನರಿಗೆ ತಲುಪಬೇಕಾದರೆ ಕಾರ್ಯಕರ್ತರ ಗಣ ಕಟ್ಟಲೇಬೇಕು. ನಾವು ಉದ್ದೇಶಿಸಿರುವ 1 ಲಕ್ಷ ಸಂರಕ್ಷಕರ ಪಡೆ ಕಟ್ಟುವ ಉದ್ದೇಶ ಯಶಸ್ಸು ಆಗಬೇಕಾದರೆ ಇಲ್ಲಿನ ವೇದಿಕೆಯ ಮೇಲಿರುವ ಗಣ್ಯರು ಮತ್ತು ಸಭೆಯ ಮುಂದಿರುವ ನಿಮ್ಮೆಲ್ಲರ ಜವಾಬ್ದಾರಿ ಇದೆ. ಅದನ್ನು ಒಟ್ಟಿಗೆ ಸೇರಿ ನಿರ್ವಹಿಸಬೇಕಿದೆ. ಎಲ್ಲರೂ ಸೇರಿ ದೃಢ ನಿರ್ಧಾರ ಮಾಡಬೇಕಿದೆ. ಪ್ರತಿಯೊಬ್ಬರು ಯೋಧರಂತೆ ಕೆಲಸ ಮಾಡಬೇಕು. ಪ್ರತಿಯೊಬ್ಬರು ತಮ್ಮ ಜೊತೆ 5 ಜನ ಸಂವಿಧಾನ ಸಂರಕ್ಷಕರನ್ನು ತಯಾರು ಮಾಡುವ ತೀರ್ಮಾನ ಮಾಡಿದರೆ ಎಲ್ಲವೂ ಸಾಧ್ಯವಾಗುತ್ತದೆ. ಇದು ಆದರೆ ಮುಂದಿನ 3 ವರ್ಷದಲ್ಲಿ 1 ಲಕ್ಷ ಪಡೆ ಕಟ್ಟುವ ನಮ್ಮ ಗುರಿಯನ್ನು ಮುಟ್ಟಬಹುದು ಎಂದು ನೂರ್ ಆಶಯ ವ್ಯಕ್ತಪಡಿಸಿದರು.

ರಾಜ್ಯ ಮಟ್ಟದಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಇಂದು ಎಲ್ಲ ಸಂಘಟನೆಗಳ ನಾಯಕರ ಮಟ್ಟದಲ್ಲಿ ಒಳ್ಳೆಯ ವಾತಾವರಣವಿದೆ. ಆದರೆ, ಕೆಳಮಟ್ಟದಲ್ಲಿ  ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ.  ತಳಮಟ್ಟದಲ್ಲಿ ಅಂದರೆ, ಜನಸಾಮಾನ್ಯರ ಮಧ್ಯೆ ಕೆಲಸ ಮಾಡಬೇಕಿದೆ. ಇದಕ್ಕಾಗಿ 100 ಜನ ಶಿಕ್ಷಕರನ್ನು ಸಿದ್ದಗೊಳಿಸಲಾಗಿದೆ. ಬರುವ ಜುಲೈನಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಶಿಬಿರ ನಡೆಸಲು ಸಿದ್ಧತೆಗಾಗಿ ಪಠ್ಯ ಪುಸ್ತಕಗಳು ರೂಪಿಸಲಾಗಿದೆ. ಈ ಮೂಲಕ ಒಂದು ಗಟ್ಟಿ ತಂಡವನ್ನು ಕಟ್ಟಲು ಸಾಧ್ಯವಾಗುತ್ತದೆ. ಮತ್ತೊಂದು ಕಡೆ ಜನಸಾಮಾನ್ಯರನ್ನು ತಲುಪಲು ಎರಡು ಕೆಲಸ ಮಾಡಬೇಕಿದೆ. ಒಂದು ಜನ ಸಾಂಸ್ಕೃತಿಕ ತಂಡ ಇನ್ನೊಂದು ಜನ ಮಾಧ್ಯಮಗಳನ್ನು ಬಲಪಡಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾರ್ಯ ಮುಂದುವರಿಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಮಾವೇಶದಲ್ಲಿ ನಾಲ್ಕು ಮುಖ್ಯ ಚಟುವಟಿಕೆಗಳ ಕುರಿತು ನಿಮ್ಮ ಮುಂದಿಡುತ್ತಿದ್ದೇವೆ. ಸಮಾಜದ ಎಲ್ಲ ಕಡೆ ವಿಷ ಹರಡಿದೆ. ಒಂದು ಕಡೆ ಕೇಂದ್ರದ ಜೊತೆ ಗುದ್ದಾಟ ನಡೆಸಬೇಕಿದೆ. ಅದರ ಜೊತೆಗೆ ನಮ್ಮ ರಾಜ್ಯದ ಸರಕಾರದ ವಿರುದ್ದ ಗುದ್ದಾಟ ನಡೆಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ನಮ್ಮೆಲ್ಲರ ಆಸೆಯನ್ನು ನಿರಾಶೆಗೊಳಿಸಿದೆ. ತಮ್ಮ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಈಡೇರಿಸುತ್ತಿಲ್ಲ. ತಮ್ಮ ಪಕ್ಷದ ಜನಪ್ರತಿನಿಧಿಗಳು ಸ್ವಜನಪಕ್ಷಪಾತಿಗಳಾಗಿದ್ದಾರೆ. ಭ್ರಷ್ಟರಾಗಿದ್ದಾರೆ. ಇದಕ್ಕಾಗಿ ನಾವೆಲ್ಲ ಈ ರಾಜ್ಯ ಸರಕಾರವನ್ನು ಚುಚ್ಚಬೇಕಾಗಿದೆ ಎಂದರು.

ಇದೇ ಮೇ 20ರಂದು ಕಾರ್ಮಿಕ, ರೈತ ಸಂಘಟನೆಗಳು ರಾಷ್ಟ್ರೀಯ ಮುಷ್ಕರಕ್ಕೆ ಕರೆಕೊಟ್ಟಿವೆ. ಅದರಲ್ಲಿ ನಾವೆಲ್ಲ ಸಕ್ರಿಯವಾಗಿ ಮತ್ತು ಅಷ್ಟೇ ಪರಿಣಾಮಕಾರಿಯಾಗಿ ಭಾಗವಹಿಸಬೇಕಿದೆ. ಅದಕ್ಕಾಗಿ ಸಂಯುಕ್ತ ಹೋರಾಟ ವತಿಯಿಂದ ರಾಜ್ಯದ ಆಯ್ದ 100 ಅಯಕಟ್ಟಿನ ಪ್ರದೇಶಗಳಲ್ಲಿ ಸರಕಾರವನ್ನು ನಡುಗಿಸುವ ಹೋರಾಟವನ್ನು ಕಟ್ಟಬೇಕಿದೆ. ಅದರಲ್ಲಿ ಎದ್ದೇಳು ಕರ್ನಾಟಕ ಸಕ್ರಿಯ ಭಾಗವಹಿಸಬೇಕು ಎಂದು ಕರೆ ಕೊಡುತ್ತಿದ್ದೇವೆ. ಜನ ಪ್ರತಿನಿಧಿಗಳ ಕೆಲಸ ಕಾರ್ಯಗಳ ಕುರಿತು ರಿಪೋರ್ಟ್ ಕಾರ್ಡ್ ಅನ್ನು ತಯಾರಿಸಿ ಸರ್ಕಾರದ ಮುಂದಿಡಬೇಕಿದೆ. ಧರ್ಮಾಂಧ ಶಕ್ತಿಗಳನ್ನು ಸೋಲಿಸದೆ ಜನಸಾಮಾನ್ಯರ ಸಂಕಷ್ಟಗಳಿಗೆ ಮುಕ್ತಿಯಿಲ್ಲವಾಗಿದೆ. ಅದಕ್ಕಾಗಿ ಕೆಲವು ತಿಂಗಳೊಳಗೆ ಇಲ್ಲವೆ ವರ್ಷದೊಳಗೆ ರಾಷ್ಟ್ರೀಯ ಜನಾಂದೋಲನ ಕಟ್ಟಲು ಒಂದು ರಾಷ್ಟ್ರೀಯ ಸಮಾವೇಶ ನಡೆಸಲು ಸಿದ್ದತೆ ಮಾಡಿಕೊಳ್ಳಲು ಸಿದ್ಧತೆಯನ್ನು ಅದಷ್ಟು ತೀವ್ರಗೊಳಿಸಬೇಕು ಎಂದು ನೂರ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...