Homeಕರ್ನಾಟಕಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

ಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

- Advertisement -
- Advertisement -

‘ದೇವನೂರ ಮಹಾದೇವ ಅವರ ಮಾತನ್ನು ಸ್ವಲ್ಪ ಬದಲಿಸಿ, ಎದೆಗೆ ಬಿದ್ದ ಸಂವಿಧಾನ- ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ ಎಂದು ನಾವಿಂದು ಹೇಳಬೇಕಿದೆ’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಆಳುವವರಿಗೆ ಎಂದಿಗೂ ಸಂವಿಧಾನ ಅಪಥ್ಯ ಆಗಿತ್ತು. ಆಧರೆ, ಅದರ ರಕ್ಷಣೆ ಮಾಡಬೇಕಿದ್ದ ನಾವುಗಳೂ ಅದನ್ನು ಸರಿಯಾಗಿ ಅರ್ಥ ಮಾಡಿಕೊಂಡಿರಲಿಲ್ಲ. ನಾವು ಮೊದಲೇ ಸಂವಿಧಾನದ ರಕ್ಷಣೆಯ ಹೊಣೆ ಹೊತ್ತಿದ್ದರೆ, ಇಂದು ಇಂತಹ ಗತಿ ಬರುತ್ತಿರಲಿಲ್ಲಲ” ಎಂದರು.

“ಬಾಬಾಸಾಹೇಬರು ರತ್ತುಗೆ ಹೇಳುತ್ತಿದ್ದರು, ‘ನೋಡು ರತ್ತು, ನಾನು ಸಂವಿಧಾನವನ್ನು ಬರೆದಿದ್ದೇನೆ, ನನ್ನ ಎಲ್ಲ ಆಶಯಗಳನ್ನೂ ಅದರಲ್ಲಿ ತರಲು ಆಗಲಿಲ್ಲ. ಆದರೆ, ಈ ದೇಶದ ಎಲ್ಲ ದಮನಿತರು, ಶೋಷಿತರು, ರಕ್ತ ಬಸಿಯುವ ಜನರಿಗೆ ಬೇಕಿರುವ ಎಷ್ಟೋ ವಿಷಯಗಳನ್ನು ಅದರಲ್ಲಿ ತಂದಿದ್ದೇನೆ, ಆ ಜನರು ಇದರ ರಕ್ಷಣೆಗೆ ಮುಂದಾದರೆ ಅದರ ಪ್ರಯೋಜನ ಪಡೆಯಬಲ್ಲರು’ ಎಂದು ಹೇಳಿದ್ದರು” ಎಂದರು.

“ಸಂವಿಧಾನ 1949 ನವೆಂಬರ್ 26ರಂದು ಜಾರಿಯಾಯಿತು, ಸಂವಿಧಾನದಿಂದ ಮಾತ್ರ ಎಲ್ಲ ಸಮಸ್ಯೆ ಬಗೆಹರಿಯುವುದಿಲ್ಲ. ಸಂವಿಧಾನದ ಆಶಯ ಈಡೇರಬೇಕಾದರೆ, ಜನರಿಗೆ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆ ದೊರೆಯಬೇಕು. ಇದಕ್ಕೆ ಆಳುವ ಪ್ರಭುತ್ವಗಳು ಕೆಲಸ ಮಾಡಬೇಕು ಎಂದು ಬಾಬಾಸಾಹೇಬರು ಹೇಳಿದರು” ಎಂದು ವಿವರಿಸಿದರು.

“ಈ ದೇಶದ ಜನ ಒಟ್ಟಾಗಿರಬೇಕು, ಒಂದೇ ದೇವಸ್ಥಾನ, ಒಂದೇ ಸ್ಮಶಾನ, ಒಂದೇ ದೇವರು ಇರಬೇಕು ಎಂದು ಇತ್ತೀಚೆಗೆ ಮೋಹನ್ ಭಾಗವತ್ ಹೇಳಿದ್ದು ಪತ್ರಿಕೆಯಲ್ಲಿ ನೋಡಿದೆ. ಅವರಿಗೆ ನಾನು ಹೇಳುತ್ತೇನೆ, ಒಂದೇ ದೇವಸ್ಥಾನ ಮಾತ್ರವಲ್ಲ, ಒಂದೇ ಚರ್ಚ್, ಒಂದೇ ಮಸೀದಿ ಇದೆ ಎಂಬುದನ್ನೂ ಮರೆಯಬೇಡಿ” ಎಂದರು.

“ಸಂವಿಧಾನ ಜಾರಿಯಾದಾಗ ‘ಇದರಲ್ಲಿ ಭಾರತೀಯತೆ ಇಲ್ಲ’ ಎಂದಿದ್ದ ಆರೆಸ್ಸೆಸ್, ಇವತ್ತು ತನ್ನ ಅಭಿಪ್ರಾಯ ಬದಲಿಸಿದ್ದರೆ, ಸಂವಿಧಾನ ಜಾರಿಯಾದ ಮರುದಿನ ಆರ್ಗನೈಸರ್ ಪತ್ರಿಕೆಯಲ್ಲಿ ಬಂದಿದ್ದ ಮಾತಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಬೇಕಿತ್ತು” ಎಂದು ವಾಗ್ದಾಳಿ ನಡೆಸಿದರು.

“ವಾಜಪೇಯಿ ಪ್ರಧಾನಮಂತ್ರಿ ಆಗಿದ್ದಾಗ ಸಂವಿಧಾನ ಪುನರ್‌ರಚನೆ ಮಾಡಲು ಹೊರಟಾಗ ರಾಷ್ಟ್ರಪತಿಗಳಾಗಿದ್ದ ಕೆ ಆರ್ ನಾರಾಯಣನ್ ಹೇಳಿದರು, ಸಂವಿಧಾನ ಪುನರ್‌ರಚನೆಯಲ್ಲ, ಸಂವಿಧಾನ ಜಾರಿಮಾಡುವ ಕೆಲಸ ಆಗಬೇಕು, ಬಡಗಿ ಸರಿಯಿದ್ದರೆ ಎಂತಹ ಮರ ಇದ್ದರೂ ಸುಂದರ ಮೂರ್ತಿ ಮಾಡುತ್ತಾನೆ, ಈಗ ಬಡಗಿ ಸರಿಯಾಗಬೇಕಿದೆ ಎಂದು ಸೂಕ್ಷ್ಮವಾಗಿ ಹೇಳಿದ್ದರು” ಎಂದ ಬಿಜೆಪಿ ವಿರುದ್ಧ ಕಿಡಿಕಾರಿದರು.

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...