Homeಕರ್ನಾಟಕಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

ಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

- Advertisement -
- Advertisement -

“ಬಾಬಾಸಾಹೇಬರ ಸಮಾನತೆಯ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಕೆಲವರು ತೀರ್ಮಾನ ಮಾಡಿದ್ದಾರೆ. ಅದರ ವಿರುದ್ಧ ಸಂವಿಧಾನವನ್ನು ಉಳಿಸುವ ತೀರ್ಮಾನ ಮಾಡಿರುವ ನಿಮ್ಮ ಪ್ರಯತ್ನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ” ಎಂದು ಗುಜರಾತ್ ರಾಜ್ಯದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಂವಿಧಾನ ಸಂರಕ್ಷಣಾ ಸಮಾವೇಶ ಆಯೋಜಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

“ಈ ಭಾರತ ಭೂಮಿ ಮೋದಿ, ಆರೆಸ್ಸೆಸ್, ಮೋಹನ್ ಭಾಗವತ್ ಅವರುಗಳ ದೇಶವ. ಇದು ಬಸವಣ್ಣ ಅವರ ದೇಶ, ಬಾಬಾಸಾಹೇಬರ ದೇಶ, ರವಿದಾಸ್ ಅವರ ದೇಶ, ಪೆರಿಯಾರ್ ಅವರ ದೇಶ, ಇಲ್ಲಿ ಭಗತ್ ಸಿಂಗ್, ಸುಖದೇವ್, ರಾಜಗುರು, ನಾರಾಯಣಗುರು, ಅಶ್ವಾಕುಲ್ಲ ಅವರುಗಳ ನೆಲ ಇದು. ಈ ದೇಶವನ್ನು ಉಳಿಸಲು ಯಾರೆಲ್ಲ ತ್ಯಾಗ ಮಾಡಿ ತಪಸ್ಸು ಮಾಡಿದರೋ, ಯಾವ ದೇಶದಲ್ಲಿ 23 ವರ್ಷದಲ್ಲಿ ಭಗತ್ ಸಿಂಗ್ ಪ್ರಾಣ ನೀಡಿದರೋ ಅಂತಹ ದೇಶವನ್ನು ಈಗ ಕೆಲವು ದಿನಗಳಿಂದ ಆಳುತ್ತಿರುವ ಇವರುಗಳ ವಶಕ್ಕೆ ಒಪ್ಪಿಸಲು ಸಾಧ್ಯವಿಲ್ಲ” ಎಂದರು.

“ಇಲ್ಲಿ ವೇದಿಕೆಯ ಮೇಲಿರುವವರು 50 ವರ್ಷಗಳಿಂದ ರೈತರು ಮತ್ತು ಕಾರ್ಮಿಕರಿಗಾಗಿ ಹೋರಾಟ ನಡೆಸುತ್ತಿರುವ ಜನರಿದ್ದಾರೆ, ಈಗ ಅದನ್ನು ಮುಂದಕ್ಕೆ ಒಯ್ಯುವ ಹೊಣೆ ನಮ್ಮ ಯುವತಲೆಮಾರಿನ ಹೆಗಲ ಮೇಲಿದೆ” ಎಂದರು ಹೇಳಿದರು.

“ಗುಜರಾತ್ ಗಲಭೆ ನಡೆಸುವ ಮೂಲಕ ಅಲ್ಪಸಂಖ್ಯಾತರ ಮಾರಣಹೋಮ ಸರ್ಕಾರದ ಮೂಗಿನ ಕೆಳಗೆ ನಡೆದು, ಇಡೀ ಪ್ರಪಂಚದ ಪ್ರಜ್ಞಾವಂತರು ಮೋದಿಯನ್ನು ಟೀಕಿಸಿದಾಗ, ಮೋದಿಯವರ ಸಲಹೆಗಾರರು ಹೇಳಿದರು, ‘ವೈಬ್ರಂಟ್ ಗುಜರಾತ್ ಸಮ್ಮಿಟ್’ ಸಂಘಟಿಸಿ ಎಲ್ಲ ಬಂಡವಾಳಿಗರನ್ನು ಕರೆದು ಅಭಿವೃದ್ಧಿಯ ಹರಿಕಾರನ ಥರ ಪೋಸ್ ಕೊಡಿ ಎಂದು. ಅವರುಗಳನ್ನು ಕರೆದು, ನಿಮಗೆ ಭೂಮಿ, ಕರೆಂಟ್, ಬಂಡವಾಳ ಎಲ್ಲವನ್ನೂ ಒದಗಿಸುತ್ತೇವೆ ಎಂದು ಹೇಳಿದರು. ಇದನ್ನೇ ಅವರ ತಂತ್ರವಾಗಿಸಿಕೊಂಡು ಇಂದು ತಮ್ಮ ಎಲ್ಲ ಸಂಪನ್ಮೂಲಗಳನ್ನು ಈ ಬಂಡವಾಳಿಗರಿಂದ ಪಡೆದುಕೊಂಡು, ಅವರ ಜೇಬು ತುಂಬಿಸುವ ಎಲ್ಲ ಕೆಲಸಗಳನ್ನೂ ಅವರುಗಳನ್ನು ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಇಡೀ ದೇಶದ ಬಂಡವಾಳಿಗರಿಂದು ಅದಾನಿ-ಅಂಬಾನಿಗಳಂತೆ ಮೋದಿ ಪಡೆಯ ಜೊತೆಗೆ ನಿಂತಿದ್ದಾರೆ. ಶ್ರಮಜೀವಿಗಳು, ಬಡವರು, ದಲಿತರು ಇವರ ದಾಳಿಗಳ ಗುರಿಯಾಗುತ್ತಿದ್ದಾರೆ. ಮುಂದಿರುವ ದಾರಿ ಒಂದೇ, ನಾವೆಲ್ಲ ಸಂವಿಧಾನ ಪ್ರೇಮಿಗಳು. ನಮ್ಮ ನಮ್ಮ ಊರುಗಳಲ್ಲಿ, ಕೇರಿಗಳಲ್ಲಿ, ಜಿಲ್ಲೆಗಳಲ್ಲಿ ಆರೆಸ್ಸೆಸ್ ಶಾಖೆಗಳ ವಿರುದ್ಧ ಸಂವಿಧಾನದ ಪಡೆಗಳನ್ನು ಕಟ್ಟೋಣ, ಸಂವಿಧಾನದ ಆಶಯಗಳನ್ನು ನಿಜವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡೋಣ” ಎಂದು ಕರೆ ನೀಡಿದರು.

“ಪಕ್ಷಗಳ ಮೇಲೆ, ರಾಜಕಾರಣಿಗಳ ಮೇಲೆ ನಂಬಿಕೆಯಿಡಬೇಡಿ ಎಂದು ಪರಕಾಲ ಪ್ರಭಾಕರ್ ಹೇಳಿದರು. ನನಗೂ ನಾಯಕರಿಗಿಂತ, ಯಾರು ಬೀದಿಗಳಿದು ರೈತರಿಗಾಗಿ, ಕಾರ್ಮಿಕರಿಗಾಗಿ, ಮಹಿಳೆಯರಿಗಾಗಿ, ದಲಿತರಿಗಾಗಿ ಯುವಜನರಿಗಾಗಿ ಕ್ರಾಂತಿಗಾಗಿ ಚಳವಳಿ ಮಾಡುತ್ತಾರೋ ಅವರ ಮೇಲೆಯೇ ಹೆಚ್ಚು ನಂಬಿಕೆ” ಎಂದರು.

“ನಾವು ಚುನಾವಣೆಯಲ್ಲಿ ಆರೆಸ್ಸೆಸ್-ಬಿಜೆಪಿಯನ್ನು ಸೋಲಿಸಬೇಕು. ಆದರೆ, ನಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು. ಬಾಬಾಸಾಹೇಬರು, ಶಿಕ್ಷಿತರಾಗಿ, ಸಂಘಟಿತರಾಗಿ, ಸಂಘರ್ಷ ನಡೆಸಿ ಎಂದು ಹೇಳೀದ್ದರು. ನಿಜವಾದ ಸ್ವಾತಂತ್ರ್ಯಕ್ಕಾಗಿ ಸಂಘರ್ಷ ನಡೆಸಿ ಎಂದು ಭಗತ್ ಸಿಂಗ್ ಕೂಡಾ ಹೇಳಿದ್ದರು; ಇಂದು ನಮ್ಮೆಲ್ಲರ ಗುರಿ ಅದೇ, ಈ ಬೀದಿ ಸಂಘರ್ಷದಲ್ಲಿ ನಾನು ನಿಮ್ಮೊಂದಿಗಿದ್ದೀನಿ. ಮತ್ತೆ ಮತ್ತೆ ಕರ್ನಾಟಕಕ್ಕೆ ಕರೆಯಿರಿ, ನಾನು ಮತ್ತೆ ಮತ್ತೆ ಗುಜರಾತ್ ನಿಂದ ಬಂದು ಕರ್ನಾಟಕದಲ್ಲಿ ನಿಮ್ಮೊಂದಿಗೆ ಸೇರುತ್ತೇನೆ” ಎಂದು ಮೇವಾನಿ ಭರವಸೆ ನೀಡಿದರು.

ದೊಡ್ಡಮಟ್ಟದ ಸೈನ್ಯ ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ಕಾಣುತ್ತಿದ್ದೇನೆ: ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...