Homeಕರ್ನಾಟಕದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ...

ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

- Advertisement -
- Advertisement -

ರೈತರ ಪ್ರತಿರೋಧವನ್ನೂ ಲೆಕ್ಕಿಸದೆ ಬಲವಂತದ ಭೂಸ್ವಾಧೀನಕ್ಕೆ ಮುಂದಾಗಿರುವ ಸರ್ಕಾರ, ಎರಡು ದಿನಗಳ ಹಿಂದಷ್ಟೇ ಚನ್ನರಾಯಪಟ್ಟಣ ಹೋಬಳಿಯ ಎಂಟು ಹಳ್ಳಿಗಳಿಗೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಬಗ್ಗೆ ಆಕ್ರೋಶಗೊಂಡಿರುವ ರೈತರು, ಚನ್ನರಾಯಪಟ್ಟಣ ನಾಡ ಕಚೇರಿ ಮುಂಭಾಗದ ಧರಣಿ ಸ್ಥಳದಲ್ಲಿ ಸಭೆ ನಡೆಸಿದರು. ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಹೊರಡಿಸಿರುವ ಅಂತಿಮ‌ ಅಧಿಸೂಚನೆಯನ್ನು ಸುಡುವ ಮೂಲಕ ಪ್ರತಿರೋಧ ವ್ಯಕ್ತಪಡಿಸಿದರು.

“ಯಾವುದೇ ಕಾರಣಕ್ಕೂ ಭೂಮಿ ಬಿಡುವ ಪ್ರಶ್ನೆಯೇ ಇಲ್ಲ, ನಮ್ಮ ಪ್ರಾಣತ್ಯಾಗವಾದರೂ ಸರಿ ನಾವು ಭೂಮಿ ಬಿಡುವುದಿಲ್ಲ, ಭೂಮಿ ತಂಟೆಗೆ ಬಂದವರನ್ನೂ ಸುಮ್ಮನೆ ಬಿಡುವುದಿಲ್ಲ” ಎಂದು ರೈತರು ಸರ್ಕಾರದ ವಿರುದ್ಧ ಸೆಟೆದು ನಿಂತಿದ್ದಾರೆ.

ಕಳೆದ ಮೂರುವರೆ ವರ್ಷಗಳಿಂದ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಭೂಸ್ವಾಧೀನವನ್ನು ವಿರೋಧಿಸಿ ನಿರಂತರ ಧರಣಿ ನಡೆಸುತ್ತಿದ್ದರೂ, ಈ ಪೈಕಿ ಇದುವರೆಗೂ ಎರಡು ಹಂತದಲ್ಲಿ 10 ಹಳ್ಳಿಗಳ 1280 ಎಕರೆ ಭೂಮಿಗೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಸರ್ಕಾರದ ಆದೇಶವನ್ನು ಖಂಡಿಸಿ ಮಾತನಾಡಿದ ರೈತರು “ಜನರ ಸಂಪೂರ್ಣ ವಿರೋಧದ ನಡುವೆಯು ಸರ್ಕಾರ ಬಲವಂತವಾಗಿ ಭೂಸ್ವಾಧೀನಕ್ಕೆ ಮುಂದಾಗಿರುವುದು ರೈತಸಮುದಾಯಕ್ಕೆ ಮಾಡುತ್ತಿರುವ ದ್ರೋಹ, ಇದನ್ನು ಸಹಿಸಲು ಸಾದ್ಯವೇ ಇಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಈ ವಚನ ಭ್ರಷ್ಟ ಸರ್ಕಾರ, ಮಾತು ತಪ್ಪಿದ ಮುಖ್ಯಮಂತ್ರಿ ಮತ್ತು ಮಂತ್ರಿಗಳು ನಾಳೆ ನಮ್ಮ ಜಿಲ್ಲೆಯಲ್ಲಿ ಸಾಧನೆ ಸಮಾವೇಶ ಮಾಡುತ್ತಿದ್ದು, ಬಡ ರೈತರ ಭೂಮಿ ಕಸಿದುಕೊಂಡು ಬೀದಿಗೆ ತಳ್ಳುತ್ತಿರುವುದೆ ಇವರ ಅತಿದೊಡ್ಡ ಸಾಧನೆ, ಇದೇ ಈ ಕಾಲದ ವ್ಯಂಗ್ಯ. ಇದು ಈ ತಾಲ್ಲೂಕಿನ ಬಡ ರೈತರ ಸಮಾದಿಗಳ ಮೇಲೆ ನಡೆಸುತ್ತಿರುವ ಸಮಾವೇಶ” ಎಂದರು.

“ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರನ್ನು ಇತ್ತೀಚೆಗೆ ಬೇಟಿಯಾದಾಗಲೂ ರೈತರಿಗೆ ಯಾವುದೇ ಆತಂಕ ಬೇಡ, ನಾನು ರೈತರ ಪರವಾಗಿದ್ದು ಭೂಮಿಯನ್ನು ಉಳಿಸುತ್ತೇನೆ ಎಂದು ಹೇಳಿರುತ್ತಾರೆ. ಆದ್ದರಿಂದ, ರೈತರಿಗೆ ವಿಶ್ವಾಸದ್ರೋಹ‌ ಮಾಡದೆ, ತಕ್ಷಣವೇ ಈ ಅಧಿಸೂಚನೆಯನ್ನು ಹಿಂಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಿ ರೈತರಿಗೆ ನ್ಯಾಯ ಒದಗಿಸಬೇಕು” ಎಂದು ರೈತರು ಒತ್ತಾಯಿಸಿದರು.

“ಸರ್ಕಾರಕ್ಕೆ ಕಿಂಚಿತ್ತಾದರೂ ಬದ್ದತೆ ಇದ್ದರೆ, ನಾಳೆ ನಡೆಯುವ ಸಮಾವೇಶದಲ್ಲಿ ಚನ್ನರಾಯಪಟ್ಟಣ ಹೋಬಳಿಯ ರೈತರ ಭೂಮಿಯನ್ನು ಸ್ವಾಧೀನದಿಂದ ಕೈಬಿಡುವ ಘೋಷಣೆ ಮಾಡುವ ಮೂಲಕ ತಮ್ಮ ಘನತೆಯನ್ನು ಉಳಿಸಿಕೊಳ್ಳಲಿ. ಇಲ್ಲವಾದಲ್ಲಿ ಅತಿ ಶೀಘ್ರದಲ್ಲಿ ರೈತರ ತೀವ್ರ ಪ್ರತಿರೋಧ ಎದುರಿಸಲು ಸಜ್ಜಾಗಿ. ಇಷ್ಟು ದಿನಗಳ ಕಾಲ ಶಾಂತಿಯುತವಾಗಿ ಧರಣಿ ಕುಳಿತಿದ್ದೆವು. ಆದರೆ, ಈ ಬಾರಿ ರಕ್ತಪಾತವಾದರೂ ಸರಿ, ನಮ್ಮ ಪ್ರಾಣತ್ಯಾಗವಾದರು ಸರಿ ನಮ್ಮ ಭೂಮಿಯನ್ನು ಉಳಿಸಿಕೊಳ್ಳುವ ಶಪತ ತೊಟ್ಟು ಹೋರಾಟಕ್ಕೆ ದುಮುಕುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ನೀರಾವರಿ ಹೋರಾಟಗಾರರಾದ ಆಂಜನೇಯರೆಡ್ಡಿ, ಪ್ರಾಂತ್ಯ ರೈತ ಸಂಘದ ಚಂದ್ರತೇಜಸ್ವಿ, ಪ್ರಭಾ ಬೆಳವಂಗಲ, ರೈತ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತ್ಥಪ್ಪ, ತಿಮ್ಮರಾಯಪ್ಪ,ವೆಂಕಟೇಶ್, ಮುಕುಂದ, ಪ್ರಮೋದ್, ಮೋಹನ್, ಮಂಜುನಾಥ್, ಮಾರೇಗೌಡ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.

ಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...