Homeಕರ್ನಾಟಕಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

- Advertisement -
- Advertisement -

ಒಂದೆಡೆ ಪ್ರವಾಹದಿಂದ ಮನೆಮಠ ಕಳೆದುಕೊಂಡಿರುವ ಸಂತ್ರಸ್ತರು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ದೊರೆತ ಜನಾದೇಶವನ್ನು ಮೂರು ಕಾಸಿಗೆ ಹರಾಜಿಗಿಟ್ಟು, ಇದ್ದ ಸರಕಾರವನ್ನು ಉರುಳಿಸಿ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಹೊಸ ಸರಕಾರ ಸ್ಥಾಪನೆ ಮಾಡಲು ಕಾರಣರಾದ ಅನರ್ಹರೆಂಬ ಬಿರುದಾಂಕಿತ ಜನಪ್ರತಿನಿಧಿಗಳು ಮತ್ತೆ ಮತ ಭಿಕ್ಷೆಗೆ ಇಳಿದಿದ್ದಾರೆ.

ಅಥಣಿ

ಕಳೆದ ಬಾರಿ ಸೋತರೂ ಹೈಕಮಾಂಡ್ ಕೃಪೆಯಿಂದ ಉಪಮುಖ್ಯಮಂತ್ರಿಯಾಗಿ ಎಲ್ಲರ ಕಣ್ಣು ಕುಕ್ಕುತ್ತಿರುವ ಲಕ್ಷ್ಮಣ ಸವದಿಗೆ ಈ ಚುನಾವಣೆ ಬಿಸಿತುಪ್ಪವಾಗಿದೆ. ಯಾರ ಕೈಯಲ್ಲಿ ಸೋಲನುಭವಿಸಿದ್ದರೊ ಅವರನ್ನೆ ಗೆಲ್ಲಿಸುವ ಜವಾಬ್ದಾರಿ ಈಗ ಸವದಿ ಮೇಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹೇಶ್ ಕುಮಟಳ್ಳಿ ಹೆಸರಿಗೆ ಅಭ್ಯರ್ಥಿ. ಚುನಾವಣೆ ಮಾಡುತ್ತಿರುವವರು ಇನ್ನಾರೊ. ಹೀಗಾಗಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‍ನ ಗಜಾನನ ಮಂಗಸೂಳಿಗೆ ಗೊಂದಲದ ಲಾಭವಾದರೆ ಆಶ್ಚರ್ಯವಿಲ್ಲ. ಇಲ್ಲಿ ಯಾರೇ ಗೆದ್ದರೂ ಸೋಲುವುದು ಲಕ್ಷ್ಮಣ ಸವದಿಯೇ. ಯಾಕೆಂದರೆ ಕುಮಟಳ್ಳಿ ಗೆಲ್ಲಿಸಿದರೆ ಕ್ಷೇತ್ರ ಕೈತಪ್ಪುತ್ತದೆ. ಸೋಲಿಸಿದರೆ ಉಪ ಮುಖ್ಯಮಂತ್ರಿ ಪಟ್ಟ. ಇವುಗಳ ಮಧ್ಯೆ ಆಯ್ಕೆ ಬಲು ಕಷ್ಟ.

ಕಾಗವಾಡಕಳೆದ ಬಾರಿಯ ಎದುರಾಳಿಗಳು ಈ ಬಾರಿಯೂ ಮುಖಾಮುಖಿಯಾಗಿದ್ದಾರೆ. ಒಂದೇ ವ್ಯತ್ಯಾಸ ಪಕ್ಷ ಮತ್ತು ಚಿನ್ಹೆ ಅದಲು ಬದಲು. ಕಾಂಗ್ರೆಸ್‍ನ ಶ್ರೀಮಂತ ಪಾಟೀಲ್ ಈ ಬಾರಿ ಅನರ್ಹನೆಂಬ ಹಣೆಪಟ್ಟಿಯೊಂದಿಗೆ ಬಿಜೆಪಿ ಅಭ್ಯರ್ಥಿ. ಜನರ ತಿರಸ್ಕಾರಕ್ಕೆ ಗುರಿಯಾಗಿದ್ದ ರಾಜು ಕಾಗೆ ಈಗ ಕಾಂಗ್ರೆಸ್‍ನ ಹುರಿಯಾಳು. ಇಲ್ಲಿ ಯಾರೇ ಗೆದ್ದರೂ ಅಂತರ ಬಲು ಕಡಿಮೆ.

ಹಿರೇಕೆರೂರುಆಪರೇಷನ್ ಕಮಲಕ್ಕೆ ನಾನು ಬೀಳುವುದಿಲ್ಲವೆನ್ನುತ್ತಲೆ ಕಮಲದ ಗಾಳಕ್ಕೆ ಬಿದ್ದ ಮಾಜಿ ಪೊಲೀಸ್ ಹಾಲಿ ರಾಜಕೀಯ ನಟ ಬಿ.ಸಿ.ಪಾಟೀಲ್‍ರ ಮಂತ್ರಿ ಪದವಿ ಆಸೆಗಾಗಿ ಹಿರೇಕೆರೂರಿನಲ್ಲಿ ಮತ್ತೆ ಚುನಾವಣೆ ಬಂದೊದಗಿದೆ. ಖಾಕಿ ಬಿಟ್ಟು ಖಾದಿ ಹಾಕಿದ್ದ ಪಾಟೀಲರು ಈ ಬಾರಿ ಅದರ ಮೇಲೆ ಕೇಸರಿ ಶಾಲು ಹೊದ್ದಿದ್ದಾರೆ. ಅವರ ಎದುರಾಳಿ ಇನ್ನೊಬ್ಬ ಲಿಂಗಾಯತ ಬನ್ನಿಕೋಡ್ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ 555 ಮತಗಳಿಂದ ಸೋತಿದ್ದ ಬಿಜೆಪಿಯ ಯು.ಬಿ.ಬಣಕಾರ ಈ ಬಾರಿ ಭಿನ್ನಮತವನ್ನು ಹೊರಗಡೆ ತೋರಿಲ್ಲವಾದರು ಒಳಗೆ ಕನ್ನ ಕೊರೆಯಲ್ಲ ಅಂತ ಹೇಳೊಕಾಗಲ್ಲ.

ರಾಣಿಬೆನ್ನೂರಅದೃಷ್ಟ ಒಲಿದರೆ ಒದಕೊಂಡು ಬರುತ್ತದೆ ಅಂತಾರೆ. ಇದು ರಾಣಿಬೆನ್ನೂರ ಕ್ಷೇತ್ರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಯಾಕೆಂದರೆ ಮೊದಲು ಅದೃಷ್ಟ ಕೈ ಹಿಡಿದಿದ್ದು ಆರ್.ಶಂಕರ್‌ಗೆ ಸಮ್ಮಿಶ್ರ ಸರಕಾರದಲ್ಲಿ ಎರಡೆರಡು ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ನಂತರ ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹತೆ ಪಟ್ಟಕಟ್ಟಿಕೊಂಡು ಹೆಸರೂ ಕೆಡಿಸಿಕೊಂಡು ಟಿಕೆಟ್ ಪಡೆಯಲೂ ವಿಫಲರಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ತಾವೇ ಬೆಂಕಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಶಂಕರ್ ಬದಲು BJP ಇಲ್ಲಿಂದ ಪೂಜಾರಿ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಹಳೆಹುಲಿ K.B ಕೋಳಿವಾಡರನ್ನು ಮತ್ತೊಮ್ಮೆ ಅದೃಷ್ಟದ ಬಾಗಿಲ ಬಳಿ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...