Homeಮುಖಪುಟಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್

ಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್

- Advertisement -
- Advertisement -

ಜಾರ್ಖಂಡ್‌ನ ಐವರು ವಲಸೆ ಕಾರ್ಮಿಕರನ್ನು ಪಶ್ಚಿಮ ಆಫ್ರಿಕಾದ ನೈಜರ್‌ನಲ್ಲಿ ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಅವರು ಜನವರಿ 2024ರಲ್ಲಿ ಕಲ್ಪತರು ಪವರ್ ಟ್ರಾನ್ಸ್‌ಮಿಷನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡಲು ನೈಜರ್‌ಗೆ ವಲಸೆ ಹೋಗಿದ್ದರು. ಅಂದಿನಿಂದ ಮನೆಗೆ ಹಿಂತಿರುಗಿಲ್ಲ ಎನ್ನಲಾಗಿದೆ.

ಕಳೆದ ಶುಕ್ರವಾರ ಮಧ್ಯಾಹ್ನ ಕಾರ್ಮಿಕರ ಅಪಹರಣ ನಡೆದಿದೆ ಎಂದು ವರದಿಯಾಗಿದೆ.ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯ ಬಾಗೋದರ್ ಪೊಲೀಸ್ ಠಾಣೆ ವ್ಯಾಪ್ತಿಯ ಡೊಂಡ್ಲೋ ಪಂಚಾಯತ್‌ನ ಸಂಜಯ್ ಮಹತೋ, ಫಲ್ಜಿತ್ ಮಹತೋ, ರಾಜು ಮಹತೋ,ಚಂದ್ರಿಕಾ ಮಹತೋ ಮತ್ತು ಮುಂಡ್ರೋ ಪಂಚಾಯತ್‌ನ ಉತ್ತಮ್ ಮಹತೋ ಅಪಹರಣಕ್ಕೊಳಗಾದವರಲ್ಲಿ ಸೇರಿದ್ದಾರೆ.

ಇವರೊಂದಿಗೆ ಕೆಲಸ ಮಾಡುತ್ತಿದ್ದ ಇತರ ವಲಸೆ ಕಾರ್ಮಿಕರ ಪ್ರಕಾರ, ಸ್ಥಳೀಯರ ಗುಂಪೊಂದು ಕೆಲಸ ಸ್ಥಳದ ಮೇಲೆ ದಾಳಿ ನಡೆಸಿ, ಸರ್ಕಾರದಿಂದ ನಿಯೋಜಿಸಲ್ಪಟ್ಟ ಹನ್ನೆರಡು ಭದ್ರತಾ ಸಿಬ್ಬಂದಿಯನ್ನು ಕೊಂದು, ಬಂದೂಕು ತೋರಿಸಿ ಒಬ್ಬ ಸ್ಥಳೀಯ ಸೇರಿದಂತೆ ಆರು ಜನರನ್ನು ಕರೆದೊಯ್ದಿದೆ ಎಂದು ವರದಿಯಾಗಿದೆ.

“ನನ್ನ ಪತಿ ಸಂಜಯ್ ಮಹ್ತೋ ಕೆಲಸಕ್ಕೆಂದು ನೈಜರ್‌ಗೆ ಹೋಗಿದ್ದರು. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನನಗೆ ಅವರಿಂದ ಕೊನೆಯ ಬಾರಿಗೆ ಕರೆ ಬಂದಿತ್ತು, ನಂತರ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಅವರನ್ನು ಅಪಹರಿಸಲಾಗಿದೆ ಎಂದು ಅವರೊಂದಿಗೆ ಕೆಲಸ ಮಾಡುತ್ತಿರುವ ಇತರರು ನಮಗೆ ತಿಳಿಸಿದ್ದಾರೆ” ಎಂದು ಸಂಜಯ್ ಮಹ್ತೋ ಅವರ ಪತ್ನಿ ಹೇಳಿದ್ದಾರೆ.ನನ್ನ ಪತಿ ಸುರಕ್ಷಿತವಾಗಿ ಮನೆಗೆ ಮರಳಲು ವ್ಯವಸ್ಥೆ ಮಾಡುವಂತೆ ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಫಲ್ಜಿತ್ ಕುಮಾರ್ ಮಹ್ತೊ ಅವರು 2024ರ ಜನವರಿಯಲ್ಲಿ ನೈಜೀರಿಯಾಕ್ಕೆ ಹೋಗಿದ್ದರು. ಏಪ್ರಿಲ್ 25ರಂದು ಬೈಕ್‌ನಲ್ಲಿ ಬಂದ ಕೆಲವರು ಅವರನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ಅವರ ಮೊಬೈಲ್‌ ಸ್ವಿಚ್ ಆಫ್ ಆಗಿದೆ ಎಂದು ಸಹೋದರ ದಾಮೋದರ್ ಮಹ್ತೊ ಹೇಳಿದ್ಧಾರೆ. ಅವರನ್ನು ಪತ್ತೆಹಚ್ಚಲು ಮತ್ತು ಅವರು ಭಾರತಕ್ಕೆ ಸುರಕ್ಷಿತವಾಗಿ ಮರಳಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ವಲಸೆ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸಿಕಂದರ್ ಅಲಿ, ಅಪಹರಣಕ್ಕೊಳಗಾದವರು ಕಲ್ಪತರು ಪವರ್ ಟ್ರಾನ್ಸ್ಮಿಷನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ತಕ್ಷಣ ಕಾರ್ಮಿಕರನ್ನು ಬಿಡುಗಡೆ ಮಾಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

“ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದೇವೆ, ಈ ವಿಷಯದಲ್ಲಿ ಸಕಾಲಿಕ ಕ್ರಮ ತೆಗೆದುಕೊಂಡು ಸಂಕಷ್ಟದಲ್ಲಿರುವ ಕಾರ್ಮಿಕರನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ವಿನಂತಿಸುತ್ತಿದ್ದೇವೆ” ಎಂದು ಸಿಕಂದರ್ ಅಲಿ ಹೇಳಿದ್ದಾರೆ.

ಈ ವಿಷಯ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಗಮನಕ್ಕೆ ಬಂದಿದ್ದು, ಅವರು ವಿದೇಶಾಂಗ ಸಚಿವ ಎಸ್ ಜೈಶಕರ್ ಅವರ ಸಹಾಯವನ್ನು ಕೋರಿದ್ದಾರೆ.

ಗೌರವಾನ್ವಿತ ಕೇಂದ್ರ ವಿದೇಶಾಂಗ ಸಚಿವರೇ ನೈಜರ್‌ನಲ್ಲಿ ಅಪಹರಿಸಲ್ಪಟ್ಟಿರುವ ಜಾರ್ಖಂಡ್‌ನ ನಮ್ಮ ವಲಸೆ ಸಹೋದರರಿಗೆ ದಯವಿಟ್ಟು ಸಹಾಯ ಮಾಡುವಂತೆ ವಿನಂತಿಸುತ್ತೇನೆ ಎಂದು ಸಿಎಂ ಹೇಮಂತ್ ಸೊರೇನ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಉತ್ತರ ಪ್ರದೇಶ| ತೀವ್ರ ಗಾಯಗಳಿಂದ ದಲಿತ ಅತ್ಯಾಚಾರ ಸಂತ್ರಸ್ತೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...