Homeಕರ್ನಾಟಕ"ಬಿಜೆಪಿ, ಆರ್‌ಎಸ್‌ಎಸ್‌ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ": ಭಾಷಣ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತರ...

“ಬಿಜೆಪಿ, ಆರ್‌ಎಸ್‌ಎಸ್‌ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ”: ಭಾಷಣ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ನಾವು ಬಿಜೆಪಿ-ಆರ್‌ಎಸ್‌ಎಸ್‌ನ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಬೆಳಗಾವಿಯಲ್ಲಿ ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಸಿಎಂ ಬಿಜೆಪಿ-ಆರ್‌ಎಸ್‌ಎಸ್‌ಗೆ ನೇರ ಸವಾಲೆಸೆದರು.

ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಬೇರೆ ಏನು ಮಾಡಿದ್ದೀರಿ ತೋರಿಸಿ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯರು ಬ್ರಿಟಿಷರ ವಿರುದ್ಧ ಪ್ರಾಣತ್ಯಾಗ ಮಾಡಿ ಹೋರಾಡುತ್ತಿದ್ದಾಗ ನೀವು ಸಂಘ ಪರಿವಾರದವರು ಏನು ಕಡೆದು ಕಟ್ಟೆ ಹಾಕ್ತಿದ್ರಿ? ಸ್ವಾತಂತ್ರ್ಯ ಹೋರಾಟಕ್ಕೆ ಏಕೆ ಬರಲಿಲ್ಲ? ಏನ್ ಮಾಡ್ತಾ ಕೂತಿದ್ರಿ? ಆಗ ಎಂದು ಪ್ರಶ್ನಿಸಿದರು.

ಮೊನ್ನೆ ಕಾಶ್ಮೀರದಲ್ಲಿ ಕರ್ನಾಟಕದ ಮೂವರು ಸೇರಿದಂತೆ ಅಮಾಯಕ ಭಾರತೀಯರನ್ನು ರಾಜಾರೋಷವಾಗಿ ಗನ್‌ಗಳ ಸಮೇತ ಬಂದು ಅಮಾನುಷವಾಗಿ ಹತ್ಯೆ ಮಾಡಿ ಹೋದರಲ್ಲಾ, ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ ಅಲ್ಲವೇ? ಭಾರತೀಯರಿಗೆ ರಕ್ಷಣೆ ಕೊಡುವುದರಲ್ಲಿ ವಿಫಲ ಆಗಿರುವುದನ್ನು ನಾವು ಭಾರತೀಯರು ಪ್ರಶ್ನಿಸಬಾರದಾ? ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸ್ತೀರಾ? ಎಂದು ಸಿಎಂ ಕಿಡಿಕಾರಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 52 ವರ್ಷಗಳ ಕಾಲ ಆರ್‌ಎಸ್‌ಎಸ್‌ ಕಚೇರಿ ಮೇಲೆ ಭಾರತದ ಬಾವುಟ ಹಾರಿಸಲೇ ಇಲ್ಲ ನೀವು.ಇದಕ್ಕೂ ನಾಚಿಕೆ ಆಗುವುದಿಲ್ಲವೇ ನಿಮಗೆ ಎಂದು ಪ್ರಶ್ನಿಸಿದರು.

ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಆಧುನಿಕ ಭಾರತ ನಿರ್ಮಾಣದವರೆಗೂ ಬಿಜೆಪಿ, ಸಂಘ ಪರಿವಾರದ ಕೊಡುಗೆ ಏನಿದೆ? ನಾಚಿಕೆ ಇಲ್ಲದೆ ದೇಶಭಕ್ತಿ ಬಗ್ಗೆ ಮಾತಾಡ್ತೀರಾ. ಭಾರತೀಯ ಸಮಾಜವನ್ನು ಬಿರುಕು ಮೂಡಿಸಿದ್ದು ಬಿಟ್ಟರೆ ಇಷ್ಟು ವರ್ಷಗಳ ನಿಮ್ಮ ಕೊಡುಗೆ ಭಾರತಕ್ಕೆ ಏನು ಎಂಬುವುದನ್ನು ದೇಶದ ಜನಕ್ಕೆ ವಿವರಿಸಿ ಎಂದು ಸವಾಲು ಹಾಕಿದರು.

ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಅತ್ಯಂತ ಶ್ರೀಮಂತರ ಮೇಲೆ 32% ಟ್ಯಾಕ್ಸ್ ಇತ್ತು. ಮೋದಿ ಬಂದ ಮೇಲೆ ಅತ್ಯಂತ ಶ್ರೀಮಂತರ ಮೇಲಿನ ತೆರಿಗೆಯನ್ನು ಶೇ25 ಇಳಿಸಿದಿರಿ. ಬಡವರು, ಮಧ್ಯಮ ವರ್ಗದವರ ಮೇಲಿನ ತೆರಿಗೆಯನ್ನು ಹೆಚ್ಚಿಸಿದಿರಿ. ನಾಚಿಕೆ ಆಗುತ್ತಿಲ್ಲ ನಿಮಗೆ? ಬಡವರ, ಮಧ್ಯಮ ವರ್ಗದವರ ವಿರೋಧಿ ಬಿಜೆಪಿಯ ಆಡಳಿತವನ್ನು ಪ್ರಶ್ನಿಸಬಾರದಾ? ಭಾರತೀಯರನ್ನು ನಿರಂತರ ಸುಳ್ಳುಗಳಲ್ಲಿ ಇನ್ನೂ ಎಷ್ಟು ವರ್ಷ ಮರಳು ಮಾಡ್ತೀರಿ? ಸತ್ಯ ಹೇಳಿ ಎಂದರು.

ಭಾರತದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಹೋರಾಟ ಹೊಸದಲ್ಲ.ಬ್ರಿಟಿಷರನ್ನೇ ಒದ್ದೋಡಿಸಿದ ನಮಗೆ ನೀವು ಬಿಜೆಪಿ-ಆರ್‌ಎಸ್‌ಎಸ್‌ ಎದುರಿಸಿ ನಿಲ್ಲುವ ಶಕ್ತಿ ಇದೆ ಎಂದು ಹೇಳಿದರು.

ನಾವು ಹಾಲಿನ ದರ 4ರೂ ಹೆಚ್ಚಿಸಿ, ಅದನ್ನು ಪೂರ್ತಿಯಾಗಿ ರೈತರಿಗೆ, ಗೋಪಾಲಕರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಒಂದು ರೂಪಾಯಿ ಕೂಡ ಸರ್ಕಾರಕ್ಕೆ ಬರಲ್ಲ. ನಾವು 4 ರೂ ಹೆಚ್ಚಿಸಿದರೂ ಹಾಲಿನ‌ ದರ ಇಡೀ ದೇಶದಲ್ಲಿ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ಬಸ್ ದರ, ನೀರಿನ ದರ, ವಿದ್ಯುತ್ ದರ ಅಕ್ಕ ಪಕ್ಕದ ರಾಜ್ಯಗಳಿಗಿಂತ ಅತ್ಯಂತ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಿಮ್ಮ ಸುಳ್ಳು, ಅಪಪ್ರಚಾರ, ಬೆದರಿಕೆಗೆ ಈ ಸಿದ್ದರಾಮಯ್ಯ ಹೆದರುವವನಲ್ಲ. ನಿಮ್ಮನ್ನು ಮೆಟ್ಟಿ ನಿಲ್ತೀವಿ. ಕಾಂಗ್ರೆಸ್ ಪಕ್ಷಕ್ಕೆ ಆ ಶಕ್ತಿ ಇನ್ನೂ ಇದೆ ಎಂದರು.

ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ.ಯಾವುದನ್ನು ಬಿಟ್ಟಿದ್ದೀರಿ ಹೇಳಿ ಕೇಳಿದರು.

ಕಚ್ಛಾ ತೈಲ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ನಿರಂತರವಾಗಿ ಏರಿಕೆ ಮಾಡುತ್ತಲೇ ಇರುವುದು ಭಾರತೀಯರಿಗೆ ಬಿಜೆಪಿ ಬಗೆಯುತ್ತಿರುವ ಮಹಾದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಿರಂತರವಾಗಿ ಭಾರತೀಯರನ್ನು ಸುಳ್ಳುಗಳ ಸರಮಾಲೆಯಲ್ಲಿ ಮುಳುಗಿಸಿ, ಸಮಾಜವನ್ನು ಬಿರುಕು ಮೂಡಿಸಿ ಕಾಲ ಕಳೆಯುತ್ತಿದೆ. ನಿಮಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ. ನಾವು ಉತ್ತರ ಕೊಡ್ತೀವಿ ಎಂದರು.

ಯುದ್ಧವೇ ಏಕೈಕ ಆಯ್ಕೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...