Homeಮುಖಪುಟಉತ್ತರ ಪ್ರದೇಶ| ಪನೀರ್ ಬಡಿಸದ ಕಾರಣಕ್ಕೆ ಅಸಮಾಧಾನ; ಮದುವೆ ಅತಿಥಿಗಳ ಮೇಲೆ ಬಸ್ ಚಲಾಯಿಸಿದ ವ್ಯಕ್ತಿ

ಉತ್ತರ ಪ್ರದೇಶ| ಪನೀರ್ ಬಡಿಸದ ಕಾರಣಕ್ಕೆ ಅಸಮಾಧಾನ; ಮದುವೆ ಅತಿಥಿಗಳ ಮೇಲೆ ಬಸ್ ಚಲಾಯಿಸಿದ ವ್ಯಕ್ತಿ

- Advertisement -
- Advertisement -

ವ್ಯಕ್ತಿಯೊಬ್ಬ ಮದುವೆ ಮಂಟಪದಲ್ಲಿ ಮಿನಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಗಾಯಗೊಂಡು 3 ಲಕ್ಷ ರೂ. ಮೌಲ್ಯದ ಸರಕುಗಳು ಹಾನಿಗೊಳಗಾದ ಘಟನೆ ನಡೆದಿದೆ. ಮದುವೆ ಔತಣಕೂಟದಲ್ಲಿ ಆತನಿಗೆ ‘ಪನೀರ್’ ಸಿಗಲಿಲ್ಲ ಎಂಬ ಕಾರಣಕ್ಕೆ ಕೃತ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯಲ್ಲಿ ನಡೆದಿದೆ.

ಮೊಘಲ್ಸರಾಯ್ ಕೊಟ್ವಾಲಿ ಪ್ರದೇಶದ ಹಮೀದ್‌ಪುರ ಗ್ರಾಮದಲ್ಲಿ ರಾಜನಾಥ್ ಯಾದವ್ ಅವರ ಮಗಳ ವಿವಾಹವಾಗಿತ್ತು. ‘ಬರಾತ್’ (ಮದುವೆ ಮೆರವಣಿಗೆ) ಶನಿವಾರ ಸಂಜೆ ತಡವಾಗಿ ಸ್ಥಳಕ್ಕೆ ಬಂದಿತು; ಎಲ್ಲವೂ ಚೆನ್ನಾಗಿ ನಡೆಯುತ್ತಿತ್ತು.

ನಂತರ, ಧರ್ಮೇಂದ್ರ ಯಾದವ್ ಸಭಾಂಗಣವನ್ನು ಪ್ರವೇಶಿಸಿ ನೇರವಾಗಿ ಆಹಾರ ಮಳಿಗೆಗಳ ಕಡೆಗೆ ಹೋಗಿದ್ದಾನೆ, ಅಲ್ಲಿ ಆತನಿಗೆ ಊಟದಲ್ಲಿ ಪನೀರ್ ಸಿಗದಿದ್ದಾಗ ಕೋಪಗೊಂಡಿದ್ದಾನೆ.

“ಧರ್ಮೇಂದ್ರ ಯಾದವ್ ಮದುವೆಗೆ ಬಂದು ತಿನ್ನಲು ಪ್ರಾರಂಭಿಸಿ ಪನೀರ್ ಕೇಳಿದ್ದಾನೆ. ಅದು ಸಿಗದಿದ್ದಾಗ,  ಕೋಪಗೊಂಡು ಮದುವೆ ಸಮಾರಂಭದ ಮಧ್ಯದಲ್ಲಿ ಬಸ್ ಓಡಿಸಿದ್ದಾನೆ. ಇದರಲ್ಲಿ ಎಂಟು ಜನರು ಗಾಯಗೊಂಡಿದ್ದು, 3 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಸರಕುಗಳು ಹಾನಿಗೊಳಗಾದವು” ಎಂದು ರಾಜನಾಥ್ ಯಾದವ್ ಹೇಳಿದರು.

ಆತ ತುಂಬಾ ಕೋಪಗೊಂಡೊದ್ದ, ಯೋಚಿಸಲಾಗದ ಕೆಲಸವನ್ನು ಮಾಡಲು ನಿರ್ಧರಿಸಿದ್ದಾನೆ. ಅವನು ಮದುವೆಯ ಅತಿಥಿಗಳ ಮೇಲೆ ಟೆಂಪೋ ಟ್ರಾವೆಲರ್ ಅನ್ನು ಡಿಕ್ಕಿ ಹೊಡೆದನು. ಗದ್ದಲ ಉಂಟಾಗುತ್ತಿದ್ದಂತೆ, ಅವನು ಬಸ್ಸಿನಲ್ಲಿ ಹಾಲ್‌ನಿಂದ ಓಡಿಹೋದನು.

ವರನ ತಂದೆ ಮತ್ತು ವಧುವಿನ ಚಿಕ್ಕಪ್ಪ ಸೇರಿದಂತೆ ಹಲವಾರು ಜನರು ಗಾಯಗೊಂಡರು. ಅವರು ವಾರಣಾಸಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ನಂತರ, ವರನ ಕಡೆಯವರು ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸುವವರೆಗೆ ಮದುವೆ ನಡೆಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು. ವಧುವಿನ ಕಡೆಯವರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ ನಂತರವೇ, ಮರುದಿನ ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿವಾಹ ಸಮಾರಂಭವನ್ನು ಮುಕ್ತಾಯಗೊಳಿಸಲಾಯಿತು.

ತಮಿಳುನಾಡಿನಲ್ಲಿ ಕೋಮುವಾದವಿಲ್ಲ, ಕಾಶ್ಮೀರದಂತಹ ದಾಳಿಗಳು ನಡೆಯುವುದಿಲ್ಲ: ಎಂ.ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...