Homeಕರ್ನಾಟಕಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

- Advertisement -
- Advertisement -

ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಎಪ್ರಿಲ್ 27 ರಂದು ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆ ಗೈದಿರುವ ಆತಂಕಕಾರಿ ಕೃತ್ಯ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಸಿಪಿಐಎಂ ಆಗ್ರಹಿಸಿದೆ.

“ಘಟನೆ ನಡೆದು ಒಂದು ದಿನ ಕಳೆದಿದ್ದರೂ ಪೊಲೀಸ್ ಇಲಾಖೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಗುಂಪು ಹಲ್ಲೆ, ಹತ್ಯೆಯಲ್ಲಿ ಭಾಗಿಯಾಗಿರುವ ರಾಜಕಿಯ ಹಿನ್ನಲೆಯ ಕೆಲವು ಪ್ರಭಾವಿಗಳನ್ನು ರಕ್ಷಿಸುವ, ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಪ್ರಕರಣವನ್ನು ದುರ್ಬಲಗೊಳಿಸುವ ಯತ್ನವೂ ಪ್ರಭಾವಿ ರಾಜಕಾರಣಿಗಳಿಂದ, ಸ್ಥಳೀಯ ಜನಪ್ರತಿನಿಧಿಗಳಿಂದ ನಡೆಯುತ್ತಿರುವ ಕುರಿತು ಅನುಮಾನಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ. ರಾಜ್ಯ ಸರಕಾರ ಈ ಕುರಿತು ಗಮನ ಹರಿಸಬೇಕು, ಖುದ್ದು ಮುಖ್ಯಮಂತ್ರಿಗಳು ಈ ಗುಂಪು ಹಲ್ಲೆ, ಹತ್ಯೆ ಪ್ರಕರಣವನ್ನು ಗಂಭೀರಾವಗಿ ಪರಿಗಣಿಸಿ ಉತ್ತಮ ಹಿನ್ನಲೆಯ ಅಧಿಕಾರಿಗಳ ತಂಡವನ್ನು ತನಿಖೆಗೆ ನೇಮಿಸಬೇಕು” ಎಂದು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕುಡುಪು ಮೈದಾನದ ಸಮೀಪ ಬಂದಿದ್ದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ ಎಂದು ಎಲ್ಲೆಡೆ ಪುಕಾರು ಹಬ್ಬಿದೆ. ನತದೃಷ್ಟ ವಲಸೆ ಕಾರ್ಮಿಕ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿಯನ್ನೂ ದುಷ್ಕರ್ಮಿಗಳ ಗುಂಪು ಹರಿಯಬಿಟ್ಟಿದೆ. ಆ ಮೂಲಕ ತಮ್ಮ ಗಂಭೀರ ದುಷ್ಕೃತ್ಯವನ್ನು ದೇಶ ಪ್ರೇಮದ ಲೇಬಲ್ ಅಂಟಿಸಿ ಸಮರ್ಥಿಸಿಕೊಳ್ಳುವ ಹೀನ ಯತ್ನವೂ ನಡೆಯುತ್ತಿದೆ ಎಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದಾರೆ.

ಮಾಜಿ ಕಾರ್ಪೊರೇಟರ್ ಓರ್ವರ ಪತಿ ಈ ಗುಂಪನ್ನು ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಕುರಿತೂ ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಹತ್ಯೆಯ ತರುವಾಯ ಸ್ಥಳೀಯ ಜನಪ್ರತಿನಿಧಿಗಳೂ ಮಧ್ಯಪ್ರವೇಶಿಸಿ ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಕೆಲವರನ್ನು ಬಚಾವ್ ಮಾಡುವ ಯತ್ನ ನಡೆಸುತ್ತಿರುವ ಆರೋಪಗಳೂ ಕೇಳಿಬರುತ್ತಿದೆ. ಮಂಗಳೂರು ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಘಟನೆ ನಡೆದು ಒಂದು ದಿನ ಕಳೆದರೂ ನೀಡದಿರುವುದು ಪ್ರಕರಣದ ಕುರಿತು ಅನುಮಾನಗಳನ್ನು ಹೆಚ್ಚಿಸಿದೆ.

ಮಂಗಳೂರು ನಗರದಲ್ಲಿ ಈ ರೀತಿ ಗುಂಪು ಹಲ್ಲೆ, ಹತ್ಯೆ ನಡೆಯುವುದು ಕರಾವಳಿ ಜಿಲ್ಲೆಗಳು ಅಪಾಯದ ಗಡಿದಾಟುತ್ತಿರುವುದರ ಸಂಕೇತ, ಪೆಹಲ್ಗಾಮ್ ದುರಂತದ ಬೆನ್ನಲ್ಲೆ ಈ ಘಟನೆ ನಡೆದಿರುವುದು ಆಘಾತಕಾರಿ ವಿದ್ಯಾಮಾನ‌. ವಲಸೆ ಕಾರ್ಮಿಕರು, ಅವರ ಧರ್ಮದ ಹಾಗೂ ವಿವಿಧ ಗುರುತಿನ ಕಾರಣಕ್ಕೆ ‘ದೇಶಪ್ರೇಮ’ದ ಲೇಬಲ್ ಅಡಿ ದುಷ್ಕರ್ಮಿಗಳು ಬಹಿರಂಗವಾಗಿ ಹೊಡೆದು ಹಾಕುವುದು ಅನಾಗರಿಕತೆಯ ಪರಮಾವಧಿ. ಇದರ ಸಾಮಾಜಿಕ ಪರಿಣಾಮಗಳು ಸರಿಪಡಿಸಲಾಗಷ್ಟು ಗಂಭೀರವಾಗಿರುತ್ತದೆ ಎಂದು ಸಿಪಿಐಎಂ ಸಿಪಿಐಎಂ ಘಟನೆಯನ್ನು ಖಂಡಿಸಿದೆ.

‘ಮುಸ್ಲಿಂ’ ಎಂಬ ಕಾರಣಕ್ಕೆ ವಲಸೆ ಕಾರ್ಮಿಕನ ಗುಂಪು ಹತ್ಯೆ ಖಚಿತ

ಕುಡುಪುವಿನಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆ ತಿರುವು ಪಡೆದುಕೊಂಡಿದ್ದು, ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಗುಂಪು ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಸುಮಾರು 15 ಮಂದಿ ಆರೋಪಿಗಳನ್ನು ತಡರಾತ್ರಿ ಬಂಧಿಸಿರುವುದಾಗಿ ವರದಿಯಾಗಿದೆ. ಆದರೆ, ಈ ಬಗ್ಗೆ ಇನ್ನೂ ಕೂಡ ಮಂಗಳೂರು ನಗರ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ವಶಕ್ಕೆ ತೆಗೆದುಕೊಂಡ ಆರೋಪಿಗಳಿಂದ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ತಿಳಿದು ಬಂದಿದೆ. ಅಲ್ಲದೇ, ‘ಮುಸ್ಲಿಂ’ ಎಂಬ ಕಾರಣಕ್ಕಾಗಿಯೇ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿ, ಹತ್ಯೆಗೈದಿರುವುದಾಗಿ ಪೊಲೀಸರ ತನಿಖೆಯ ವೇಳೆ ಖಚಿತವಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಹೆಚ್ಚು ಮಾಹಿತಿ ನೀಡಲು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿರುವುದಾಗಿ ತಿಳಿದು ಬಂದಿದೆ.

ಧರ್ಮದ ಆಧಾರದ ಮೇಲೆ ಚಿಕಿತ್ಸೆ ನಿರಾಕರಿಸುವ ಪೋಸ್ಟ್ ಹಂಚಿಕೊಂಡ ವೈದ್ಯೆ; ವಿರೋಧದ ಬಳಿಕ ಡಿಲೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...