Homeಕರ್ನಾಟಕಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ...

ಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ ರದ್ದು

- Advertisement -
- Advertisement -

ಇನ್ಫೋಸಿಸ್‌ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಲಯವು ಡಾ. ಡಿ ಸಣ್ಣ ದುರ್ಗಪ್ಪ ಅವರ ಖಾಸಗಿ ದೂರಿನ ಸಂಜ್ಞೇ ಪರಿಗಣಿಸಿರುವುದು ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರ ಏಕಸದಸ್ಯ ಪೀಠವು ಪುರಸ್ಕರಿಸಿದೆ ಎಂದು barandbench.com ವರದಿ ಮಾಡಿದೆ.

“ಸಿವಿಲ್‌ ಪ್ರಕರಣಕ್ಕೆ ಕ್ರಿಮಿನಲ್‌ ಬಣ್ಣ ನೀಡಲಾಗಿದೆ ಎಂಬುದನ್ನು ಆಧರಿಸಿ ಈ ಹಿಂದೆ ದೂರುದಾರರು ದಾಖಲಿಸಿದ್ದ ಎರಡು ಕ್ರಿಮಿನಲ್‌ ದೂರುಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಹಾಲಿ ಪ್ರಕರಣವು ಅಂಥವೇ ಆರೋಪಗಳನ್ನು ಒಳಗೊಂಡಿದೆ. ದೂರುದಾರ ದುರ್ಗಪ್ಪ ಅವರನ್ನು ಸೇವೆಯಿಂದ ವಜಾಗೊಳಿಸಿರುವುದರಿಂದ ಅವರು ರಾಜೀನಾಮೆ ನೀಡಿದ್ದರು. ಇದಕ್ಕೆ ಪ್ರತೀಕಾರವಾಗಿ ಮೂರನೇ ದೂರು ನೀಡಿದ್ದಾರೆ. ಪಕ್ಷಕಾರರ ನಡುವಿನ ವಿವಾದವು ಸಿವಿಲ್‌ ಸ್ವರೂಪದ್ದಾಗಿದ್ದು, ಅದಕ್ಕೆ ಕ್ರಿಮಿನಲ್‌ ಬಣ್ಣ ಹಚ್ಚಲಾಗಿದೆ” ಎಂದು ನ್ಯಾಯಾಲಯ ಹೇಳಿದ್ದು, ಹಾಲಿ ದೂರು ಕಾನೂನಿನ ದುರ್ಬಳಕೆ ಎಂದು ಪೀಠ ದಾಖಲಿಸಿದೆ ಎಂದು ವರದಿ ವಿವರಿಸಿದೆ.

“ಸಣ್ಣ ದುರ್ಗಪ್ಪ ಮತ್ತು ಐಐಎಸ್‌ಸಿ ಪ್ರತಿನಿಧಿಗಳು ರಾಜೀ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರನ್ನು ವಜಾಗೊಳಿಸಿದ್ದನ್ನು ರಾಜೀನಾಮೆಯನ್ನಾಗಿ ಪರಿವರ್ತಿಸಲಾಗಿತ್ತು. ವಿವಿಧ ಕಡೆ ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯಬೇಕು ಎಂಬುದು ಷರತ್ತುಗಳ ಪೈಕಿ ಒಂದಾಗಿತ್ತು. ರಾಜೀನಾಮೆ ಹಿನ್ನೆಲೆಯಲ್ಲಿ ಲಭ್ಯವಿರುವ ಸವಲತ್ತುಗಳನ್ನು ಪಡೆದ ಬಳಿಕವೂ ಸಣ್ಣ ದುರ್ಗಪ್ಪ ಅವರು ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ಮುಂದುವರಿಸಿದ್ದರು ಎಂಬುದನ್ನು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ. ಅಲ್ಲದೇ, ಸಣ್ಣ ದುರ್ಗಪ್ಪ ವಿರುದ್ಧ ಐಐಎಸ್‌ಸಿ ಪ್ರತಿನಿಧಿಗಳು ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಂದುವರಿಸಲು ಕ್ರಮಕೈಗೊಳ್ಳಬಹುದು” ಎಂದು ಆದೇಶಿಸಿದೆ ಎಂದು ತಿಳಿಸಿದೆ.

ದೂರಿನಲ್ಲಿ ಏನಿತ್ತು?: ಐಐಎಸ್‌ಸಿಯಲ್ಲಿ 2014ರಲ್ಲಿ ಹನಿಟ್ರ್ಯಾಪ್‌ ಮೂಲಕ ತನ್ನನ್ನು ಸೇವೆಯಿಂದ ವಜಾ ಮಾಡಿಸಲಾಗಿದೆ ಎಂದು ದುರ್ಗಪ್ಪ ದೂರಿದ್ದರು. ಅಲ್ಲದೇ, ಗೋಂವಿದನ್‌ ರಂಗರಾವ್‌, ಶ್ರೀಧರ್‌ ವಾರಿಯರ್‌, ಸೇನಾಪತಿ ಕ್ರಿಶ್‌ ಗೋಪಾಲಕೃಷ್ಣನ್‌, ಅನಿಲ್‌ ಕುಮಾರ್‌, ದೀಪ್ಸಿಕಾ ಚಕ್ರವರ್ತಿ, ನಮ್ರತಾ ಗುಂಡಯ್ಯ, ಡಾ. ನಿರ್ಮಲಾ, ಸಂಧ್ಯಾ ವಿಶ್ವೇಶ್ವರಯ್ಯ, ಕೆವಿಎಸ್‌ ಹರಿ, ದಾಸಪ್ಪ, ಪಿ ಬಾಲಚಂದ್ರ, ಪಿ ಬಲರಾಮ, ಅಂಜಲಿ ಕೆ ಕಾರಂಡೆ, ಹೇಮಲತಾ ಮ್ಹಿಷಿ, ಕೆ ಚಟ್ಟೋಪಾಧ್ಯಾಯ, ಪ್ರದೀಪ್‌ ಸಾವ್ಕಾರ್‌, ಅಭಿಲಾಷ್‌ ರಾಜು, ವಿಕ್ಟರ್‌ ಮನೋಹರನ್‌ ಅವರು 2008ರಿಂದ 2025ರವರೆಗೆ ತನ್ನ ಮೇಲೆ ಜಾತಿ ನಿಂದನೆ ಮಾಡಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ಸೌಜನ್ಯ : barandbench.com

ಜಾತಿ ಗಣತಿ ವರದಿ ಪ್ರಶ್ನಿಸಿ ಅರ್ಜಿ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...