Homeಮುಖಪುಟಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ನೆಪವಾಗಿಟ್ಟುಕೊಂಡು ಮುಸ್ಲಿಮರನ್ನು ಬಹಿಷ್ಕರಿಸಬೇಕು ಎಂದು ಬಲಪಂಥೀಯ ಗುಂಪುಗಳು ನೀಡಿದ್ದ ಕರೆಯನ್ನು ಭಾರತದಲ್ಲಿ ಅತಿ ಹೆಚ್ಚು ಜನರು ಭೇಟಿ ನೀಡುವ ಯಾತ್ರಾ ಸ್ಥಳಗಳಲ್ಲಿ ಒಂದಾದ ಉತ್ತರ ಪ್ರದೇಶದ ವೃಂದಾವನದ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯ ತಿರಸ್ಕರಿಸಿದೆ.

ಮಥುರಾ ಮತ್ತು ವೃಂದಾನವನದಲ್ಲಿ ಪ್ರತಿಭಟಿಸಿದ್ದ ಹಿಂದುತ್ವ ಗುಂಪು, ಮುಸ್ಲಿಮರೊಂದಿಗೆ ವ್ಯಾಪಾರ ನಡೆಸದಂತೆ ಹಿಂದೂಗಳನ್ನು ಒತ್ತಾಯಿಸಿತ್ತು. ಮುಸ್ಲಿಂ ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳ ಮೇಲೆ ಮಾಲೀಕರ ಹೆಸರು ಬರೆಯುವಂತೆ ಬೆದರಿಗೆ ಹಾಕಿತ್ತು.

ಬಂಕೆ ಬಿಹಾರಿ ದೇವಾಲಯಕ್ಕೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳಿಂದ ಮುಸ್ಲಿಮರನ್ನು ಬೇರ್ಪಡಿಸುತ್ತೇವೆ. ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿಗಳ ಮುಂದೆ ಮಾಲೀಕರ ಹೆಸರು ಹಾಕುವಂತೆ ಸೂಚಿಸಲಾಗಿದೆ. ಹಿಂದೂಗಳ ಅವರೊಂದಿಗೆ ವ್ಯಾಪಾರ ಮಾಡದಂತೆ ಮತ್ತು ತಮ್ಮ ವ್ಯವಹಾರಗಳಲ್ಲಿ ಅವರನ್ನು ನೇಮಿಸಿಕೊಳ್ಳದಂತೆ ಮನವಿ ಮಾಡಿದ್ದೇವೆ ಎಂದು ಕಾಶಿ ವಿದ್ವತ್ ಪರಿಷತ್ ಸಂಘಟನೆಯ ಸದಸ್ಯ ನಾಗೇಂದ್ರ ಮಹಾರಾಜ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಂಕೆ ಬಿಹಾರಿ ದೇವಾಲಯದ ಅರ್ಚಕ ಹಾಗೂ ಆಡಳಿತ ಮಂಡಳಿ ಸದಸ್ಯ, ಜ್ಞಾನೇಂದ್ರ ಕಿಶೋರ್ ಗೋಸ್ವಾಮಿ ಅವರು, “ಇದು ಸಾಧ್ಯವಿಲ್ಲ. ಮುಸ್ಲಿಮರು, ವಿಶೇಷವಾಗಿ ಮುಸ್ಲಿಂ ಕುಶಲಕರ್ಮಿಗಳು ಮತ್ತು ನೇಕಾರರು ದೇವಾಲಯಕ್ಕೆ ದೊಡ್ಡ ಮಟ್ಟದ ಕೊಡುಗೆಗಳನ್ನು ನೀಡಿದ್ದಾರೆ. ಅವರು ದಶಕಗಳಿಂದ ಬಂಕೆ ಬಿಹಾರಿಯ ಉಡುಪುಗಳನ್ನು ನೇಯ್ಗೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರಲ್ಲಿ ಹಲವರು ಬಂಕೆ ಬಿಹಾರಿಯ ದೇವರಲ್ಲಿ ಬಲವಾದ ನಂಬಿಕೆಯನ್ನು ಹೊಂದಿದ್ದಾರೆ ಮತ್ತು ದೇವಾಲಯಕ್ಕೂ ಭೇಟಿ ನೀಡುತ್ತಾರೆ” ಎಂದಿದ್ದಾರೆ. ಈ ಮೂಲಕ ಹಿಂದುತ್ವ ಸಂಘಟನೆಯ ಕೋಮು ದ್ರುವೀಕರಣವನ್ನು ವಿರೋಧಿಸಿದ್ದಾರೆ.

“ವೃಂದಾವನದಲ್ಲಿ ದೇವರಿಗೆ ಕೆಲವು ಕಿರೀಟಗಳು ಮತ್ತು ಬಳೆಗಳನ್ನು ಅವರೇ (ಮುಸ್ಲಿಮರು) ತಯಾರಿಸುತ್ತಾರೆ” ಎಂದು ಸುದ್ದಿ ಸಂಸ್ಥೆ ಟೈಮ್ಸ್‌ ಆಫ್ ಇಂಡಿಯಾ ಜೊತೆ ಮಾತನಾಡುವಾಗ ಗೋಸ್ವಾಮಿ ಹೇಳಿದ್ದಾರೆ. ಇದಕ್ಕೆ ಅಲ್ಲಿನ ಹೆಚ್ಚಿನ ಪುರೋಹಿತರು ಮತ್ತು ಸ್ಥಳೀಯರು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ವಿಚಾರದಲ್ಲಿ ನಾವು ಸಂಪೂರ್ಣವಾಗಿ ಸರ್ಕಾರದ ಜೊತೆಗಿದ್ದೇವೆ. ಆದರೆ ವೃಂದಾವನದಲ್ಲಿ, ಹಿಂದೂಗಳು ಮತ್ತು ಮುಸ್ಲಿಮರು ಶಾಂತಿ ಮತ್ತು ಸೌಹಾರ್ದತೆಯಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಗೋಸ್ವಾಮಿ ತಿಳಿಸಿದ್ದಾರೆ.

ಹಿಂದುತ್ವ ಗುಂಪಿನವರು ನನ್ನ ವ್ಯಾಪಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಅಂಗಡಿ ಮುಂದೆ ನನ್ನ ಹೆಸರು ಹಾಕುವಂತೆ ಹೇಳಿದ್ದಾರೆ. ಅವರು ಹೇಳಿದಂತೆ ಕೇಳದಿದ್ದರೆ ಇಲ್ಲಿ ವ್ಯಾಪಾರ ನಡೆಸದಂತೆ ಬೆದರಿಕೆ ಹಾಕಿದ್ದಾರೆ. ಅರ್ಚಕರ ಹೇಳಿಕೆಯಿಂದ ನಮಗೆ ಆಶ್ವಾಸನೆ ಮೂಡಿದೆ. ನಾನು 20 ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಅಂಗಡಿ ನಡೆಸುತ್ತಿದ್ದೇನೆ. ನನ್ನ ತಂದೆ ಇಲ್ಲಿಯೇ ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಹಕರು ಇಲ್ಲಿಂದ ವಸ್ತುಗಳನ್ನು ಖರೀದಿಸಿದಾಗಲೆಲ್ಲಾ, ನಾನು ಸಾಮಾನ್ಯವಾಗಿ ಅವರಿಗೆ ನನ್ನ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಮುದ್ರಿಸಿದ ಬಿಲ್ ರಶೀದಿಯನ್ನು ನೀಡುತ್ತೇನೆ. ನಮ್ಮಲ್ಲಿ ಮರೆಮಾಚಲು ಏನೂ ಇಲ್ಲ,” ಎಂದು ಬಂಕೆ ಬಿಹಾರಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿ, ‘ಸ್ಟಾರ್ ಮುಕುತ್’ ಎಂಬ ಹೆಸರಿನಲ್ಲಿ ಅಂಗಡಿ ನಡೆಸುತ್ತಿರುವ ಜಾವೇದ್ ಅಲಿ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅಲಿ ಅವರ ಅಂಗಡಿಯ ಪಕ್ಕದಲ್ಲೇ ಅಂಗಡಿ ಹೊಂದಿರುವ ನಿಖಿಲ್ ಅಗರ್ವಾಲ್ ಎಂಬವರು ಮಾತನಾಡಿ, ಹಲವು ವರ್ಷಗಳಿಂದ ನಮಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ನಾವು ಪರಸ್ಪರ ಒಬ್ಬರಿಗೊಬ್ಬರು ಸಹಕಾರ ಮಾಡುತ್ತಾ ವ್ಯಾಪಾರ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಪೊಲೀಸರು ಇನ್ನೂ ಔಪಚಾರಿಕ ದೂರು ಸ್ವೀಕರಿಸಿಲ್ಲ ಎಂದು ವರದಿಯಾಗಿದೆ.

ಆಕಸ್ಮಿಕವಾಗಿ ಮಹಿಳೆಯನ್ನು ಸ್ಪರ್ಶಿಸಿದ ಮುಸ್ಲಿಂ ಬಾಲಕನ ಮೇಲೆ ಅಮಾನವೀಯ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...