Homeಮುಖಪುಟಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ನೆಪವಾಗಿಟ್ಟುಕೊಂಡು ಮುಸ್ಲಿಮರನ್ನು ಬಹಿಷ್ಕರಿಸಬೇಕು ಎಂದು ಬಲಪಂಥೀಯ ಗುಂಪುಗಳು ನೀಡಿದ್ದ ಕರೆಯನ್ನು ಭಾರತದಲ್ಲಿ ಅತಿ ಹೆಚ್ಚು ಜನರು ಭೇಟಿ ನೀಡುವ ಯಾತ್ರಾ ಸ್ಥಳಗಳಲ್ಲಿ ಒಂದಾದ ಉತ್ತರ ಪ್ರದೇಶದ ವೃಂದಾವನದ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯ ತಿರಸ್ಕರಿಸಿದೆ.

ಮಥುರಾ ಮತ್ತು ವೃಂದಾನವನದಲ್ಲಿ ಪ್ರತಿಭಟಿಸಿದ್ದ ಹಿಂದುತ್ವ ಗುಂಪು, ಮುಸ್ಲಿಮರೊಂದಿಗೆ ವ್ಯಾಪಾರ ನಡೆಸದಂತೆ ಹಿಂದೂಗಳನ್ನು ಒತ್ತಾಯಿಸಿತ್ತು. ಮುಸ್ಲಿಂ ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳ ಮೇಲೆ ಮಾಲೀಕರ ಹೆಸರು ಬರೆಯುವಂತೆ ಬೆದರಿಗೆ ಹಾಕಿತ್ತು.

ಬಂಕೆ ಬಿಹಾರಿ ದೇವಾಲಯಕ್ಕೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳಿಂದ ಮುಸ್ಲಿಮರನ್ನು ಬೇರ್ಪಡಿಸುತ್ತೇವೆ. ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿಗಳ ಮುಂದೆ ಮಾಲೀಕರ ಹೆಸರು ಹಾಕುವಂತೆ ಸೂಚಿಸಲಾಗಿದೆ. ಹಿಂದೂಗಳ ಅವರೊಂದಿಗೆ ವ್ಯಾಪಾರ ಮಾಡದಂತೆ ಮತ್ತು ತಮ್ಮ ವ್ಯವಹಾರಗಳಲ್ಲಿ ಅವರನ್ನು ನೇಮಿಸಿಕೊಳ್ಳದಂತೆ ಮನವಿ ಮಾಡಿದ್ದೇವೆ ಎಂದು ಕಾಶಿ ವಿದ್ವತ್ ಪರಿಷತ್ ಸಂಘಟನೆಯ ಸದಸ್ಯ ನಾಗೇಂದ್ರ ಮಹಾರಾಜ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಂಕೆ ಬಿಹಾರಿ ದೇವಾಲಯದ ಅರ್ಚಕ ಹಾಗೂ ಆಡಳಿತ ಮಂಡಳಿ ಸದಸ್ಯ, ಜ್ಞಾನೇಂದ್ರ ಕಿಶೋರ್ ಗೋಸ್ವಾಮಿ ಅವರು, “ಇದು ಸಾಧ್ಯವಿಲ್ಲ. ಮುಸ್ಲಿಮರು, ವಿಶೇಷವಾಗಿ ಮುಸ್ಲಿಂ ಕುಶಲಕರ್ಮಿಗಳು ಮತ್ತು ನೇಕಾರರು ದೇವಾಲಯಕ್ಕೆ ದೊಡ್ಡ ಮಟ್ಟದ ಕೊಡುಗೆಗಳನ್ನು ನೀಡಿದ್ದಾರೆ. ಅವರು ದಶಕಗಳಿಂದ ಬಂಕೆ ಬಿಹಾರಿಯ ಉಡುಪುಗಳನ್ನು ನೇಯ್ಗೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರಲ್ಲಿ ಹಲವರು ಬಂಕೆ ಬಿಹಾರಿಯ ದೇವರಲ್ಲಿ ಬಲವಾದ ನಂಬಿಕೆಯನ್ನು ಹೊಂದಿದ್ದಾರೆ ಮತ್ತು ದೇವಾಲಯಕ್ಕೂ ಭೇಟಿ ನೀಡುತ್ತಾರೆ” ಎಂದಿದ್ದಾರೆ. ಈ ಮೂಲಕ ಹಿಂದುತ್ವ ಸಂಘಟನೆಯ ಕೋಮು ದ್ರುವೀಕರಣವನ್ನು ವಿರೋಧಿಸಿದ್ದಾರೆ.

“ವೃಂದಾವನದಲ್ಲಿ ದೇವರಿಗೆ ಕೆಲವು ಕಿರೀಟಗಳು ಮತ್ತು ಬಳೆಗಳನ್ನು ಅವರೇ (ಮುಸ್ಲಿಮರು) ತಯಾರಿಸುತ್ತಾರೆ” ಎಂದು ಸುದ್ದಿ ಸಂಸ್ಥೆ ಟೈಮ್ಸ್‌ ಆಫ್ ಇಂಡಿಯಾ ಜೊತೆ ಮಾತನಾಡುವಾಗ ಗೋಸ್ವಾಮಿ ಹೇಳಿದ್ದಾರೆ. ಇದಕ್ಕೆ ಅಲ್ಲಿನ ಹೆಚ್ಚಿನ ಪುರೋಹಿತರು ಮತ್ತು ಸ್ಥಳೀಯರು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ವಿಚಾರದಲ್ಲಿ ನಾವು ಸಂಪೂರ್ಣವಾಗಿ ಸರ್ಕಾರದ ಜೊತೆಗಿದ್ದೇವೆ. ಆದರೆ ವೃಂದಾವನದಲ್ಲಿ, ಹಿಂದೂಗಳು ಮತ್ತು ಮುಸ್ಲಿಮರು ಶಾಂತಿ ಮತ್ತು ಸೌಹಾರ್ದತೆಯಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಗೋಸ್ವಾಮಿ ತಿಳಿಸಿದ್ದಾರೆ.

ಹಿಂದುತ್ವ ಗುಂಪಿನವರು ನನ್ನ ವ್ಯಾಪಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಅಂಗಡಿ ಮುಂದೆ ನನ್ನ ಹೆಸರು ಹಾಕುವಂತೆ ಹೇಳಿದ್ದಾರೆ. ಅವರು ಹೇಳಿದಂತೆ ಕೇಳದಿದ್ದರೆ ಇಲ್ಲಿ ವ್ಯಾಪಾರ ನಡೆಸದಂತೆ ಬೆದರಿಕೆ ಹಾಕಿದ್ದಾರೆ. ಅರ್ಚಕರ ಹೇಳಿಕೆಯಿಂದ ನಮಗೆ ಆಶ್ವಾಸನೆ ಮೂಡಿದೆ. ನಾನು 20 ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಅಂಗಡಿ ನಡೆಸುತ್ತಿದ್ದೇನೆ. ನನ್ನ ತಂದೆ ಇಲ್ಲಿಯೇ ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಹಕರು ಇಲ್ಲಿಂದ ವಸ್ತುಗಳನ್ನು ಖರೀದಿಸಿದಾಗಲೆಲ್ಲಾ, ನಾನು ಸಾಮಾನ್ಯವಾಗಿ ಅವರಿಗೆ ನನ್ನ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಮುದ್ರಿಸಿದ ಬಿಲ್ ರಶೀದಿಯನ್ನು ನೀಡುತ್ತೇನೆ. ನಮ್ಮಲ್ಲಿ ಮರೆಮಾಚಲು ಏನೂ ಇಲ್ಲ,” ಎಂದು ಬಂಕೆ ಬಿಹಾರಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿ, ‘ಸ್ಟಾರ್ ಮುಕುತ್’ ಎಂಬ ಹೆಸರಿನಲ್ಲಿ ಅಂಗಡಿ ನಡೆಸುತ್ತಿರುವ ಜಾವೇದ್ ಅಲಿ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅಲಿ ಅವರ ಅಂಗಡಿಯ ಪಕ್ಕದಲ್ಲೇ ಅಂಗಡಿ ಹೊಂದಿರುವ ನಿಖಿಲ್ ಅಗರ್ವಾಲ್ ಎಂಬವರು ಮಾತನಾಡಿ, ಹಲವು ವರ್ಷಗಳಿಂದ ನಮಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ನಾವು ಪರಸ್ಪರ ಒಬ್ಬರಿಗೊಬ್ಬರು ಸಹಕಾರ ಮಾಡುತ್ತಾ ವ್ಯಾಪಾರ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಪೊಲೀಸರು ಇನ್ನೂ ಔಪಚಾರಿಕ ದೂರು ಸ್ವೀಕರಿಸಿಲ್ಲ ಎಂದು ವರದಿಯಾಗಿದೆ.

ಆಕಸ್ಮಿಕವಾಗಿ ಮಹಿಳೆಯನ್ನು ಸ್ಪರ್ಶಿಸಿದ ಮುಸ್ಲಿಂ ಬಾಲಕನ ಮೇಲೆ ಅಮಾನವೀಯ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...