Homeಅಂತರಾಷ್ಟ್ರೀಯಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

ಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

- Advertisement -
- Advertisement -

ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಂಗ್ಲಾದೇಶದ ಇಸ್ಕಾನ್‌ನ ಮಾಜಿ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಅಲ್ಲಿನ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ ಎಂದು ದಿ ಡೈಲಿ ಸ್ಟಾರ್ ವರದಿ ಮಾಡಿದೆ. ದೇಶದ ಸುಪ್ರೀಂಕೋರ್ಟ್ ಹೈಕೋರ್ಟ್‌ನ ಜಾಮೀನು ಆದೇಶವನ್ನು ತಡೆಹಿಡಿಯದ ಹೊರತು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಅವರ ವಕೀಲರು ಳಿಸಿದ್ದಾರೆ. ಬಾಂಗ್ಲಾದೇಶ

ಚಿನ್ಮಯ್ ದಾಸ್ ಅವರು ನವೆಂಬರ್ 25 ರಿಂದ ಜೈಲಿನಲ್ಲಿದ್ದಾರೆ. ಅವರು ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಹಕ್ಕುಗಳನ್ನು ಪ್ರತಿಪಾದಿಸುವ ಸಂಘಟನೆಯಾದ ಸಮ್ಮಿಲಿಟೊ ಸನಾತನಿ ಜಾಗರೋನ್ ಜೋಟ್‌ನ ವಕ್ತಾರರಾಗಿದ್ದಾರೆ.

ಅಕ್ಟೋಬರ್ 25 ರಂದು ಚಿತ್ತಗಾಂಗ್‌ನಲ್ಲಿ ನಡೆದ ರ್ಯಾಲಿಯಲ್ಲಿ ಬಾಂಗ್ಲಾದೇಶದ ರಾಷ್ಟ್ರಧ್ವಜವನ್ನು ಅಗೌರವಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

ನವೆಂಬರ್‌ನಲ್ಲಿ ದಾಸ್ ಬಂಧನದ ನಂತರ, ಭಾರತದ ವಿದೇಶಾಂಗ ಸಚಿವಾಲಯವು ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿಗಳ ಬಗ್ಗೆ ತನ್ನ ಕಳವಳವನ್ನು ಪುನರುಚ್ಚರಿಸಿತ್ತು ಮತ್ತು ಚಿನ್ಮಯ್ ದಾಸ್ ಅವರಿಗೆ “ನ್ಯಾಯಯುತ ಮತ್ತು ಪಾರದರ್ಶಕ” ವಿಚಾರಣೆಗೆ ಕರೆ ನೀಡಿತ್ತು.

“ಈ ವಿಷಯದ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ – ಮಧ್ಯಂತರ ಸರ್ಕಾರವು ಎಲ್ಲಾ ಅಲ್ಪಸಂಖ್ಯಾತರನ್ನು ರಕ್ಷಿಸುವ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು. ಉಗ್ರಗಾಮಿ ಹೇಳಿಕೆ, ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಪ್ರಚೋದನೆಯ ಘಟನೆಗಳ ಬಗ್ಗೆ ನಾವು ಕಳವಳಗೊಂಡಿದ್ದೇವೆ… ಇಸ್ಕಾನ್ ಸಾಮಾಜಿಕ ಸೇವೆಯ ದಾಖಲೆಯನ್ನು ಹೊಂದಿರುವ ಜಾಗತಿಕವಾಗಿ ಪ್ರಸಿದ್ಧ ಸಂಸ್ಥೆಯಾಗಿದೆ.” ಎಂದು ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯವು, ಚಿನ್ಮಯ್ ದಾಸ್ ಬಂಧನದ ಸುತ್ತಲಿನ ಬೆಳವಣಿಗೆಗಳು ತಮ್ಮ ದೇಶದ “ಆಂತರಿಕ ವ್ಯವಹಾರಗಳಾಗಿವೆ” ಎಂದು ಹೇಳಿತ್ತು.

“ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಅವರ ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಒಳಗೊಂಡಂತೆ ಅವರ ಹಕ್ಕನ್ನು ರಕ್ಷಿಸಬೇಕು” ಎಂಬ ಭಾರತದ ಹೇಳಿಕೆಯನ್ನು ಅದು ತಿರಸ್ಕರಿಸಿತ್ತು.

ಈ ನಡುವೆ, ಚಿನ್ಮಯ್ ದಾಸ್ ಅವರು ಇನ್ನು ಮುಂದೆ ನಮ್ಮ ಗುಂಪಿನೊಂದಿಗೆ ಸಂಬಂಧ ಹೊಂದಿಲ್ಲ ಎಂದು ಇಸ್ಕಾನ್ ಹೇಳಿತ್ತು. ಅದಾಗ್ಯೂ, ಹಿಂದೂಗಳು ಮತ್ತು ಅವರ ಪೂಜಾ ಸ್ಥಳಗಳನ್ನು ರಕ್ಷಿಸಲು ಶಾಂತಿಯುತ ಪ್ರತಿಭಟನೆಗೆ ಕರೆ ನೀಡುವ ಅವರ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕೆ ತಮ್ಮ ಬೆಂಬಲವಿದೆ ಎಂದು ಅದು ಒತ್ತಿ ಹೇಳಿತ್ತು.

ಜನವರಿ 2 ರಂದು ಬಾಂಗ್ಲಾದೇಶದ ನ್ಯಾಯಾಲಯವು ಚಿನ್ಮಯ್ ದಾಸ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನವೆಂಬರ್ 29 ರಂದು, ಬಾಂಗ್ಲಾದೇಶ ಪೊಲೀಸರು ಇಬ್ಬರು ಹಿಂದೂ ಸನ್ಯಾಸಿಗಳನ್ನು ಬಂಧಿಸಿ ಜೈಲಿನಲ್ಲಿದ್ದ ಚಿನ್ಮಯ್ ದಾಸ್‌ ಅವರಿಗೆ ಔಷಧಿಗಳನ್ನು ತಲುಪಿಸಿದ್ದರು. ಇದರ ನಂತರ ಅವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿದೆ.

ಆಗಸ್ಟ್‌ನಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ, ಬಾಂಗ್ಲಾದೇಶದ ಹಲವಾರು ಭಾಗಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರದ ಘಟನೆಗಳು ನಡೆದಿವೆ ಎಂದು ವರದಿಯಾಗಿವೆ.

ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ನಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರನ್ನು ಒತ್ತಾಯಿಸಿದ್ದರು. ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದಾಳಿಯ ವರದಿಗಳು ಉತ್ಪ್ರೇಕ್ಷಿತ ಎಂದು ಯೂನಸ್ ಆ ಸಮಯದಲ್ಲಿ ಹೇಳಿಕೊಂಡಿದ್ದರು. ಬಾಂಗ್ಲಾದೇಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...