Homeಕರ್ನಾಟಕಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಸೈಬರ್ ಅಪರಾಧ ದ್ವಿಗುಣ

ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಸೈಬರ್ ಅಪರಾಧ ದ್ವಿಗುಣ

- Advertisement -
- Advertisement -

ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಸುಮಾರು ಎರಡು ಪಟ್ಟು ಹೆಚ್ಚಾಗಿ ದ್ವಿಗುಣಗೊಂಡಿದೆ ಎಂದು ವರದಿಯಾಗಿದೆ. 2022 ರಲ್ಲಿ, ಗ್ರಾಮೀಣ ಪ್ರದೇಶಗಳಿಂದ ಒಟ್ಟು 880 ಪ್ರಕರಣಗಳು ವರದಿಯಾಗಿದ್ದು, 2024 ರ ವೇಳೆಗೆ ಇಂತಹ ಪ್ರಕರಣಗಳ ಸಂಖ್ಯೆ 1,600 ಕ್ಕೆ ಏರಿಕೆಯಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಬುಡಕಟ್ಟು ಪ್ರದೇಶಗಳಲ್ಲಿ 2024 ರಲ್ಲಿ 12 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿವೆ, 2023 ರಲ್ಲಿ ಒಂದೇ ಪ್ರಕರಣ ದಾಖಲಾಗಿತ್ತು ಮತ್ತು 2022 ರಲ್ಲಿ ಯಾವುದೇ ಪ್ರಕರಣವಿರಲಿಲ್ಲ ಎಂದು ವರದಿಯಾಗಿದೆ.

ಸೈಬರ್ ಅಪರಾಧಗಳ ಹೆಚ್ಚಳಕ್ಕೆ ಡಿಜಿಟಲ್ ಮಾಧ್ಯಮ ಬಳಕೆಯ ಹೆಚ್ಚಳ ಕಾರಣವೆಂದು ತಜ್ಞರು ಹೇಳಿದ್ದಾರೆ. “ಇಂಟರ್ನೆಟ್ ಸಂಪರ್ಕ ಇರುವಲ್ಲೆಲ್ಲಾ, ಸೈಬರ್ ಅಪರಾಧಗಳಿಗೆ ಸಂಭಾವ್ಯತೆ ಇರುತ್ತದೆ” ಎಂದು ಅಪರಾಧ ತನಿಖಾ ಇಲಾಖೆ (ಸಿಐಡಿ) ಡಿಜಿಪಿ ಎಂ ಎ ಸಲೀಮ್ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಡಿಜಿಟಲ್ ಸೊಸೈಟಿ ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷ ಎನ್.ಎ. ವಿಜಯ್ ಶಂಕರ್ ಮಾತನಾಡಿ, ಸೈಬರ್ ಅಪರಾಧಿಗಳು ಹೆಚ್ಚಾಗಿ ತಮ್ಮ ಬಲಿಪಶುಗಳನ್ನು ಯಾದೃಚ್ಛಿಕವಾಗಿ ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

“ಅವರು ಯಾದೃಚ್ಛಿಕವಾಗಿ ಸಂಖ್ಯೆಗಳಿಗೆ ಕರೆ ಮಾಡುತ್ತಾರೆ ಮತ್ತು ಯಾರು ಪ್ರತಿಕ್ರಿಯಿಸುತ್ತಾರೋ ಅವರು ಬಲಿಯಾಗುತ್ತಾರೆ. ಆದ್ದರಿಂದ, ಡಿಜಿಟಲ್ ಮಾಧ್ಯಮದ ಬಳಕೆಯು ಹೆಚ್ಚಿದ ಕಾರಣಕ್ಕೆ ಪ್ರಕರಣಗಳ ಹೆಚ್ಚಳವಾಗಿದೆ” ಎಂದು ಅವರು ಹೇಳಿದ್ದಾರೆ.

ಜೊತೆಗೆ ಜಾಗೃತಿ ಹೆಚ್ಚಳ ಮತ್ತು ದೂರುಗಳನ್ನು ದಾಖಲಿಸುವುದು ಸರಳವಾದ್ದರಿಂದ ವರದಿಯಾಗುವ ಪ್ರಕರಣಗಳ ಸಂಖ್ಯೆ ಕೂಡಾ ಇದರ ಹೆಚ್ಚಳಕ್ಕೆ ಕಾರಣವಾಗಿರಬಹುದು ಎಂದು ಅವರು ಹೇಳಿದ್ದಾರೆ.

“ಈಗ, ಬಲಿಪಶುಗಳು ನೇರವಾಗಿ 1930 ಗೆ ಕರೆ ಮಾಡಬಹುದು ಅಥವಾ ಆನ್‌ಲೈನ್‌ನಲ್ಲಿ ದೂರು ನೀಡಬಹುದು. ಈಗ ಇದು ಮೊದಲಿನಂತೆ ಕಷ್ಟಕರವಲ್ಲ. ಆದ್ದರಿಂದ, ಇವುಗಳ ಕಾರಣಕ್ಕೆ ಕೂಡಾ ದೂರುಗಳ ಸಂಖ್ಯೆ ಹೆಚ್ಚಾಗಿರಬಹುದು” ಎಂದು ಶಂಕರ್ ಹೇಳಿದ್ದಾರೆ.

ಅರೆಕಾಲಿಕ ಉದ್ಯೋಗ ವಂಚನೆಗಳು, ಮಾರ್ಫ್ ಮಾಡಿದ ಚಿತ್ರಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡುವುದು ಮತ್ತು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುವ ನೆಪದಲ್ಲಿ ಮೋಸ ಮಾಡುವಂತಹ ಸೈಬರ್ ಅಪರಾಧಗಳು ಗ್ರಾಮೀಣ ಪ್ರದೇಶಗಳಲ್ಲಿ ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ವಾಸ್ತವವಾಗಿ, ದೂರುಗಳ ಸ್ವರೂಪವು ನಗರ ಪ್ರದೇಶಗಳಲ್ಲಿರುವ ದೂರುಗಳಂತೆಯೇ ಇರುತ್ತದೆ. ಹೂಡಿಕೆ ಹಗರಣಗಳು, ಅರೆಕಾಲಿಕ ಉದ್ಯೋಗ ಹಗರಣಗಳು ಮತ್ತು ನಗರ ಪ್ರದೇಶಗಳಲ್ಲಿರುವ ದೂರುಗಳಿಗೆ ಹೋಲುವ ವಿಷಯಗಳು ಇವುಗಳಲ್ಲಿ ಇರುತ್ತವೆ” ಎಂದು ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಶಂಕರ್ ಗುಲೇದ್ ಹೇಳಿದ್ದಾರೆ.

ಇತ್ತೀಚೆಗಷ್ಟೆ, ಬೆಳಗಾವಿಯ ಖಾನಾಪುರದಲ್ಲಿ ವೃದ್ಧ ದಂಪತಿಗಳು ಡಿಜಿಟಲ್ ಬಂಧನಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಾರ್ಚ್ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಈ ದತ್ತಾಂಶವನ್ನು ಮಂಡಿಸಲಾಗಿದೆ. ಜೊತೆಗೆ ಗೃಹ ಇಲಾಖೆಯು ತನ್ನ ಲಿಖಿತ ಉತ್ತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲು ಹಲವಾರು ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದೆ.

ಶಾಲಾ ಮತ್ತು ಕಾಲೇಜುಗಳಲ್ಲಿ ಜಾಗೃತಿ ಶಿಬಿರಗಳಿಂದ ಹಿಡಿದು ಅಂತಹ ಅಪರಾಧಗಳ ಬಗ್ಗೆ ಮಾಹಿತಿಯೊಂದಿಗೆ ಕರಪತ್ರಗಳ ಹಂಚುವಿಕೆ ಸೇರಿದಂತೆ ಹಲವು ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಇಲಾಖೆ ತನ್ನ ಉತ್ತರದಲ್ಲಿ ಉಲ್ಲೇಖಿಸಿದೆ. ಕಳೆದ ಎರಡು ವರ್ಷಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...