Homeಮುಖಪುಟಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ಕೇಂದ್ರ ಸರ್ಕಾರದ ಜಾತಿಗಣತಿ ತೀರ್ಮಾನ ನಂತರ ಯೂಟರ್ನ್ ಹೊಡೆದ ಬಿಜೆಪಿ, ಮೈತ್ರಿ ಪಕ್ಷಗಳ ನಾಯಕರಿವರು!

- Advertisement -
- Advertisement -

ಮುಂದಿನ ಜನಗಣತಿಯ ಜೊತೆಗೆ ಜಾತಿ ಗಣತಿ ಕೂಡಾ ನಡೆಸುವುದಾಗಿ ಕೇಂದ್ರ ಸರ್ಕಾರವು ಏಪ್ರಿಲ್ 30ರ ಬುಧವಾರ ಘೋಷಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಂಪುಟದ ರಾಜಕೀಯ ವಿಷಯಗಳ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಈ ಘೋಷಣೆಯು ದೇಶಾದ್ಯಂತ ರಾಜಕೀಯ, ಸಾಮಾಜಿಕ ಮತ್ತು ಆಡಳಿತಾತ್ಮಕ ಚರ್ಚೆಗಳಿಗೆ ನಾಂದಿ ಹಾಡಿದೆ. ಬಿಜೆಪಿ ಯೂಟರ್ನ್‌

ಜಾತಿ ಗಣತಿಯು ಚುನಾವಣೆಯ ಪ್ರಮುಖ ವಿಷಯವಾಗಿ ವಿಪಕ್ಷಗಳು ಪ್ರಚಾರ ಮಾಡುತ್ತಿದ್ದಾಗ ಬಿಜೆಪಿ ಅದಕ್ಕೆ ತದ್ವಿರುದ್ಧವಾಗಿ ತೀವ್ರ ವಿರೋಧ ಮಾಡಿ ಪ್ರಚಾರ ಕೈಗೊಂಡಿತ್ತು. ಅದರ ನಾಯಕರು ಈ ಹಿಂದಿನಿಂದಲೂ ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಲೆ ಬಂದಿದ್ದಾರೆ. ಆದರೆ, ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡ ನಂತರ ಇಡೀ ಬಿಜೆಪಿ, ಅದರ ಮಿತ್ರ ಪಕ್ಷಗಳು, ಸಂಘಪರಿವಾರ ಮತ್ತು ಅದರ ಬೆಂಬಲಿಗರು ಸಂಪೂರ್ಣವಾಗಿ ಯೂಟರ್ನ್ ಮಾಡಿದ್ದಾರೆ. ಈ ಹಿಂದೆ ಜಾತಿಗಣತಿಯ್ನು ವಿರೋಧ ಮಾಡಿದ್ದ ಪ್ರಮುಖ ವ್ಯಕ್ತಿಗಳ ಪಟ್ಟಿ ಕೆಳಗಿದೆ.

ಜಾತಿ ಗಣತಿ ವಿರೋಧ ಮಾಡಿದ್ದ ಪ್ರಮುಖ ನಾಯಕರು

  • ಪ್ರಧಾನಿ ನರೇಂದ್ರ ಮೋದಿ

2023 ರಲ್ಲಿ ಮಾತನಾಡಿದ್ದ ಮೋದಿ ಜಾತಿ ಗಣತಿಯನ್ನು “ಜಾತಿಯ ಆಧಾರದಲ್ಲಿ ದೇಶವನ್ನು ಒಡೆಯುವ ಪಾಪಕೃತ್ಯ” ಎಂದು ಟೀಕಿಸಿದ್ದರು. ಜಾತಿ ಗಣತಿ ಒಂದು ”ಮಾವೋವಾದಿ ಚಿಂತನೆ” ಎಂದು ಅವರು ಹೇಳಿದ್ದು, ವಿರೋಧ ಪಕ್ಷಗಳು “ನಗರ ನಕ್ಸಲ್” ಚಿಂತನೆಯ ಭಾಗವಾಗಿ ಇದನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದರು.ಇಂತಹ ಹೇಳಿಕೆ ನೀಡಿದ್ದ ಪ್ರಧಾನಿ ಮೋದಿ ಅವರ ಸರ್ಕಾರವೇ ಜಾತಿ ಗಣತಿಯನ್ನು ಮುಂದಿನ ಜನಗಣತಿಯ ಜೊತೆಗೆ ನಡೆಸಲು ನಿರ್ಧರಿಸಿದೆ.

  • ಗೃಹ ಸಚಿವ ಅಮಿತ್ ಶಾ

ಜಾತಿ ಗಣತಿಯನ್ನು ಒಂದು ಸಂಕೀರ್ಣ ವಿಷಯವೆಂದು ಪರಿಗಣಿಸಿದ್ದ ಅಮಿತ್ ಶಾ ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಲು ವಿರೋಧಿಸಿತು. 2021 ರಲ್ಲಿ, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಜಾತಿ ಗಣತಿಯನ್ನು ವಿರೋಧಿಸಿತು, ಇದು “ರಾಜಕೀಯ ಪ್ರೇರಿತ ಫಲಿತಾಂಶಗಳಿಗೆ” ಕಾರಣವಾಗಲಿದೆ ಎಂದು ಹೇಳಿತ್ತು.

ಅಕ್ಟೋಬರ್ 2, 2023ರಂದು ಬಿಹಾರದ ಜಾತಿ ಸಮೀಕ್ಷೆಯ ಫಲಿತಾಂಶ ಬಿಡುಗಡೆಯಾದಾಗ ಪ್ರತಿಕ್ರಿಯಿಸಿದ್ದ ಅಮಿತ್ ಶಾ, ಅದನ್ನು “ತಪ್ಪು ರಾಜಕಾರಣ” ಎಂದು ಕರೆದಿದ್ದರು. “ಯಾದವ್ ಮತ್ತು ಮುಸ್ಲಿಂ ಸಮುದಾಯಗಳ ಜನಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚಿಸಲಾಗಿದೆ” ಎಂದು ಆರೋಪಿಸಿದ್ದ ಅವರು ಇದು ನೀತಿಶ್ ಕುಮಾರ್ ಸರ್ಕಾರದ “ಅಪಾಯಕಾರಿ ರಾಜಕಾರಣ” ಎಂದು ಟೀಕಿಸಿದ್ದರು.

ಅದಗ್ಯೂ, ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಹೇಳಿಕೆಯಿಂದ ಸಂಪೂರ್ಣವಾಗಿ ಯೂಟರ್ನ್ ಮಾಡಿದ್ದು, ಜಾತಿ ಗಣತಿಯನ್ನು ಮುಂದಿನ ಜನಗಣತಿಯಲ್ಲಿ ಸೇರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಏಪ್ರಿಲ್ 30, 2025ರಂದು “ಐತಿಹಾಸಿಕ” ಎಂದು ಕೊಂಡಾಡಿದ್ದಾರೆ.

“ಸಾಮಾಜಿಕ ನ್ಯಾಯಕ್ಕೆ ಬದ್ಧವಾದ ಮೋದಿ ಸರ್ಕಾರವು ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ CCPA (ಕ್ಯಾಬಿನೆಟ್ ಕಮಿಟಿ ಆನ್ ಪೊಲಿಟಿಕಲ್ ಅಫೇರ್ಸ್) ಸಭೆಯಲ್ಲಿ, ಮುಂದಿನ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸುವ ನಿರ್ಧಾರವು ಸಾಮಾಜಿಕ ಸಮಾನತೆ ಮತ್ತು ಪ್ರತಿಯೊಂದು ವರ್ಗದ ಹಕ್ಕುಗಳಿಗೆ ಬಲವಾದ ಸಂದೇಶವನ್ನು ನೀಡಿದೆ. ಈ ನಿರ್ಧಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಜಾತಿಗಳನ್ನು ಸಬಲೀಕರಣಗೊಳಿಸಲಿದೆ, ಒಗ್ಗಟ್ಟನ್ನು ಉತ್ತೇಜಿಸಲಿದೆ ಮತ್ತು ವಂಚಿತರ ಉನ್ನತಿಗೆ ಹೊಸ ಮಾರ್ಗಗಳನ್ನು ತೆರೆಯಲಿದೆ.” ಎಂದು ಅಮಿತ್ ಶಾ ಹೇಳಿದ್ದಾರೆ.

  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಏಪ್ರಿಲ್ 12, 2024ರಂದು ಮಧ್ಯಪ್ರದೇಶದ ಚಿಂದ್ವಾರಾದಲ್ಲಿ ನಡೆದ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ನಡ್ಡಾ, “ನಾವು ಜಾತಿ ಗಣತಿಯನ್ನು ವಿರೋಧಿಸುತ್ತಿಲ್ಲ, ಆದರೆ ಕಾಂಗ್ರೆಸ್ ಈ ವಿಷಯವನ್ನು ಜನರನ್ನು ಒಡೆಯಲು ಬಳಸುತ್ತಿದೆ. ಪ್ರಧಾನಿ ಮೋದಿಯವರು ರಾಜಕೀಯವನ್ನು ಜಾತಿ, ಧರ್ಮ, ಪ್ರದೇಶದ ಆಧಾರದಿಂದ ದೂರವಿಟ್ಟು ಅಭಿವೃದ್ಧಿಯ ಕಡೆಗೆ ಕೊಂಡೊಯ್ದಿದ್ದಾರೆ.” ಎಂದು ಹೇಳಿದ್ದರು.

ಏಪ್ರಿಲ್ 30, 2025ರಂದು ಜೆ.ಪಿ. ನಡ್ಡಾ ಅವರು ಜಾತಿಗಣತಿ ನಿರ್ಧಾರವನ್ನು “ಐತಿಹಾಸಿಕ” ಎಂದು ಕೊಂಡಾಡಿದ್ದಾರೆ. “ಈ ನಿರ್ಧಾರವು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಗಳನ್ನು ಮುಖ್ಯವಾಹಿನಿಗೆ ಕೊಂಡುಬರುವಲ್ಲಿ ಮತ್ತು ದೀರ್ಘಕಾಲದಿಂದ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ಘನತೆಯನ್ನು ಮರುಸ್ಥಾಪಿಸುವಲ್ಲಿ ಅತ್ಯಂತ ಮಹತ್ವದ್ದಾಗಿದೆ.” ಎಂದು ಹೇಳಿದ್ದಾರೆ.

  • ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿ ಯೂಟರ್ನ್‌

ಯೋಗಿ ಆದಿತ್ಯನಾಥ್ ಅವರು ಜಾತಿ ಗಣತಿಯನ್ನು ಈ ಹಿಂದೆ ವಿರೋಧಿಸಿದ್ದರು. “ಜಾತಿಗಣತಿ ಕೈಗೊಳ್ಳುವವರು ದೇಶವನ್ನು ಒಡೆಯಲು ಬಯಸುತ್ತಾರೆ” ಎಂದು ಅವರು ಹೇಳಿದ್ದರು. ಜಾತಿ ಗಣತಿಯು ಸಾಮಾಜಿಕ ಒಡಕು ಮತ್ತು ಅಶಾಂತಿಗೆ ಕಾರಣವಾಗಬಹುದು ಎಂಬ ಅವರು ಆತಂಕ ವ್ಯಕ್ತಪಡಿಸಿದ್ದರು.

ಅದಾಗ್ಯೂ, ಇದೀಗ ಆದಿತ್ಯನಾಥ್ ಅವರು ಜಾತಿಗಣತಿ ಬಗ್ಗೆಗಿನ ತಮ್ಮ ನಿಲುವನ್ನು ಸಂಪೂರ್ಣವಾಗಿ ಬದಲಾಯಿಸಿದ್ದು, ಕೇಂದ್ರ ಸರ್ಕಾರದ ಈ ನಿರ್ಧಾರವು “ಅಭೂತಪೂರ್ವ ನಿರ್ಧಾರ” ಎಂದು ಕರೆದಿದ್ದಾರೆ.

  • ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ತೇಜಸ್ವಿ ಸೂರ್ಯ ಅವರ ಜಾತಿ ಗಣತಿಯ ಬಗೆಗಿನ ನಿಲುವು ರಾಜಕೀಯ ಸನ್ನಿವೇಶಕ್ಕೆ ತಕ್ಕಂತೆ ಬದಲಾಗಿದೆ. 2024ರಲ್ಲಿ ಅವರು ಕಾಂಗ್ರೆಸ್‌ನ ಜಾತಿ ಗಣತಿಯ ಬೇಡಿಕೆಯನ್ನು ರಾಜಕೀಯ ತಂತ್ರವೆಂದು ಟೀಕಿಸಿದ್ದರು. ಆದರೆ, 2025ರಲ್ಲಿ, ಕೇಂದ್ರ ಸರ್ಕಾರದ ಜಾತಿ ಗಣತಿಯ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

2023ರ ಅಕ್ಟೋಬರ್ 31ರಂದು, “ಜಾತಿ ಆಧಾರಿತ ವಿಭಜನೆಗಳು ಸಮಾಜದ ಮೇಲೆ ಪ್ರತಿಕೂಲ ಪರಿಣಾಮ ಬೀರಿವೆ. ಹಿಂದೂ ಸುಧಾರಕರು ಅವುಗಳನ್ನು ಸ್ಪಷ್ಟವಾಗಿ ಖಂಡಿಸಿದ್ದಾರೆ. ಈ ಯುಗದಲ್ಲಿ, ಜಾತಿಯ ಆಧಾರದ ಮೇಲೆ ನಮ್ಮನ್ನು ನಾವು ವಿಭಜಿಸಿಕೊಳ್ಳುವ ಬದಲು ಒಂದಾಗುವುದು ನಮ್ಮ ಕರ್ತವ್ಯವಾಗಿದೆ.” ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಆದರೆ ಇದೀಗ ಅವರು ಸಂಪೂರ್ಣವಾಗಿ ಯೂಟರ್ನ್ ತೆಗೆದುಕೊಂಡಿದ್ದಾರೆ.

  • ಕೇಂದ್ರ ಬೃಹತ್ ಕೈಗಾಗರಿಕಾ ಸಚಿವ ಕುಮಾರಸ್ವಾಮಿ ಬಿಜೆಪಿ ಯೂಟರ್ನ್‌

ಕರ್ನಾಟಕದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜಾತಿ ಗಣತಿಯ ಬಗ್ಗೆ ತದ್ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಗೊಂದಲ ಮತ್ತು ಚರ್ಚೆಗೆ ಕಾರಣವಾಗಿದೆ. ಒಂದೆಡೆ, ಅವರು ಕರ್ನಾಟಕದ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ತೀವ್ರವಾಗಿ ವಿರೋಧಿಸಿದ್ದು, ಇದನ್ನು “ದ್ವೇಷದ ಗಣತಿ” ಎಂದು ಕರೆದು ರಾಜಕೀಯ ಷಡ್ಯಂತ್ರವೆಂದು ಆರೋಪಿಸಿದ್ದಾರೆ. ಮತ್ತೊಂದೆಡೆ, ಕೇಂದ್ರ ಸರ್ಕಾರದ ಜಾತಿ ಗಣತಿಯ ನಿರ್ಧಾರವನ್ನು “ಐತಿಹಾಸಿಕ ಮತ್ತು ದೂರದೃಷ್ಟಿಯ” ಕ್ರಮವೆಂದು ಶ್ಲಾಘಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಚಾರಣೆ ಹಂತದಲ್ಲಿ 1,700 ಕ್ಕೂ ಹೆಚ್ಚು ಹಣ ಅಕ್ರಮ ವರ್ಗಾವಣೆ ಪ್ರಕರಣಗಳು: ಇಡಿ

ವಿಚಾರಣೆ ಹಂತದಲ್ಲಿ 1,700 ಕ್ಕೂ ಹೆಚ್ಚು ಹಣ ಅಕ್ರಮ ವರ್ಗಾವಣೆ ಪ್ರಕರಣಗಳು: ಇಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...