HomeUncategorizedಮಿಲಿಟೆಂಟ್‌ ಸ್ಟುಡೆಂಟ್‌ ಲೀಡರ್‌ ’ಜಾರ್ಜ್ ರೆಡ್ಡಿ’ ಕುರಿತ ಸಿನಿಮಾ 'ಅಭಿಮಾನಿ'ಯೊಬ್ಬರ ಕಣ್ಣಲ್ಲಿ

ಮಿಲಿಟೆಂಟ್‌ ಸ್ಟುಡೆಂಟ್‌ ಲೀಡರ್‌ ’ಜಾರ್ಜ್ ರೆಡ್ಡಿ’ ಕುರಿತ ಸಿನಿಮಾ ‘ಅಭಿಮಾನಿ’ಯೊಬ್ಬರ ಕಣ್ಣಲ್ಲಿ

ವಿದ್ಯಾರ್ಥಿಗಳು ಕೇವಲ ತನ್ನ ಸಮಸ್ಯೆಗಳಿಗಾಗಿ ಮಾತ್ರವಲ್ಲದೆ ರೈತರು, ದಲಿತ ದಮನಿತರ ಕಷ್ಟಗಳಿಗೆ ಬೀದಿಗಿಳಿಯುವಂತೆ ಜಾರ್ಜ್ ರೆಡ್ಡಿ ಪ್ರೇರೇಪಿಸುತ್ತಾನೆ.

- Advertisement -
- Advertisement -

ಭಾರತ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಭಗತ್‌ಸಿಂಗ್‌ ಲಕ್ಷಾಂತರ ಜನರಿಗೆ ಸ್ಫೂರ್ತಿ. ಅವರನ್ನು ಆದರ್ಶವಾಗಿಟ್ಟುಕೊಂಡು ಹೋರಾಟಕ್ಕಿಳಿದವರು ಸಾವಿರಾರು ಜನ. ತನ್ನ ಸಹಪಾಠಿಗಳಿಗೆ ಅನ್ಯಾಯವನ್ನು ಅಸಮಾನತೆಯನ್ನು ಎದುರಿಸುವ ಧೈರ್ಯಕೊಟ್ಟು, ದಿಟ್ಟ ಹೋರಾಟ ಮುನ್ನಡೆಸಿದ ವಿದ್ಯಾರ್ಥಿ ಯುವಜನ ನಾಯಕ ಜಾರ್ಜ್ ರೆಡ್ಡಿ ಕೂಡ ಅಂಥವರಲ್ಲಿ ಒಬ್ಬರು.

ಇಂತಹ ಹೋರಾಟಗಾರನ ಜೀವನದ ಹಲವು ಘಟನೆಗಳ ಎಳೆಗಳನ್ನು ಇಟ್ಟುಕೊಂಡು ತೆಲುಗಿನಲ್ಲಿ ಜಾರ್ಜ್ ರೆಡ್ಡಿ ಸಿನೆಮಾ ನಿರ್ಮಾಣವಾಗಿದೆ. ಆದರೆ ಸಿನೆಮಾದಲ್ಲಿ ತೋರಿಸಿದ್ದಷ್ಟೇ ಜಾರ್ಜ್ ರೆಡ್ಡಿಯಲ್ಲ ಎಂದು ಸಿನೆಮಾ ನಿರ್ದೇಶಕರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಸಿನೆಮಾ ಕಮರ್ಷಿಯಲ್ ನೋಟದಲ್ಲಿ ಯಶಸ್ವಿಯಾಗಿ ಮಾಡಿಬಂದಿದೆ. ಈ ಸಿನೆಮಾ 60/70ರ ದಶಕದ ಕಾಲಕ್ಕೆ ವೀಕ್ಷಕರನ್ನು ಕರೆದುಕೊಂಡು ಹೋಗುವದರಲ್ಲಿ ಸಂದೇಹವೇ ಇಲ್ಲ.

ಜಾರ್ಜ್ ರೆಡ್ಡಿ ಜೀವನವನ್ನು ತಿಳಿಯಲು ಹೊರಟ ನಿರೂಪಕಿ ಜಾರ್ಜ್ ಜೊತೆ ಒಡನಾಟವಿದ್ದವರನ್ನು ಮಾತನಾಡಿಸುತ್ತ ಸಿನೆಮಾ ತೆರೆದುಕೊಳ್ಳುತ್ತದೆ. ಇನ್ನು ಸಿನೆಮಾದಲ್ಲಿ ಬರುವ ಸಂಭಾಷಣೆಗಳು ಕೂಡ ಸಿನೆಮಾವನ್ನು ಹತ್ತಿರವಾಗಿಸುತ್ತವೆ ಮತ್ತು ಪಾತ್ರಗಳನ್ನ ಮನಸ್ಸಿನಲ್ಲಿ ನಿಲ್ಲಿಸುತ್ತವೆ. ಆದರೆ ಜಾರ್ಜ್ ರೆಡ್ಡಿ ಮಾಡುವ ಫೈಟ್ಸ್ ತೆಲುಗು ಸಿನೆಮಾಗಳ ಫ್ಯಾಕ್ಷನ್ ಫೈಟ್‌ಗಳಂತೆಯೂ ತೋರುತ್ತವೆ. ಹಾಗಾಗಿ ಕೆಲವು ಕಡೆ ಜಾರ್ಜ್ ರೆಡ್ಡಿ ಕೂಡ ಒಬ್ಬ ರೌಡಿಯಂತೆ ಕಂಡರೂ ಸಹ ಅಚ್ಚರಿ ಇಲ್ಲ.

ಇಲ್ಲಿ ಜಾರ್ಜ್ ರೆಡ್ಡಿ (ಸಂದೀಪ್ ಮಾದವ್) ಜೊತೆ ಅವನ ಸ್ನೇಹಿತ ದೌರ್ಜನ್ಯವನ್ನು ಸಹಿಸದೆ ತಿರುಗಿ ಬೀಳುವ ರಾಜನ್ನನ (ಅಭಯ್) ಪಾತ್ರ ಮನಸ್ಸಿನಲ್ಲಿ ಉಳಿಯುತ್ತದೆ. ತೆಲುಗಿನ ಹೊಸ ಪೀಳಿಗೆಗೆ ಜಾರ್ಜ್ ರೆಡ್ಡಿಯನ್ನು ಪರಿಚಯಿಸುವ ಕೆಲಸವನ್ನು ಸಿನೆಮಾ ತಂಡ ಮಾಡಿದೆ. ಈ ಸಿನಿಮಾವನ್ನು ಜೀವನ್ ರೆಡ್ಡಿ ನಿರ್ದೇಶಿಸಿದ್ದು, ಸುರೇಶ್ ಬೊಬ್ಬಿಲಿಯವರ ಸಂಗೀತ, ಜೆ.ಪ್ರತಾಪ್ ಕುಮಾರ್ ಸಂಕಲನ, ಛಾಯಾಗ್ರಹಣ ಸೈರಾಟ್ ಸಿನೆಮಾದ ಯಾಕಂಟಿ ಮತ್ತು ಸುಧಾಕರ್ ರೆಡ್ಡಿ ಮಾಡಿದ್ದಾರೆ. ಈ ಸಿನೆಮಾವನ್ನು ಮಿಕ್ ಮೂವಿಸ್ ಕಂಪನಿ ನಿರ್ಮಾಣ ಮಾಡಿದೆ. ತಾರಾಗಣದಲ್ಲಿ ಸಂದೀಪ್ ಮಾದವ್ (ಜಾರ್ಜ್ ರೆಡ್ಡಿ), ಮುಸ್ಕುನ್ ಕುಬಚಂದಿನಿ(ಮಾಯ), ದೇವಿಕಾ( ಜಾರ್ಜ್ ತಾಯಿ), ಅಭಯ್ ಮುಖ್ಯ ಪಾತ್ರಗಳಲ್ಲಿ ಇದ್ದಾರೆ.

ಸಿನೆಮಾದ ಕಥೆ

ಸಂಘಪರಿವಾರ ಮತ್ತು ಬಿಜೆಪಿ ಪಕ್ಷದ ಕೂಸಾದ ಎಬಿವಿಪಿ (ಎಬಿಸಿಡಿ) ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ (ಎನ್.ಎಸ್.ಎಲ್) ತಮ್ಮ ಪ್ರಾಬಲ್ಯಕ್ಕಾಗಿ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಪ್ರಯತ್ನ ಮಾಡುತ್ತಿರುತ್ತವೆ. ಎಬಿವಿಪಿ ಸಂಘಟನೆ ತನ್ನ ಭಾವನಾತ್ಮಕ ಭಾಷಣಗಳಿಂದ ವಿದ್ಯಾರ್ಥಿಗಳ ನಿಜವಾದ ಸಮಸ್ಯೆಗಳನ್ನು ಮರೆಮಾಚಿ ದೇಶಭಕ್ತಿ, ಪಾಕಿಸ್ತಾನ ಎಂಬಂತಹ ವಿಚಾರಗಳನ್ನು ಹೇಳುತ್ತಿರುತ್ತದೆ. ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳ ನಿಜವಾದ ಸಮಸ್ಯೆಗಳನ್ನು ಪ್ರಶ್ನಿಸಲು ಸ್ವತಹ ಜಾರ್ಜ್ ರೆಡ್ಡಿ ಪಿ.ಡಿ.ಎಸ್.ಯು(ಪಿಎಸ್) ಎಂಬ ವಿದ್ಯಾರ್ಥಿ ಸಂಘಟನೆಯನ್ನು ಕಟ್ಟಿ, ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆದ್ದು ಬರುತ್ತಾರೆ.

ವಿದ್ಯಾರ್ಥಿಗಳು ಕೇವಲ ತನ್ನ ಸಮಸ್ಯೆಗಳಿಗಾಗಿ ಮಾತ್ರವಲ್ಲದೆ ರೈತರು, ದಲಿತ ದಮನಿತರ ಕಷ್ಟಗಳಿಗೆ ಬೀದಿಗಿಳಿಯುವಂತೆ ಜಾರ್ಜ್ ರೆಡ್ಡಿ ಪ್ರೇರೇಪಿಸುತ್ತಾನೆ. ಕೊನೆಗೆ ರಾಜಕಾರಣಿಗಳು, ಸ್ಥಳೀಯ ಪಟ್ಟಭದ್ರ ಸಂಘಟನೆಗಳ ಕೈಯಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿಯೇ ಕೊಲೆಯಾಗಿ ಜಾರ್ಜ್ ರೆಡ್ಡಿ ಹುತಾತ್ಮರಾಗುತ್ತಾರೆ.

ಯಾರು ಈ ಜಾರ್ಜ್ ರೆಡ್ಡಿ?

ಕೇರಳದ ಪಾಲಕ್ಕಾಡ್‌ನಲ್ಲಿ ಹುಟ್ಟಿ ಉನ್ನತ ವಿದ್ಯಾಭ್ಯಾಸಕ್ಕಾಗಿ ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯಕ್ಕೆ ಬಂದು ಭೌತಶಾಸ್ತ್ರದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ವಿದ್ಯಾರ್ಥಿ ಜಾರ್ಜ್ ರೆಡ್ಡಿ. ಬಾಕ್ಸಿಂಗ್‌ಪಟುವಾಗಿದ್ದ ಜಾರ್ಜ್ ರೆಡ್ಡಿ ಭಗತ್‌ಸಿಂಗ್, ಚೆಗುವೆರಾರಂತಹವರ ಹುತಾತ್ಮರ ಸ್ಫೂರ್ತಿಯಿಂದ ಉಸ್ಮಾನಿಯದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಕೊನೆಗಾಣಿಸುವ ಹೋರಾಟಕ್ಕೆ ಧುಮುಕುತ್ತಾರೆ.

ಸಮಾನ ಓದುವ ಅವಕಾಶಗಳ ಸೃಷ್ಟಿಗಾಗಿ ವಿದ್ಯಾರ್ಥಿ ಸಂಘಟನೆಯನ್ನು ಸ್ಥಾಪಿಸಿ, ವಿದ್ಯಾರ್ಥಿಗಳನ್ನು ಜನಸಾಮಾನ್ಯರ ಸಮಸ್ಯೆಗಳಿಗಾಗಿ ದನಿ ಎತ್ತುವಂತೆ ಮಾಡಿದ್ದು ಆತನ ಸಾಧನೆ. ಆ ಕಾಲದಲ್ಲಿ ಎಷ್ಟೋ ಜನ ವಿದ್ಯಾರ್ಥಿ ಯುವಜನರಿಗೆ ಸ್ಪೂರ್ತಿದಾಯಕ. ಈತನನ್ನು ಸೆಳೆಯಲು ರಾಜಕೀಯ ಪಕ್ಷಗಳ ಮುಖಂಡರು ಸಹ ಪ್ರಯತ್ನಿಸಿದ್ದರು. ಆದರೆ ಯಾರ ಜೊತೆಗೆ ರಾಜಿ ಮಾಡಿಕೊಳ್ಳದೆ, ತಾನು ನಂಬಿದ್ದ ಸಿದ್ದಾಂತಕ್ಕಾಗಿ ಹೋರಾಟವನ್ನು ಮುನ್ನಡೆಸಿ, ಚರಿತ್ರೆ ಮರೆತರು ಜನ ಮರೆಯಾದ ನಾಯಕನಾದರು ಜಾರ್ಜ್ ರೆಡ್ಡಿ. ಈಗಲೂ ಸಹ ಆತ ಸ್ಥಾಪಿಸಿದ ಮತ್ತು ಆತನಿಂದ ಪ್ರಭಾವಿತವಾದ ವಿದ್ಯಾರ್ಥಿ ಸಂಘಟನೆಗಳು ಆಂಧ್ರ, ತೆಲಂಗಾಣದಲ್ಲಿ ಉತ್ತಮ ಸಮಾಜಕ್ಕಾಗಿ ದುಡಿಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...