HomeUncategorizedಮಿಲಿಟೆಂಟ್‌ ಸ್ಟುಡೆಂಟ್‌ ಲೀಡರ್‌ ’ಜಾರ್ಜ್ ರೆಡ್ಡಿ’ ಕುರಿತ ಸಿನಿಮಾ 'ಅಭಿಮಾನಿ'ಯೊಬ್ಬರ ಕಣ್ಣಲ್ಲಿ

ಮಿಲಿಟೆಂಟ್‌ ಸ್ಟುಡೆಂಟ್‌ ಲೀಡರ್‌ ’ಜಾರ್ಜ್ ರೆಡ್ಡಿ’ ಕುರಿತ ಸಿನಿಮಾ ‘ಅಭಿಮಾನಿ’ಯೊಬ್ಬರ ಕಣ್ಣಲ್ಲಿ

ವಿದ್ಯಾರ್ಥಿಗಳು ಕೇವಲ ತನ್ನ ಸಮಸ್ಯೆಗಳಿಗಾಗಿ ಮಾತ್ರವಲ್ಲದೆ ರೈತರು, ದಲಿತ ದಮನಿತರ ಕಷ್ಟಗಳಿಗೆ ಬೀದಿಗಿಳಿಯುವಂತೆ ಜಾರ್ಜ್ ರೆಡ್ಡಿ ಪ್ರೇರೇಪಿಸುತ್ತಾನೆ.

- Advertisement -
- Advertisement -

ಭಾರತ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಭಗತ್‌ಸಿಂಗ್‌ ಲಕ್ಷಾಂತರ ಜನರಿಗೆ ಸ್ಫೂರ್ತಿ. ಅವರನ್ನು ಆದರ್ಶವಾಗಿಟ್ಟುಕೊಂಡು ಹೋರಾಟಕ್ಕಿಳಿದವರು ಸಾವಿರಾರು ಜನ. ತನ್ನ ಸಹಪಾಠಿಗಳಿಗೆ ಅನ್ಯಾಯವನ್ನು ಅಸಮಾನತೆಯನ್ನು ಎದುರಿಸುವ ಧೈರ್ಯಕೊಟ್ಟು, ದಿಟ್ಟ ಹೋರಾಟ ಮುನ್ನಡೆಸಿದ ವಿದ್ಯಾರ್ಥಿ ಯುವಜನ ನಾಯಕ ಜಾರ್ಜ್ ರೆಡ್ಡಿ ಕೂಡ ಅಂಥವರಲ್ಲಿ ಒಬ್ಬರು.

ಇಂತಹ ಹೋರಾಟಗಾರನ ಜೀವನದ ಹಲವು ಘಟನೆಗಳ ಎಳೆಗಳನ್ನು ಇಟ್ಟುಕೊಂಡು ತೆಲುಗಿನಲ್ಲಿ ಜಾರ್ಜ್ ರೆಡ್ಡಿ ಸಿನೆಮಾ ನಿರ್ಮಾಣವಾಗಿದೆ. ಆದರೆ ಸಿನೆಮಾದಲ್ಲಿ ತೋರಿಸಿದ್ದಷ್ಟೇ ಜಾರ್ಜ್ ರೆಡ್ಡಿಯಲ್ಲ ಎಂದು ಸಿನೆಮಾ ನಿರ್ದೇಶಕರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಸಿನೆಮಾ ಕಮರ್ಷಿಯಲ್ ನೋಟದಲ್ಲಿ ಯಶಸ್ವಿಯಾಗಿ ಮಾಡಿಬಂದಿದೆ. ಈ ಸಿನೆಮಾ 60/70ರ ದಶಕದ ಕಾಲಕ್ಕೆ ವೀಕ್ಷಕರನ್ನು ಕರೆದುಕೊಂಡು ಹೋಗುವದರಲ್ಲಿ ಸಂದೇಹವೇ ಇಲ್ಲ.

ಜಾರ್ಜ್ ರೆಡ್ಡಿ ಜೀವನವನ್ನು ತಿಳಿಯಲು ಹೊರಟ ನಿರೂಪಕಿ ಜಾರ್ಜ್ ಜೊತೆ ಒಡನಾಟವಿದ್ದವರನ್ನು ಮಾತನಾಡಿಸುತ್ತ ಸಿನೆಮಾ ತೆರೆದುಕೊಳ್ಳುತ್ತದೆ. ಇನ್ನು ಸಿನೆಮಾದಲ್ಲಿ ಬರುವ ಸಂಭಾಷಣೆಗಳು ಕೂಡ ಸಿನೆಮಾವನ್ನು ಹತ್ತಿರವಾಗಿಸುತ್ತವೆ ಮತ್ತು ಪಾತ್ರಗಳನ್ನ ಮನಸ್ಸಿನಲ್ಲಿ ನಿಲ್ಲಿಸುತ್ತವೆ. ಆದರೆ ಜಾರ್ಜ್ ರೆಡ್ಡಿ ಮಾಡುವ ಫೈಟ್ಸ್ ತೆಲುಗು ಸಿನೆಮಾಗಳ ಫ್ಯಾಕ್ಷನ್ ಫೈಟ್‌ಗಳಂತೆಯೂ ತೋರುತ್ತವೆ. ಹಾಗಾಗಿ ಕೆಲವು ಕಡೆ ಜಾರ್ಜ್ ರೆಡ್ಡಿ ಕೂಡ ಒಬ್ಬ ರೌಡಿಯಂತೆ ಕಂಡರೂ ಸಹ ಅಚ್ಚರಿ ಇಲ್ಲ.

ಇಲ್ಲಿ ಜಾರ್ಜ್ ರೆಡ್ಡಿ (ಸಂದೀಪ್ ಮಾದವ್) ಜೊತೆ ಅವನ ಸ್ನೇಹಿತ ದೌರ್ಜನ್ಯವನ್ನು ಸಹಿಸದೆ ತಿರುಗಿ ಬೀಳುವ ರಾಜನ್ನನ (ಅಭಯ್) ಪಾತ್ರ ಮನಸ್ಸಿನಲ್ಲಿ ಉಳಿಯುತ್ತದೆ. ತೆಲುಗಿನ ಹೊಸ ಪೀಳಿಗೆಗೆ ಜಾರ್ಜ್ ರೆಡ್ಡಿಯನ್ನು ಪರಿಚಯಿಸುವ ಕೆಲಸವನ್ನು ಸಿನೆಮಾ ತಂಡ ಮಾಡಿದೆ. ಈ ಸಿನಿಮಾವನ್ನು ಜೀವನ್ ರೆಡ್ಡಿ ನಿರ್ದೇಶಿಸಿದ್ದು, ಸುರೇಶ್ ಬೊಬ್ಬಿಲಿಯವರ ಸಂಗೀತ, ಜೆ.ಪ್ರತಾಪ್ ಕುಮಾರ್ ಸಂಕಲನ, ಛಾಯಾಗ್ರಹಣ ಸೈರಾಟ್ ಸಿನೆಮಾದ ಯಾಕಂಟಿ ಮತ್ತು ಸುಧಾಕರ್ ರೆಡ್ಡಿ ಮಾಡಿದ್ದಾರೆ. ಈ ಸಿನೆಮಾವನ್ನು ಮಿಕ್ ಮೂವಿಸ್ ಕಂಪನಿ ನಿರ್ಮಾಣ ಮಾಡಿದೆ. ತಾರಾಗಣದಲ್ಲಿ ಸಂದೀಪ್ ಮಾದವ್ (ಜಾರ್ಜ್ ರೆಡ್ಡಿ), ಮುಸ್ಕುನ್ ಕುಬಚಂದಿನಿ(ಮಾಯ), ದೇವಿಕಾ( ಜಾರ್ಜ್ ತಾಯಿ), ಅಭಯ್ ಮುಖ್ಯ ಪಾತ್ರಗಳಲ್ಲಿ ಇದ್ದಾರೆ.

ಸಿನೆಮಾದ ಕಥೆ

ಸಂಘಪರಿವಾರ ಮತ್ತು ಬಿಜೆಪಿ ಪಕ್ಷದ ಕೂಸಾದ ಎಬಿವಿಪಿ (ಎಬಿಸಿಡಿ) ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ (ಎನ್.ಎಸ್.ಎಲ್) ತಮ್ಮ ಪ್ರಾಬಲ್ಯಕ್ಕಾಗಿ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಪ್ರಯತ್ನ ಮಾಡುತ್ತಿರುತ್ತವೆ. ಎಬಿವಿಪಿ ಸಂಘಟನೆ ತನ್ನ ಭಾವನಾತ್ಮಕ ಭಾಷಣಗಳಿಂದ ವಿದ್ಯಾರ್ಥಿಗಳ ನಿಜವಾದ ಸಮಸ್ಯೆಗಳನ್ನು ಮರೆಮಾಚಿ ದೇಶಭಕ್ತಿ, ಪಾಕಿಸ್ತಾನ ಎಂಬಂತಹ ವಿಚಾರಗಳನ್ನು ಹೇಳುತ್ತಿರುತ್ತದೆ. ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳ ನಿಜವಾದ ಸಮಸ್ಯೆಗಳನ್ನು ಪ್ರಶ್ನಿಸಲು ಸ್ವತಹ ಜಾರ್ಜ್ ರೆಡ್ಡಿ ಪಿ.ಡಿ.ಎಸ್.ಯು(ಪಿಎಸ್) ಎಂಬ ವಿದ್ಯಾರ್ಥಿ ಸಂಘಟನೆಯನ್ನು ಕಟ್ಟಿ, ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆದ್ದು ಬರುತ್ತಾರೆ.

ವಿದ್ಯಾರ್ಥಿಗಳು ಕೇವಲ ತನ್ನ ಸಮಸ್ಯೆಗಳಿಗಾಗಿ ಮಾತ್ರವಲ್ಲದೆ ರೈತರು, ದಲಿತ ದಮನಿತರ ಕಷ್ಟಗಳಿಗೆ ಬೀದಿಗಿಳಿಯುವಂತೆ ಜಾರ್ಜ್ ರೆಡ್ಡಿ ಪ್ರೇರೇಪಿಸುತ್ತಾನೆ. ಕೊನೆಗೆ ರಾಜಕಾರಣಿಗಳು, ಸ್ಥಳೀಯ ಪಟ್ಟಭದ್ರ ಸಂಘಟನೆಗಳ ಕೈಯಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿಯೇ ಕೊಲೆಯಾಗಿ ಜಾರ್ಜ್ ರೆಡ್ಡಿ ಹುತಾತ್ಮರಾಗುತ್ತಾರೆ.

ಯಾರು ಈ ಜಾರ್ಜ್ ರೆಡ್ಡಿ?

ಕೇರಳದ ಪಾಲಕ್ಕಾಡ್‌ನಲ್ಲಿ ಹುಟ್ಟಿ ಉನ್ನತ ವಿದ್ಯಾಭ್ಯಾಸಕ್ಕಾಗಿ ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯಕ್ಕೆ ಬಂದು ಭೌತಶಾಸ್ತ್ರದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ವಿದ್ಯಾರ್ಥಿ ಜಾರ್ಜ್ ರೆಡ್ಡಿ. ಬಾಕ್ಸಿಂಗ್‌ಪಟುವಾಗಿದ್ದ ಜಾರ್ಜ್ ರೆಡ್ಡಿ ಭಗತ್‌ಸಿಂಗ್, ಚೆಗುವೆರಾರಂತಹವರ ಹುತಾತ್ಮರ ಸ್ಫೂರ್ತಿಯಿಂದ ಉಸ್ಮಾನಿಯದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಕೊನೆಗಾಣಿಸುವ ಹೋರಾಟಕ್ಕೆ ಧುಮುಕುತ್ತಾರೆ.

ಸಮಾನ ಓದುವ ಅವಕಾಶಗಳ ಸೃಷ್ಟಿಗಾಗಿ ವಿದ್ಯಾರ್ಥಿ ಸಂಘಟನೆಯನ್ನು ಸ್ಥಾಪಿಸಿ, ವಿದ್ಯಾರ್ಥಿಗಳನ್ನು ಜನಸಾಮಾನ್ಯರ ಸಮಸ್ಯೆಗಳಿಗಾಗಿ ದನಿ ಎತ್ತುವಂತೆ ಮಾಡಿದ್ದು ಆತನ ಸಾಧನೆ. ಆ ಕಾಲದಲ್ಲಿ ಎಷ್ಟೋ ಜನ ವಿದ್ಯಾರ್ಥಿ ಯುವಜನರಿಗೆ ಸ್ಪೂರ್ತಿದಾಯಕ. ಈತನನ್ನು ಸೆಳೆಯಲು ರಾಜಕೀಯ ಪಕ್ಷಗಳ ಮುಖಂಡರು ಸಹ ಪ್ರಯತ್ನಿಸಿದ್ದರು. ಆದರೆ ಯಾರ ಜೊತೆಗೆ ರಾಜಿ ಮಾಡಿಕೊಳ್ಳದೆ, ತಾನು ನಂಬಿದ್ದ ಸಿದ್ದಾಂತಕ್ಕಾಗಿ ಹೋರಾಟವನ್ನು ಮುನ್ನಡೆಸಿ, ಚರಿತ್ರೆ ಮರೆತರು ಜನ ಮರೆಯಾದ ನಾಯಕನಾದರು ಜಾರ್ಜ್ ರೆಡ್ಡಿ. ಈಗಲೂ ಸಹ ಆತ ಸ್ಥಾಪಿಸಿದ ಮತ್ತು ಆತನಿಂದ ಪ್ರಭಾವಿತವಾದ ವಿದ್ಯಾರ್ಥಿ ಸಂಘಟನೆಗಳು ಆಂಧ್ರ, ತೆಲಂಗಾಣದಲ್ಲಿ ಉತ್ತಮ ಸಮಾಜಕ್ಕಾಗಿ ದುಡಿಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...