Homeಮುಖಪುಟಕೇಂದ್ರದಿಂದ ಜಾತಿ ಗಣತಿ ಘೋಷಣೆ: ಕಾರ್ಯಕಾರಿಣಿ ಸಭೆ ಕರೆದ ಕಾಂಗ್ರೆಸ್

ಕೇಂದ್ರದಿಂದ ಜಾತಿ ಗಣತಿ ಘೋಷಣೆ: ಕಾರ್ಯಕಾರಿಣಿ ಸಭೆ ಕರೆದ ಕಾಂಗ್ರೆಸ್

- Advertisement -
- Advertisement -

ದೇಶದಲ್ಲಿ ಜಾತಿ ಸಮೀಕ್ಷೆ ಅಥವಾ ಜಾತಿ ಜನಗಣತಿ ನಡೆಸಬೇಕು ಎಂಬುವುದು ಕಾಂಗ್ರೆಸ್‌ನ ಬಹುಕಾಲದ ಬೇಡಿಕೆಯಾಗಿತ್ತು. ತೆಲಂಗಾಣ, ಕರ್ನಾಟಕ ಸೇರಿದಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಈಗಾಗಲೇ ಜಾತಿ,  ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಜಾತಿ ಜನಗಣತಿ ನಡೆಸುತ್ತೇವೆ ಎಂದೂ ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್ ಹೇಳಿಕೊಂಡು ಬಂದಿದೆ. ಜಾತಿ ಗಣತಿಯ ವಿಷಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಂತೂ ದೃಢವಾಗಿ ನಿಂತಿದ್ದರು.

ಈ ನಡುವೆ ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ, ಮುಂದಿನ ಜನಗಣತಿಯ ಜೊತೆಗೆ ಜಾತಿ ಗಣತಿಯನ್ನು ನಡೆಸುತ್ತೇವೆ ಎಂದು ಬುಧವಾರ (ಏ.29) ಘೋಷಣೆ ಮಾಡಿದೆ. ಈ ಮೂಲಕ ಒಂದು ರೀತಿಯಲ್ಲಿ ಕಾಂಗ್ರೆಸ್‌ನ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ಕೇಂದ್ರ ಸರ್ಕಾರ ಜಾತಿ ಗಣತಿಯ ಬಗ್ಗೆ ಘೋಷಣೆ ಮಾಡಿದ ಹಿನ್ನೆಲೆ, ಮುಂದಿನ ನಡೆಯ ಬಗ್ಗೆ ಚರ್ಚಿಸಲು ನಾಳೆ (ಮೇ.2 ಶುಕ್ರವಾರ) ಕಾಂಗ್ರೆಸ್ ಕಾರ್ಯಕಾರಿಣಿ (ಸಿಡಬ್ಲ್ಯುಸಿ) ಸಭೆ ನಡೆಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ನಾಳೆ ಸಂಜೆ 4 ಗಂಟೆಗೆ ಸಿಡಬ್ಲ್ಯುಸಿ ಸಭೆ ನಡೆಸಲಿದ್ದೇವೆ. ಸರ್ಕಾರ ಜಾತಿ ಗಣತಿ ಬಗ್ಗೆ ಘೋಷಣೆ ಮಾಡಿದೆ. ಈ ವಿಚಾರದಲ್ಲಿ ನಮ್ಮ ನಿಲುವೇನು, ಮುಂದಿನ ನಡೆಯೇನು ಎಂಬುವುದರ ಬಗ್ಗೆ ಚರ್ಚಿಸಬೇಕಿದೆ. ಜಾತಿ ಗಣತಿಯ ಬಜೆಟ್, ಅವಧಿ, ಶೇ,50 ಮೀಸಲಾತಿ ಮಿತಿ ತೆರವು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ನಮಗೆ ಸರ್ಕಾರದಿಂದ ಉತ್ತರ ಬೇಕಿದೆ. ಈ ಕುರಿತು ಚರ್ಚೆ ನಡೆಸಲಿದ್ದೇವೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿರುವುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜಾತಿ ಗಣತಿಯ ಕುರಿತು ಕೇಂದ್ರದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ನಿರ್ಧಾರದ ನಂತರ, ಜಾತಿ ಜನಗಣತಿಯ ಅತ್ಯಂತ ಗಟ್ಟಿ ಪ್ರತಿಪಾದಕರಲ್ಲಿ ಒಬ್ಬರಾಗಿರುವ ಲೋಕಸಭಾ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ, “ಇದು ನಮ್ಮ ದೃಷ್ಟಿಕೋನ ಮತ್ತು ಹೊಸ ಅಭಿವೃದ್ಧಿ ಮಾದರಿಯತ್ತ ಮೊದಲ ಹೆಜ್ಜೆ ಎಂದು ಹೇಳಿದ್ದಾರೆ. ಮುಂದಿನ ಹಂತಗಳಲ್ಲಿ ಮೀಸಲಾತಿಯ ಮೇಲಿನ ಶೇ.50 ಮಿತಿಯನ್ನು ತೆಗೆದುಹಾಕುವುದು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಜಾರಿಗೆ ತರುವುದು ಸೇರಿದೆ ಎಂದಿದ್ದಾರೆ.

ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಾವು ಸಂಸತ್ತಿನಲ್ಲಿ ಜಾತಿ ಜನಗಣತಿಯನ್ನು ಮಾಡುತ್ತೇವೆ ಎಂದು ಹೇಳಿದ್ದೆವು ಮತ್ತು ಮೀಸಲಾತಿಯ ಮೇಲಿನ ಶೇ.50 ಮಿತಿ ತೆರವುಗೊಳಿಸುತ್ತೇವೆ ಎಂದಿದ್ದೆವು. ಕೇವಲ ನಾಲ್ಕು ಜಾತಿಗಳಿವೆ ಎಂದು ಹೇಳುತ್ತಿದ್ದ ನರೇಂದ್ರ ಮೋದಿ ಇದ್ದಕ್ಕಿದ್ದಂತೆ ಜಾತಿ ಜನಗಣತಿಯನ್ನು ಘೋಷಿಸಿದ್ದಾರೆ. ನಾವು ಇದನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಆದರೆ, ನಮಗೆ ಜಾತಿ ಗಣತಿಯ ಅವಧಿ ಗೊತ್ತಾಗಬೇಕು. ಅದನ್ನು ಯಾವಾಗ ಮಾಡಲಾಗುತ್ತದೆ ಎಂಬ ಮಾಹಿತಿ ಬೇಕು.ಇದು ನಮ್ಮ ಮೊದಲ ಹೆಜ್ಜೆ. ತೆಲಂಗಾಣ ಜಾತಿ ಜನಗಣತಿ ಮಾದರಿಯಾಗಿದೆ” ಎಂದು ಹೇಳಿದ್ದಾರೆ.

“ತೆಲಂಗಾಣ ಜಾತಿಗಣತಿಯನ್ನು ‘ವಿವರವಾದ ಮತ್ತು ಸೂಕ್ಷ್ಮ’ ಎಂದು ಬಣ್ಣಿಸಿದ ರಾಹುಲ್ ಗಾಂಧಿ, ಅದನ್ನು ‘ಮುಕ್ತ ಪ್ರಕ್ರಿಯೆಯ ಮೂಲಕ ಕೈಗೊಳ್ಳಲಾಗಿದೆ’ ಎಂದಿದ್ದಾರೆ. ರಾಷ್ಟ್ರೀಯ ಜನಗಣತಿಯ ವೇಳೆ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ನಡೆದ ಕೆಲವು ವಿಚಾರಗಳನ್ನು ಅನುಸರಿಸಬೇಕು. ಅದಕ್ಕೆ ಸಹಾಯ ಮಾಡಲು ನಾವು ಸಂತೋಷಪಡುತ್ತೇವೆ” ಎಂದಿದ್ದಾರೆ.

ಜಾತಿ ಗಣತಿ ವಿಚಾರದಲ್ಲಿ ಕ್ರೆಡಿಟ್ ವಾರ್ ಶುರುವಾಗಿದೆ. ಜಾತಿ ಗಣತಿಯನ್ನು ಬಲವಾಗಿ ಪ್ರತಿಪಾದಿಸಿದ್ದು ನಾವು. ನಮ್ಮ ಬೇಡಿಕೆಗೆ ಸರ್ಕಾರ ಮಣಿದಿದೆ ಎಂದು ಜನವರಿಗೆ ಮನವರಿಗೆ ಮಾಡುವ ಸವಾಲು ಮತ್ತು ನರೇಂದ್ರ ಮೋದಿ ಹಠಾತ್ ಜಾತಿ ಗಣತಿ ಘೋಷಣೆ ಮಾಡಿ, ಅದರ ಕ್ರೆಡಿಟ್ ಅನ್ನು ಚುನಾವಣೆಯ ಅಸ್ತ್ರವಾಗಿ ಬಳಸುವ ಆತಂಕ ಕಾಂಗ್ರೆಸ್‌ ನಾಯಕರಲ್ಲಿದೆ.

ಪಹಲ್ಗಾಮ್ ದಾಳಿ ಗಮನ ಬೇರೆಡೆ ಸೆಳೆಯಲು ಮೋದಿ ಸರ್ಕಾರದಿಂದ ಜಾತಿ ಜನಗಣತಿ ಮುನ್ನೆಲೆಗೆ: ಸಂಜಯ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...