Homeಮುಖಪುಟಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ...

ಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ ಆರೋಪ

- Advertisement -
- Advertisement -

ಹಾವು ಸತ್ತು ಬಿದ್ದ ಬಿಸಿಯೂಟವನ್ನೆ ಶಾಲಾ ಮಕ್ಕಳಿಗೆ ನೀಡಿರುವ ಘಟನೆ ಬಿಹಾರದ ಶಾಲೆಯಲ್ಲಿ ನಡೆದಿದ್ದು, ಅದನ್ನು ಸೇವಿಸಿದ ಶಾಲೆಯ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಮಾನವ ಹಕ್ಕುಗಳ ಸಂಸ್ಥೆ ಗುರುವಾರ ತನಿಖೆ ನಡೆಸುತ್ತಿದೆ ಎಂದು ವರದಿ  ತಿಳಿಸಿದೆ. ಬಿಸಿಯೂಟ ಸೇವಿಸಿ

“ಅಡುಗೆಯವರು ಸತ್ತ ಹಾವನ್ನು ಅದರಿಂದ ಹೊರತೆಗೆದು ಮಕ್ಕಳಿಗೆ ಆಹಾರವನ್ನು ಬಡಿಸಿದ್ದಾರೆ ಎಂದು ವರದಿಯಾಗಿದೆ” ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಹೇಳಿಕೆಯಲ್ಲಿ ತಿಳಿಸಿದೆ. ಭಾರತದ ಅತ್ಯಂತ ಬಡ ರಾಜ್ಯಗಳಲ್ಲಿ ಒಂದಾದ ಬಿಹಾರದ ಮೊಕಾಮಾ ನಗರದ ಸರ್ಕಾರಿ ಶಾಲೆಯಲ್ಲಿ ಕಳೆದ ವಾರ ಈ ಊಟವನ್ನು ಬಡಿಸಲಾಗಿತ್ತು ಎಂದು ಅದು ಹೇಳಿದೆ.

ಶಾಲೆಯ ಊಟವನ್ನು ತಿಂದ ನಂತರ “100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದರು” ಎಂಬ ಮಾಧ್ಯಮ ವರದಿಗಳನ್ನು ತನಿಖೆ ಮಾಡಬೇಕೆಂದು ಆಯೋಗವು ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರನ್ನು ಒತ್ತಾಯಿಸಿದೆ.

ಈ ಘಟನೆಯಿಂದ ಉದ್ರಿಕ್ತರಾದ ಮಕ್ಕಳ ಕುಟುಂಬಗಳು ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದೆ. “ಮಧ್ಯಾಹ್ನದ ಊಟ ಸೇವಿಸಿದ ಕಾರಣ ಮಕ್ಕಳು ಅನಾರೋಗ್ಯಕ್ಕೆ ಒಳಗಾದ ಸುದ್ದಿಯ ನಂತರ ಪ್ರತಿಭಟನಾ ನಿರತ ಗ್ರಾಮಸ್ಥರು ರಸ್ತೆ ತಡೆ ಕೂಡಾ ಮಾಡಿದ್ದಾರೆ” ಎಂದು ಅದು ಹೇಳಿದೆ.

ಭಾರತದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಲಕ್ಷಾಂತರ ಮಕ್ಕಳಿಗೆ ಉಚಿತ ಊಟವನ್ನು ನೀಡಲಾಗುತ್ತದೆ. ಇದನ್ನು ಮಕ್ಕಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಪ್ರೋತ್ಸಾಹಿಸುವ ಒಂದು ಮಾರ್ಗವೆಂದು ಅಧಿಕಾರಿಗಳು ನೋಡುತ್ತಾರೆ.

“ಮಕ್ಕಳ ಆರೋಗ್ಯ ಸ್ಥಿತಿ”ಯನ್ನು ಒಳಗೊಂಡಂತೆ ಹಿರಿಯ ರಾಜ್ಯ ಅಧಿಕಾರಿಗಳು ಮತ್ತು ಪೊಲೀಸರಿಂದ “ವಿವರವಾದ ವರದಿ”ಯನ್ನು ಕೋರಿರುವುದಾಗಿ ಆಯೋಗ ಹೇಳಿದೆ. ವರದಿ ದೃಢಪಟ್ಟರೆ, “ವಿದ್ಯಾರ್ಥಿಗಳ ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಸಮಸ್ಯೆ ಮುನ್ನಲೆಗೆ ಬರುತ್ತದೆ ಎಂದು ಅದು ಹೇಳಿದೆ.

2013 ರಲ್ಲಿ, ಬಿಹಾರದ ಸರನ್ ಜಿಲ್ಲೆಯಲ್ಲಿ ಕೀಟನಾಶಕಗಳನ್ನು ಬೆರೆಸಿದ ಊಟವನ್ನು ಸೇವಿಸಿದ ನಂತರ 23 ಶಾಲಾ ಮಕ್ಕಳು ಸಾವನ್ನಪ್ಪಿದ್ದರು. ಈ ವಿಪತ್ತು ಸರ್ಕಾರವು ಶಾಲೆಗಳಲ್ಲಿ ಆಹಾರ ಸುರಕ್ಷತೆಯನ್ನು ಸುಧಾರಿಸಲು ಪ್ರೇರೇಪಿಸಿತ್ತು. ಬಿಸಿಯೂಟ ಸೇವಿಸಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ನೈನಿತಾಲ್‌ನಲ್ಲಿ ಭುಗಿಲೆದ್ದ ಕೋಮು ಉದ್ವಿಗ್ನತೆ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ನೈನಿತಾಲ್‌ನಲ್ಲಿ ಭುಗಿಲೆದ್ದ ಕೋಮು ಉದ್ವಿಗ್ನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...