Homeಮುಖಪುಟಜಾತಿಗಣತಿಗೆ ಎರಡು-ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿ, ಹಣ ಮಂಜೂರು ಮಾಡಿ: ಕೇಂದ್ರಕ್ಕೆ ಖರ್ಗೆ ಒತ್ತಾಯ

ಜಾತಿಗಣತಿಗೆ ಎರಡು-ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿ, ಹಣ ಮಂಜೂರು ಮಾಡಿ: ಕೇಂದ್ರಕ್ಕೆ ಖರ್ಗೆ ಒತ್ತಾಯ

- Advertisement -
- Advertisement -

ಕೇಂದ್ರ ಸರ್ಕಾರ ಘೋಷಿಸಿರುವ ಜಾತಿಗಣತಿಗೆ ಸಾಕಷ್ಟು ಹಣ ಹಂಚಿಕೆ ಮತ್ತು ಸಮಯ ಮಿತಿಯನ್ನು ನಿಗದಿಪಡಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಜಾತಿ ಗಣತಿಯನ್ನು ಒತ್ತಾಯಿಸಿ ದೇಶಾದ್ಯಂತ ಅದಕ್ಕಾಗಿ ಆಂದೋಲನಗಳನ್ನು ನಡೆಸಿದ್ದು, ಈಗ ನಮ್ಮ ಉದ್ದೇಶವನ್ನು ಸಾಧಿಸಿದ್ದೇವೆ ಎಂದು ಸಂತೋಷಪಡುತ್ತೇವೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಅವರು ಹೇಳಿದ್ದಾರೆ.

“ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಗಣತಿಯ ಬಗ್ಗೆ ನಾನು ಎರಡು ವರ್ಷಗಳ ಹಿಂದೆ ಪತ್ರ ಬರೆದಿದ್ದೆ. ಆಗ ಅವರು ಒಪ್ಪಲಿಲ್ಲ, ಆದರೆ ಈಗ ಸರ್ಕಾರ ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಗಣತಿಯನ್ನು ನಡೆಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಇದು ಒಳ್ಳೆಯ ವಿಚಾರವಾಗಿದೆ ಮತ್ತು ನಾವು ಇದಕ್ಕೆ ಸಂಪೂರ್ಣವಾಗಿ ಸಹಕರಿಸುತ್ತೇವೆ. ಆದರೆ ಅವರು (ಬಿಜೆಪಿ) ಜವಾಹರಲಾಲ್ ನೆಹರು ಅವರ ಬಗ್ಗೆ ಅವರು ಇದನ್ನು ವಿರೋಧಿಸುತ್ತಿದ್ದರು, ಅದು, ಇದು ಎಂದು ಅನಗತ್ಯವಾಗಿ ಕಾಮೆಂಟ್ ಮಾಡಬಾರದು” ಎಂದು ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಂಘ ಮತ್ತು ಆರ್‌ಎಸ್‌ಎಸ್ ಹುಟ್ಟಿನಿಂದಲೇ ಮೀಸಲಾತಿಯನ್ನು ವಿರೋಧಿಸುತ್ತವೆ. ಅಂತಹ ಜನರು ಈಗ ಕಾಂಗ್ರೆಸ್ ಜಾತಿ ಗಣತಿಯ ಪರವಾಗಿಲ್ಲ ಎಂದು ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

“ನಾವು ಜಾತಿ ಜನಗಣತಿಯನ್ನು ವಿರೋಧಿಸಿದ್ದರೆ, ಎರಡು ವರ್ಷಗಳ ಹಿಂದೆಯೇ ನಾನು ಪತ್ರ ಬರೆಯುತ್ತಿದ್ದೆವೆಯೆ? ಅದಕ್ಕಾಗಿ ನಾವು ಇಷ್ಟೊಂದು ಆಂದೋಲನಗಳನ್ನು ನಡೆಸುತ್ತಿದ್ದೆವಾ? ಅವರು (ಬಿಜೆಪಿ) ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಾರೆ ಮತ್ತು ದೇಶದ ಕಲ್ಯಾಣದಲ್ಲಿ ತಾವು ಮಾತ್ರ ಆಸಕ್ತಿ ಹೊಂದಿದ್ದೇವೆ ಎಂದು ಬಿಂಬಿಸಲು ಪ್ರಯತ್ನಿಸುತ್ತಾರೆ. ಇದು ನಕಲಿ ನಡವಳಿಕೆಯಾಗಿದ್ದು, ಅದನ್ನು ನಾನು ಒಪ್ಪುವುದಿಲ್ಲ. ರಾಜಕೀಯ ಉದ್ದೇಶಗಳಿಗಾಗಿ, ಅವರು ಯಾವಾಗಲೂ ಅಂತಹ ಕೆಲಸಗಳನ್ನು ಮಾಡುತ್ತಲೆ ಬಂದಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಬುಧವಾರ ಮುಂಬರುವ ಜನಗಣತಿ ಪ್ರಕ್ರಿಯೆಯಲ್ಲಿ “ಪಾರದರ್ಶಕ” ರೀತಿಯಲ್ಲಿ ಜಾತಿಗಣತಿ ಮಾಡಲಿದ್ದೇವೆ ಎಂದು ಘೋಷಿಸಿದೆ.

ಸರ್ಕಾರವು ತನ್ನ ಘೋಷಣೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ ಖರ್ಗೆ, ಸರ್ಕಾರ ಈ ಪ್ರಕ್ರಿಯೆಗೆ ಸಾಕಷ್ಟು ಹಣವನ್ನು ಹಂಚಿಕೆ ಮಾಡಿಲ್ಲ ಮತ್ತು ಹಣವಿಲ್ಲದೆ ಸಮೀಕ್ಷೆಯನ್ನು ಹೇಗೆ ನಡೆಸಲು ಸಾಧ್ಯ ಎಂದು ಕೇಳಿದ್ದಾರೆ. “ಅವರು ಅದಕ್ಕಾಗಿ ಸಮಯ ಮಿತಿಯನ್ನು ಸಹ ನಿಗದಿ ಮಾಡಬೇಕು. ಯಾವುದೇ ಸಮಯ ಮಿತಿ ನಿಗದಿ ಮಾಡದಿದ್ದರೆ, ಅದು ಬಹಳ ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ, ನನ್ನ ಸಲಹೆಯೆಂದರೆ ಅವರು ಜಾತಿಗಣತಿಗೆ ವಿಶೇಷ ಗಮನ ನೀಡಬೇಕು ಮತ್ತು ಎರಡು ಅಥವಾ ಮೂರು ತಿಂಗಳೊಳಗೆ… ಅಥವಾ ಯಾವುದೇ ಸಮಯ ಮಿತಿಯನ್ನು ನಿಗದಿಪಡಿಸಿದರೂ ಅವರು ಸಮೀಕ್ಷೆಯನ್ನು ನಡೆಸಿ ಜನರ ಭರವಸೆ ಮತ್ತು ಬೇಡಿಕೆಯನ್ನು ಪೂರೈಸಬೇಕು.” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...