Homeಮುಖಪುಟ'ವಿಶ್ವ ಪತ್ರಿಕಾ ಸ್ವಾತಂತ್ರ್ಯ' ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ’ ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

- Advertisement -
- Advertisement -

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025’ರಲ್ಲಿ ಭಾರತವು 180ರಲ್ಲಿ 151ನೇ ಸ್ಥಾನ ಪಡೆದಿದೆ. 2024ರಲ್ಲಿ  159ನೇ ಸ್ಥಾನ ಪಡೆದಿತ್ತು.

ಪ್ರಜಾಪ್ರಭುತ್ವ ಆಡಳಿತಕ್ಕಾಗಿ ಕೆಲಸ ಮಾಡುವ ಅಂತಾರಾಷ್ಟ್ರೀಯ ಲಾಭರಹಿತ ಸಂಸ್ಥೆಯಾದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಡಬ್ಲ್ಯುಬಿ) ಪ್ರಕಟಿಸಿದ ವರದಿಯಲ್ಲಿ ವಿಶ್ವದಾದ್ಯಂತ ಹೆಚ್ಚಿನ ಮಾಧ್ಯಮಗಳಿಗೆ ‘ಆರ್ಥಿಕ ಒತ್ತಡ’ ಪ್ರಮುಖ ಸಮಸ್ಯೆಯಾಗಿ ಹೇಳಲಾಗಿದೆ.

ಭಾರತ 2024ರಲ್ಲಿ 159ನೇ ಸ್ಥಾನ ಮತ್ತು 2023ರಲ್ಲಿ 161ನೇ ಸ್ಥಾನ ಪಡೆದಿತ್ತು. ಈ ಬಾರಿ 151ನೇ ಸ್ಥಾನ ಪಡೆಯುವ ಮೂಲಕ ಕೊಂಚ ಸುಧಾರಿಸಿದೆ. ಆದಾಗ್ಯೂ, ಭಾರತದ ಪತ್ರಿಕಾ ಸ್ವಾತಂತ್ರ್ಯ ‘ಅತ್ಯಂತ ಗಂಭೀರ’ ಪರಿಸ್ಥಿತಿಯಲ್ಲಿಯೇ ಇದೆ ಎಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿದೆ.

ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025 Source: Reporters Without Borders

“ರಾಜಕೀಯ ಪ್ರಭಾವಿಗಳ ಕೈಯಲ್ಲಿ ಮಾಧ್ಯಮಗಳ ಮಾಲೀಕತ್ವದ ಕೇಂದ್ರೀಕರಣವು ಮಾಧ್ಯಮ ಬಹುತ್ವಕ್ಕೆ ಸವಾಲಾಗಿರುವ ದೇಶಗಳಲ್ಲಿ ಭಾರತವೂ ಸೇರಿದೆ” ಎಂದು ವರದಿ ತಿಳಿಸಿದೆ.

ಅದಲ್ಲದೆ, ವರದಿಯು ಜಾಗತಿಕ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿಯನ್ನು ಮೊದಲ ಬಾರಿಗೆ ‘ಕಠಿಣ ಪರಿಸ್ಥಿತಿ’ಯಲ್ಲಿದೆ ಎಂದಿದೆ. ಮಾಧ್ಯಮ ದುರ್ಬಲಗೊಳ್ಳಲು ಕಾರಣವಾದ ಪ್ರಮುಖ ಅಂಶವೆಂದರೆ ‘ಆರ್ಥಿಕ ಒತ್ತಡ’ ಎಂದು ಹೇಳಿದೆ.

ಸೂಚ್ಯಂಕದಲ್ಲಿ ನೆರೆಯ ರಾಷ್ಟ್ರಗಳಲ್ಲಿ ನೇಪಾಳ (90ನೇ ಸ್ಥಾನ), ಮಾಲ್ಡೀವ್ಸ್ (104ನೇ ಸ್ಥಾನ), ಶ್ರೀಲಂಕಾ (139ನೇ ಸ್ಥಾನ), ಬಾಂಗ್ಲಾದೇಶ (149ನೇ ಸ್ಥಾನ)ಕ್ಕಿಂತ ಭಾರತ ಹಿಂದೆ ಇದ್ದರೆ, ಭೂತಾನ್ (152ನೇ ಸ್ಥಾನ), ಪಾಕಿಸ್ತಾನ (158ನೇ ಸ್ಥಾನ), ಮ್ಯಾನ್ಮಾರ್ (169 ನೇ ಸ್ಥಾನ), ಅಫ್ಘಾನಿಸ್ತಾನ (175ನೇ ಸ್ಥಾನ) ಮತ್ತು ಚೀನಾ (178ನೇ ಸ್ಥಾನ) ಕ್ಕಿಂತ ಉತ್ತಮ ಸ್ಥಾನದಲ್ಲಿದೆ.

ನಾರ್ವೆ, ಎಸ್ಟೋನಿಯಾ ಮತ್ತು ನೆದರ್‌ಲ್ಯಾಂಡ್ಸ್ ಮೊದಲ ಮೂರು ಸ್ಥಾನಗಳನ್ನು ಪಡೆದಿದೆ.

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ರಾಜಕೀಯ, ಆರ್ಥಿಕ, ಶಾಸಕಾಂಗ, ಸಾಮಾಜಿಕ ಮತ್ತು ಭದ್ರತೆ ಎಂಬ ಐದು ಅಂಶಗಳ ಆಧಾರದ ಮೇಲೆ ದೇಶಗಳಲ್ಲಿನ ಪತ್ರಿಕಾ ಸ್ವಾತಂತ್ರ್ಯವನ್ನು ಮೌಲ್ಯಮಾಪನ ಮಾಡುತ್ತದೆ.

‘ಆರ್ಥಿಕ ಸ್ವಾತಂತ್ರ್ಯವಿಲ್ಲದೆ ಪತ್ರಿಕಾ ಸ್ವಾತಂತ್ರ್ಯವಿಲ್ಲ’ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್‌ನ ಸಂಪಾದಕೀಯ ನಿರ್ದೇಶಕಿ ಆನ್ ಬೊಕಾಂಡೆ ಹೇಳಿದ್ದಾರೆ.

“ಸುದ್ದಿ ಮಾಧ್ಯಮಗಳು ಆರ್ಥಿಕವಾಗಿ ಸಂಕಷ್ಟದಲ್ಲಿರುವಾಗ, ಗುಣಮಟ್ಟದ ವರದಿಗಾರಿಕೆಯನ್ನು ಕಡೆಗಣಿಸಿ ಪ್ರೇಕ್ಷಕರನ್ನು ಆಕರ್ಷಿಸುವ ಸ್ಪರ್ಧೆಗೆ ಇಳಿಯುತ್ತವೆ ಮತ್ತು ಅವರನ್ನು ಶೋಷಿಸಲು ಪ್ರಯತ್ನಿಸುವ ಬಂಡವಾಳಶಾಹಿಗಳು ಮತ್ತು ಸಾರ್ವಜನಿಕ ಅಧಿಕಾರಿಗಳಿಗೆ ಬಲಿಯಾಗಬಹುದು”ಎಂದಿದ್ದಾರೆ.

“ಪತ್ರಿಕೋದ್ಯಮಕ್ಕೆ ಅನುಕೂಲಕರವಾದ ಮತ್ತು ಅಂತರ್ಗತವಾಗಿ ದುಬಾರಿಯಾಗಿರುವ ವಿಶ್ವಾಸಾರ್ಹ ಮಾಹಿತಿಯ ಉತ್ಪಾದನೆಯನ್ನು ಖಾತ್ರಿಪಡಿಸುವ ಸ್ಥಿತಿಗೆ ಮಾಧ್ಯಮ ಆರ್ಥಿಕತೆಯನ್ನು ತುರ್ತಾಗಿ ಪುನಃಸ್ಥಾಪಿಸಬೇಕು. ಸಾರ್ವಜನಿಕ ಹಿತಾಸಕ್ತಿಗೆ ಸೇವೆ ಸಲ್ಲಿಸುವ ಉಚಿತ, ವಿಶ್ವಾಸಾರ್ಹ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಮಾಧ್ಯಮದ ಆರ್ಥಿಕ ಸ್ವಾತಂತ್ರ್ಯವು ಅಗತ್ಯವಾಗಿದೆ” ಎಂದು ಆನ್ ಬೊಕಾಂಡೆ ಹೇಳಿದ್ದಾರೆ.

ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...