Homeಮುಖಪುಟಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

ಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

- Advertisement -
- Advertisement -

ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಗ್ರಾಮೀಣ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗಿದೆ. ಮೇ 1ರಿಂದ ಇದು ಅಧಿಕೃತವಾಗಿ ಜಾರಿಯಾಗಿದೆ.

“11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ವಿಲೀನವು ಇಂದಿನಿಂದ ಜಾರಿಗೆ ಬರಲಿದೆ. ಇದು ಆರ್‌ಆರ್‌ಬಿಗಳನ್ನು ಬಲಿಷ್ಠಗೊಳಿಸುವುದು, ಉತ್ತಮ ಆಡಳಿತ, ಸುಧಾರಿತ ಸಾಲದ ಹರಿವು ಮತ್ತು ಆರ್ಥಿಕ ಸೇರ್ಪಡೆಯತ್ತ ಮಹತ್ವದ ಹೆಜ್ಜೆಯಿಡುವುದನ್ನು ಸೂಚಿಸುತ್ತದೆ” ಎಂದು ಹಣಕಾಸು ಸೇವೆಗಳ ಇಲಾಖೆ (ಡಿಎಫ್‌ಎಸ್‌) ಎಕ್ಸ್‌ನಲ್ಲಿ ಗುರುವಾರ (ಮೇ 1) ಪೋಸ್ಟ್‌ ಮಾಡಿದೆ.

ಏಪ್ರಿಲ್ 8ರಂದು, ಡಿಎಫ್‌ಎಸ್‌ ‘ಒಂದು ರಾಜ್ಯ ಒಂದು ಗ್ರಾಮೀಣ ಬ್ಯಾಂಕ್’ ತತ್ವದಡಿ 26 ಆರ್‌ಆರ್‌ಬಿಗಳ ವಿಲೀನಕ್ಕೆ ಅಧಿಸೂಚನೆ ಹೊರಡಿಸಿತ್ತು. ಇದು ಆರ್‌ಆರ್‌ಬಿಗಳ ವಿಲೀನದ ನಾಲ್ಕನೇ ಹಂತವಾಗಿದೆ.

ಈ ಹಿಂದೆ ನಡೆದ ವಿಲೀನಗಳಿಂದಾಗಿ ಆರ್‌ಆರ್‌ಬಿಗಳ ದಕ್ಷತೆಯಲ್ಲಿ ಸುಧಾರಣೆಯಾಗಿದೆ ಎಂದ ಹಣಕಾಸು ಸಚಿವಾಲಯ, ನವೆಂಬರ್ 2024ರಲ್ಲಿ ಪಾಲುದಾರರೊಂದಿಗೆ ಸಮಾಲೋಚನೆಗಾಗಿ ವಿಲೀನ ಯೋಜನೆಯನ್ನು ರೂಪಿಸಿತ್ತು.

ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ ನಂತರ, 10 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 26 ಆರ್‌ಆರ್‌ಬಿಗಳ ವಿಲೀನವನ್ನು ಪ್ರಾಥಮಿಕವಾಗಿ ಪ್ರಮಾಣದ ದಕ್ಷತೆ ಮತ್ತು ವೆಚ್ಚ ತರ್ಕಬದ್ಧಗೊಳಿಸುವಿಕೆಯ ಸುಧಾರಣೆಯ ಮೇಲೆ ಕೇಂದ್ರೀಕರಿಸಲಾಗಿತ್ತು.

ಇತ್ತೀಚಿನ ವಿಲೀನದ ನಂತರ, 26 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 28 ಆರ್‌ಆರ್‌ಬಿಗಳು ಉಳಿದುಕೊಂಡಿವೆ. ಇವುಗಳು 700 ಜಿಲ್ಲೆಗಳಲ್ಲಿ 22,000ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿವೆ.

ಆರ್‌ಆರ್‌ಬಿಗಳ ಪ್ರಮುಖ ಕಾರ್ಯಕ್ಷೇತ್ರ ಗ್ರಾಮೀಣ ಪ್ರದೇಶಗಳಲ್ಲಿದ್ದು, ಶೇಕಡ 92ರಷ್ಟು ಶಾಖೆಗಳು ಗ್ರಾಮೀಣ ಅಥವಾ ಅರೆ ನಗರ ಪ್ರದೇಶಗಳಲ್ಲಿವೆ.

ಈ ಹಿಂದಿನ ಮೂರು ಹಂತಗಳಲ್ಲಿ, ಅಂದರೆ ಹಂತ-I (ಹಣಕಾಸು ವರ್ಷ 2006 ರಿಂದ 2010) ಆರ್‌ಆರ್‌ಬಿಗಳ ಸಂಖ್ಯೆಯನ್ನು 196 ರಿಂದ 82ಕ್ಕೆ ಇಳಿಸಲಾಗಿತ್ತು. ಹಂತ-2 (ಹಣಕಾಸು ವರ್ಷ 2013ರಿಂದ 2015) ಆರ್‌ಆರ್‌ಬಿಗಳ ಸಂಖ್ಯೆಯನ್ನು 82ರಿಂದ 56ಕ್ಕೆ ಇಳಿಸಲಾಗಿತ್ತು. ಹಂತ-3 (ಹಣಕಾಸು ವರ್ಷ 2019 ರಿಂದ 2021) ಆರ್‌ಆರ್‌ಬಿಗಳ ಸಂಖ್ಯೆಯನ್ನು 56ರಿಂದ 43ಕ್ಕೆ ಇಳಿಸಲಾಗಿತ್ತು.

ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ, ವ್ಯಾಪಾರ, ವಾಣಿಜ್ಯ, ಕೈಗಾರಿಕೆ ಮತ್ತು ಇತರ ಉತ್ಪಾದಕ ಚಟುವಟಿಕೆಗಳ ಅಭಿವೃದ್ಧಿಗೆ, ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರು, ಕೃಷಿ ಕಾರ್ಮಿಕರು, ಕುಶಲಕರ್ಮಿಗಳು ಮತ್ತು ಸಣ್ಣ ಉದ್ಯಮಿಗಳಿಗೆ ಸಾಲ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳನ್ನು (ಆರ್‌ಆರ್‌ಬಿ) 1975ರಲ್ಲಿ ಸ್ಥಾಪಿಸಲಾಯಿತು.

ಕರ್ನಾಟಕದ ಎರಡು ಬ್ಯಾಂಕ್‌ಗಳು ವಿಲೀನ

ಕರ್ನಾಟಕದಲ್ಲಿ ಎರಡು ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿತ್ತು. 1. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿಬಿ) ಮತ್ತು 2. ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ). ಇದೀಗ ಈ ಎರಡೂ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿ ಮಾಡಲಾಗಿದೆ. ಈ ಬ್ಯಾಂಕ್‌ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಇರಲಿದೆ.

ಗಮನಾರ್ಹವಾಗಿ, 1970ರ ದಶಕದಲ್ಲಿ ರಾಜ್ಯದಲ್ಲಿ 13 ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಇದ್ದವು. ಅವುಗಳನ್ನು ಹಂತ, ಹಂತವಾಗಿ ವಿಲೀನಗೊಳಿಸುತ್ತಾ ಬಂದು, ಅಂತಿಮವಾಗಿ ಎರಡು ಗ್ರಾಮೀಣ ಬ್ಯಾಂಕ್‌ಗಳು ಉಳಿದಿದ್ದವು. ಇದೀಗ, ಅವುಗಳನ್ನೂ ವಿಲೀನಗೊಳಿಸಲಾಗಿದೆ.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ರಾಜ್ಯದ 9 ಜಿಲ್ಲೆಗಳಲ್ಲಿ 629 ಶಾಖೆಗಳನ್ನು ಹೊಂದಿತ್ತು. ಕರ್ನಾಟಕ ಗ್ರಾಮೀಣ ಬ್ಯಾಂಕ್ ರಾಜ್ಯದ 22 ಜಿಲ್ಲೆಗಳಲ್ಲಿ 1,122 ಶಾಖೆಗಳನ್ನು ಹೊಂದಿತ್ತು. ಇದೀಗ ಎರಡೂ ಬ್ಯಾಂಕ್‌ಗಳ ವಿಲೀನದೊಂದಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ದೇಶದ ಎರಡನೇ ಅತಿದೊಡ್ಡ ಗ್ರಾಮೀಣ ಬ್ಯಾಂಕ್ ಎನಿಸಿಕೊಂಡಿದೆ.

ಹಿಂತೆಗೆದುಕೊಂಡ ಬಳಿಕವೂ ಚಲಾವಣೆಯಲ್ಲಿ ರೂ. 6266 ಕೋಟಿ ಮೌಲ್ಯದ ರೂ.2000 ನೋಟುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...