Homeಕರ್ನಾಟಕಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

- Advertisement -
- Advertisement -

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ನಡೆದಿದೆ ಎಂದು ಈದಿನ ಡಾಟ್ ಕಾಮ್ ವರದಿ ಮಾಡಿದೆ.

ಸುಹಾಸ್ ಶೆಟ್ಟಿ ಅವರ ಶರೀರವನ್ನು ಮಂಗಳೂರಿನ ಏ.ಜೆ. ಆಸ್ಪತ್ರೆಯಿಂದ ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಪೊಲೀಸ್ ಬಂದೋಬಸ್ತಿನಲ್ಲಿ ಕೊಂಡೊಯ್ಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ನಡುವೆ ಸುಹಾಸ್ ಶೆಟ್ಟಿಯವರ ಮೃತದೇಹದ ಅಂತಿಮ ದರ್ಶನಕ್ಕೆಂದು ಬಿ.ಸಿ.ರೋಡಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ನಡುವೆ ಬೀಡಿಯ ಕಟ್ಟನ್ನು ತುಂಬಿಕೊಂಡು ಮೂರು ಮಂದಿ ಮುಸ್ಲಿಂ ಬೀಡಿ ವ್ಯಾಪಾರಸ್ಥರು ತುಂಬೆಯಿಂದ ಪಾಣೆಮಂಗಳೂರು ಕಡೆಗೆ ರಸ್ತೆ ಬದಿ ನಿಂತಿದ್ದ ಸಂಘಪರಿವಾರದ ಕಾರ್ಯಕರ್ತರ ನಡುವೆಯೇ ಸಾಗುತ್ತಿದ್ದರು.

ಮುಸ್ಲಿಂ ವ್ಯಾಪಾರಸ್ಥರು ಶುಕ್ರವಾರವಾದ್ದರಿಂದ ಬಿಳಿ ಅಂಗಿ, ಪಂಚೆ ಧರಿಸಿದ್ದನ್ನು ಗಮನಿಸಿದ ಕೆಲವು ಕಿಡಿಗೇಡಿಗಳು, ಆಟೋ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ಒಬ್ಬಾತ ಎದುರಿನಿಂದ ತನ್ನ ಕೈ ಪ್ರಯೋಗಿಸಿ ರಿಕ್ಷಾದ ಮುಂದಿನ ಗಾಜನ್ನು ಒಡೆದು ಹಾಕಿದ್ದಾನೆ. ಇನ್ನು ಕೆಲವರು ಹಿಂಬದಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ಕೂಡಲೇ ಗಮನಿಸಿದ ಘಟನಾ ಸ್ಥಳದಲ್ಲಿ ಬಂದೋಬಸ್ತಿನಲ್ಲಿದ್ದ ಕೆಲವು ಪೊಲೀಸ್ ಅಧಿಕಾರಿಗಳು, ರಿಕ್ಷಾದಲ್ಲಿದ್ದವರಿಗೆ ಹಲ್ಲೆ ನಡೆಸುವುದನ್ನು ತಪ್ಪಿಸಿದ್ದಾರೆ.

ಸಂಘಪರಿವಾರದ ಕಿಡಿಗೇಡಿಗಳ ದಾಂಧಲೆಯಿಂದ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ. ಅಲ್ಲದೇ, ಮೂವರು ವ್ಯಾಪಾರಿಗಳ ಪೈಕಿ ಓರ್ವ ವೃದ್ಧ ವ್ಯಾಪಾರಸ್ಥರಿಗೆ ಕಾಲಿನಿಂದ ಒದ್ದಿರುವುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಈದಿನ ಡಾಟ್ಕಾಮ್ ಜೊತೆಗೆ ಮಾತನಾಡಿದ ಹೆಸರು ಹೇಳಲಿಚ್ಛಿಸದ ರಿಕ್ಷಾ ಚಾಲಕರು, “ನಾವು ನಮ್ಮಷ್ಟಕ್ಕೆ ತುಂಬೆಯಿಂದ ಪಾಣೆಮಂಗಳೂರು ಕಡೆಗೆ ಬೀಡಿಯ ಕಟ್ಟನ್ನು ತುಂಬಿಕೊಂಡು ಬರುತ್ತಿದ್ದೆವು. ರಸ್ತೆ ಬದಿಯಲ್ಲಿ ನಿಂತಿದ್ದವರು ಒಮ್ಮೆಲೆ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ರಿಕ್ಷಾದಲ್ಲಿದ್ದ ವೃದ್ಧ ವ್ಯಾಪಾರಿಗೆ ಕಾಲಿನಲ್ಲಿ ತುಳಿದಿದ್ದಾರೆ. ನನ್ನ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ” ಎಂದು ತಿಳಿಸಿದರು.

ರಿಕ್ಷಾದಲ್ಲಿ ಮುಸ್ಲಿಂ ಮಹಿಳೆಯರು ಇದ್ದರು ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ “ಇಲ್ಲ. ನಮ್ಮ ರಿಕ್ಷಾದಲ್ಲಿ ಮಹಿಳೆಯರು ಇರಲಿಲ್ಲ. ಮೂವರು ಬೀಡಿ ವ್ಯಾಪಾರಸ್ಥರು ಹಾಗೂ ನಾನು ಸೇರಿ 4 ಮಂದಿ ಇದ್ದೇವಷ್ಟೇ” ಎಂದು ರಿಕ್ಷಾ ಚಾಲಕ ಈದಿನ ಡಾಟ್ಕಾಮ್ಗೆ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...