Homeಮುಖಪುಟಪಹಲ್ಗಾಮ್ ದಾಳಿ: ಪುಣೆ ಗ್ರಾಮಗಳಿಂದ 'ಸ್ಥಳೀಯರಲ್ಲದ' ಮುಸ್ಲಿಮರಿಗೆ ನಮಾಜ್  ನಿರ್ಬಂಧ

ಪಹಲ್ಗಾಮ್ ದಾಳಿ: ಪುಣೆ ಗ್ರಾಮಗಳಿಂದ ‘ಸ್ಥಳೀಯರಲ್ಲದ’ ಮುಸ್ಲಿಮರಿಗೆ ನಮಾಜ್  ನಿರ್ಬಂಧ

- Advertisement -
- Advertisement -

ಪುಣೆ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕನಿಷ್ಠ 26 ಜೀವಗಳನ್ನು ಬಲಿ ತೆಗೆದುಕೊಂಡು ಹಲವಾರು ಮಂದಿ ಗಾಯಗೊಂಡ ಘಟನೆಯ ನಂತರ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಲವಾರು ಗ್ರಾಮ ಪಂಚಾಯತ್‌ಗಳು ‘ಹೊರಗಿನ’ ಮುಸ್ಲಿಮರು ಗ್ರಾಮದ ಮಸೀದಿಗಳಲ್ಲಿ ನಮಾಜ್ ಮಾಡುವುದನ್ನು ನಿರ್ಬಂಧಿಸುವ ನಿರ್ಣಯಗಳನ್ನು ಅಂಗೀಕರಿಸಿವೆ.

ಮುಲ್ಶಿ ತಹಸಿಲ್‌ನ ಘೋಟವಾಡೆ, ಪಿರಂಗುಟ್, ವಾಡ್ಕಿ ಮತ್ತು ಲಾವಾಲೆ ಮುಂತಾದ ಗ್ರಾಮಗಳು ಸಾರ್ವಜನಿಕ ಸೂಚನೆಗಳನ್ನು ನೀಡಿವೆ ಮತ್ತು ಗ್ರಾಮದ ಮಸೀದಿಗಳಲ್ಲಿ ಸ್ಥಳೀಯ ನಿವಾಸಿಗಳಿಗೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಹೇಳುವ ಬ್ಯಾನರ್‌ಗಳನ್ನು ಹಾಕಿವೆ. ಆಯಾ ಗ್ರಾಮ ಪಂಚಾಯತ್‌ಗಳು ಅಂಗೀಕರಿಸಿದ ನಿರ್ಣಯಗಳು ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಹೆಚ್ಚಿದ ಜನದಟ್ಟಣೆಯಿಂದಾಗಿ “ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿ”ಯನ್ನು ಉಲ್ಲೇಖಿಸುತ್ತವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಪಿರಂಗುಟ್‌ನ ಪೊಲೀಸ್ ಅಧಿಕಾರಿ ಪಾಟೀಲ್ ಪ್ರಕಾಶ್ ಪಾವಲೆ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. “ಶುಕ್ರವಾರದಂದು ಹೊರಗಿನವರ ಸಂಖ್ಯೆ ಹೆಚ್ಚಾಗುತ್ತದೆ, ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲುಗಳನ್ನು ಒಡ್ಡಬಹುದು. ಆದ್ದರಿಂದ, ಸ್ಥಳೀಯ ಗ್ರಾಮಸ್ಥರಿಗೆ ಮಾತ್ರ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ನೀಡಲಾಗುವುದು” ಎಂಬ ಗ್ರಾಮ ಪಂಚಾಯತ್ ಗಳ ನಿರ್ಣಯಗಳನ್ನು ಅವರು ದೃಢಪಡಿಸಿದರು.

ಇಲ್ಲಿಯವರೆಗೆ ಯಾವುದೇ ಪೊಲೀಸ್ ದೂರುಗಳು ದಾಖಲಾಗಿಲ್ಲವಾದರೂ, ಈ ನಿರ್ಧಾರವು ಸ್ಥಳೀಯ ಮುಸ್ಲಿಂ ಸಮುದಾಯದ ಸದಸ್ಯರಲ್ಲಿ ದುಃಖವನ್ನುಂಟುಮಾಡಿದೆ.

“ನಾವು ಭಯಭೀತರಾಗಿದ್ದೇವೆ. ಗ್ರಾಮದ ಮಸೀದಿಯು ದೇವಾಲಯದ ಪಕ್ಕದಲ್ಲಿರುವ ಕಾರಣ ನಾವು ಈಗಾಗಲೇ ಅಲ್ಲಿಗೆ ಹೋಗುವುದನ್ನು ನಿಲ್ಲಿಸಿದ್ದೇವೆ. ನಾವು ಗ್ರಾಮದ ಹೊರಗಿನ ಶೆಡ್‌ನಲ್ಲಿ ಪ್ರಾರ್ಥಿಸುತ್ತೇವೆ. ಪಹಲ್ಗಾಮ್ ದಾಳಿಯ ನಂತರ ಭಯ ಹೆಚ್ಚುತ್ತಿದೆ” ಎಂದು ಲಾವಾಲೆ ನಿವಾಸಿ ಶೈಸ್ತಖಾನ್ ಇನಾಮದಾರ್ ಹೇಳಿದರು.

ಪಿರಂಗುಟ್‌ನ ಸುನ್ನಿ ಮಸೀದಿ ಟ್ರಸ್ಟ್‌ನ ಅಧ್ಯಕ್ಷ ನಬಿಲಾಲ್ ಶೇಖ್, ಈ ನಿರ್ಣಯವು ಧಾರ್ಮಿಕ ಜೀವನ ಮತ್ತು ದೀರ್ಘಕಾಲೀನ ಸಾಮಾಜಿಕ ಸಂಬಂಧಗಳನ್ನು ಅಡ್ಡಿಪಡಿಸುತ್ತದೆ ಎಂದು ಹೇಳಿದರು. “ಇದು ತಾಲ್ಲೂಕಿನಲ್ಲಿ ಅತಿದೊಡ್ಡ ಮಸೀದಿ. ಪ್ರದೇಶದಾದ್ಯಂತದ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆಗಾಗಿ ಇಲ್ಲಿಗೆ ಬರುತ್ತಾರೆ. ಹೊಸ ನಿರ್ಬಂಧವು ಸಂಬಂಧಿಕರು ಮತ್ತು ಇತರರನ್ನು ಭೇಟಿ ಮಾಡಲು ಕಷ್ಟಕರವಾಗಿಸುತ್ತದೆ” ಎಂದು ಅವರು ಹೇಳಿದರು.

ಅವರು ಪ್ರದೇಶದ ಕೋಮು ಸಾಮರಸ್ಯದ ಇತಿಹಾಸವನ್ನು ಸಹ ತೋರಿಸಿದರು ಮತ್ತು “ನಾವು ಯಾವಾಗಲೂ ಗಣಪತಿ ಮೆರವಣಿಗೆಗಳು ಮತ್ತು ಇತರ ಕಾರ್ಯಕ್ರಮಗಳಲ್ಲಿ ನಮ್ಮ ಹಿಂದೂ ನೆರೆಹೊರೆಯವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಭಾಗವಹಿಸಿದ್ದೇವೆ” ಎಂದು ಅವರು ಹೇಳಿದರು.

ಆದಾಗ್ಯೂ, ಈ ಎಲ್ಲಾ ಬದಲಾವಣೆಯಿಂದ ತಾನು ನಲುಗಿದ್ದೇನೆ ಎಂದು ಶೇಖ್ ಹೇಳಿದರು. “ನನ್ನ 76 ವರ್ಷಗಳಲ್ಲಿ ನಾನು ಇಲ್ಲಿ ಇಂತಹ ಧ್ರುವೀಕರಣವನ್ನು ಎಂದಿಗೂ ನೋಡಿಲ್ಲ. ನಮ್ಮ ಮಸೀದಿ ನನ್ನ ಅಜ್ಜನ ಕಾಲಕ್ಕೂ ಮೊದಲಿನಿಂದಲೂ ಅಸ್ತಿತ್ವದಲ್ಲಿದೆ” ಎಂದಿದ್ದಾರೆ.

ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಅನಿಲ್ ವಿಭೂತೆ ಮಾತನಾಡಿ, ಧಾರ್ಮಿಕ ಸಮುದಾಯಗಳಲ್ಲಿ ಒಮ್ಮತದೊಂದಿಗೆ ಗ್ರಾಮ ಪಂಚಾಯತ್ ಗಳು ಈ ನಿರ್ಣಯವನ್ನು ಅಂಗೀಕರಿಸಿವೆ ಎಂದು ಹೇಳಿದರು. “ಇಲ್ಲಿಯವರೆಗೆ ಮುಸ್ಲಿಂ ನಿವಾಸಿಗಳಿಂದ ಯಾವುದೇ ಔಪಚಾರಿಕ ದೂರುಗಳು ಬಂದಿಲ್ಲ ಮತ್ತು ಯಾವುದೇ ಪೊಲೀಸ್ ಹಸ್ತಕ್ಷೇಪದ ಅಗತ್ಯವಿಲ್ಲ” ಎಂದು ಅವರು ಹೇಳಿದರು.

ಉತ್ತರ ಪ್ರದೇಶ| ಲೈಂಗಿಕ ದೌರ್ಜನ್ಯ ವಿರೋಧಿಸಿದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅಮಾನುಷ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...