Homeಮುಖಪುಟಪಹಲ್ಗಾಮ್ ದಾಳಿ ಕುರಿತು ದೇಶ ಶೋಕದಲ್ಲಿರುವಾಗ ಜನಗಣತಿ ಘೋಷಣೆಯ ಸಮಯ ಅನುಮಾನಾಸ್ಪದ; ರಾಹುಲ್ ಗಾಂಧಿ

ಪಹಲ್ಗಾಮ್ ದಾಳಿ ಕುರಿತು ದೇಶ ಶೋಕದಲ್ಲಿರುವಾಗ ಜನಗಣತಿ ಘೋಷಣೆಯ ಸಮಯ ಅನುಮಾನಾಸ್ಪದ; ರಾಹುಲ್ ಗಾಂಧಿ

- Advertisement -
- Advertisement -

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಕೇಂದ್ರ ಸರ್ಕಾರ ಮುಂದಿನ ಜನಗಣತಿಯೊಂದಿಗೆ ಜಾತಿ ಎಣಿಕೆಯನ್ನು ಘೋಷಿಸುವ ಸಮಯ ಅನುಮಾನಾಸ್ಪದವಾಗಿದೆ ಎಂದು ಹೇಳಿದರು, ಆದರೂ ಅವರು ಇದನ್ನು ದೇಶದಲ್ಲಿ ಸಾಮಾಜಿಕ ನ್ಯಾಯದತ್ತ “ಮೊದಲ ಹೆಜ್ಜೆ” ಎಂದು ಕರೆದರು.

ಸಭೆಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂಚುಕೋರರ ವಿರುದ್ಧ “ಸ್ಪಷ್ಟ ಕ್ರಮ” ವನ್ನು ಒತ್ತಾಯಿಸಿ ಕಾಂಗ್ರೆಸ್ ಕೇಂದ್ರದ ಮೇಲೆ ಚಾಟಿ ಬಿಸಲು ನಿರ್ಧರಿಸಿದೆ. ಈ ದಾಳಿಯ ಸಂಬಂಧ ಸಶಸ್ತ್ರ ಪಡೆಗಳಿಗೆ ಪ್ರತಿಕ್ರಿಯಿಸಲು ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದೆ ಎಂಬ ಕೇಂದ್ರದ ಹೇಳಿಕೆಯು ಕಣ್ಣು ಹೊರೆಸುವ ತಂತ್ರ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

ಪ್ರಸ್ತಾವಿತ ಜನಗಣತಿಯ ಕುರಿತು ಸರ್ಕಾರ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ ಮತ್ತು ಜನಗಣತಿ ನಡೆಸುವುದಕ್ಕೆ ಹಣವನ್ನೂ ಹಂಚಿಕೆ ಮಾಡಿಲ್ಲ ಎಂಬ ಅಂಶದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಅಗತ್ಯವನ್ನು ರಾಹುಲ್ ಒತ್ತಿ ಹೇಳಿದರು ಎಂದು ಮೂಲಗಳು ತಿಳಿಸಿವೆ. “ಇಡೀ ದೇಶವು ಪಹಲ್ಗಾಮ್ ದಾಳಿಯ ಬಲಿಪಶುಗಳಿಗಾಗಿ ಈಗ ಶೋಕದಲ್ಲಿರುವುದರಿಂದ ಈ ಘೋಷಣೆಯ ಸಮಯ ಅನುಮಾನಾಸ್ಪದವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು” ಎಂದು ಸಭೆಯಲ್ಲಿ ಭಾಗವಹಿಸಿದ್ದ ನಾಯಕರೊಬ್ಬರು ತಿಳಿಸಿದರೆಂದು ದಿ ಪ್ರಿಂಟ್‌ ವರದಿ ಮಾಡಿದೆ.

ಮುಂದಿನ ಜನಗಣತಿಯ ಜೊತೆಗೆ ಜಾತಿಗಣತಿಯನ್ನು ನಡೆಸಲಾಗುವುದು ಎಂದು ಸರ್ಕಾರ ಬುಧವಾರ ಘೋಷಿಸಿದೆ. “ರಾಷ್ಟ್ರವ್ಯಾಪಿ ಜಾತಿಗಣತಿಯನ್ನು ಒತ್ತಾಯಿಸುವುದಕ್ಕೆ ಪ್ರಬಲ ಮತ್ತು ಗಟ್ಟಿ ಧ್ವನಿಯಾಗಬೇಕು” ಎಂದು ಸಭೆಯು ತನ್ನ ಅಂಗೀಕರಿಸಿದ ನಿರ್ಣಯದಲ್ಲಿ ಬಣ್ಣಿಸಿರುವ ರಾಹುಲ್, ಕಾಂಗ್ರೆಸ್ ಈಗ ಅನುಸರಿಸಲಿರುವ ಮಾರ್ಗಸೂಚಿಯನ್ನು ಸಹ ವಿವರಿಸಿದ್ದಾರೆ, ರಾಷ್ಟ್ರವ್ಯಾಪಿ ಜಾತಿಗಣತಿಯ ಬೇಡಿಕೆಯನ್ನು ಈಗ ಕಾಗದದ ಮೇಲೆ ಈಡೇರಿಸಲಾಗಿದೆ ಎಂದಿದ್ದಾರೆ.

“ಸುಪ್ರೀಂ ಕೋರ್ಟ್ ವಿಧಿಸಿರುವ ಶೇಕಡಾ 50ಕ್ಕಿಂತ ಹೆಚ್ಚಿನ ಮೀಸಲಾತಿಯನ್ನು ಸಕ್ರಿಯಗೊಳಿಸಲು ಸಾಂವಿಧಾನಿಕ ತಿದ್ದುಪಡಿಗಾಗಿ ಪಕ್ಷವು ಈಗ ಒತ್ತಾಯಿಸುತ್ತದೆ ಎಂದು ಅವರು ಹೇಳಿದರು. ಅಲ್ಲದೆ, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಜಾರಿಗೆ ತರಲು 15(5)ನೇ ವಿಧಿಯನ್ನು ಜಾರಿಗೆ ತರಲು ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುತ್ತದೆ” ಎಂದು ಮೂಲಗಳು ತಿಳಿಸಿವೆ.

ಜಾತಿ ಜನಗಣತಿಯ ಕುರಿತಾದ CWC ನಿರ್ಣಯವು 15(5)ನೇ ವಿಧಿಯ ಅನುಷ್ಠಾನದ ಅಗತ್ಯವನ್ನು ಒತ್ತಿಹೇಳಿದೆ. 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ I ಸರ್ಕಾರದ ಅಡಿಯಲ್ಲಿ 93ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಸೇರಿಸಲಾದ ನಿಬಂಧನೆಯನ್ನು ಸಕ್ರಿಯಗೊಳಿಸುವುದು “ತಡವಾಯಿತು” ಎಂದು ಹೇಳಿದೆ.

“ಖಾಸಗಿ ಸಂಸ್ಥೆಗಳು, ಉನ್ನತ ಶಿಕ್ಷಣದಲ್ಲಿ ಹೆಚ್ಚು ಪ್ರಬಲ ಪಾತ್ರ ವಹಿಸುವ ಯುಗದಲ್ಲಿ ಅಂಚಿನಲ್ಲಿರುವ ಸಮುದಾಯಗಳನ್ನು ಇಲ್ಲಿಂದ ಹೊರಗಿಡುವುದು ಅಸಮಾನತೆಯನ್ನು ಇನ್ನಷ್ಟು ಹದಗೆಡಿಸುತ್ತದೆ. 15(5)ನೇ ವಿಧಿಯು ಕೇವಲ ಸಾಂವಿಧಾನಿಕ ನಿಬಂಧನೆಯಲ್ಲ, ಇದು ಸಾಮಾಜಿಕ ನ್ಯಾಯದ ಕಡ್ಡಾಯವಾಗಿದೆ. ಇದರಿಂದ ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿಗಳು, ಇಬಿಸಿಗಳು, ದಲಿತರು ಮತ್ತು ಆದಿವಾಸಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಅವಕಾಶ ದೊರಕುತ್ತದೆ ಎಂದು ಕಾಂಗ್ರೆಸ್ ದೃಢವಾಗಿ ನಂಬುತ್ತದೆ” ಎಂದು ನಿರ್ಣಯವು ಹೇಳಿದೆ.

ಕೇಂದ್ರವು ಜಾತಿಗಣತಿಯನ್ನು ಪ್ರಾಮಾಣಿಕವಾಗಿ ನಡೆಸಲು ಸಿದ್ಧರಿದ್ದರೆ, ಕಾಂಗ್ರೆಸ್ ನೇತೃತ್ವದ ತೆಲಂಗಾಣ ರಾಜ್ಯ ಸರ್ಕಾರ ನಡೆಸಿದ ಸಾಮಾಜಿಕ ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿಸಮೀಕ್ಷೆಯನ್ನು ಉಲ್ಲೇಖಿಸಿ “ತೆಲಂಗಾಣ ಮಾದರಿಯನ್ನು” ಅಳವಡಿಸಿಕೊಳ್ಳಬೇಕಾಗುತ್ತದೆ ಎಂದು ರಾಹುಲ್ ಹೇಳಿದರು.

ಈ ಪ್ರಕ್ರಿಯೆಯನ್ನು ವಿಳಂಬ ಮಾಡಬಾರದು. ಎಲ್ಲಾ ರಾಜಕೀಯ ಪಕ್ಷಗಳನ್ನು ಪೂರ್ಣ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಈ ವಿಷಯದ ಬಗ್ಗೆ ಸಂಸತ್ತು ತಕ್ಷಣವೇ ಚರ್ಚೆ ನಡೆಸಬೇಕು. ಪ್ರಶ್ನಾವಳಿ ಮತ್ತು ವಿಧಾನದ ತಯಾರಿಕೆಯಿಂದ ಹಿಡಿದು ಎಣಿಕೆ, ವರ್ಗೀಕರಣ ಮತ್ತು ಅಂತಿಮವಾಗಿ ದತ್ತಾಂಶದ ಪ್ರಕಟಣೆಯವರೆಗೆ ಜನಗಣತಿಯ ಪ್ರತಿಯೊಂದು ಹಂತಕ್ಕೂ ಸರ್ಕಾರವು ತಕ್ಷಣವೇ ಅಗತ್ಯ ಹಣವನ್ನು ಹಂಚಿಕೆ ಮಾಡಬೇಕು ಮತ್ತು ಸ್ಪಷ್ಟ ಸಮಯವನ್ನು ಘೋಷಿಸಬೇಕು ಎಂದು ರಾಹುಲ್ ಒತ್ತಾಯಿಸಿದರು.

ಸಂಗ್ರಹಿಸಿದ ದತ್ತಾಂಶವು ವಿಶೇಷವಾಗಿ ಮೀಸಲಾತಿ, ಕಲ್ಯಾಣ ಯೋಜನೆಗಳು, ಶೈಕ್ಷಣಿಕ ಪ್ರವೇಶ ಮತ್ತು ಉದ್ಯೋಗಾವಕಾಶಗಳ ಕ್ಷೇತ್ರಗಳಲ್ಲಿ ಸಾರ್ವಜನಿಕ ನೀತಿಯ ವ್ಯಾಪಕ ವಿಮರ್ಶೆಗೆ ಆಧಾರವಾಗಿ ಕಾರ್ಯನಿರ್ವಹಿಸಬೇಕು. ಜಾತಿ ಜನಗಣತಿಯನ್ನು ಸರಿಯಾಗಿ ವಿನ್ಯಾಸಗೊಳಿಸಿ ಕಾರ್ಯಗತಗೊಳಿಸಿದರೆ ಅದು ಸಮಾಜದ ಎಲ್ಲಾ ವರ್ಗಗಳ ಪ್ರಯೋಜನಕ್ಕಾಗಿ ಕೆಲಸ ಮಾಡುತ್ತದೆ ಎಂದು ಸಭೆಯು ಒಪ್ಪುತ್ತದೆ” ಎಂದು CWC ನಿರ್ಣಯವು ಸೇರಿಸಿದೆ.

ಏಪ್ರಿಲ್ 22ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು “ಪಾಕಿಸ್ತಾನಕ್ಕೆ ಪಾಠ ಕಲಿಸುವ” ಮತ್ತು ಭಯೋತ್ಪಾದನೆಯನ್ನು ನಿರ್ಣಾಯಕವಾಗಿ ನಿಗ್ರಹಿಸುವ ಅಗತ್ಯವನ್ನು ಒತ್ತಿಹೇಳುವ ನಿರ್ಣಯವನ್ನು CWC ಅಂಗೀಕರಿಸಿದೆ. ಇಡೀ ದೇಶವು ಈ ಘಟನೆಯ ಹೊಣೆಗಾರಿಕೆಗೆ ಯಾರದ್ದು?, ಇದಕ್ಕೆ ಸಂಬಂಧಿಸಿದ ಉತ್ತರಗಳು ಮತ್ತು ನ್ಯಾಯಕ್ಕಾಗಿ ಕಾಯುತ್ತಿದೆ ಎಂದು ಅದು ಹೇಳಿದೆ.

ದೇಶದ ಅತ್ಯಂತ ಬಿಗಿ ಭದ್ರತೆಯ ಪ್ರದೇಶಗಳಲ್ಲಿ ಒಂದಾದ ಭದ್ರತೆ ಮತ್ತು ಗುಪ್ತಚರದಲ್ಲಿನ ಗಂಭೀರ ಲೋಪಗಳ ಹೊಣೆಗಾರಿಕೆಗಾಗಿ CWC ತನ್ನ ಹಿಂದಿನ ಬೇಡಿಕೆಯನ್ನು ಪುನರುಚ್ಚರಿಸುತ್ತದೆ. ಭಾರತದ ಜನರು ಘಟನೆಯ ಪಾರದರ್ಶಕತೆ ಮತ್ತು ಯಾರ ಹೊಣೆಗಾರಿಕೆ ಎಂದು ಪ್ರಶ್ನಿಸಲು ಅರ್ಹರು ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಡಬ್ಲ್ಯೂಸಿ ಸಭೆಯಲ್ಲಿ ತಮ್ಮ ಭಾಷಣದಲ್ಲಿ, “ಈ ಘಟನೆ ನಡೆದು ಹಲವು ದಿನಗಳ ನಂತರವೂ ಸರ್ಕಾರದಿಂದ ಯಾವುದೇ ಸ್ಪಷ್ಟ ಕಾರ್ಯತಂತ್ರ ಹೊರಹೊಮ್ಮಿಲ್ಲ” ಎಂದು ಹೇಳಿದರು.

ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್, “ಲಾಲ್ ಅಂಖ್ (ಕೆಂಪು ಕಣ್ಣು) ಬಗ್ಗೆ ಮಾತನಾಡುತ್ತಿದ್ದ 56 ಇಂಚಿನ ಎದೆಯ ಪ್ರಧಾನಿ ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ? ಅಲ್ಲದೆ, ಪಹಲ್ಗಾಮ್ ಪ್ರವಾಸಿ ತಾಣದಲ್ಲಿ ಯಾವುದೇ ಭದ್ರತೆ ಏಕೆ ಇರಲಿಲ್ಲ?” ಎಂದು ಪ್ರಶ್ನಿಸಿದರು.

ಆದಾಗ್ಯೂ ಕಾಂಗ್ರೆಸ್ ನಾಯಕತ್ವವು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ತನ್ನನ್ನು ತಾನು ಬಿಂಬಿಸಿಕೊಳ್ಳುವ ಗುರಿಯನ್ನು ಹೊಂದಿರುವ ಪಕ್ಷಪಾತದ ಸಮಯ ಇದಲ್ಲ ಎಂದು ಪುನರುಚ್ಚರಿಸಲು ಎಚ್ಚರಿಕೆಯಿಂದಿತ್ತು.

“ನಾವು ಪಕ್ಷಪಾತದ ವಿಭಜನೆಗಳನ್ನು ಮೀರಿ ಎದ್ದು ನಿಂತು ಭಾರತದ ಒಗ್ಗಟ್ಟಿಗೆ ನಿಲ್ಲುತ್ತವೆ ಮತ್ತು ಒಡಕನ್ನುಂಟುಮಾಡುವುದಿಲ್ಲವೆಂಬ ಸ್ಪಷ್ಟ ಸಂದೇಶವನ್ನು ಕಳುಹಿಸಬೇಕು” ಎಂದು ನಿರ್ಣಯವು ಹೇಳಿದೆ.

ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಿರ್ಣಯದಲ್ಲಿ “ವಿಚಾರಣೆ” ಎಂಬ ಪದವನ್ನು ಬಳಸದಂತೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಒತ್ತಾಯದ ಮೇರೆಗೆ ಅದನ್ನು “ಜವಾಬ್ದಾರಿ” ಎಂಬ ಪದಕಕೆ ಬದಲಾಯಿಸಲಾಯಿತು. “ಇಡೀ ದೇಶವು ಹೊಣೆಗಾರಿಕೆ, ಉತ್ತರಗಳು ಮತ್ತು ನ್ಯಾಯಕ್ಕಾಗಿ ಕಾಯುತ್ತಿದೆ” ಎಂದು ನಿರ್ಣಯದಲ್ಲಿನ ಒಂದು ಸಾಲು ಹೇಳುತ್ತದೆ.

ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರಣ್‌ಜಿತ್ ಸಿಂಗ್ ಚನ್ನಿ, ಯಾವುದೇ ವಿವಾದಕ್ಕೆ ಸಿಲುಕದಂತೆ ಕಾಂಗ್ರೆಸ್ ಪ್ರತಿಕ್ರಿಯೆಗಳನ್ನು ನೀಡಲು ಪ್ರಯತ್ನಿಸುತ್ತಿರುವಾಗ ಭಿನ್ನಾಭಿಪ್ರಾಯದ ಟಿಪ್ಪಣಿಯನ್ನು ಮಾಡಿದರು.

2019ರಲ್ಲಿ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಕೈಗೊಂಡ ಬಾಲಕೋಟ್ ವಾಯುದಾಳಿಗಳು “ಎಂದಿಗೂ ನಡೆದಿಲ್ಲ” ಎಂದು ಅವರು ಸೂಚಿಸಿದಂತೆ ಕಂಡುಬಂದಿತು. ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು ಸೇರಿದಂತೆ ಏಪ್ರಿಲ್ 22ರಿಂದ ಕೇಂದ್ರವು ತೆಗೆದುಕೊಂಡ ಕ್ರಮಗಳನ್ನು ಚನ್ನಿ ಅವರು “ಅರ್ಥಹೀನ” ಎಂದು ಕರೆದರು.

“ಅವರು ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದ್ದಾರೆ. ಅದು ಕೂಡ ಸಾಧ್ಯವಿಲ್ಲ. ಮುಂದಿನ ದಶಕದವರೆಗೂ ಕೇಂದ್ರವು ಹಣವನ್ನು ಖರ್ಚು ಮಾಡಿದರೂ ಸಹ, ಶೇಕಡಾ 20ರಷ್ಟು ನೀರನ್ನು ತಡೆಹಿಡಿಯಲು ಸಾಧ್ಯವಾಗುತ್ತದೆ. ಏಕೆಂದರೆ ಭೂಮಿಯು ಆ ಕಡೆಗೆ (ಪಾಕಿಸ್ತಾನ) ವಾಲಿದೆ. ಅವರು ತೆಗೆದುಕೊಂಡ ಕ್ರಮಗಳಿಗೆ ಯಾವುದೇ ಮೌಲ್ಯವಿಲ್ಲ. ಈ ಕ್ರಮಗಳಿಂದ ದೇಶದ ಜನರು ಹೇಗೆ ತೃಪ್ತರಾಗುತ್ತಾರೆ?” ಎಂದು ಚನ್ನಿ ಪ್ರಶ್ನಿಸಿದರು.

“ಹಿಂದಿನ ದಾಳಿಯ ನಂತರವೂ (ಪುಲ್ವಾಮಾ) 40 ಸೈನಿಕರು ಸಾವನ್ನಪ್ಪಿದ್ದರು, ಅವರು ದೊಡ್ಡ ಹೇಳಿಕೆಗಳನ್ನು ನೀಡಿದ್ದರು. ಆದರೆ ಇಲ್ಲಿಯವರೆಗೆ ಪಾಕಿಸ್ತಾನದಲ್ಲಿ ದಾಳಿ ಎಲ್ಲಿ ನಡೆಯಿತು, ಯಾರು ಎಲ್ಲಿ ಕೊಲ್ಲಲ್ಪಟ್ಟರು, ಎಲ್ಲಿ ಏನು ನಡೆಯಿತು ಎಂದು ನನಗೆ ತಿಳಿದಿಲ್ಲ. ಯಾರಾದರೂ ಬಂದು ನಮ್ಮ ದೇಶದಲ್ಲಿ ಬಾಂಬ್ ಹಾಕಿದರೆ, ನಮಗೆ ತಿಳಿಯುವುದಿಲ್ಲವೇ? ಕೇಂದ್ರವು ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಹೇಳಿಕೊಂಡಿತು. ಅಂತಹದ್ದೇನೂ ಆಗಿಲ್ಲ, ಯಾವುದೇ ಸರ್ಜಿಕಲ್ ಸ್ಟ್ರೈಕ್‌ಗಳಿಲ್ಲ,” ಎಂದು ಚನ್ನಿ ಹೇಳಿದರು, ದಾಳಿಗಳ ಪುರಾವೆಗಳನ್ನು ನಾವು ನಿರಂತರವಾಗಿ ಕೇಳುತ್ತಲೇ ಇದ್ದಾವೆ ಎಂದು ಅವರು ತಿಳಿಸಿದರು.

ಪಾಕಿಸ್ತಾನದಿಂದ ನೇರ-ಪರೋಕ್ಷ ಆಮದುಗಳನ್ನು ನಿಷೇಧಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...